ಬಿಎಸ್ವೈ ರಾಜ್ಯ ಕಂಡ ಏಕಮೇವ ಮಾಸ್ ಲೀಡರ್: ಬೊಮ್ಮಾಯಿ
ವಿರೋಧ ಪಕ್ಷದಲ್ಲಿದ್ದಾಗ ಯಾವುದಕ್ಕಾಗಿ ಹೋರಾಟ ಮಾಡಿದ್ದರೋ ಆ ಬೇಡಿಕೆಗಳನ್ನು ಅಧಿಕಾರಕ್ಕೆ ಬಂದಮೇಲೆ ಈಡೇರಿಸಲು ಬಿ.ಎಸ್.ಯಡಿಯೂರಪ್ಪ ಅವರು ಶ್ರಮಿಸಿದ್ದರು. ವಿಜಯಪುರ, ಶಿಗ್ಗಾಂವಿ, ದಾವಣಗೆರೆಯ ರಾಜನಹಳ್ಳಿಯಲ್ಲಿ ಕೆರೆ ತುಂಬಿಸುವ ಯೋಜನೆ ಸೇರಿ ಹಲವು ಯೋಜನೆಗಳನ್ನು ಕೈಗೊಂಡಿದ್ದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.