ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಮಣಿಪುರ ಹೊಸ ಸರ್ಕಾರಕ್ಕೆ ಮೂವರು ಕುಕಿ-ಝೋ ಶಾಸಕರ ಬೆಂಬಲ ವಿರೋಧಿಸಿ ಚುರಾಚಂದ್‌ಪುರದಲ್ಲಿ ಹೆದ್ದಾರಿ ತಡೆ, ವಾಹನಗಳಿಗೆ ಹಾನಿ

ಹೊಸ ಸರ್ಕಾರ ರಚನೆ ಬಳಿಕ ಮಣಿಪುರದಲ್ಲಿ ಹಿಂಸಾತ್ಮಕವಾದ ಪ್ರತಿಭಟನೆ

ಹೊಸ ಸರ್ಕಾರ ರಚನೆಯಾಗಿ ವಾರ ಕೂಡ ಕಳೆದಿಲ್ಲ. ಅದರೊಳಗೆ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಮಿಜೋರಾಂನ ಐಜ್ವಾಲ್‌ಗೆ ಚುರಾಚಂದ್‌ಪುರ ಮೂಲಕ ಸಂಪರ್ಕಿಸುವ ಹೆದ್ದಾರಿಯನ್ನು ಚುರಾಚಂದ್‌ಪುರದಲ್ಲಿ ತಡೆದಿರುವ ಪ್ರತಿಭಟನಾಕಾರರು ವಾಹನಗಳಿಗೆ ಹಾನಿ ಮಾಡಿದ್ದಾರೆ. ಹೊಸ ಸರ್ಕಾರಕ್ಕೆ ಮೂವರು ಕುಕಿ-ಝೋ ಶಾಸಕರು ಬೆಂಬಲ ನೀಡಿರುವುದು ಇದಕ್ಕೆ ಕಾರಣವಾಗಿದೆ.

ಮೇಘಾಲಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; 16 ಕಾರ್ಮಿಕರು ಸಾವು, ಹಲವರು ಸಿಲುಕಿರುವ ಶಂಕೆ

ಅಕ್ರಮ ಗಣಿ ಸ್ಫೋಟ; 16 ಕಾರ್ಮಿಕರು ಸಾವು

ಮೇಘಾಲಯದ ಈಸ್ಟ್ ಜೈಂಟಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸ್ಫೋಟದ ನಿಖರ ಕಾರಣ ಪತ್ತೆ ಮಾಡಲು ತನಿಖೆ ನಡೆಯುತ್ತಿದೆ.

Karnataka high court: ನೈಜ ಪ್ರೇಮಿ ವಿಕೃತನಾಗಲಾರ: ಪ್ರೇಯಸಿ ಸಂಗ ವಿಡಿಯೋ ಮಾಡಿದವನಿಗೆ ಹೈಕೋರ್ಟ್‌ ಕ್ಲಾಸ್‌, ಜಾಮೀನು ನಿರಾಕರಣೆ

ನೈಜ ಪ್ರೇಮಿ ವಿಕೃತನಾಗಲಾರ: ಲವರ್‌ಗೆ ಹೈಕೋರ್ಟ್‌ ಕ್ಲಾಸ್‌, ಜಾಮೀನಿಲ್ಲ

ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಅದನ್ನು ಆಕೆಗೆ ತೋರಿಸಿ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ್ದಾನೆ. ಈ ಸಂಬಂಧ ಪೊಲೀಸ್‌ ಪ್ರಕರಣ ದಾಖಲಾಗಿದ್ದು, ಇದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ. ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ನೀಡಲು ನಿರಾಕರಣೆ ಮಾಡಿದೆ.

ಮಾರಿಷಸ್ ಬಳಿ ಒಡಿಶಾ ಮೂಲದ ನೌಕಾಪಡೆ ಅಧಿಕಾರಿ ನಾಪತ್ತೆ; ಹುಡುಕಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕುಟುಂಬ ಮನವಿ

ಚೀನಾ ಬಂಧಿತ ಹಡಗಿನಿಂದ ಒಡಿಶಾದ ನೌಕಾಪಡೆ ಅಧಿಕಾರಿ ನಾಪತ್ತೆ

ಮಾರಿಷಸ್ ಬಳಿ ಚೀನಾ ಬಂಧಿಸಿದ ಹಡಗಿನಿಂದ ಒಡಿಶಾ ಮೂಲದ ನೌಕಾ ಪಡೆಯ ಅಧಿಕಾರಿಯೊಬ್ಬರು ನಾಪತ್ತೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆ ಕುಟುಂಬವೀಗ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಭದ್ರಕ್‌ನ ಕೇಸ್ಪುರ್ ಗ್ರಾಮದ ನಿವಾಸಿ ಸಾರ್ಥಕ್ ಮಹಾಪಾತ್ರ ನಾಪತ್ತೆಯಾದ ಯುವಕ. 2025ರ ಜುಲೈ ತಿಂಗಳಿನಿಂದ ಆತ ಖಾಸಗಿ ಹಡಗು ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದನು ಎನ್ನಲಾಗಿದೆ.

ಹಾಡಹಗಲೇ ಆಮ್‌ ಆದ್ಮಿ ನಾಯಕನ ಮೇಲೆ ಗುಂಡಿನ ದಾಳಿ; ಗುರುದ್ವಾರದ ಎದುರೇ ಕೊಲೆ ಮಾಡಿದ ದುಷ್ಕರ್ಮಿಗಳು

ಹಾಡಹಗಲೇ ಆಮ್‌ ಆದ್ಮಿ ನಾಯಕನ ಮೇಲೆ ಗುಂಡಿನ ದಾಳಿ

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಪಂಜಾಬ್‌ನ ಜಲಂಧರ್‌ನ ಗುರುದ್ವಾರ ಸಾಹಿಬ್‌ನ ಹೊರಗೆ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುರುದ್ವಾರದ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಒಬೆರಾಯ್ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾರೆ, ಕನಿಷ್ಠ ಐದು ಗುಂಡುಗಳು ಅವರ ದೇಹಕ್ಕೆ ತಗುಲಿವೆ.

ಮಹಿಳಾ ಅಧಿಕಾರಿ ಮನೆಯಲ್ಲಿ ಸೀಕ್ರೆಟ್‌ ಕ್ಯಾಮೆರಾ ಇಟ್ಟು ಖಾಸಗಿ ವಿಡಿಯೊ ಚಿತ್ರೀಕರಣ; ಬ್ಲ್ಯಾಕ್‌ಮೇಲ್‌ ಮಾಡಿದ 3 ಯೂಟ್ಯೂಬರ್‌ಗಳ ಅರೆಸ್ಟ್‌

ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್‌

ಮನೆಯಲ್ಲಿ ಮಹಿಳಾ ಅಧಿಕಾರಿಯು ಸ್ನೇಹಿತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡಿದ್ದ ಯೂಟ್ಯೂಬರ್‌ಗಳು, ಅವುಗಳನ್ನು ತೋರಿಸಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಹೀಗಾಗಿ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೂವರ ಬಂಧನವಾಗಿದೆ.

ಕಲ್ಲಂಗಡಿ ಹಣ್ಣುಗಳಡಿಯಲ್ಲಿ ಸ್ಫೋಟಕಗಳ ಸಾಗಾಟ;  ತನಿಖೆಯಲ್ಲಿ ಬಯಲಾಯ್ತು ಶಾಕಿಂಗ್‌ ಸಂಗತಿ

ಕೇರಳದಲ್ಲಿ ಲಕ್ಷಾಂತರ ರೂ. ಮೌಲ್ಯದ ಸ್ಫೋಟಕ ವಶ!

ಪಾಲಕ್ಕಾಡ್‌ನ ವಲಯಾರ್–ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಲಾರಿಯೊಂದರಲ್ಲಿ ಕಲ್ಲಂಗಡಿ ಹಣ್ಣುಗಳ ನಡುವೆ ಗುಪ್ತವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಕೇರಳ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಲಾರಿ ಚಾಲಕ ಸೆಂಥಿಲ್ ಕುಮಾರ್ ಅನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಮಾತು ಬಾರದ, ಕಿವಿ ಕೇಳದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಕೀಚಕರು: 17 ಮಂದಿಯ ಡಿಎನ್ಎ ಪರೀಕ್ಷೆ; ತಂದೆ, ಅಪ್ರಾಪ್ತ ಬಾಲಕ ಆರೋಪಿಗಳು

ಮಾತು ಬಾರದ, ಕಿವಿ ಕೇಳದ ಯುವತಿಯ ಮೇಲೆ ತಂದೆಯಿಂದಲೇ ಅತ್ಯಾಚಾರ

Crime News: ಮಾತು ಬಾರದ ಹಾಗೂ ಕಿವಿ ಕೇಳದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಭಾರಿ ಆಘಾತ ಮೂಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ವೇಳೆ 17 ಮಂದಿಯ ಡಿಎನ್‌ಎ ಪರೀಕ್ಷೆ ನಡೆಸಲಾಗಿದೆ. ಅತ್ಯಂತ ಬೆಚ್ಚಿಬೀಳಿಸುವ ಸಂಗತಿಯೆಂದರೆ, ಈ ಪ್ರಕರಣದಲ್ಲಿ ಯುವತಿಯ ತಂದೆಯೇ ಪ್ರಮುಖ ಆರೋಪಿಯಾಗಿದ್ದಾನೆ.

Bomb Threat: ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಹಲಸೂರು (Halasuru) ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ (Italian Embassy) ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. ಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದಾರೆ.

Assault Case: ಮುಸ್ಲಿಂ ದಂಪತಿಯ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರಿಂದ ಹಲ್ಲೆ

ದಂಪತಿ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಹಲ್ಲೆ

ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಮುಸ್ಲಿಂ ಯುವಕರು, ಆತ ಮುಸ್ಲಿಂ ಬಾಲಕಿಯನ್ನು ಪ್ರೀತಿಸುತ್ತಿದ್ದಾನೆ ಎಂದು ತಪ್ಪು ಭಾವಿಸಿದ್ದಾರೆ. 'ಇವರು ನಮ್ಮೂರಿನವರು, ನಾನು ಇವರನ್ನು ಮನೆಗೆ ಕರೆದೊಯ್ಯಲು ಬಂದಿದ್ದೇನೆ' ಎಂದು ವೆಂಕಟೇಶ ಎಷ್ಟೇ ಬೇಡಿಕೊಂಡರೂ ಕೇಳದ ಯುವಕರ ಗುಂಪು ಆತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಪ್ರಿಯಕರನೊಟ್ಟಿಗೆ ಸೇರಿ ಪತಿಗೆ ಸ್ಕೆಚ್‌; ಹಿಟ್‌ ಆ್ಯಂಡ್‌ ರನ್‌ ನಾಟಕ, ನವವಿವಾಹಿತೆಯ ಬಣ್ಣ ಬಯಲಾಗಿದ್ದೇಗೆ?

ಪ್ರಿಯಕರನೊಟ್ಟಿಗೆ ಸೇರಿ ಪತಿಗೆ ಸ್ಕೆಚ್‌; ಯುವತಿ ಬಣ್ಣ ಬಯಲಾಗಿದ್ದೇಗೆ?

ಕಳೆದ ವರ್ಷ ಮೇಘಾಲಯದಲ್ಲಿ ನಡೆದಿದ್ದ ರಾಜಾ ರಘುವಂಶಿ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪತ್ನಿಯೇ ತನ್ನ ಪ್ರಿಯಕರನೊಟ್ಟಿಗೆ ಸೇರಿ ತನ್ನ ಪತಿಯನ್ನು ಹತ್ಯೆ ಮಾಡಿದ್ದಳು. ಇದೀಗ ಅಂತಹುದೇ ಪ್ರಕರಣವೊಂದು ನಡೆದಿದ್ದು, ನವವಿವಾಹಿತೆ ತನ್ನ ಪತಿಯನ್ನು ಕೊಲ್ಲಲು ತನ್ನ ಪ್ರಿಯಕರನಿಗೆ ಸುಪಾರಿ ನೀಡಿದ್ದಳು ಎಂದು ತಿಳಿದು ಬಂದಿದೆ.

ಮಹಿಳೆ ಕಿಡ್ನ್ಯಾಪ್‌ ಪ್ರಕರಣ; ಮಾಜಿ ಸಚಿವ ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

ಮಹಿಳೆ ಕಿಡ್ನ್ಯಾಪ್‌ ಪ್ರಕರಣ; ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

HD Revanna Case: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ರದ್ದು ಕೋರಿ ಎಚ್.ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ, ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿದೆ.

Shakti Scheme: ಹೆತ್ತವರು ಬೈದರೆಂದು ಅಕ್ಕ- ತಮ್ಮ ಮನೆಯಿಂದ ಪರಾರಿ, ಶಕ್ತಿ ಯೋಜನೆ ಬಳಸಿ ಸುತ್ತಾಟ!

ಮನೆಯಿಂದ ಪರಾರಿಯಾಗಿ ಶಕ್ತಿ ಯೋಜನೆ ಬಳಸಿ ಊರು ಸುತ್ತಾಡಿದ ಅಕ್ಕ- ತಮ್ಮ!

ಟ್ಯೂಷನ್ ಗೆ ಹಾಜರಾಗದ ಕಾರಣ ಪೋಷಕರು ಮಕ್ಕಳನ್ನು ಬೈದಿದ್ದರು. ಬೈದಿದ್ದರಿಂದ ಅಸಮಾಧಾನಗೊಂಡ 13 ವರ್ಷದ ಬಾಲಕಿ ತನ್ನ ಒಂಬತ್ತು ವರ್ಷದ ಸಹೋದರನೊಂದಿಗೆ ಮನೆ ತೊರೆಯಲು ನಿರ್ಧರಿಸಿದ್ದಳು. ಫೆಬ್ರವರಿ 1ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ತನ್ನ ಆಧಾರ್ ಕಾರ್ಡ್ ತೆಗೆದುಕೊಂಡು ತನ್ನ ಸಹೋದರನೊಂದಿಗೆ ಮನೆಯಿಂದ ಹೊರಬಂದಿದ್ದಳು.

ಪ್ರಿಯಕರನೊಂದಿಗೆ ಸೇರಿ ಮಾವನ ಕತ್ತು ಸೀಳಿ ಕೊಲೆಗೈದ ಸೊಸೆ; ಭೀಕರ ದೃಶ್ಯವನ್ನು ರೆಕಾರ್ಡ್ ಮಾಡಿದ ಪಾಪಿಗಳು

ಮಾವನ ಗಂಟಲು ಸೀಳಿ ಕೊಲೆ ಮಾಡಿದ ಸೊಸೆ

ಮೂವರು ಮಕ್ಕಳ ತಾಯಿ ತನ್ನ ಪ್ರಿಯಕರ ಹಾಗೂ ಸಹಚರರೊಂದಿಗೆ ಸೇರಿ ಮಾವನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದ್ದು, ಪೊಲೀಸರು ಸೊಸೆ ಪಿಂಕಿ ರಾಜ್‌ಭರ್, ಆಕೆಯ ಪ್ರಿಯಕರ ರಾಮ್ಮಿಲನ್ ಹಾಗೂ ಇಬ್ಬರು ಸಹಚರರನ್ನು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.

Chikkamagaluru: ಹಿಂದೂ ಗೃಹಿಣಿ ಮನೆಯಲ್ಲಿ ಅರೆಬೆತ್ತಲಾಗಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಹಿಂದೂ ಗೃಹಿಣಿ ಮನೆಯಲ್ಲಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹಿಂದೂ ಹುಡುಗರು, ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

Road Acident: ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

14 ವರ್ಷದ ವಿದ್ಯಾರ್ಥಿನಿಯ ಜೀವನವನ್ನೇ ಕತ್ತಲಿಗೆ ದೂಡಿದ ಶಿಕ್ಷಕಿ; ಹೋಮ್‌ ವರ್ಕ್‌ ಮಾಡದ್ದಕ್ಕೆ ಕಪಾಳಕ್ಕೆ ಹೊಡೆದ ಪೆಟ್ಟಿಗೆ ಶಾಶ್ವತವಾಗಿ ಕಿವುಡಾದ ಬಾಲಕಿ

ಶಿಕ್ಷಕಿ ಹೊಡೆದ ಏಟಿಗೆ ಬಾಲಕಿಯ ಕಿವಿ ಡಮಾರ್

ಗಾಂಧಿನಗರದ ಸೆಕ್ಟರ್–28ರಲ್ಲಿರುವ ಖಾಸಗಿ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿ ಪಾರುಲ್‌ಬೆನ್, ಹೋಮ್‌ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 14 ವರ್ಷದ ವಿದ್ಯಾರ್ಥಿನಿಯ ಎಡಗೆನ್ನೆಗೆ ಜೋರಾಗಿ ಕಪಾಳಮೋಕ್ಷ ಮಾಡಿದ್ದಾಳೆ. ಆ ಹೊಡೆತದಿಂದ ವಿದ್ಯಾರ್ಥಿನಿಯ ಕಿವಿಯ ತಮಟೆ ಹರಿದು ಹೋಗಿದೆ. ನಂತರ ವೈದ್ಯರು ಬಾಲಕಿಯು ಶಾಶ್ವತವಾಗಿ ಶ್ರವಣಶಕ್ತಿ ಕಳೆದುಕೊಂಡಿದ್ದಾಳೆ ಎಂದು ದೃಢಪಡಿಸಿದ್ದಾರೆ.

ಬಲವಂತದ ಮತಾಂತರ, ಲೈಂಗಿಕ ದೌರ್ಜನ್ಯ; ಜಾಲದೊಳಗೆ ಸಿಕ್ಕಿಬಿದ್ದಿದ್ದು ಬರೋಬ್ಬರಿ 350ಕ್ಕೂ ಹೆಚ್ಚು ಹಿಂದೂ ಮಹಿಳೆಯರು

ಬಲವಂತದ ಮತಾಂತರ, ಲೈಂಗಿಕ ದೌರ್ಜನ್ಯ; ಹಿಂದೂ ಮಹಿಳೆಯರೇ ಟಾರ್ಗೆಟ್

Hindu women targets: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಒಂದು ಲಾಡ್ಜ್‌ನಲ್ಲಿ ನಡೆದ ಬಲವಂತದ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಶೋಷಣೆ ಬಗ್ಗೆ ಭಯಾನಕ ವಿವರಗಳು ಹೊರಬಿದ್ದಿವೆ. ಸಂತ್ರಸ್ತೆಯರ ಸಾಕ್ಷ್ಯ ಮತ್ತು ಸ್ಥಳೀಯ ವರದಿಗಳ ಪ್ರಕಾರ, 350ಕ್ಕೂ ಹೆಚ್ಚು ಮಹಿಳೆಯರನ್ನು ಈ ನೆಟ್‌ವರ್ಕ್‌ ಜಾಲಕ್ಕೆ ಎಳೆದುಕೊಳ್ಳಲಾಗಿದೆ. ಹಿಂದೂ ಮಹಿಳೆಯರೇ ಈ ದಂಧೆಕೋರರ ಟಾರ್ಗೆಟ್ ಎನ್ನುವ ವಿಚಾರವೂ ಬಯಲಾಗಿದೆ.

ಸಿದ್ದಾಪುರ ಕೊಲೆ ಕೇಸ್‌; ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾಗೆ 8 ದಿನ ನ್ಯಾಯಾಂಗ ಬಂಧನ

ಕೊಲೆ ಪ್ರಕರಣ; ಕಮಲಾಕರ ಭಟ್, ಸುಚಿತ್ರಾಗೆ ನ್ಯಾಯಾಂಗ ಬಂಧನ

ಎರಡು ಮಕ್ಕಳ ತಾಯಿ ಸುಚಿತ್ರಾ ಜತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ನಡೆದ ಗಲಾಟೆ ವೇಳೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಂಧನವಾದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Killer Games: ಮೂವರು ಬಾಲಕಿಯರ ಪ್ರಾಣ ತೆಗೆದ ಕೊರಿಯನ್ ಗೇಮ್‌; ಏನಿದು ಕೊಲ್ಲುವ ಆಟ? ಭಾರತದಲ್ಲಿ ಬ್ಯಾನ್‌ ಆದ ಬ್ಲ್ಯೂ ವೇಲ್‌ಗೂ ಇದಕ್ಕೂ ಇರುವ ಸಾಮ್ಯತೆ ಏನು?

‘ಕೊರಿಯನ್ ಲವ್ ಗೇಮ್’ಗೆ ಬಲಿಯಾದ ಮೂವರು ಸಹೋದರಿಯರು

Ghaziabad Tragedy: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆನ್‌ಲೈನ್ ಗೇಮ್‌ನಿಂದಾಗಿ ಮೂವರು ಅಪ್ರಾಪ್ತ ಸಹೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಸಂಭವಿಸಿದೆ. ಮಧ್ಯರಾತ್ರಿ ನಡೆದ ಈ ಘಟನೆ ಆನ್‌ಲೈನ್ ಗೇಮಿಂಗ್ ವ್ಯಸನದ ಗಂಭೀರ ಪರಿಣಾಮಗಳನ್ನು ಮತ್ತೆ ಹೊರ ಹಾಕಿದೆ. ಗೇಮ್‌ನ ಟಾಸ್ಕ್‌ ಒಂದರ ಭಾಗವಾಗಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪ್ರಾಪ್ತ ಬಾಲಕಿಯನ್ನು ಹಾಸಿಗೆಯೊಳಗೆ ಬಚ್ಚಿಟ್ಟ ಅಮ್ರಿನ್ ಅಖ್ತರ್ ಲಸ್ಕರ್; ಸತತ 6 ವರ್ಷಗಳಿಂದ ದೌರ್ಜನ್ಯ: ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಅಪ್ರಾಪ್ತೆಯನ್ನು ದುಡಿಸಿದ್ದಲ್ಲದೆ, ಹಾಸಿಗೆಯೊಳಗೆ ಬಚ್ಚಿಟ್ಟ ಆರೋಪಿಗಳು

Child labour: ಅಪ್ರಾಪ್ತ ಬಾಲಕಿಯನ್ನು ಕಾರ್ಮಿಕಳಂತೆ ದುಡಿಸಿಕೊಂಡು, ಹಾಸಿಗೆಯೊಳಗೆ ಬಚ್ಚಿಟ್ಟ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಬಾಲಕಿಯನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಕ್ಕಳ ಕಳ್ಳಸಾಗಣೆಯ ಪ್ರಕರಣವಿರಬಹುದು ಎಂದು ಶಂಕಿಸಲಾಗಿದೆ.

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಡಿಸಿ ಅಮಾನತು

Bribe case: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದರ ಬೆನ್ನಲ್ಲೇ ಮದ್ಯದಂಗಡಿ ಲೈಸೆನ್ಸ್ ನೀಡಲು ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯದ ಅಬಕಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಆರಂಭದಲ್ಲಿ ಒಬ್ಬ ಹುಡುಗಿ ಹಿಂದೆ ಸರಿದಳು, ನಂತರ ಆಗಿದ್ದು ದುರಂತ; ಗಾಜಿಯಾಬಾದ್ ಸಹೋದರಿಯರ ಆತ್ಮಹತ್ಯೆಯ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಸಹೋದರಿಯರ ಆತ್ಮಹತ್ಯೆಯನ್ನು ಪ್ರತ್ಯಕ್ಷ ಕಂಡವರು ಹೇಳಿದ್ದೇನು?

Ghaziabad Tragedy: ಗಾಜಿಯಾಬಾದ್‌ನಲ್ಲಿ ನಡೆದ ಮೂವರು ಸಹೋದರಿಯರ ಆತ್ಮಹತ್ಯೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಯೊಬ್ಬರು, ಘಟನೆಯಿಂದ ನಡುಗಿ ಹೋಗಿರುವುದಾಗಿ ತಿಳಿಸಿದ್ದಾರೆ. ಮೂವರು ಸಹೋದರಿಯರ ಅಂತಿಮ ಕ್ಷಣಗಳನ್ನು ಕಣ್ಣಾರೆ ಕಂಡ ಅಕ್ಕ-ಪಕ್ಕದ ನಿವಾಸಿಗಳು ಭಯಾನಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಆರಂಭದಲ್ಲಿ ಆ ದೃಶ್ಯವನ್ನು ದಂಪತಿ ಮತ್ತು ಅವರ ಮಗು ಆತ್ಮಹತ್ಯೆಗೆ ಯತ್ನಿಸುತ್ತಿದೆ ಎಂದು ತಪ್ಪಾಗಿ ಭಾವಿಸಿದ್ದರಂತೆ.

ವಂಟಮೂರಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ವಂಟಮೂರಿ ಮಹಿಳೆಗೆ ಹಲ್ಲೆ ಕೇಸ್‌; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

Vantamuri case: 2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ.

Loading...