ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಅಂತ್ಯಕ್ರಿಯೆ ಮಾಡಿದವರಿಗೆ ಬೆದರಿಕೆ

ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ

Tumkur News: ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಸಾಮಾಜಿಕ ಕಾರ್ಯಕರ್ತರು ಮಾನವೀಯತೆ ಮೆರೆದು ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಿದ್ದರು. ಆದರೆ, ಅವರಿಗೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರನ್ನು ಕೊಂದ ಕೇಸ್‌ಗೆ ಟ್ವಿಸ್ಟ್‌;  ಕೇರಳದ ಯುವತಿ ಅರೆಸ್ಟ್‌!

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರನ್ನ ಕೊಂದ ಕೇರಳದ ಯುವತಿ ಅರೆಸ್ಟ್‌

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಇಬ್ಬರು ಕೇರಳ ಮೂಲದ ಮಹಿಳೆಯರ ಕೊಲೆಯಾಗಿದ್ದು, ಘಟನೆ ಸಂಬಂಧಿಸಿದಂತೆ ಅವರ ಆಪ್ತ ಸ್ನೇಹಿತೆಯನ್ನು ಬಂಧಿಸಲಾಗಿದೆ. ಮೃತರನ್ನು ತ್ರಿಶೂರ್ ಮೂಲದ ಅಂಜನಾ ಹರಿ (35) ಮತ್ತು ತಿರುವನಂತಪುರಂ ಮೂಲದ ಆನ್ ಮೇರಿ ಮ್ಯಾಥ್ಯೂ (40) ಎಂದು ಗುರುತಿಸಲಾಗಿದೆ.

Haliyal Police Station: ಲಂಚದ ಆಡಿಯೊ ವೈರಲ್‌; ಹಳಿಯಾಳ ಠಾಣೆಯ ಮೂವರು ಪಿಎಸ್‌ಐಗಳು ಅಮಾನತು

ಲಂಚದ ಆಡಿಯೊ ವೈರಲ್‌; ಮೂವರು ಪಿಎಸ್‌ಐಗಳು ಅಮಾನತು

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐಗಳ ಪೋಸ್ಟಿಂಗ್ ಹಾಗೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿ ಆಡಿಯೊ ವೈರಲ್‌ ಆಗಿತ್ತು. ಅಲ್ಲದೇ ಎಡಿಎಸ್ಪಿ ನೇತೃತ್ವದ ತನಿಖಾ ತಂಡವು ನಡೆಸಿದ ತನಿಖೆಯಲ್ಲಿ ಪಿಎಸ್‌ಐಗಳ ಅಕ್ರಮ ಮತ್ತು ಕರ್ತವ್ಯಲೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಮೂವರು ಪಿಎಸ್‌ಐಗಳನ್ನು ಸಸ್ಪೆಂಡ್‌ ಮಾಡಲಾಗಿದೆ.

ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ, ಕಂಡಕ್ಟರ್ ಬಂಧನ

ಚಲಿಸುತ್ತಿದ್ದ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ;

Physical Assault: ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೇ. ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಗಾಯಕ ಅಂಕಿತ್ ಬಲ್ಯಾನ್ ಮೇಲೆ ಗುಂಡಿನ ದಾಳಿ ಪ್ರಕರಣ; ಇಬ್ಬರು ಶಂಕಿತ ಶೂಟರ್‌ಗಳ ಎನ್ಕೌಂಟರ್‌

ಅಂಕಿತ್ ಬಲ್ಯಾನ್ ಕೊಂದವರು ಪೊಲೀಸ್ ಎನ್ಕೌಂಟರ್‌ನಲ್ಲಿ ಹತ್ಯೆ

Crime News: ಹರಿಯಾಣ್ವಿ ಗಾಯಕ-ಯೂಟ್ಯೂಬರ್ ಅಂಕಿತ್ ಬಲ್ಯಾನ್ ಅವರನ್ನು ಹತ್ಯೆಗೈದಿದ್ದ ಇಬ್ಬರು ಶಂಕಿತ ದುಷ್ಕರ್ಮಿಗಳು ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. 24 ವರ್ಷದ ಸುಮಿತ್ ಮತ್ತು 22 ವರ್ಷದ ಮೋಹಿತ್ ಎಂದು ಗುರುತಿಸಲಾದ ಇಬ್ಬರು ಶಂಕಿತರು ಗೋಗಿ ಗ್ಯಾಂಗ್‌ನ ಸದಸ್ಯರು ಎಂದು ಹೇಳಲಾಗಿದೆ.

ಜಾತಿವಾದಿ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದಲ್ಲಿ ನಡೆದ ಶುದ್ದೀಕರಣ ಪ್ರಕರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾತಿವಾದಿ ತಿರುವು ನೀಡಿದ್ದಾರೆ ಎಂದು ಆರೋಪಿಸಿ ಹಲ್ಡ್ವಾನಿಯ ವಾಲ್ಮೀಕಿ ಸಮುದಾಯದ ಸದಸ್ಯರೊಬ್ಬರು ಹಲ್ದ್ವಾನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tumkur Breaking: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ನೇಮಕಾತಿ ಅಕ್ರಮ: ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ಹಗರಣಕ್ಕೆ ಸಂಬಂಧಿಸಿ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್‌ಸಿ)ದ ಹಿಂದಿನ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರಾಗಿರುವ ಬಸವರಾಜ್ ಕನ್ನಾಳೆಯನ್ನು ಇದೀಗ ಬಂಧಿಸಿದೆ.

ನೀಟ್ ಪರೀಕ್ಷೆಯಲ್ಲಿ ಪಾಸಾದ್ರೂ ಕೌನ್ಸೆಲಿಂಗ್‌ನಲ್ಲಿ ವಿಫಲ: 21 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

21 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ

NEET Student Self-harming: 21 ವರ್ಷದ ವಿದ್ಯಾರ್ಥಿನಿಯೊಬ್ಬಳು ನೀಟ್-ಯುಜಿ ಕೌನ್ಸೆಲಿಂಗ್‌ನ ಮೊದಲ ಸುತ್ತಿನಲ್ಲಿ ವೈದ್ಯಕೀಯ ಸೀಟು ಪಡೆಯಲು ವಿಫಲಳಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶ್ರುತಿ ಎಂದು ಗುರುತಿಸಲಾಗಿದೆ.

ರೈಲು ಸೀಟ್‌ನ ಕೆಳಗೆ ಮಹಿಳೆಯ ಮೃತದೇಹ ಪತ್ತೆ; ನಿಗೂಢ ಸಾವಿನಿಂದ ಬೆಚ್ಚಿಬಿದ್ದ ಧಾರವಾಡ

ಧಾರವಾಡದಲ್ಲಿ ರೈಲು ಸೀಟ್‌ನ ಕೆಳಗೆ ಮಹಿಳೆಯ ಮೃತದೇಹ ಪತ್ತೆ

Dharwad News: ಮಹಾರಾಷ್ಟ್ರದ ಸೋಲಾಪುರದಿಂದ ಆಗಮಿಸಿದ ರೈಲು ಧಾರವಾಡ ನಿಲ್ದಾಣದಲ್ಲಿ ನಿಲ್ಲುವಷ್ಟರಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಬೋಗಿಯ ಸೀಟ್‌ನ ಕೆಳಗೆ ಮಹಿಳೆಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರೈಲ್ವೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಭದ್ರತಾ ತಪಾಸಣೆ ವೇಳೆ ಭೀಕರ ಎನ್‌ಕೌಂಟರ್‌; ಶಸ್ತ್ರಾಸ್ತ್ರ ಹೊಂದಿದ ನಾಲ್ವರನ್ನು ಹೊಡೆದುರುಳಿಸಿದ ಪೊಲೀಸರು

ಮೇಘಾಲಯದಲ್ಲಿ ಶಸ್ತ್ರಸಜ್ಜಿತ ನಾಲ್ವರನ್ನು ಹೊಡೆದುರುಳಿಸಿದ ಪೊಲೀಸರು

Crime News: ಮೇಘಾಲಯದಲ್ಲಿ ಭೀಕರ ಎನ್‌ಕೌಂಟರ್‌ ನಡೆದಿದ್ದು, ಭಾನುವಾರ (ಆಗಸ್ಟ್‌ 30) ಪೊಲೀಸರು ಶಸ್ತ್ರಾಸ್ತ್ರ ಹೊಂದಿದ್ದ ನಾಲ್ವರನ್ನು ಹೊಡೆದುರುಳಿಸಿದ್ದಾರೆ. ವಾಹನಗಳನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದ ವೇಳೆ ನಾಲ್ವರು ಗುಂಡಿನ ದಾಳಿ ನಡೆಸಿದಾಗ ಪೊಲೀಸರು ಪ್ರತಿದಾಳಿ ಮಾಡಿದರು.

ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಹಲ್ಲೆ;  ಶಾಲಾ ಸಿಬ್ಬಂದಿಯ ಅಮಾನುಷ ವರ್ತನೆಯಿಂದ ಎರಡೂ ಕಿವಿಗಳಿಗೆ ಹಾನಿ

ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಹಲ್ಲೆ

Child Assault: ದೆಹಲಿಯ ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಬಾಲಕನನ್ನು ಕುರ್ಚಿಗೆ ಕಟ್ಟಿ ತೀವ್ರ ದೈಹಿಕ ಕಿರುಕುಳ ನೀಡಿದ ಆರೋಪದ ಮೇಲೆ 35 ವರ್ಷದ ಸಹಾಯಕನನ್ನು ಬಂಧಿಸಲಾಗಿದೆ. ದೆಹಲಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಶಾಲೆಯ ನಿರ್ದೇಶಕರು ಹಾಗೂ ಪ್ರಾಂಶುಪಾಲರ ಪಾತ್ರ ಮತ್ತು ಬೇಜವಾಬ್ದಾರಿತನದ ಕುರಿತು ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.

ಪಾಕಿಸ್ತಾನ ಉಗ್ರರಿಂದ ಸಂವಹನಕ್ಕೆ ಅಶ್ಲೀಲ ವೆಬ್‌ಸೈಟ್‌, ಎನ್‌ಕ್ರಿಪ್ಟ್ ಮಾಡಲಾದ ಆ್ಯಪ್‌ ಬಳಕೆ; ಕುತಂತ್ರ ಬಯಲಿಗೆಳೆದ ಭದ್ರತಾ ಸಂಸ್ಥೆ

ಭಯೋತ್ಪಾದಕರ ಹೊಸ ತಂತ್ರ ಪತ್ತೆಹಚ್ಚಿದ ಭದ್ರತಾ ಸಂಸ್ಥೆ

Terrorists Using Encrypted Apps: ಭಯೋತ್ಪಾದಕರು ಮತ್ತು ಅವರ ಹ್ಯಾಂಡ್ಲರ್‌ಗಳು ರಹಸ್ಯವಾಗಿ ಸಂವಹನ ನಡೆಸಲು ಬಳಸುತ್ತಿದ್ದ ಹೊಸ ತಂತ್ರವನ್ನು ಭದ್ರತಾ ಸಂಸ್ಥೆಗಳು ಪತ್ತೆಹಚ್ಚಿವೆ. ಟಾರ್ ನೆಟ್‌ವರ್ಕ್ ಬಳಸುವ ಪ್ಲಾಟ್‌ಫಾರ್ಮ್‌ಗಳನ್ನು ಪತ್ತೆಹಚ್ಚುವುದು ಅತ್ಯಂತ ಕಷ್ಟ ಎಂದು ಭದ್ರತಾ ತಜ್ಞರು ತಿಳಿಸಿದ್ದಾರೆ. ಉಗ್ರರು ಸಂವಹನಕ್ಕಾಗಿ ಅಶ್ಲೀಲ ವೆಬ್‌ಸೈಟ್‌, ಎನ್‌ಕ್ರಿಪ್ಟ್ ಮಾಡಲಾದ ಆ್ಯಪ್‌ ಬಳಸುತ್ತಿರುವುದು ಕಂಡು ಬಂದಿದೆ.

ಛೇ ಇದೆಂತಾ ದುರ್ವಿಧಿ; ರಾಖಿ ದಿನದಂದೇ ಅಪಘಾತದಲ್ಲಿ ತಂಗಿಯೊಟ್ಟಿಗೆ ಮೃತಪಟ್ಟ ಸಹೋದರರು

ರಾಖಿ ಕಟ್ಟಿ ಸಂಭ್ರಮಿಸಿದ್ದ ಮೂವರು ಅಪಘಾತದಲ್ಲಿ ಸಾವು

UP Crime: ಸಹೋದರನೊಂದಿಗೆ ರಕ್ಷಾ ಬಂಧನ ಆಚರಿಸುವ ಸಲುವಾಗಿ ಇಬ್ಬರು ಸಹೋದರಿಯರು ಇನ್ನೋರ್ವ ಸಹೋದರನೊಂದಿಗೆ ತುಂಬಾ ದೂರದಿಂದ ಬಂದಿದ್ದರು. ಆದರೆ ರಸ್ತೆ ಅಪಘಾತವೊಂದು ಅವರ ರಕ್ಷಾ ಬಂಧನದ ದಿನವನ್ನು ಜೀವನದ ಕೊನೆಯ ದಿನವಾಗಿ ಮಾಡಿತ್ತು. ಇಬ್ಬರು ಸಹೋದರರೊಂದಿಗೆ ಓರ್ವ ಸಹೋದರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಫರಿದಾಬಾದ್‌ನಲ್ಲಿ ನಡೆದಿದೆ.

ಗರ್ಭಿಣಿಯಾಗಿದ್ದ ಸೋಶಿಯಲ್‌ ಮೀಡಿಯಾ ಇನ್ಫ್ಲುಯೆನ್ಸರ್ ಅಪಹರಿಸಿ ಬೆಂಕಿ ಹಚ್ಚಿ ಕೊಂದ ಪಾಪಿಗಳು!

ಗರ್ಭಿಣಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Crime News: ಗರ್ಭಿಣಿಯನ್ನು ಅಪಹರಿಸಿ, ಬಳಿಕ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಚಂಡೀಗಢದ ಮೊರಿಂಡಾದಲ್ಲಿ ನಡೆದಿದೆ. ತೀವ್ರ ಸುಟ್ಟ ಗಾಯಗಳಿಂದಾಗಿ 28 ವರ್ಷದ ಸಾಮಾಜಿಕ ಜಾಲತಾಣದ ಪ್ರಭಾವಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

'ನಿಮ್ಮನ್ನು ನೀವು  ದೇವರೆಂದುಕೊಂಡಿದ್ದೀರಾ'? ಆಹಾರ ಸುರಕ್ಷತಾ ಸಂಸ್ಥೆ FDAಯನ್ನು ತರಾಟೆ ತೆಗೆದುಕೊಂಡ ಬಾಂಬೆ ಹೈಕೋರ್ಟ್

ತುಕಾರಾಮ್ ಮುಂಢೆ ನೇತೃತ್ವದ ಎಫ್‌ಡಿಎಗೆ ಬಾಂಬೆ ಹೈಕೋರ್ಟ್ ತರಾಟೆ

Bombay High court: ಕಾನೂನನ್ನು ಸರಿಯಾಗಿ ವಿಶ್ಲೇಷಣೆ ಮಾಡದೆ ಅಗತ್ಯವಾಗಿ ಆತುರದಿಂದ ಆದೇಶಗಳನ್ನು ಜಾರಿಗೊಳಿಸಿದ ತುಕಾರಾಮ್ ಮುಂಢೆ ನೇತೃತ್ವದ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ)ವನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನೈಸರ್ಗಿಕ ನ್ಯಾಯ ತತ್ತ್ವಗಳನ್ನು ಉಲ್ಲಂಘಿಸಿರುವುದಕ್ಕೆ ನ್ಯಾಯಪೀಠ ಎಫ್‌ಡಿಎಯನ್ನು ಟೀಕಿಸಿದೆ.

ಬೈಕ್‌ನಲ್ಲಿ ಬಂದು ಗುಂಡಿನ ದಾಳಿ; ಪಂಜಾಬ್‌ನಲ್ಲಿ ಆಮ್‌ ಆದ್ಮಿ ನಾಯಕನ ಬರ್ಬರ ಹತ್ಯೆ

ಬೈಕ್‌ನಲ್ಲಿ ಬಂದು ಗುಂಡಿನ ದಾಳಿ;ಪಂಜಾಬ್‌ನಲ್ಲಿ ಆಪ್ ನಾಯಕನ ಬರ್ಬರ ಹತ್ಯೆ

ಆಮ್ ಆದ್ಮಿ ಪಕ್ಷದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಬೈಕಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ನಡೆದಿದೆ. ಗುರುಪ್ರೀತ್ ಸಿಂಗ್ ಗೋಪಿ ಹತ್ಯೆಯದ ಆಪ್ ನಾಯಕ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ.

ಅವಧಿ ಮೀರಿದ ಬಿಸ್ಕೇಟ್‌ ಮಾರಾಟ: ಎಫ್‌ಡಿಎ ಅಧಿಕಾರಿಗೆ ಜನರಿಂದ ಘೇರಾವ್, ಬಾಯಿಗೆ ಬಿಸ್ಕೇಟ್‌ ತುರುಕಲು ಯತ್ನ

ಅವಧಿ ಮೀರಿದ ಬಿಸ್ಕೇಟ್‌ ವಿಚಾರಕ್ಕೆ ಗಲಾಟೆ: FDA ಅಧಿಕಾರಿಗೆ ಜನರಿಂದ ತರಾಟೆ

Food and Drug Administration: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಮಾರಾಟದ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅಂಗಡಿಗೆ ಪರಿಶೀಲನೆಗೆ ತೆರಳಿದ್ದ ಎಫ್‌ಡಿಎ ಅಧಿಕಾರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. ಅಧಿಕಾರಿಯು ಅಂಗಡಿ ಮಾಲಕನನ್ನು ರಕ್ಷಿಸಲು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ ಜನರು, ವಶಪಡಿಸಿಕೊಂಡ ಅವಧಿ ಮೀರಿದ ಬಿಸ್ಕೇಟ್‌ ಅನ್ನು ಅವರೇ ತಿನ್ನುವಂತೆ ಒತ್ತಾಯಿಸಿದ್ದಾರೆ. ಕೆಲವರು ಬಿಸ್ಕೇಟ್‌ ಅಧಿಕಾರಿಯ ಬಾಯಿಗೆ ಹಾಕಲು ಯತ್ನಿಸಿದ ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ.

KPSC Recruitment Scam: ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

ಕೆಪಿಎಸ್‌ಸಿ ಅಕ್ರಮ; ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ. ವಿಚಾರಣೆ ವೇಳೆ ಅಸಮಂಜಸ ಹೇಳಿಕೆ ನೀಡಿದ್ದರಿಂದ ಅವರನ್ನು ಸಿಐಡಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ; ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು ಮಂಜೂರು

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು ಮಂಜೂರು

ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಪ್ರಿಯಾಂಕ್‌ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ. ತಲಾ 10 ಸಾವಿರ ರೂ. ವೈಯಕ್ತಿಕ ಶ್ಯೂರಿಟಿ ನೀಡುವಂತೆ ಕೋರ್ಟ್ ಸೂಚಿಸಿದೆ.

“ಇವರು ನನ್ನನ್ನು ಕೊಲ್ಲುತ್ತಾರೆ”: ಹೆರಿಗೆಗೂ ಮುನ್ನ ಹೇಳಿದ್ದ ಮೃತ ಮಹಿಳೆಯ ವಿಡಿಯೊ ವೈರಲ್‌

ಹೆರಿಗೆಯ ನಂತರ ಮಹಿಳೆ, ಮಗು ಸಾವು; ಹಳೆಯ ವಿಡಿಯೊ ಬಹಿರಂಗ

childbirth death: ಹೆರಿಗೆಯ ನಂತರ ಮಹಿಳೆ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಜನರು ತನ್ನನ್ನು ಕೊಲ್ಲುತ್ತಾರೆ ಎಂದು ಆಕೆ ಹೇಳಿರುವ ಮಾತು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಇದೀಗ ತನಿಖೆಗೆ ಆದೇಶ ಹೊರಡಿಸಲಾಗಿದೆ.

PDO caught in Lokayukta trap: ಸರಕಾರಿ ಜಾಗ ಮ್ಯುಟೇಷನ್‌ಗೆ 18 ಸಾವಿರ ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

ಮ್ಯುಟೇಷನ್‌ಗೆ 18 ಸಾವಿರ ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

ಜೇವರ್ಗಿ ತಾಲ್ಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ ಪಿಡಿಒ ಮೈಬೂಬ್ ಪಟೇಲ್ ಬಂಧಿತ ಆರೋಪಿ. ಮಲ್ಲಾ(ಬಿ) ಗ್ರಾಮದ ಸರಕಾರಿ ಖುಲ್ಲಾ ಜಾಗದಲ್ಲಿನ 60×40 ಅಡಿ ಜಾಗದ ಪೈಕಿ 20×30 ಅಡಿ ಜಾಗವನ್ನು ಗ್ರಾಮದ ಮರೆಪ್ಪ ತಳವಾರ ಅವರ ಹೆಸರಿಗೆ ಮ್ಯುಟೇಷನ್ ಮಾಡಿಕೊಡಲು ಪಿಡಿಒ 18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Accident: ಸಿಮೆಂಟ್ ಲಾರಿ–ಟ್ರ್ಯಾಕ್ಟರ್ ಡಿಕ್ಕಿ: ಕೂಲಿ ಕಾರ್ಮಿಕ ಸಾವು

ಸಿಮೆಂಟ್ ಲಾರಿ–ಟ್ರ್ಯಾಕ್ಟರ್ ಡಿಕ್ಕಿ: ಕೂಲಿ ಕಾರ್ಮಿಕ ಸಾವು

ಸಿಮೆಂಟ್ ಲಾರಿಯೊಂದು ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರ್ಯಾಕ್ಟರ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಐಮರೆಡ್ಡಿಹಳ್ಳಿ ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.

ಬೇವಿನ ಮರಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳ; ಇಬ್ಬರ ಹತ್ಯೆ: ತೆಲಂಗಾಣದಲ್ಲೊಂದು ವಿಚಿತ್ರ ದುರಂತ

ಬೇವಿನ ಮರಕ್ಕಾಗಿ ಆರಂಭವಾದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯ

Crime News: ಮನೆಯ ಪಕ್ಕದಲ್ಲಿರುವ ಬೇವಿನ ಮರಕ್ಕಾಗಿ ಎರಡೂ ಕುಟುಂಬಗಳ ನಡುವಿನ ಜಗಳ ಹಿಂಸಾತ್ಮಕವಾಗಿ ಮಾರ್ಪಟ್ಟು, ಇಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಎರಡು ಕುಟುಂಬಗಳ ನಡುವಿನ ವಿವಾದ ಸುಮಾರು 25 ವರ್ಷಗಳಿಂದಲೂ ಇದೆ ಎನ್ನಲಾಗಿದೆ. ಮನೆಯ ಗಡಿಯಲ್ಲಿ ಇರುವ ಬೇವಿನ ಮರದ ಬಗ್ಗೆ ಭಿನ್ನಾಭಿಪ್ರಾಯವಿತ್ತು. ಇದು ಆಗಾಗ ಜಗಳಕ್ಕೆ ಕಾರಣವಾಗಿತ್ತು.

''ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ನಾನು ಹೊರಡುತ್ತಿದ್ದೇನೆ'': ರಾಖಿ ಹಬ್ಬದ ದಿನವೇ ಸಹೋದರಿಗೆ ಕೊನೆಯ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ

ರಕ್ಷಾ ಬಂಧನ ಹಬ್ಬದಂದೇ ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ

Raksha Bandhan: ರಕ್ಷಾ ಬಂಧನ ಹಬ್ಬದಂದು 17 ವರ್ಷದ ಹದಿಹರೆಯದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಹೋದರಿಯೊಂದಿಗಿನ ಫೋಟೊವನ್ನುಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿ, ಭಾವನಾತ್ಮಕ ಸಂದೇಶವನ್ನು ಬರೆದಿದ್ದಾನೆ. ಪೋಸ್ಟ್‌ನಲ್ಲಿ, ʼʼಸಹೋದರಿ, ಎಲ್ಲವನ್ನೂ ನಿಭಾಯಿಸು. ಅಮ್ಮ ಮತ್ತು ಅಪ್ಪನನ್ನು ಒಂಟಿಯಾಗಿ ಬಿಡಬೇಡ. ನಾನು ಹೊರಡುತ್ತಿದ್ದೇನೆʼʼ ಎಂದು ಬರೆದಿದ್ದಾನೆ.

Loading...