ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರೈಂ
Raichur News: ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಅವಘಡ ನಡೆದಿದೆ. ಅಲಾಯಿ ಕುಣಿಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಬೆಂಕಿ ದೊಡ್ಡ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತಿದ್ದರಿಂದ ಸ್ಥಳದಲ್ಲೇ ನೂರಾರು ಜನರಿದ್ದರೂ ಯುವಕನನ್ನು ರಕ್ಷಿಸಲು ಅಸಹಾಯಕರಾಗಿದ್ದಾರೆ.

Shivamogga News: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

Shivamogga News: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

Bomb Blast: ಅಕ್ರಮ ಬಾಂಬ್‌ ತಯಾರಿ ವೇಳೆ ಸ್ಫೋಟ; ಸ್ಥಳದಲ್ಲೇ ಓರ್ವ ಸಾವು

ಅಕ್ರಮ ಬಾಂಬ್‌ ತಯಾರಿ ವೇಳೆ ಸ್ಫೋಟ; ಸ್ಥಳದಲ್ಲೇ ಓರ್ವ ಸಾವು

ಪಶ್ಚಿಮ ಬಂಗಾಳದ ಈಸ್ಟ್ ಬರ್ಡ್ವಾನ್ ಜಿಲ್ಲೆಯಲ್ಲಿ ಅಕ್ರಮವಾಗಿ ಬಾಂಬ್ ತಯಾರಿಸುತ್ತಿದ್ದ ವೇಳೆ ಅದು ಸ್ಫೋಟಗೊಂಡು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಇನ್ನೊಬ್ಬ ತೀವ್ರ ಗಾಯಗೊಂಡಿದ್ದಾನೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸ್ಫೋಟದಲ್ಲಿ ಸಾವನ್ನಪ್ಪಿರುವ ವ್ಯಕ್ತಿಯನ್ನು 35 ವರ್ಷದ ಬರ್ಕತ್ ಕರಿಕರ್ ಎಂದು ಗುರುತಿಸಲಾಗಿದೆ.

Ramgarh Coal Mine: ಅಕ್ರಮ ಗಣಿಗಾರಿಕೆ; ಸುರಂಗ ಕುಸಿದು ನಾಲ್ವರು ಸಾವು: ಹಲವರು ಟ್ರ್ಯಾಪ್

ಅಕ್ರಮ ಗಣಿಗಾರಿಕೆ; ಸುರಂಗ ಕುಸಿದು ನಾಲ್ವರು ಸಾವು

ಜಾರ್ಖಂಡ್‌ನ ರಾಮಗಡ ಜಿಲ್ಲೆಯ ಕುಜು ಔಟ್‌ಪೋಸ್ಟ್ ವ್ಯಾಪ್ತಿಯ ಕಾರ್ಮಾ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸುರಂಗ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹೆಚ್ಚಿನವರು ಒಳಗೆ ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಚಾರಣೆ ನಡೆಯುತ್ತಿದೆ.

PNB Scam: ಶೀಘ್ರದಲ್ಲೇ ನೀರವ್ ಮೋದಿಯ ಸಹೋದರ ನೇಹಾಲ್ ದೀಪಕ್ ಮೋದಿ ಭಾರತಕ್ಕೆ ಹಸ್ತಾಂತರ?

ನೀರವ್ ಮೋದಿಯ ಸಹೋದರ ಅಮೆರಿಕದಲ್ಲಿ ಬಂಧನ

ಬೆಲ್ಜಿಯಂ ಪ್ರಜೆಯಾಗಿರುವ ( Belgian national ) ನೇಹಾಲ್ ದೀಪಕ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ತನ್ನ ಹಿರಿಯ ಸಹೋದರ ಮಾಡಿದ ವಂಚನೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (CBI) ಕ್ಕೆ ಬೇಕಾಗಿರುವ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಭಾರತೀಯ ಅಧಿಕಾರಿಗಳ ಹಸ್ತಾಂತರ ಕೋರಿಕೆಯ ಮೇರೆಗೆ ನೇಹಲ್ ದೀಪಕ್ ಮೋದಿಯನ್ನು ಬಂಧಿಸಲಾಗಿದೆ.

Santosh Jarkiholi: ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ಪ್ರಕರಣ ದಾಖಲು

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

Santosh Jarkiholi: ಗೋಕಾಕ್ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

Viral Video: ಅಯ್ಯೋ ಇವಳೆಂಥ ತಾಯಿ...? ಮಗುವನ್ನು ಹಿಗ್ಗಾಮುಗ್ಗಾ ಥಳಿಸಿದ ಕ್ರೂರಿ; ಹೃದಯವಿದ್ರಾವಕ ವಿಡಿಯೊ ವೈರಲ್

ಹೆತ್ತಕಂದಮ್ಮನಿಗೆ ಹಿಗ್ಗಾಮುಗ್ಗಾ ಹೊಡೆದ ತಾಯಿ; ವಿಡಿಯೊ ವೈರಲ್

ತಾಯಿಯೊಬ್ಬಳು ಕೋಪಗೊಂಡು ತನ್ನ ಮಗನನ್ನು ಅಡುಗೆಮನೆಯ ಪಾತ್ರೆಯಿಂದ ಹಿಗ್ಗಾಮಗ್ಗಾ ಹೊಡೆದಿದ್ದಾಳೆ. ಈ ಭಯಾನಕ ಘಟನೆಯನ್ನು ಕುಟುಂಬ ಸದಸ್ಯರೊಬ್ಬರು ಸೆರೆಹಿಡಿದಿದ್ದಾರೆ. ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಬಹಳಷ್ಟು ವೈರಲ್‌ ಆಗಿದ್ದು ನೆಟ್ಟಿಗರು ಶಾಕ್‌ ಆಗಿದ್ದಾರೆ.

Mangaluru News: ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

Mangaluru News: ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಹಿಂದು ಮುಖಂಡನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

BJP leader Gopal Khemka: ಬಿಹಾರದಲ್ಲಿ ಗುಂಡಿಟ್ಟು ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ; ಕೊಲೆಯ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ; ವಿಡಿಯೊ ಇಲ್ಲಿದೆ

ಬಿಹಾರದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ತಮ್ಮ ಮನೆಯ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರು ವರ್ಷಗಳ ಹಿಂದೆ ಅವರ ಪುತ್ರ ಗುಂಜನ್ ಖೇಮ್ಕಾ ಅವರನ್ನು ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು.

Physical Abuse: ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಅತ್ಯಾಚಾರ, ವಂಚನೆ ಪ್ರಕರಣ: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Physical Abuse: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಸಿಕ್ಕಿಬಿದ್ದಿದ್ದಾನೆ.

Assault Case: ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತುಗಳ ಸುಲಿಗೆ

ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತು ಸುಲಿಗೆ

‌Assault Case: ತನ್ನ ದುಬಾರಿ ಬೆಲೆಯ ಶೂ, ಏರ್ ಬಡ್ಸ್‌, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್‌ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್​ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಮಾಡೆಲ್ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.

Shootout Case: ಆರು ವರ್ಷದ ಹಿಂದೆ ಮಗನನ್ನು ಕೊಂದ ಹಾಗೇ ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು; ಏನಿದು ಸ್ಟೋರಿ?

ಆರು ವರ್ಷದ ಹಿಂದೆ ಮಗನನ್ನು ಕೊಂದ ಹಾಗೇ ತಂದೆಯ ಕೊಲೆ !

ಬಿಹಾರದ ಪಾಟ್ನಾದಲ್ಲಿ, ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅವರ ಮಗ ಗುಂಜನ್ ಖೇಮ್ಕಾ ಅವರನ್ನು ಇದೇ ರೀತಿಯ ರೀತಿಯಲ್ಲಿ ಹತ್ಯೆಗೈದ ಆರು ವರ್ಷಗಳ ನಂತರ ಈ ಘಟನೆ ನಡೆದಿದೆ.

UP Crime: ಕತ್ತು ಸೀಳಿದ ಸ್ಥಿತಿಯಲ್ಲಿ ಸಿಕ್ತು ಯುವತಿಯ ಶವ;  ಪಾಗಲ್‌ ಪ್ರೇಮಿ ಕಥೆ ಕೇಳಿದ್ರೆ ಶಾಕ್‌ ಆಗ್ತೀರಾ

ಪ್ರೇಯಸಿಯ ಕತ್ತನ್ನೇ ಸೀಳಿ ಕೊಂದ ಪ್ರಿಯಕರ!

UP Crime: ಮದುವೆಆಗುವಂತೆ ಒತ್ತಡ ಹೇರಿ, ಹಣಕ್ಕೆ ಬೇಡಿಕೆ ಇಟ್ಟಿದ್ದಕೆ ಪ್ರೀತಿಸಿದ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಗುರುವಾರದಂದು ಮಿರ್ಜಾಮುರಾದ್ ಡಾಬಾದ ರೂಮ್‌ನಲ್ಲಿ 22 ವರ್ಷದ ಅಲ್ಕಾ ಬಿಂದ್‌ ಎಂಬ ಯುವತಿಯ ಮೃತದೇಹ ಪತ್ತೆಯಾಗಿತ್ತು.

Ranya Rao: ಚಿನ್ನ ಸ್ಮಗ್ಲಿಂಗ್‌ ಕೇಸ್:‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Actress Ranya Rao:‌ ನಟಿ ರನ್ಯಾ ರಾವ್‌ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ ಲೇಔಟ್‌ನಲ್ಲಿರುವ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.

Body Found: 10 ದಿನ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

10 ದಿನ ಹಿಂದೆ ನಾಪತ್ತೆಯಾದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

Body Found: ನೀಲಗಿರಿ ಪ್ಲಾಂಟೇಶನಿನಲ್ಲಿ ಜೂನ್ 24ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್‌ಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ದು, ಬಟ್ಟೆ ಹಾಗೂ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು.

Praveen Nettaru murder case: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

Praveen Nettaru murder case: ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದ. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

N Ravikumar: ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ

ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್

N Ravikumar: ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಮಾತಿನ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.

Bengaluru Murder Case: ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಂದು, ಬಾತ್‌ರೂಮ್‌ನಲ್ಲಿ ಬಿದ್ದು ಸಾವು ಎಂದು ಕತೆ ಕಟ್ಟಿದ ಪತ್ನಿ!

ಮನೆ ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಲೆಗೈದ ಪತ್ನಿ!

Bengaluru Murder Case: ಮನೆಗೆಲಸದವಳ ಜತೆ ಗಂಡ ಹೆಚ್ಚು ಸಲುಗೆಯಿಂದ ಇದ್ದ ಹಿನ್ನೆಲೆ ಸಾಕಷ್ಟು ಬಾರಿ ಗಂಡ- ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಎರಡು ದಿನದ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಗಂಡನ ಮುಖಕ್ಕೆ ಪತ್ನಿ ಬಲವಾಗಿ ಹೊಡೆದು ಕೊಂದಿದ್ದಾಳೆ.

‌DK Shivakumar: ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

Kolar News: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Kolar News: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ದುರಂತ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Betting App Scam: ಮದ್ವೆ ಮಂಟಪಕ್ಕೆ ನುಗ್ಗಿದ ಇಡಿ ಅಧಿಕಾರಿಗಳು; ಸಪ್ತಪದಿ ತುಳಿಯುವ ಮುನ್ನ ವರ ಎಸ್ಕೇಪ್‌!

ತಾಳಿ ಕಟ್ಟುವ ಮೊದಲೇ ವರ ಎಸ್ಕೇಪ್‌; ಕಾರಣವೇನು?

ಬಹುಕೋಟಿ ಮೌಲ್ಯದ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿಯಿಂದ ತಪ್ಪಿಸಿಕೊಳ್ಳಲು ವರನೊಬ್ಬನು ತನ್ನ ಮದುವೆಮಂಟಪದಿಂದ ಓಡಿಹೋಗಿದ್ದಾನೆ.5,000 ಕೋಟಿ ರೂ.ಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿತ್ತು. ಪ್ರಕರಣದಲ್ಲಿ ವರನು ಬೇಕಾಗಿರುವ ಆರೋಪಿಯಾಗಿರುವುದರಿಂದ ಅವನನ್ನು ಬಂಧಿಸಲು ಇಡಿ ಅಧಿಕಾರಿಗಳು ವಿವಾಹ ಸ್ಥಳಕ್ಕೆ ಆಗಮಿಸಿದ್ದರು.ಈ ಸುದ್ದಿ ಈಗ ವೈರಲ್‌(Viral News) ಆಗಿದೆ.

UP Crime: ಯಾರು ಇಲ್ಲ ಮನೆಗೆ ಬಾ ಎಂದು ಕರೆದ್ಳು ಮಳ್ಳಿ- ಓಡಿ ಬಂದ ಪ್ರಿಯಕರನಿಗೆ ಈಕೆ ಮಾಡಿದ್ದೇನು ಗೊತ್ತಾ...?

ಪ್ರೇಯಸಿ ಕರೆದೊಡನೆ ಓಡಿ ಬಂದವನ ಮರ್ಮಾಂಗವನ್ನೇ ಕಳೆದುಕೊಂಡ!

UP Crime: ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲ ಎಂದು ತಿಳಿಸಿ ಪ್ರೇಮಿಯನ್ನು ಕರೆಸಿಕೊಂಡ ಯುವತಿ, ಯಾವುದೋ ವಿಚಾರಕ್ಕೆ ಜಗಳ ಹುಡುಗನ ಜೊತೆ ಜಗಳ ನಡೆಸಿದ್ದು, ಜಗಳದ ಬಳಿಕ ಈ ಕೃತ್ಯ ಎಸಗಿದ್ದಾಳೆ. ಗಂಟೆಗಳ ಕಾಲ ರಕ್ತಸ್ರಾವವಾಗಿದ್ದು, ಪ್ರೇಮಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

Physical Abuse: ಸ್ನೇಹಿತನ ಲಿಂಗ ಪರಿವರ್ತನೆ ಮಾಡಿಸಿ ಅತ್ಯಾಚಾರ: ಆಘಾತಕಾರಿ ಘಟನೆ ಬೆಳಕಿಗೆ!

ಸ್ನೇಹಿತನ ಲಿಂಗ ಪರಿವರ್ತನೆ ಮಾಡಿಸಿ ಅತ್ಯಾಚಾರ

ಮಧ್ಯಪ್ರದೇಶದ ನರ್ಮದಾಪುರಂ ನಿವಾಸಿಯೊಬ್ಬನೊಂದಿಗೆ ತಾನು ಸ್ನೇಹಿತನಾಗಿದ್ದು, ಆತ ನನ್ನ ಮೇಲೆ ಮಾಟ ಮಂತ್ರ (Black Magic) ಮಾಡಿ ದೈಹಿಕ ಸಂಬಂಧ ಹೊಂದುವಂತೆ ಮಾಡಿದ್ದಾನೆ. ಅಲ್ಲದೇ ಲಿಂಗ ಬದಲಾವಣೆ (sex-change operation) ಮಾಡಿಕೊಂಡು ತಾನು ಹೆಣ್ಣಾಗಬೇಕು ಎಂದು ಒತ್ತಡ ಹೇರಿದ್ದಾನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದಾನೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಮಲ್ಕೀತ್ ಸಿಂಗ್ ತಿಳಿಸಿದ್ದಾರೆ.

Heart attack: ಭೂ ಸ್ವಾಧೀನ ವಿರೋಧಿ ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು

ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು

Heart attack: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಕುರಬರಹುಂಡಿ ಮೂಲದ ರೈತ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭೂಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಈ ಹೋರಾಟಕ್ಕೆ ಆಗಮಿಸುತ್ತಿದ್ದಾಗ ರೈತ ಮೃತಪಟ್ಟಿದ್ದಾರೆ.