ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

BS Yediyurappa: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಬಿಎಸ್ ಯಡಿಯೂರಪ್ಪ

ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಯಡಿಯೂರಪ್ಪ

ಪೋಕ್ಸೋ ಪ್ರಕರಣದಲ್ಲಿ (POCSO case) ಹೈಕೋರ್ಟ್ ಆದೇಶದ ಪ್ರಕಾರ ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಿದ್ದ ಬಿಎಸ್‌ ಯಡಿಯೂರಪ್ಪ, ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿದ್ದಾರ್ಥ ಲೂಥ್ರಾ ವಾದಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.

BS Yediyurappa: ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ

ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕೋರ್ಟ್‌ಗೆ

ತಮ್ಮ ಮೇಲಿನ ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್,​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಇಂದೇ ಪೀಠದ ಮುಂದೆ ಹಾಜರಾಗುವಂತೆ ಆದೇಶಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Chikkaballapur Crime: ಬಾಡಿಗೆ ಮನೆಯಲ್ಲಿ ಇದ್ದ ದಂಪತಿ ಶವವಾಗಿ ಪತ್ತೆ

Chikkaballapur Crime: ಬಾಡಿಗೆ ಮನೆಯಲ್ಲಿ ಇದ್ದ ದಂಪತಿ ಶವವಾಗಿ ಪತ್ತೆ

ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಮೂಲದ ಅಶ್ವತ್ತಪ್ಪ (65) ಹಾಗೂ ಅವರ ಪತ್ನಿ ಹನುಮಕ್ಕ (55) ಅವರು, ಪೂಲಂಪಲ್ಲಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಶವವಾಗಿ ಪತ್ತೆಯಾಗಿ ದ್ದಾರೆ. ದಂಪತಿಗಳಿಬ್ಬರು ಕಳೆದ ಒಂದು ವರ್ಷದಿಂದ ಪೂಲಂಪಲ್ಲಿ ಗ್ರಾಮ ದಲ್ಲಿ ಬಾಡಿಗೆ ಮನೆ ಮಾಡಿ ಕೊಂಡು ಜೀವನ ಮಾಡುತ್ತಿದ್ದರು.

ಸತ್ತು ಮಲಗಿದ ಪ್ರಿಯಕರನ ಶವದೊಂದಿಗೆ ಮದುವೆಯಾದ ಯುವತಿ; ಕೊಲೆಯಲ್ಲಿ ಪೊಲೀಸರೇ ಭಾಗಿ?

ಛೇ ದುರ್ವಿಧಿ ಸತ್ತು ಮಲಗಿದ ಪ್ರಿಯಕರನ ಶವದೊಂದಿಗೆ ಮದುವೆಯಾದ ಯುವತಿ

Murder case: ಪ್ರಿಯಕರನ ಮೃತದೇಹವನ್ನೇ ವಿವಾಹವಾದ ಪ್ರಕರಣದಲ್ಲಿ, ಯುವತಿಯೊಬ್ಬಳು ಗಂಭೀರ ಆರೋಪವನ್ನು ಮಾಡಿದ್ದಾಳೆ. ಕೊಲೆಯಲ್ಲಿ ಇಬ್ಬರು ಪೊಲೀಸರೂ ಭಾಗಿಯಾಗಿದ್ದಾರೆ ಎಂದು ಪ್ರಿಯತಮೆ ಆರೋಪಿಸಿದ್ದಾಳೆ. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಕ್ಷಾಮ್ ಟೇಟ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಇದೀಗ ಪೊಲೀಸರ ವಿರುದ್ಧ ಆರೋಪ ಕೇಳಿಬಂದಿದೆ.

ನರ್ಸರಿ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಮನ ಬಂದಂತೆ ಹಲ್ಲೆ; ಮಹಿಳಾ ಸಿಬ್ಬಂದಿಯ ಕ್ರೂರ ಕೃತ್ಯ ಕ್ಯಾಮರಾದಲ್ಲಿ ಸೆರೆ

4 ವರ್ಷದ ಬಾಲಕಿ ಮೇಲೆ ಮನ ಬಂದಂತೆ ಹಲ್ಲೆ

Nursery school assault case: ನರ್ಸರಿ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಯ ಮೇಲೆ ಸಿಬ್ಬಂದಿಯೊಬ್ಬಳು ಮನ ಬಂದಂತೆ ಥಳಿಸಿರುವ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆತಂಕ ಮೂಡಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪತ್ನಿಯನ್ನು ಕೊಂದು ಶವದೊಂದಿಗೆ ಸೆಲ್ಫಿ ತೆಗೆದು ಪೋಸ್ಟ್; ವ್ಯಕ್ತಿಯ ಕ್ರೌರ್ಯಕ್ಕೆ ಬೆಚ್ಚಿಬಿದ್ದ ದೇಶ

ಪತ್ನಿಯನ್ನು ಕೊಂದು ಶವದೊಂದಿಗೆ ಸೆಲ್ಫಿ ತೆಗೆದು ಪೋಸ್ಟ್

Man kills wife in Tamil Nadu: ತಮಿಳುನಾಡಿನಲ್ಲಿ ನಡೆದ ಆಘಾತಕಾರಿ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದ ನಂತರ ಶವದೊಂದಿಗೆ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ದೇಶಾದ್ಯಂತ ತಲ್ಲಣ ಸೃಷ್ಟಿಸಿದೆ.

ಮೂಢನಂಬಿಕೆಗೆ ಮತ್ತೊಂದು ಬಲಿ; ಮಾಜಿ ಪ್ರೇಮಿಯನ್ನು ಒಲಿಸಿಕೊಳ್ಳಲು ಮಂತ್ರವಾದಿಯ ಮೊರೆ ಹೋದ ಯುವಕ ಶವವಾಗಿ ಪತ್ತೆ

ಮಾಜಿ ಪ್ರೇಮಿಯ ಮನಗೆಲ್ಲಲು ಮಂತ್ರವಾದಿಯ ಮೊರೆ ಹೋದ ಯುವಕ ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಯುವಕನೊಬ್ಬ ತನ್ನ ಮಾಜಿ ಪ್ರೇಮಿಯನ್ನು ಒಲಿಸಿಕೊಳ್ಳಲು ಮಂತ್ರವಾದಿಯ ಬಳಿಗೆ ಹೋಗಿ ದುರಂತ ಅಂತ್ಯ ಕಂಡಿದ್ದಾನೆ. ತಂತ್ರ ಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ನಕಲಿ ಮಂತ್ರವಾದಿ ಕೊಲೆ ಮಾಡಿದ್ದಾನೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; 3 ಜನರ ಬಂಧನ

ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ ಪೊಲೀಸರು; ಮೂವರು ಅರೆಸ್ಟ್

Terror module busted: ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್‌ ಅನ್ನು ದೆಹಲಿ ಪೊಲೀಸರು ಭೇದಿಸಿ ಮೂವರು ಪ್ರಮುಖ ಶಂಕಿತರನ್ನು ಬಂಧಿಸಿದ್ದಾರೆ. ಪಂಜಾಬ್‌ನ ಗುರುದಾಸ್ಪುರ ಪೊಲೀಸ್ ಠಾಣೆಯ ಹೊರಗೆ ನವೆಂಬರ್ 25ರಂದು ನಡೆದ ಗ್ರೆನೇಡ್ ದಾಳಿಗೆ ಈ ಮಾಡ್ಯೂಲ್ ಹೊಣೆಗಾರನೆಂಬ ಶಂಕೆಯಿದೆ.

Udupi Accident: ಉಡುಪಿಯ ಕಾಪು ಬಳಿ ಭೀಕರ ಅಪಘಾತ; ಟೆಂಪೋ ಪಲ್ಟಿಯಾಗಿ ಐವರ ದುರ್ಮರಣ

ಉಡುಪಿಯ ಕಾಪು ಬಳಿ ಟೆಂಪೋ ಪಲ್ಟಿಯಾಗಿ ಐವರ ದುರ್ಮರಣ

Tempo accident in Kaup: ಕಾರ್ಯಕ್ರಮವೊಂದಕ್ಕೆ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಅಪಘಾತಕ್ಕೀಡಾಗಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ವಾಹನದಲ್ಲಿ 12 ಮಂದಿ ಕಾರ್ಮಿಕರು ಸಾಗಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ದುರಂತ ಸಂಭವಿಸಿದೆ.

ಪ್ರೀತಿಗೆ ಸಾವಿಲ್ಲ; ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ: ಮನ ಕಲುಕುವ ಲವ್‌ ಸ್ಟೋರಿ ಇಲ್ಲಿದೆ

ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ

ಮಹಾರಾಷ್ಟ್ರದ ನಾಂದೇಡ್‌ ಇತ್ತೀಚೆಗೆ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಯುವಕನ್ನು ಜಾತಿಯ ಹೆಸರಿನಲ್ಲಿ ಥಳಿಸಿ, ಗುಂಡು ಹಾರಿಸಿ, ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಇದರಿಂದ ಕುಸಿದ ಆತನ ಪ್ರೇಯಸಿ ಮೃತದೇಹವನ್ನು ವರಿಸಿದ್ದು, ಆತನ ಮನೆಯಲ್ಲೇ ವಾಸಿಸುವುದಾಗಿ ತಿಳಿಸಿದ್ದಾಳೆ. ಸದ್ಯ ಈ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

Bengaluru News: ಪ್ರಿಯಕರನಿಂದ ಲೈಂಗಿಕ ಕಿರುಕುಳ; ನಟಿ ಆಶಿಕಾ ರಂಗನಾಥ್‌ ಮಾವನ ಮಗಳು ಆತ್ಮಹತ್ಯೆ

ಲೈಂಗಿಕ ಕಿರುಕುಳ; ನಟಿ ಆಶಿಕಾ ರಂಗನಾಥ್‌ ಮಾವನ ಮಗಳು ಆತ್ಮಹತ್ಯೆ

ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದು 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಮಗಳ ಸಾವಿಗೆ ಕಾರಣವಾದವನನ್ನು ಕೂಡಲೆ ಬಂಧಿಸಿ ಎಂದು ಯುವತಿ ಪೋಷಕರು ಆಗ್ರಹಿಸಿದ್ದಾರೆ.

ಬಿಯರ್ ಟ್ರಕ್ ಪಲ್ಟಿ; ಚಾಲಕನನ್ನು ರಕ್ಷಿಸುವ ಬದಲು ಬಾಟಲಿಗಾಗಿ ಮುಗಿಬಿದ್ದ ಜನಸಮೂಹ: ಹೊಡಿರಿ ಚಪ್ಪಾಳೆ ಎಂದ ನೆಟ್ಟಿಗರು

ಬಿಯರ್ ಟ್ರಕ್ ಪಲ್ಟಿ; ಬಾಟಲಿಗಾಗಿ ಮುಗಿಬಿದ್ದ ಜನರು

Beer truck accident: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ವಾಲುಜ್ ಪ್ರದೇಶದಲ್ಲಿ ಬಿಯರ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿ ಹೊಡೆದಿದೆ. ಘಟನೆ ವೇಳೆ ಟ್ರಕ್ ಚಾಲಕನು ಕ್ಯಾಬಿನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರೂ, ಜನಸಮೂಹವು ಆತನನ್ನು ರಕ್ಷಿಸುವ ಬದಲು ಬಿಯರ್ ಬಾಟಲಿಗಳನ್ನು ಮುಗಿಬಿದ್ದಿದೆ.

ಮನೆಗೆ ಬಂದು ಆಹಾರ ಕೇಳಿದ ಭಯೋತ್ಪಾದಕರು: ಬಕರಾಲ್ ಕುಟುಂಬದಿಂದ ಸ್ಪೋಟಕ ಮಾಹಿತಿ, ಭದ್ರತಾ ಪಡೆಗಳಿಂದ ತೀವ್ರ ಶೋಧ

ಶಂಕಿತ ಭಯೋತ್ಪಾದಕರಿಗಾಗಿ ತೀವ್ರ ಶೋಧ

ಜಮ್ಮು ಮತ್ತು ಕಾಶ್ಮೀರದ ಮನೆಯೊಂದಕ್ಕೆ ಬಂದ ಮೂವರು ಶಂಕಿತ ಭಯೋತ್ಪಾದಕರು ಆಹಾರ ಕೇಳಿರುವುದಾಗಿ ಕುಟುಂಬವೊಂದು ಹೇಳಿಕೊಂಡಿದ್ದರಿಂದ ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಉಧಮ್‌ಪುರದ ಬಸಂತಗಢ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರು ಸ್ಥಳೀಯ ಬಕರಾಲ್ ಕುಟುಂಬದಿಂದ ಆಹಾರ ಕೇಳಿದ್ದರು ಎನ್ನಲಾಗಿದೆ.

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಸೇರಿದ್ದು ಮಸಣಕ್ಕೆ; ಸಿಸಿಟಿವಿ ದೃಶ್ಯ ಹೇಳಿತು ಭೀಕರ ಕೊಲೆ ರಹಸ್ಯ

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವಕನ ಕೊಲೆ

ಇನ್ನೇನು ಕೆಲವೇ ನಿಮಿಷಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 27 ವರ್ಷದ ಗಗನ್ ಕೊಲೆಯಾದ ಯುವಕ. ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Gold Robbery Case: ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

Davanagere Robbery Case: A1 ಆರೋಪಿ ಪಿಎಸ್ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸಲ್ಮಾನ್ ಎಸ್ಕೇಪ್: ಆರೋಪಿ ಬಂಧಿಸುವಲ್ಲಿ ಪೊಲೀಸರು ವಿಫಲ; ವ್ಯಾಪಕ ಆಕ್ರೋಶ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಎಸ್ಕೇಪ್

Physical assault: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆರೋಪಿ ಅಪರಾಧ ಸ್ಥಳದಲ್ಲೇ ಪತ್ತೆಯಾಗಿದ್ದರೂ, ಪೊಲೀಸರು ಅವನನ್ನು ಬಂಧಿಸಲು ವಿಫಲರಾಗಿದ್ದಾರೆ. ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶವನ್ನು ಉಂಟುಮಾಡಿದ್ದು, ಮಕ್ಕಳ ಸುರಕ್ಷತೆ ಮತ್ತು ಪೊಲೀಸರ ಕಾರ್ಯಕ್ಷಮತೆ ಬಗ್ಗೆ ತೀವ್ರ ಅಸಮಾಧಾನವುಂಟು ಮಾಡಿದೆ.

ಬೋಳು ತಲೆಯೇ ಈತನ ಪ್ಲಸ್‌ ಪಾಯಿಂಟ್‌; ವಿಗ್ ಧರಿಸಿ ಪೊಲೀಸರನ್ನು ಯಾಮಾರಿಸುತ್ತಿದ್ದ ಕುಖ್ಯಾತ ಕ್ರಿಮಿನಲ್ ಸಿಕ್ಕಿಬಿದ್ದಿದ್ದು ಹೇಗೆ?

ಅಪರಾಧ ಮಾಡಿ ವಿಗ್ ಧರಿಸುತ್ತಿದ್ದ ಕುಖ್ಯಾತ ಕ್ರಿಮಿನಲ್ ಅರೆಸ್ಟ್

ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಜಿತೇಂದ್ರ ಅಲಿಯಾಸ್ ಜಿತು ಎಂಬ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಇದೀಗ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ ಮತ್ತು ಹರಿಯಾಣದಲ್ಲಿ ಒಟ್ಟು 28 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು.

ಭಯೋತ್ಪಾದಕರೊಂದಿಗೆ ಸಂಪರ್ಕ: ಜಮ್ಮುವಿನಲ್ಲಿ 19 ವರ್ಷದ ಯುವಕನ ಬಂಧನ

ಜಮ್ಮುವಿನಲ್ಲಿ 19 ವರ್ಷದ ಯುವಕನ ಬಂಧನ

Suspicion of Links with Terrorists: ಜಮ್ಮುವಿನಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿದ್ದು, ಆರೋಪಿಯು ಭಯೋತ್ಪಾದಕ ಕೃತ್ಯ ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಧನದಾಹಿ ಪತಿಯ ಹಿಂಸೆಗೆ ಬಲಿಯಾಯ್ತಾ ಜೀವ? ಬೆಂಕಿ ಹಚ್ಚಿಕೊಂಡು ಗರ್ಭಿಣಿ ಆತ್ಮಹತ್ಯೆ!

ಶವವಾಗಿ ಪತ್ತೆಯಾದ ಗರ್ಭಿಣಿ

20 ವರ್ಷದ ಗರ್ಭಿಣಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಗಂಡನ ಚಿತ್ರ ಹಿಂಸೆಯೇ ಇದಕ್ಕೆ ಕಾರಣ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಕೇರಳದ ತ್ರಿಶೂರ್ ಜಿಲ್ಲೆಯ ಶರೂನ್ ಮತ್ತು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದು ಅರ್ಚನಾ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

RSS ಕಾರ್ಯಕರ್ತನ ಕೊಲೆ ಪ್ರಕರಣ... ಹಂತಕನಿಗೆ ಪೊಲೀಸರಿಂದ ಗುಂಡೇಟು

ಕೊಲೆ ಪ್ರಕರಣ: ಪ್ರಮುಖ ಆರೋಪಿ ಮೇಲೆ ಗುಂಡಿನ ದಾಳಿ

ಕೆಲವು ದಿನಗಳ ಹಿಂದೆ ಪಂಜಾಬ್ ನ ಫಿರೋಜ್‌ಪುರದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ನವೀನ್ ಅರೋರಾ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಹೆಡ್ ಕಾನ್‌ಸ್ಟೆಬಲ್‌ಗೂ ಗಾಯವಾಗಿದೆ. ಆರೋಪಿ ಮತ್ತು ಹೆಡ್ ಕಾನ್‌ಸ್ಟೆಬಲ್‌ ಇಬ್ಬರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಜಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಂದ ಸೈಬರ್‌ ಕ್ರೈಂ.... ಇವ್ರು ಕೊಳ್ಳೆ ಹೊಡೆದಿದ್ದು ಎಷ್ಟು ಗೊತ್ತಾ?

ಸೈಬರ್ ಕ್ರೈಮ್: ಏಳು ಮಂದಿ ಬಂಧನ

ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಭಾರಿ ಪ್ರಮಾಣದ ವಂಚನೆ ಪ್ರಕರಣವನ್ನು ಭೇದಿಸಿರುವ ಪುದುಚೇರಿಯ ಸೈಬರ್ ಕ್ರೈಮ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. 5 ಲಕ್ಷ ರೂ. ನಗದು, 171 ಚೆಕ್ ಪುಸ್ತಕಗಳು, 75 ಎಟಿಎಂ ಕಾರ್ಡ್‌ಗಳು, 20 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಬ್ಯಾಂಕ್ ಖಾತೆ ಪುಸ್ತಕಗಳು, ಕ್ರೆಡಿಟ್ ಕಾರ್ಡ್‌ಗಳು, ಕಾರು ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Viral Video: ರೈಲ್ವೆ ಹಳಿ ಮೇಲೆ ಉರುಳಿದ ಟ್ರಕ್‌;  ತಪ್ಪಿದ ಭಾರೀ ಅನಾಹುತ, ವಿಡಿಯೋ ನೋಡಿ

ರೈಲ್ವೆ ಹಳಿ ಮೇಲೆ ಉರುಳಿದ ಟ್ರಕ್‌; ತಪ್ಪಿದ ಭಾರೀ ಅನಾಹುತ

Truck Accident: ಅತಿ ವೇಗದ ಡಂಪರ್ ಟ್ರಕ್ ನಿಯಂತ್ರಣ ತಪ್ಪಿ, ಸೇತುವೆಯ ಬೇಲಿಯನ್ನು ಮುರಿದು ಸುಮಾರು 25 ಅಡಿ ರೈಲ್ವೆ ಹಳಿಗೆ ಉರುಳಿ ಬಿದ್ದದೆ. ಉತ್ತರ ಪ್ರದೇಶದ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಅಮೃತಸರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ಹಳಿಯಲ್ಲಿ ಹಾದು ಹೋಗುವಾಗ ಈ ಘಟನೆ ಸಂಭವಿಸಿತ್ತು.

Murder Case: ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

Bengaluru crime news: ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಹತ್ಯೆಯ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ.

Viral Video: ಇದೆಂಥ ಕೃತ್ಯ? ಕೈಕಾಲುಗಳಿಗೆ ಸಂಕೋಲೆ ಬಿಗಿದಿದ್ದರೂ ದುಡಿಯುತ್ತಿರುವ ಕಾರ್ಮಿಕನ ವಿಡಿಯೊ ವೈರಲ್

ಕೈಕಾಲುಗಳಿಗೆ ಸಂಕೋಲೆ ಬಿಗಿದಿದ್ದರೂ ದುಡಿವ ಕಾರ್ಮಿಕ

ಕಾರ್ಮಿಕನ‌ ಕೈ ಮತ್ತು ಕಾಲುಗಳಿಗೆ ಕಬ್ಬಿಣದ ಸರಪಳಿ ಬಿಗಿದು ಕೆಲಸ ಮಾಡಲು ಬಲವಂತ ಪಡಿಸುತ್ತಿರುವ ಆಘಾತಕಾರಿ ವಿಡಿಯೊ ಭಾರಿ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಡ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಈ ರೀತಿ ದುಡಿಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಬಳಕೆದಾರರು ಆಗ್ರಹಿಸಿದ್ದಾರೆ.

Loading...