ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Self Harming: ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆ

ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ

Shivamogga news: ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ಗುರುತಿಸಲಾಗಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿಎಸ್‌ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು. 2025ರ ಏಪ್ರಿಲ್ 14ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು.

Murugha math Sri: ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ (POCSO case) ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣದ ವಾದ-ಪ್ರತಿವಾದ ಪೂರ್ಣಗೊಂಡಿದೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ ಆಲಿಸಿದ ನ್ಯಾಯಾಲಯ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ.

Robbery Case: ಸೊಸೆ, ಅಪ್ರಾಪ್ತ ಮೊಮ್ಮಗನೊಂದಿಗೆ ಮಗಳ ಮನೆಗೆ ಸ್ಕೆಚ್: 50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕದ್ದು ವೃದ್ಧ ಎಸ್ಕೇಪ್

ಸೊಸೆ, ಅಪ್ರಾಪ್ತ ಮೊಮ್ಮಗನೊಂದಿಗೆ ಸೇರಿ ಮಗಳ ಮನೆಗೆ ಸ್ಕೆಚ್

Uttar Pradesh Crime: ಬಹ್ರೈಚ್‌ನಲ್ಲಿ ಮಹಿಳೆಗೆ ಮಾದಕ ದ್ರವ್ಯ ನೀಡಿ ಸುಮಾರು 50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕದ್ದ ಆರೋಪ ಕೇಳಿಬಂದಿದೆ. ಮಹಿಳೆಯ 70 ವರ್ಷದ ತಂದೆ, ಅವರ ಸೊಸೆ ಹಾಗೂ ಅಪ್ರಾಪ್ತ ಮೊಮ್ಮಗ ಈ ಕೃತ್ಯವೆಸಗಿದವರು. ಪ್ರಕರಣ ಸಂಬಂಧ ಸೊಸೆಯನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.

Mahantesh Bilagi Death: ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

Kalaburagi Car Accident: ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

Belagavi News: 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮಲಂಗಿ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಹೆಣ್ಣು ಮಗಳನ್ನು ಕೊಂದ ಬಳಿಕ ತಾಯಿ ಡ್ರಾಮಾ ಮಾಡಿದ್ದು, ಮಗುವಿಗೆ ಉಸಿರಾಡುತ್ತಿಲ್ಲ ಎಂದು ಮನೆಯವರಿಗೆ ಹೇಳಿದ್ದಾಳೆ. ಇದರಿಂದ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಗಡಿ ಭಾಗಗಳ ವಿಡಿಯೊ ರೆಕಾರ್ಡ್‌ ಮಾಡುತ್ತಿದ್ದ ಚೀನಾ ಪ್ರಜೆ ಅರೆಸ್ಟ್‌!

ಭಾರತದ ಗಡಿ ಭಾಗಗಳ ವಿಡಿಯೊ ಮಾಡುತ್ತಿದ್ದ ಚೀನಾ ಪ್ರಜೆ ಅರೆಸ್ಟ್‌!

ಚೀನಿ ಪ್ರಜೆಯೊಬ್ಬ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಭಾರತ-ನೇಪಾಳ ಗಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಎಸ್‌ಎಸ್‌ಬಿ ಅಧಿಕಾರಿಗಳು, ಈತ ಈ ಮೊದಲು ಪಾಕಿಸ್ತಾನಕ್ಕೂ ಮತ್ತು ನೇಪಾಳಕ್ಕೂ ಭೇಟಿ ನೀಡಿದ್ದಾನೆ. ಹಾಗಾಗಿ ಈತನನ್ನು ಶಂಕಿತ ಉಗ್ರನೆಂದು ಪರಿಗಣಿಸಲಾಗಿದೆ. ಘಟನೆ ಬಗ್ಗೆ ವಿಚಾರಣೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Murder Case: ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

Bengaluru Crime News: 32 ವರ್ಷದ ನರಸಿಂಹರಾಜು ಕೊಲೆಯಾದ ಯುವಕ. ಮದುವೆಯಾಗಿದ್ದ ಮಹಿಳೆಯೊಬ್ಬರ ಜೊತೆ ನರಸಿಂಹರಾಜುಗೆ ಅಕ್ರಮ ಸಂಬಂಧ ಇತ್ತು. ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ನರಸಿಂಹರಾಜುವನ್ನು ಕೆಳಗೆ ಬೀಳಿಸಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಮನೆಯಿಂದ ಕರೆದೊಯ್ಯುವ ಹಾಗೂ ಹಲ್ಲೆ ಮಾಡುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.

Meerut Murder Case: ಪತಿಯನ್ನು ಕೊಂದು ನೀಲಿ ಡ್ರಮ್‌ಗೆ ತುಂಬಿದ್ದ ಹಂತಕಿ ಮುಸ್ಕಾನ್‌ಗೆ ಹೆಣ್ಣು ಮಗು!

ನೀಲಿ ಡ್ರಮ್‌ ಹಂತಕಿ ಮುಸ್ಕಾನ್‌ಗೆ ಹೆಣ್ಣು ಮಗು!

ಮೀರತ್‌ನಲ್ಲಿ ಪತಿಯನ್ನು ಬರ್ಬರವಾಗಿ ಕೊಲೆಗೈದು ನೀಲಿ ಡ್ರಮ್‌ನಲ್ಲಿ ತುಂಬಿದ್ದ ಹಂತಕಿ ಮುಸ್ಕಾನ್‌ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಪತಿ ಸೌರಭ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪದಲ್ಲಿ ಜೈಲು ಪಾಲಾಗಿದ್ದ ಮುಸ್ಕಾನ್‌ ಸೋಮವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Mask Man Chinnayya: ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Self harming case: ಅಮೆರಿಕ ವೀಸಾ ರಿಜೆಕ್ಟ್‌- ಮನನೊಂದ ವೈದ್ಯೆಯಿಂದ ಆತುರದ ನಿರ್ಧಾರ

ವೀಸಾ ಸಿಗದ ಕಾರಣ ವೈದ್ಯೆ ಆತ್ಮಹತ್ಯೆ!

ಉದ್ಯೋಗಕ್ಕಾಗಿ ಅಮೆರಿಕ ಹೊರಟಿದ್ದ ವೈದ್ಯರೊಬ್ಬರು ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ವೀಸಾಗಾಗಿ ಮನವಿ ಸಲ್ಲಿಸಿದ್ದರು. ಆದರೆ ಆಕೆಯ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Bengaluru Murder Case: ಯುವತಿಯನ್ನು ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಭೀಕರವಾಗಿ ಕೊಲೆಗೈದ ಯುವಕ

ಬೆಂಗಳೂರಿನಲ್ಲಿ ಯುವತಿಯನ್ನು ಭೀಕರವಾಗಿ ಕೊಲೆಗೈದ ಯುವಕ

Bengaluru News: ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ ನಡೆದಿದೆ. ಆಂಧ್ರ ಮೂಲದ ಯುವತಿಯ ಕೊಲೆ ನಡೆದಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮಾಜಿ ಕೈದಿಗಳ ಜೊತೆಗೂಡಿ ವೈದ್ಯನ ಖೋಟಾ ನೋಟ್‌ ದಂಧೆ- ಬೃಹತ್‌ ರಾಕೆಟ್‌ ಬಯಲಿಗೆ!

ಅತಿದೊಡ್ಡ ನಕಲಿ ಕರೆನ್ಸಿ ರಾಕೆಟ್ ಬಯಲಿಗೆ!

Fake Currency Racket: ಮಧ್ಯಪ್ರದೇಶ ಪೊಲೀಸರು ಭಾರಿ ನಕಲಿ ಕರೆನ್ಸಿ ರಾಕೆಟ್‌ ಭೇದಿಸಿ, ಮಾಜಿ ಜೈಲು ಕೈದಿಗಳ ಸಹಕಾರದಿಂದ ವೈದ್ಯನೊಬ್ಬ ನಡೆಸುತ್ತಿದ್ದ ಸಂಚನ್ನು ಬಯಲಿಗೆಳೆದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಈ ಗ್ಯಾಂಗ್ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದಾಗ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Bengaluru Robbery Case: ಬೆಂಗಳೂರು ದರೋಡೆ ಆರೋಪಿ ಕಾನ್ಸ್‌ಟೇಬಲ್ ವಜಾ, ಖಾಕಿ ಮೇಲೂ ಹದ್ದಿನ ಕಣ್ಣು

ಬೆಂಗಳೂರು ದರೋಡೆ ಆರೋಪಿ ಕಾನ್ಸ್‌ಟೇಬಲ್ ವಜಾ, ಖಾಕಿ ಮೇಲೂ ಹದ್ದಿನ ಕಣ್ಣು

ರಾಬರಿ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ನೇ ಶಾಮೀಲು ಆಗಿರುವುದರಿಂದ ಪೊಲೀಸ್ ಇಲಾಖೆ (police department) ಅಲರ್ಟ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ (Bengaluru Police Commissioner) ಸೀಮಂತ್ ಕುಮಾರ್ ಸಿಂಗ್, ಬೆಂಗಳೂರಿನ ಎಲ್ಲಾ ಠಾಣೆಯ ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್‌ಗಳ ಮಾನಿಟರಿಂಗ್‌ಗೆ ಸೂಚನೆ ನೀಡಿದ್ದಾರೆ.

Kalaburagi News: ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Farmer consumes poison: ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ರೈತ ಬೆಳೆದಿದ್ದ ಎಲ್ಲಾ ತೊಗರಿ ಬೆಳೆಯು ಸಂಪೂರ್ಣ ನಾಶವಾಗಿತ್ತು. ಬೆಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದಿಕ್ಕೆಟ್ಟ ರೈತ, ಅಲ್ಪಸ್ವಲ್ಪ ಉಳಿದ ಬೆಳೆಗೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Self Harming: ಮಗನ ಚಿಕಿತ್ಸೆಗೆ ಹಣವಿಲ್ಲದೆ ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ವ್ಯಕ್ತಿ

ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ವ್ಯಕ್ತಿ

Jharkhand News: ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆ ವ್ಯಕ್ತಿ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್;  26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್

ದೆಹಲಿ ಸ್ಪೋಟಕ್ಕೆ ಹಣ ನೀಡಿದ್ದು ವೈದ್ಯರು !

ದೆಹಲಿಯ ಕೆಂಪು ಕೋಟೆಯ ಬಳಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಹಣ ಸಂಗ್ರಹದ ಕುರಿತು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ. ದೆಹಲಿಯ ಸ್ಪೋಟಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳ ಖರಿದಿಗೆ ಐವರು ವೈದ್ಯರು ಹಣ ನೀಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.

Bengaluru Kidnap Case: ಕೋರಮಂಗಲ ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಕೇಸ್‌; ಪೊಲೀಸ್‌ ಪೇದೆ ಸೇರಿ 8 ಮಂದಿ ಅರೆಸ್ಟ್‌

ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಪ್ರಕರಣ; 8 ಮಂದಿ ಅರೆಸ್ಟ್‌

ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿ, ಅಪಹರಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಬಂಧಿಸಲಾಗಿದೆ.

Bengaluru Robbery Case: 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ; ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಖದೀಮರು!

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ!

Bengaluru News: ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆದಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಕೇವಲ 60 ಗಂಟೆಗಳಲ್ಲೇ ಭೇದಿಸಿ, ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಹೈದರಾಬಾದ್‌ನ ಲಾಡ್ಜ್‌ನಲ್ಲಿ ಮತ್ತೆ ಮೂವರನ್ನು ಶನಿವಾರ ಅರೆಸ್ಟ್‌ ಮಾಡಲಾಗಿತ್ತು.

Robbery Case: ನಡು ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಕೆಜಿಗಟ್ಟಲೇ ಚಿನ್ನ ದರೋಡೆ; ಗ್ಯಾಂಗ್‌ ಹಿಂದೆಯಾ ಪರಿಚತರ ಕೈವಾಡ?

ನಡು ರಸ್ತೆಯಲ್ಲಿ ಅಡ್ಡ ಹಾಕಿ ಕೆಜಿಗಟ್ಟಲೇ ಚಿನ್ನ ದರೋಡೆ

Chamarajangar News: ಆಭರಣ ತಯಾರಕರೊಬ್ಬರ ಕಾರನ್ನು ಅಡ್ಡಗಟ್ಟಿ ಕೆಜಿಗಟ್ಟಲೆ ಚಿನ್ನ ದೋಚಿದ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ನಡೆದಿದೆ. ನವೆಂಬರ್ 20ರ ರಾತ್ರಿ ಆಭರಣ ತಯಾರಕ ಕೇರಳ ರಾಜ್ಯದ ಕ್ಯಾಲಿಕೇಟ್ ನಿವಾಸಿ ವಿನು ಪೊಲೀಸರಿಗೆ ದೂರು ನೀಡಿದ್ದರು.

Road Accident: ಬೈಕ್‌ಗಳ ನಡುವೆ ಭೀಕರ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಬೈಕ್‌ ಅಪಘಾತ; ಇಬ್ಬರು ಸಾವು

ಬೀದರ್‌ ತಾಲೂಕಿನ ಬೆನಕನಹಳ್ಳಿಯಲ್ಲಿ ಶನಿವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, (Rd Accident) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇವಳೆಂಥಾ ತಾಯಿ? 7 ದಿನಗಳ ಮಗುವನ್ನು 6 ಲಕ್ಷ ರೂ.ಗೆ ಸೇಲ್‌ ಮಾಡಿದ ಮಹಿಳೆ

7 ದಿನಗಳ ಮಗುವನ್ನು 6 ಲಕ್ಷ ರೂ.ಗೆ ಸೇಲ್‌ ಮಾಡಿದ ಮಹಿಳೆ

ಮಕ್ಕಳ ಮಾರಾಟ ಜಾಲ ತೆಲಂಗಾಣದ ಕರಿಂನಗರದಲ್ಲಿ ಸಕ್ರಿಯವಾಗಿದೆ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ಈ ಮಹಿಳೆ ಮಧ್ಯವರ್ತಿಯ ಸಹಾಯದಿಂದ ತನ್ನ ಮಗುವನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕರಿಂನಗರ ಟೌನ್‌ 2 ಪೊಲೀಸರು ಮಾಹಿತಿ ನೀಡಿದ್ದಾರೆ.

Kalaburagi News: ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ; 9 ವರ್ಷದ ಬಳಿಕ ವಿಡಿಯೋದಿಂದ ಬಯಲಾಯ್ತು ಹತ್ಯೆ ರಹಸ್ಯ!

ಅನೈತಿಕ ಸಂಬಂಧಕ್ಕೆ ಅಡ್ಡಿ; ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ ಪತ್ನಿ!

Kalaburagi Murder Case: ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಬೀರಪ್ಪಾ ಪೂಜಾರಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನು ಪತ್ನಿಯೇ ಸುಪಾರಿ ಕೊಟ್ಟು ಮುಗಿಸಿದ್ದಾಳೆ.

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕರಿಂದ ಅವಮಾನ ಸಿಸಿಟಿವಿಯಲ್ಲಿ ದಾಖಲು

ವಿದ್ಯಾರ್ಥಿ ಆತ್ಮಹತ್ಯೆಗೆ ಶಿಕ್ಷಕರಿಂದ ಪ್ರಚೋದನೆ

ಕೇಂದ್ರ ದೆಹಲಿಯ ಸೇಂಟ್ ಕೊಲಂಬಾ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿರುವ ಪೊಲೀಸರು ವಿದ್ಯಾರ್ಥಿಗೆ ಶಿಕ್ಷಕರು ಅವಮಾನ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಶೀಘ್ರದಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಕ್ಷಕರಿಂದ ಮಾನಸಿಕ ಕಿರುಕುಳ ಆರೋಪ; ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Mumbai News: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

Loading...