ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Shocking News: ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳು, ಪತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಘೋರ ಘಟನೆ: ಇಬ್ಬರು ಮಕ್ಕಳು, ಪತಿಯ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Honeymoon Murder Case: ಹನಿಮೂನ್ ಕೊಲೆ ಕೇಸ್‌- ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಸೋನಮ್

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಹಂತಕಿ ಸೋನಮ್

ಇಂದೋರ್‌ನ ವ್ಯಾಪಾರಿ ರಾಜಾ ರಘುವಂಶಿಯನ್ನು ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ ಸೋನಮ್ ರಘುವಂಶಿ ಇದೀಗ ಜಾಮೀನು ಕೋರಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಪ್ರಾಸಿಕ್ಯೂಷನ್ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಲು ಸ್ವಲ್ಪ ಸಮಯ ಕೇಳಿದ್ದು, ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಲಾಗಿದೆ.

Maoists Encounter: ಮೋಸ್ಟ್‌ ವಾಂಟೆಡ್‌ ನಕ್ಸಲರಿಬ್ಬರ ಎನ್‌ಕೌಂಟರ್‌!

ಮೋಸ್ಟ್‌ ವಾಂಟೆಡ್‌ ನಕ್ಸಲರಿಬ್ಬರ ಎನ್‌ಕೌಂಟರ್‌!

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಪಿಐ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಇವರಿಗೆ 16 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. 2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈವರೆಗೆ ಸುಮಾರು 240ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.

Dharwad News: ಕೃಷಿ ಮೇಳದಲ್ಲಿ ಟ್ರ್ಯಾಕ್ಟರ್ ಮೈಮೇಲೆ ಬಿದ್ದು ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಕೃಷಿ ಮೇಳದಲ್ಲಿ ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (58) ಮೃತವ್ಯಕ್ತಿ. ಘಟನೆಯ ಸುದ್ದಿ ತಿಳಿದು ಸಮತಾ ಸೇನೆ ಧಾರವಾಡ ಜಿಲ್ಲಾ ಘಟಕದಿಂದ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.

Bomb Threat: ಕೆಲವೇ ಕ್ಷಣದಲ್ಲಿ ದೇಗುಲ ಉಡೀಸ್‌! ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಬಾಂಬ್ ಬೆದರಿಕೆ

ಕೇರಳದ ದೇವಾಲಯಗಳಿಗೆ ಬಾಂಬ್ ಬೆದರಿಕೆ

Padmanabha Swamy temple: ದೆಹಲಿ, ಬಾಂಬೆ ಹೈಕೋರ್ಟ್ ಗಳಿಗೆ ಬಾಂಬ್ ಬೆದರಿಕೆ ಬಂದ ಬಳಿಕ ಇದೀಗ ಕೇರಳದ ಪದ್ಮನಾಭ ಸ್ವಾಮಿ, ಅಟ್ಟುಕಲ್ ದೇವಿ ದೇವಸ್ಥಾನಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳವನ್ನು ಪರಿಶೀಲನೆ ನಡೆಸಿದೆ.

Hassan Tragedy: ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; ತಲಾ 1 ಲಕ್ಷ ಪರಿಹಾರ ಘೋಷಿಸಿದ ಎಚ್.ಡಿ ದೇವೇಗೌಡ

ಹಾಸನ ದುರಂತ; ಮೃತರ ಸಂಖ್ಯೆ 10ಕ್ಕೆ ಏರಿಕೆ, ಜೆಡಿಎಸ್‌ನಿಂದ ಪರಿಹಾರ

H. D. Deve Gowda: ಹಾಸನ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಮಾಜಿ ಸಿಎಂ ಎಚ್‌.ಡಿ.ದೇವೇಗೌಡ ಅವರು ಘೋಷಿಸಿದ್ದು,

Ajaz Khan: ಗ್ಯಾಂಗ್‌ಸ್ಟರ್‌ ಜೊತೆ ನಂಟು; ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಕೇಸ್‌

ಗ್ಯಾಂಗ್‌ಸ್ಟರ್‌ ಜೊತೆ ನಂಟು; ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಕೇಸ್‌

ಇಂದೋರ್‌ನಲ್ಲಿ ನಟ ಅಜಾಜ್ ಖಾನ್ ಗ್ಯಾಂಗ್‌ಸ್ಟರ್ ಸಲ್ಮಾನ್ ಲಾಲಾ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಬೆನ್ನಲೇ ಸಂಕಷ್ಟ ಎದುರಾಗಿದ್ದು, ಕ್ರೈಮ್ ಬ್ರಾಂಚ್ ಅಜಾಜ್‌ಖಾನ್‌ಗೆ ನೋಟಿಸ್ ಜಾರಿ ಮಾಡಿದೆ. ಅವರ ಖಾತೆಯನ್ನು ಬ್ಲಾಕ್ ಮಾಡಲು ಇನ್‌ಸ್ಟಾಗ್ರಾಮ್‌ಗೆ ಪತ್ರ ಬರೆದಿದ್ದು, ಅಜಾಜ್ ಖಾನ್ ಇನ್‌ಸ್ಟಾಗ್ರಾಮ್‌ನಲ್ಲಿ ಸಲ್ಮಾನ್ ಲಾಲಾ ಮರಣದ ಬಗ್ಗೆ ವಿಡಿಯೋ ಪೋಸ್ಟ್ ಮಾಡಿದ್ದರು.

Drugs Case: ಶಿರಸಿ ಗ್ರಾಮೀಣ ಠಾಣೆ ಪೋಲೀಸರ ಕಾರ್ಯಾಚರಣೆ; ಗಾಂಜಾ ಸೇವಿಸುತ್ತಿದ್ದವರ ಬಂಧನ

ಶಿರಸಿ ಗ್ರಾಮೀಣ ಠಾಣೆ ಪೋಲೀಸರ ಕಾರ್ಯಾಚರಣೆ; ಗಾಂಜಾ ಸೇವಿಸಿದ್ದವರ ಬಂಧನ

ಹುತ್ತಗಾರ ಗ್ರಾಮ ಪಂಚಾಯತದ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಿಎಸ್‌ಐ ಸಂತೋಷ್‌ ಕುಮಾರ್‌ ನೇತೃತ್ವದಲ್ಲಿ, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು.

Murder Case: ನಡುರಸ್ತೆಯಲ್ಲಿ ಮಹಿಳೆಯನ್ನು ಗುಂಡಿಕ್ಕಿ ಕೊಂದು ಹೆಣದ ಪಕ್ಕದಲ್ಲೇ ಕುಳಿತ ಪಾಪಿ!

ಮಹಿಳೆಯನ್ನು ಗುಂಡಿಕ್ಕಿ ಕೊಂದು ಹೆಣದ ಪಕ್ಕದಲ್ಲೇ ಕುಳಿತ ಹಂತಕ!

ಗ್ವಾಲಿಯರ್ ನ ಜನನಿಬಿಡ ರಸ್ತೆಯಲ್ಲಿ ಅರವಿಂದ್ ಪರಿಹಾರ್ ಎಂಬಾತ ನಂದಿನಿ ಎಂಬ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಜನದಟ್ಟಣೆಯ ಪ್ರದೇಶದ ಬಳಿ ಆರೋಪಿಯು ಮಹಿಳೆಯನ್ನು ತಡೆದು ಹತ್ತಿರದಿಂದ ಗುಂಡು ಹಾರಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆಸ್ತಿ ವಿವಾದ, ವೈಯಕ್ತಿಕ ಉದ್ವಿಗ್ನತೆ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Physical Assault: ನಮ್ಮ ದೇಶ ಬಿಟ್ಟು ತೊಲಗು"; ಬ್ರಿಟನ್‌ನಲ್ಲಿ ಸಿಖ್‌ ಮಹಿಳೆಯ ಮೇಲೆ ಇಬ್ಬರಿಂದ ಅತ್ಯಾಚಾರ

ಬ್ರಿಟನ್‌ನಲ್ಲಿ ಸಿಖ್‌ ಮಹಿಳೆಯ ಮೇಲೆ ಇಬ್ಬರಿಂದ ಅತ್ಯಾಚಾರ!

ಬೇರೆ ದೇಶಗಳಲ್ಲಿ ಭಾರತೀಯರ ಮೇಲೆ ಇತ್ತೀಚೆಗೆ ನಡೆಯುತ್ತಿರುವ ದೌರ್ಜನ್ಯಗಳ ನಡುವೆ ಭಾರತೀಯ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಆತಂಕ ಮೂಡಿಸಿದೆ. ಇಂಗ್ಲೆಂಡಿನ ಓಲ್ಡ್‌ಬರಿ ಪಟ್ಟಣದಲ್ಲಿ ಇಪ್ಪತ್ತರ ಹರೆಯದ ಸಿಖ್ ಮಹಿಳೆಯೊಬ್ಬರ ಮೇಲೆ ಇಬ್ಬರು ಪುರುಷರು ಅತ್ಯಾಚಾರ ಎಸಗಿ ಜನಾಂಗೀಯ ನಿಂದನೆ ಮಾಡಿದ್ದಾರೆ.

Bengaluru Crime: ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

Police: ಪೊಲೀಸರು ಮಾಮೂಲಿ ಪಡೆಯುತ್ತಿದ್ದ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ಕಡಿಮೆ ಬೆಲೆಗೆ ಟೈಡಲ್ ಮಾತ್ರೆ ಖರೀದಿಸಿ 300 400 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕಡಿಮೆ ಬೆಲೆಗೆ ಖರೀದಿಸಿ ಪೊಲೀಸರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದರು. ಪ್ರತಿ ತಿಂಗಳು ಇನ್ಸ್ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳಿಗೆ ಹಣ ನೀಡುತ್ತಿದ್ದರು.

Disha Patani: ಬಾಲಿವುಡ್‌ನ ಖ್ಯಾತ ನಟಿ ಮನೆ ಮೇಲೆ ಗುಂಡಿನ ದಾಳಿ; ಪಿಚ್ಚರ್‌ ಬಾಕಿ ಹೇ ಎಂದು ವಾರ್ನಿಂಗ್‌!

ಬಾಲಿವುಡ್‌ ನಟಿ ಮನೆ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿದೆ. ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ದಾಳಿ ನಡೆಸಿರುವುದಾಗಿ ದಾಳಿಕೋರರು ಹೇಳಿದ್ದಾರೆ.

Murder case: 15 ಲಕ್ಷಕ್ಕಾಗಿ ಗಂಡನಿಗೆ ವಿಷವಿಕ್ಕಿ ಕೊಂದು ಹುಲಿ ದಾಳಿಯಿಂದ ಸತ್ತ ಎಂದು ನಟಿಸಿದ ಹೆಂಡತಿ!

15 ಲಕ್ಷಕ್ಕಾಗಿ ಗಂಡನಿಗೆ ವಿಷವಿಕ್ಕಿ ಕೊಂದು ಹುಲಿ ದಾಳಿಯಿಂದ ಸತ್ತ ಎಂದಳು!

ಮೈಸೂರಿನ ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು ಕದಂಪುರ ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಸಲ್ಲಾಪುರಿ (40) ಯನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ದೊರೆಯುವ 15 ಲಕ್ಷ ರೂ. ಪರಿಹಾರ ಮೊತ್ತ ಪಡೆಯಲು ಈಕೆ ಸಂಚು ರೂಪಿಸಿದ್ದಳು.

Provocative post: ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆ ಬಂಧನ

ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆ ಬಂಧನ

ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ. 'ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್‌ ನುಗ್ಗಿಸುವ ಧೈರ್ಯ ಮಾಡಿ ನೋಡಿ' ಎಂದು ಪೋಸ್ಟ್‌ ಮಾಡಲಾಗಿತ್ತು.

Hassan Tragedy: ಹಾಸನ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಹಾಸನ ದುರಂತ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

CM Siddaramaiah: ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದ ಭೀಕರ ದುರಂತದಲ್ಲಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ದುರಂತ ಸಂಭವಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.

Hassan Tragedy: ಹಾಸನದಲ್ಲಿ ಭೀಕರ ದುರಂತ; ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವು, 20 ಮಂದಿಗೆ ಗಾಯ

ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವು

Hassan Accident: ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ಈ ದುರಂತ ನಡೆದಿದೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Kirk Murder case: ಚಾರ್ಲಿ ಕಿರ್ಕ್ ಹತ್ಯೆ: ಆರೋಪಿಯ ಚಿತ್ರ ರಿಲೀಸ್‌ ಮಾಡಿದ ಎಫ್‌ಬಿಐ

ಚಾರ್ಲಿ ಕಿರ್ಕ್ ಹತ್ಯೆ ಆರೋಪಿ ಪತ್ತೆಗೆ ಸಹಾಯ ಕೇಳಿದ ಎಫ್‌ಬಿಐ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಚಾರ್ಲಿ ಕಿರ್ಕ್ ಅವರ ಹತ್ಯೆಯ ಆರೋಪಿಯ ಫೋಟೊವನ್ನು ಫೆಡರಲ್ ತನಿಖಾಧಿಕಾರಿ ಗುರುವಾರ ಬಿಡುಗಡೆ ಮಾಡಿದ್ದಾರೆ. ಸನ್ ಗ್ಲಾಸ್, ಕ್ಯಾಪ್ ಧರಿಸಿದ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಾಯ ಮಾಡುವಂತೆ ಕೋರಿದ್ದಾರೆ.

Bomb Threat: ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ- ಹೈ ಅಲರ್ಟ್‌ ಘೋಷಣೆ

ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ

ದೆಹಲಿ ಹೈಕೋರ್ಟ್ ನ ನ್ಯಾಯಾಧೀಶರ ಕೊಠಡಿ ಮತ್ತು ಆವರಣದ ಇತರ ಸ್ಥಳಗಳಲ್ಲಿ ಮೂರು ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕಚೇರಿ ಕೆಲಸಗಳನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಶಹದಾರ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

Crime News: ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲೇ ನಡೀತು ಯುವಕನ ಬರ್ಬರ ಹತ್ಯೆ

ಪೊಲೀಸ್ ಠಾಣೆ ಸಮೀಪವೇ ನಡೀತು ಯುವಕನ ಬರ್ಬರ ಹತ್ಯೆ!

Man Killed by Five Attackers: ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದೆ. ಈ ಸಂಪೂರ್ಣ ಭೀಕರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ಕರಿಂದ ಐದು ಮಂದಿ ಯುವಕರು ಈ ಕೃತ್ಯ ಎಸಗಿದ್ದಾರೆ.

Madduru unrest: ಮದ್ದೂರು ಗಣೇಶ ವಿಸರ್ಜನೆ ಗಲಭೆ: ಎಸ್‌ಐ ಶಿವಕುಮಾರ್‌ ಅಮಾನತು, ಎಸ್‌ಪಿ ವರ್ಗಾವಣೆ

ಮದ್ದೂರು ಗಣೇಶ ವಿಸರ್ಜನೆ ಗಲಭೆ: ಎಸ್‌ಐ ಶಿವಕುಮಾರ್‌ ಅಮಾನತು, ಎಸ್‌ಪಿ ವರ್ಗ

Stone Pelting: ಮದ್ದೂರು ಟೌನ್ ಇನ್‌ಸ್ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್‌ಸ್ಪೆಕ್ಟರ್ ಸಸ್ಪೆಂಡ್ ಮಾಡಲಾಗಿದೆೆ ಎಂದು ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜೊತೆಗೆ ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.

Murder Case: ಗೆಳೆಯನ ಜೊತೆ ಚಕ್ಕಂದ; ಅಡ್ಡ ಬಂದ ಗಂಡನನ್ನೇ ಮುಗಿಸಿ ಹಾರ್ಟ್‌ ಅಟ್ಯಾಕ್‌ ಎಂದು ಕಥೆ ಕಟ್ಟಿದ್ಲು!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ!

ಅಕ್ರಮ ಸಂಬಂಧಕ್ಕಾಗಿ ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಂದ ಘಟನೆ ಉತ್ತರ ಪ್ರದೇಶದ (Uttara Pradesh) ಬುಲಂದ್‌ಶಹರ್‌ನ ಪಾರ್ತಾಪುರ ಗ್ರಾಮದಲ್ಲಿ ನಡೆದಿದೆ. ಪ್ರೀತಿ ಎಂದು ಗುರುತಿಸಲಾದ ಮಹಿಳೆ ತನ್ನ ಪ್ರಿಯಕರ ಅಭಯ್ ಜೊತೆ ಸೇರಿ ತನ್ನ 37 ವರ್ಷದ ಪತಿ ಓಂಪಾಲ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿ ಕೊಲೆ ಮಾಡಿದ್ದಾರೆ

Murder Case: ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

Hassan crime news: 9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ ಮಗಳನ್ನು ತವರು ಮನೆಗೆ ಫೈರೋಜಾ ಬಾನು ಕರೆತಂದಿದ್ದರು.

Robbery case: ನಿವೃತ್ತ ಪೊಲೀಸ್‌ ಅಧಿಕಾರಿಯನ್ನೇ ದೋಚಿದ ಮೂವರ ಬಂಧನ

ನಿವೃತ್ತ ಪೊಲೀಸ್‌ ಅಧಿಕಾರಿಯನ್ನೇ ದೋಚಿದ ಮೂವರ ಬಂಧನ

Bengaluru: ಕೆಲದಿನಗಳ ಹಿಂದೆ ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ನಿವೃತ್ತ ಅಧಿಕಾರಿ ಸುಬ್ಬಣ್ಣ ಎಂದಿನಂತೆ ಮಾರ್ನಿಂಗ್ ವಾಕಿಂಗ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಮಾಸ್ಕ್ ಧರಿಸಿದ್ದ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದರು. ಚಾಕು ತೋರಿಸಿ ಕತ್ತಿನಲ್ಲಿದ್ದ ಸರ ಕಸಿದುಕೊಂಡಿದ್ದರು.

Murder Case: ಅಮೆರಿಕದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದನ; ಪತ್ನಿ, ಮಗನ ಎದುರೇ ಕೊಲೆ

ಅಮೆರಿಕದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದನ

ಅಮೆರಿಕದಲ್ಲಿ ಭಾರತೀಯ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಕ್ಷುಲಕ ಕಾರಣಕ್ಕಾಗಿ ನಡೆದ ಕೊಲೆಯಲ್ಲಿ ಭಾರತೀಯ ಮೂಲದ ವ್ಯಕ್ತಿಯ ಶಿರಚ್ಛೇದನ ಮಾಡಲಾಗಿದೆ. ಡಲ್ಲಾಸ್ ಪೊಲೀಸ್ ಇಲಾಖೆಯ ಪ್ರಕಾರ, ನಾಗಮಲ್ಲಯ್ಯ ತನ್ನ ಸಹೋದ್ಯೋಗಿ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಜೊತೆ ಮುರಿದ ತೊಳೆಯುವ ಯಂತ್ರದ ವಿಚಾರವಾಗಿ ವಾಗ್ವಾದಕ್ಕಿಳಿದರು.

Loading...