ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಗಂಡ ಪರಾರಿ

ಗಿಡಗಾನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಗಂಡ ಪರಾರಿ

ವೆಂಕಟೇಶ್ ಮೃತೆಯಾದ ಪವಿತ್ರಾಳನ್ನು ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಮೂರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಆದರೂ ಕೂಡ ಇವರಿಬ್ಬರ ನಡುವೆ ಅನ್ಯೋನ್ಯತೆಯ ಕೊರತೆಯಿದ್ದು, ಇದರ ಜತೆಗೆ ಎರಡು ಮೂರು ವರ್ಷಗಳಿಂದ ಹಣದ ವಿಚಾರ ಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಸಾವು; ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಸಾವು

ಲೋಧಿ ಕಾಲೋನಿಯಲ್ಲಿ 28 ವರ್ಷದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಳನ್ನು ಆಕೃತಿ ಎಂದು ಗುರುತಿಸಲಾಗಿದ್ದು, ಅವರು ಎಲ್ಲಿಂದ ಬಿದ್ದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ ಅವರ ದೇಹವು ಪಾಲಿಕಾ ಕುಂಜ್‌ನ ಎನ್‌ಡಿಎಂಸಿ ಫ್ಲಾಟ್‌ಗಳ ಕಟ್ಟಡದ ಹೊರಗೆ ನೆಲದ ಮೇಲೆ ಪತ್ತೆಯಾಗಿದೆ.

Python Found: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಭೂಪ; ದಿನವೂ‌ ಬರುತ್ತಿತ್ತು ಕೆಜಿಗಟ್ಟಲೇ ಮಾಂಸ!

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಭೂಪ!

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಹೆಬ್ಬಾವು ಸಾಕಿದ್ದ ಆಂಧ್ರಪ್ರದೇಶ ಮೂಲದ ಯುವಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಧಿಕಾರಿಗಳು ತೆರಳಿ ಪರಿಶೀಲಿಸಿದಾಗ ಹೆಬ್ಬಾವು ಪತ್ತೆಯಾಗಿದೆ.

ಪತ್ನಿಯನ್ನು ಮನವೊಲಿಸಲು ತೆರಳಿದ್ದ ಪತಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ ಭಾವ; ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪತ್ನಿಯನ್ನು ಮನವೊಲಿಸಲು ತೆರಳಿದ್ದ ಪತಿಯನ್ನು ಬೆಂಕಿ ಹಚ್ಚಿ ಕೊಲೆ

Crime News: ತನ್ನ ಪರಿತ್ಯಕ್ತ ಪತ್ನಿಯನ್ನು ಮನೆಗೆ ಹಿಂತಿರುಗಿಸಲು ಮನವೊಲಿಸಲು ಹೋದ ವ್ಯಕ್ತಿಯೊಬ್ಬನನ್ನು ಅವನ ಭಾವ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಪತ್ನಿ ತನ್ನ ಕುಟುಂಬದೊಂದಿಗೆ ಇರಲು ಹೋಗಿದ್ದ ಕಾರಣ, ಮನೆಗೆ ಮರಳುವಂತೆ ಮನವೊಲಿಸಲು ತನ್ನ ಅತ್ತೆಯ ಮನೆಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹೊನ್ನಾವರದ ಮಂಕಿ ಠಾಣೆ ಪಿಎಸ್‌ಐ ಬಂಧನ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪಿಎಸ್‌ಐ ಬಂಧನ

ಯಲ್ಲಾಪುರ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಕಿ ಠಾಣೆ ಪಿಎಸ್‌ಐ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಭಟ್ಕಳ ನಗರ ಠಾಣೆ ಪೊಲೀಸರು, ಪಿಎಸ್‌ಐ ಅಭಿನಂದನ್ ಅವರನ್ನು ಬಂಧಿಸಿದ್ದಾರೆ.

ವಿಜಯನಗರ ಕ್ಲಬ್ ಮಾಜಿ ಕಾರ್ಯದರ್ಶಿ ನಾಗಚಂದ್ರ ಸಾವು ಪ್ರಕರಣಕ್ಕೆ ಹೊಸ ತಿರುವು: ಪತ್ನಿ ವಿರುದ್ಧ ಎಫ್‌ಐಆರ್

ವಿಜಯನಗರ ಕ್ಲಬ್ ಮಾಜಿ ಕಾರ್ಯದರ್ಶಿ ಸಾವು ಪ್ರಕರಣಕ್ಕೆ ಹೊಸ ತಿರುವು

ರಕ್ತದೊತ್ತಡದಿಂದ ಬಳಲುತ್ತಿದ್ದ ನಾಗಚಂದ್ರ ಅವರು ಧೂಮಪಾನ, ಮದ್ಯಪಾನದ ಜೊತೆಗೆ ಬೆನ್ನು ಮೂಳೆಯ ಕಾಯಿಲೆಯಿಂದಲೂ ಸಹ ಬಳಲುತ್ತಿದ್ದರು. 2024 ರ ಅಕ್ಟೋಬರ್ 24 ರಂದು ಬೆಳಿಗ್ಗೆ ಇವರಿಗೆ ಪತ್ನಿ ಮಾತ್ರೆ ಕೊಟ್ಟು ಮಲಗಿಸಿದ್ದರು. ಸಂಜೆ 5.45 ರ ವೇಳೆಗೆ ಪತ್ನಿ ಚಂದನಾ ಎಬ್ಬಿಸಿದಾಗ ಪ್ರತಿಕ್ರಿಯೆ ನೀಡಿರಲಿಲ್ಲ. ಬಳಿಕ ವಿಜಯನಗರದ ಸನ್ ಫ್ಲವರ್ ಆಸ್ಪತ್ರೆಗೆ ಕರೆದೊಯ್ದಾಗ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು

ಅಯೋಧ್ಯೆ ರಾಮ ಮಂದಿರದ ಮೇಲೆ ದೃಷ್ಟಿ ನೆಟ್ಟ  ಭಯೋತ್ಪಾದಕರು?: ಹಫೀಜ್ ಸಯೀದ್ ಅಳಿಯ ಸೇರಿದಂತೆ 23 ಮಂದಿಯ ಗುರುತು ಪತ್ತೆ

ಅಯೋಧ್ಯೆ ಮೇಲೆ ಭಯೋತ್ಪಾದಕರ ಕಣ್ಣು?

ಅಯೋಧ್ಯೆ ರಾಮ ಮಂದಿರದ ಮೇಲೆ ಭಯೋತ್ಪಾದಕರು ಕಣ್ಣಿಟ್ಟಿದ್ದಾರೆ. ಇದರಲ್ಲಿ ಭಯೋತ್ಪಾದಕ ಹಫೀಜ್ ಸಯೀದ್ ಅಳಿಯ ಕೂಡ ಸೇರಿದ್ದಾನೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ. ಈ ಕುರಿತು ಶನಿವಾರ ಮಾಹಿತಿ ನೀಡಿರುವ ಗೃಹ ಸಚಿವಾಲಯ ಗುಪ್ತಚರ ಇಲಾಖೆ ಗುರುತಿಸಿರುವ ಭಯೋತ್ಪಾದಕರು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದಾರೆ ಏನು ಹೇಳಿದೆ.

SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ಗ್ರಾಮ ಆಡಳಿತ ಅಧಿಕಾರಿ ಸಾವು

ಎಸ್‌ಐಆರ್‌ಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ವಿಎಒ ಸಾವು

ತುಮಕೂರಿನ ಗೂಳೂರಿನಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತದಲ್ಲಿ ಮಹಿಳಾ ಗ್ರಾಮ ಆಡಳಿತ ಅಧಿಕಾರಿ ಭುವನಾ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Koppal News: ಕೊಪ್ಪಳದಲ್ಲಿ ಘೋರ ಘಟನೆ; ಪತ್ನಿ, ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಚಿನ್ನದ ವ್ಯಾಪಾರಿ

ಕೊಪ್ಪಳದಲ್ಲಿ ಪತ್ನಿ, ಮಗನೊಂದಿಗೆ ಚಿನ್ನದ ವ್ಯಾಪಾರಿ ಆತ್ಮಹತ್ಯೆ

ಪ್ರಾಥಮಿಕ ತನಿಖೆಯ ಪ್ರಕಾರ, ವ್ಯವಹಾರದಲ್ಲಿ ಉಂಟಾಗಿದ್ದ ವಿಪರೀತ ಸಾಲಬಾಧೆಯಿಂದ ಚಿನ್ನದ ವ್ಯಾಪಾರಿಯ ಕುಟುಂಬದ ಈ ತೀವ್ರ ನಿರ್ಧಾರ ತೆಗೆದುಕೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಪತಿಯನ್ನು ಕೊಂದು ಬಾತ್‌ರೂಂನಲ್ಲಿ ಹೂತು ಹಾಕಿದ್ದ ಪತ್ನಿ! 45 ದಿನಗಳ ಬಳಿಕ ಹೊರ ಬಿತ್ತು ಕೊಲೆ ರಹಸ್ಯ

ಪತಿಯನ್ನು ಕೊಂದು ಬಾತ್‌ರೂಮ್‌ನಲ್ಲಿ ಹೂತ ಪತ್ನಿ

ಉತ್ತರ ಪ್ರದೇಶದ ಆಗ್ರಾದಲ್ಲಿ 45 ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ಭಾವಿಸಲಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯ ಬಾತ್‌ರೂಮ್ ನೆಲದಡಿ ಪತ್ತೆಯಾಗಿದೆ. ಪತ್ನಿ ರೂಬಿ ಪತಿಯನ್ನು ಕೊಲೆ ಮಾಡಿ ಶವವನ್ನು ಮನೆಯಲ್ಲೇ ಹೂತುಹಾಕಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯಾ ಬಾಂಬ್ ದಾಳಿ: 30 ಪಾಕಿಸ್ತಾನಿ ಅರೆಸೈನಿಕ ಸಿಬ್ಬಂದಿಯ ಹತ್ಯೆ ಎಂದ BLA

ಬಲೂಚಿಸ್ತಾನದ ಗ್ವಾದರ್‌ನಲ್ಲಿ ಬಾಂಬ್ ದಾಳಿ

ಬಲೂಚಿಸ್ತಾನದ ಗ್ವಾದರ್ ಜಿಲ್ಲೆಯ ಪಾಕಿಸ್ತಾನಿ ಕರಾವಳಿ ಕಾವಲುಗಾರರ ಶಿಬಿರದ ಆತ್ಮಹತ್ಯಾ ಬಾಂಬ್ ದಾಳಿಯಾಗಿದ್ದು, ಇದರಲ್ಲಿ 30ಕ್ಕೂ ಹೆಚ್ಚು ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ನಡೆಸಿರುವುದಾಗಿ ಹೇಳಿದೆ. ಈ ದಾಳಿಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ.

ಮಗನಿಗೆ ಬಲವಂತವಾಗಿ ಆಸಿಡ್ ಕುಡಿಸಿ, ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಪೋಷಕರು!

ಪುತ್ರನ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

Crime News: ಮದ್ಯದ ಚಟವಿದ್ದ 23 ವರ್ಷದ ಯುವಕನೊಬ್ಬನನ್ನು ಪೋಷಕರೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್‌ನ ರಾಜ್‌ಕೋಟ್‌ನ ಗುಂಡಾಲಾ ಗ್ರಾಮದಲ್ಲಿ ನಡೆದಿದೆ. ಪುತ್ರನ ಕತ್ತು ಹಿಸುಕಿ ಕೊಂದ ಪೋಷಕರು, ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಜೂನ್ 30 ರಂದು ಈ ಘಟನೆ ನಡೆದಿದೆ.

ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ನಡೆಯದ ಮದುವೆಗೆ ಟಿಕಿಟ್‌ ಬುಕ್‌ ಮಾಡ್ತೀನಿ ಎಂದು ಸ್ನೇಹಿತರಿಗೆ ಮೆಸೇಜ್‌ ಮಾಡಿದ್ದ ಸಿಯಾ!

ಎಂದಿಗೂ ನಡೆಯದ ಮದುವೆಗೆ ಆಧಾರ್ ಕಾರ್ಡ್ ಫೋಟೋ ಕಳಿಸು ಎಂದಿದ್ದ ಸಿಯಾ

Ketan Agarwal Murder Case: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿಯಾ ಗೋಯಲ್‌ಳ ಮೊಬೈಲ್ ಫೋನ್‌ನಿಂದ ಅಳಿಸಲಾದ ಚಾಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಗೂ ಮುನ್ನ ಅಥವಾ ನಂತರ ರೂಪಿಸಿದ್ದ ಯೋಜನೆಗಳ ಬಗ್ಗೆ ಯಾವುದೇ ಸುಳಿವುಗಳು ಈ ಸಂಭಾಷಣೆಗಳಲ್ಲಿ ಸಿಗುತ್ತವೆಯೇ ಎಂಬುದನ್ನು ತಿಳಿಯಲು ಪೊಲೀಸರು ಚಾಟ್‌ಗಳನ್ನು ವಿಶ್ಲೇಷಿಸುತ್ತಿದ್ದಾರೆ.

ಅಯೋಧ್ಯೆ ರಾಮ ಮಂದಿರದ ದೇಣಿಗೆಯಿಂದ ಪ್ರತಿ ನಿತ್ಯ  6- 8 ಲಕ್ಷ ರೂ. ಕಳವು

ರಾಮಮಂದಿರ ದೇಣಿಗೆಯಿಂದ ನಿತ್ಯವೂ ಲಕ್ಷ ಲಕ್ಷ ಕಳವು

ಅಯೋಧ್ಯೆ ರಾಮ ಮಂದಿರದ ದೇಣಿಗೆ ಪೆಟ್ಟಿಗೆಗೆ ಪ್ರತಿ ದಿನ 24 ರಿಂದ 26 ಲಕ್ಷ ರೂ. ಹರಿದು ಬರುತ್ತಿದ್ದು, ಇದರಿಂದ 6- 8 ಲಕ್ಷ ರೂ. ಕಳವಾಗುತ್ತಿತ್ತು. ಆರಂಭದಲ್ಲಿ ದಿನಕ್ಕೆ ಸರಾಸರಿ 16 ರಿಂದ 18 ಲಕ್ಷ ರೂ. ಬರುತ್ತಿತ್ತು. ಇದು ಬಳಿಕ ಹೆಚ್ಚುತ್ತಾ ಹೋಗಿದೆ ಎಂದು ಬ್ಯಾಂಕ್ ಸಿಬ್ಬಂದಿ ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಥೈಲೆಂಡ್‌ನಲ್ಲಿ ಭೀಕರ ಅಪಘಾತ: 11 ವರ್ಷದ ಬಾಲಕ ಚಾಲನೆ ಮಾಡಿದ ಟ್ರಕ್‌ ಹರಿದು 9 ಭಿಕ್ಷುಕರ ದುರ್ಮರಣ

ಭಿಕ್ಷುಕರ ಮೇಲೆ ಟ್ರಕ್‌ ಹರಿದು 9 ಸಾವು

ಈಶಾನ್ಯ ಥೈಲೆಂಡ್‌ನಲ್ಲಿ ಪಾದಯಾತ್ರೆಯಲ್ಲಿದ್ದ ಬೌದ್ಧ ಭಿಕ್ಷುಕರ ಗುಂಪಿನ ಮೇಲೆ 11 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪಿಕಪ್‌ ಟ್ರಕ್‌ ಹರಿದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. 13 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಪೋಷಕರ ಅನುಮತಿಯಿಲ್ಲದೆ ಬಾಲಕ ವಾಹನ ಚಲಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Davangere Murder: ಕಲ್ಲಿನಿಂದ‌ ಜಜ್ಜಿ ಗಂಡನನ್ನೇ ಕೊಲೆಗೈದ ಪತ್ನಿ; ಶವ ಸಾಗಿಸಲು ಮಗ ಸಹಾಯ!

ಕಲ್ಲಿನಿಂದ‌ ಜಜ್ಜಿ ಗಂಡನನ್ನೇ ಕೊಲೆಗೈದ ಪತ್ನಿ; ಶವ ಸಾಗಿಸಲು ಮಗ ಸಹಾಯ!

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ ಪ್ರಕರಣ ನಡೆದಿತ್ತು. ಪೊಲೀಸರ ತನಿಖೆ ವೇಳೆ ಪತ್ನಿಯೇ ಕೊಲೆ ಮಾಡಿರುವ ವಿಚಾರ ಬಯಲಾಗಿದೆ. ಶವ ಸಾಗಿಸಲು ಆಕೆಗೆ ಮಗ ಸಹಾಯ ಮಾಡಿದ್ದು, ಸದ್ಯ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ಹಾವೇರಿ ಮೂಲದ ನೌಕಾಪಡೆ ಯೋಧ ಸಾವು

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ನೌಕಾಪಡೆ ಯೋಧ ಸಾವು

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದ ಯೋಧ ಯಶೋಧರ ವಡ್ಡರ ಅವರು ತರಬೇತಿ ವೇಳೆ ಬಂದೂಕು ಮಿಸ್‌ ಫೈರಿಂಗ್‌ ಆಗಿ ಮೃತಪಟ್ಟಿದ್ದಾರೆ. ಕೊಚ್ಚಿ ನೌಕಾಪಡೆಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಂಗಳೂರು ಮೂಲಕ ಹಾವೇರಿಗೆ ಪಾರ್ಥಿವ ಶರೀರದ ರವಾನೆ ಮಾಡಲಾಗಿದೆ.

Tragedy at stone quarry: ಕಲ್ಲು ಕ್ವಾರಿಯಲ್ಲಿ ದುರಂತ: 30 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು

ಕಲ್ಲು ಕ್ವಾರಿಯಲ್ಲಿ ದುರಂತ: 30 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು

ಕಳೆದ ಮಂಗಳವಾರ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಂಪ್ರೆಸ್ಸರ್ ಟ್ರ್ಯಾಕ್ಟರ್ ಆಯತಪ್ಪಿ ಸುಮಾರು 30 ಅಡಿ ಆಳಕ್ಕೆ ಬಿದ್ದ ಪರಿಣಾಮ ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಮೃತಪಟ್ಟಿದ್ದಾರೆ.

ರಾಮ, ಸೀತೆ, ಕೃಷ್ಣನಿಗೆ ಅವಮಾನ: ವಿಡಿಯೋ ತೆಗೆದುಹಾಕಲು ಧ್ರುವ ರಥೀಗೆ 15 ದಿನಗಳ ಗಡುವು

ಆಕ್ಷೇಪಾರ್ಹ ವಿಡಿಯೋ ತೆಗೆಯಲು ಧ್ರುವ ರಥೀಗೆ 15 ದಿನಗಳ ಗಡುವು

ಹಿಂದೂ ದೇವರಾದ ಶ್ರೀರಾಮ, ಸೀತೆ, ಶ್ರೀಕೃಷ್ಣ ಮಾಂಸಾಹಾರ, ಮದ್ಯ ಸೇವಿಸಿದ್ದಾರೆ ಎನ್ನುವ ವೀಡಿಯೊವನ್ನು ಯೂಟ್ಯೂಬರ್ ಧ್ರುವ ರಥೀ ಹಂಚಿಕೊಂಡಿದ್ದು, ಇದನ್ನು ತೆಗೆದು ಹಾಕಲು ನ್ಯಾಯಾಲಯ ಆದೇಶಿಸಿದೆ. ಈ ಕುರಿತು ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಶುಕ್ರವಾರ 15 ದಿನಗಳಲ್ಲಿ ವೀಡಿಯೊ ತೆಗೆದು ಹಾಕಲು ಆದೇಶಿಸಿದೆ.

Puneeth Kerehalli: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ ಸತ್ಯಕಿ ಸಾವರ್ಕರ್: ಏನಿದು ವೀರ ಸಾವರ್ಕರ್ ಗೆ ಸಂಬಂಧಿಸಿದ ಪ್ರಕರಣ ?

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಕೇಸು ದಾಖಲು

ವಿನಾಯಕ ದಾಮೋದರ್ ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾದಾನ ಕೋರಿ ಅರ್ಜಿ ಬರೆದಿದ್ದು, ಇದರಿಂದಾಗಿ ಅವರು ಜೈಲಿನಿಂದ ಬಿಡುಗಡೆಯಾದರು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್ ನಲ್ಲಿ ಹೇಳಿಕೆ ನೀಡಿದ್ದರು. ಇದು ಸುಳ್ಳು ಎಂದು ಹೇಳಿರುವ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೊಲೆ ಮಾಡಿದರೂ ಪಶ್ಚಾತಾಪವೇ ಇಲ್ಲ; ಮಾಧ್ಯಮದತ್ತ ಮಧ್ಯ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿದ ಸಿಯಾ ಗೋಯಲ್

ಮಾಧ್ಯಮದತ್ತ ಮಧ್ಯದ ಬೆರಳು ತೋರಿಸಿದ ಆರೋಪಿ

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಢ ಕೋಟೆಯಲ್ಲಿ ನಿಶ್ಚಿತಾರ್ಥದ ವರ ಕೇತನ್ ಅಗರವಾಲ್ ಅವರನ್ನು ಪ್ರಿಯಕರನೊಂದಿಗೆ ಸೇರಿ ಕಣಿವೆಗೆ ತಳ್ಳಿ ಹತ್ಯೆ ಮಾಡಿರುವ ಆರೋಪದಡಿ ಸಿಯಾ ಗೋಯಲ್ ಬಂಧಿತರಾಗಿದ್ದಾರೆ. ಆರಂಭದಲ್ಲಿ ಇದನ್ನು ಅಪಘಾತ ಎಂದು ಬಿಂಬಿಸಲಾಗಿದ್ದರೂ, ಸಿಯಾ ಯಾವುದೇ ಪಶ್ಚಾತ್ತಾಪ ತೋರಿಸದಿರುವುದು ಪೊಲೀರಲ್ಲಿ ಅನುಮಾನ ಮೂಡಿಸಿತು. ತನಿಖೆಯಲ್ಲಿ ಕೊಲೆ ಸಂಚು ಬಹಿರಂಗವಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿಗಳ ಬಂಧನವಾದದ್ದು ಹೇಗೆ?

ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಸೇರಿ ಇಬ್ಬರ ಬಂಧನ

ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್‌ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.

ಮಕ್ಕಳ ಮೇಲೆ ದೌರ್ಜನ್ಯ: ಬೆಂಗಳೂರು  ಡೇ ಕೇರ್‌ನ ಇಬ್ಬರು ಆರೈಕೆದಾರರ ಬಂಧನ

ಬೆಂಗಳೂರು ಡೇ ಕೇರ್ ಸಿಬ್ಬಂದಿ ಬಂಧನ

ಬೆಂಗಳೂರಿನ ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಇಬ್ಬರು ಆರೈಕೆದಾರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷ ವಯಸ್ಸಿನ ಮಕ್ಕಳನ್ನು ಡೇ ಕೇರ್ ಆರೈಕೆದಾರರು ವಾಷಿಂಗ್ ಮೆಷಿನ್ ಒಳಗೆ ಹಾಕಿ ಚಿತ್ರ ಹಿಂಸೆ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

Loading...