ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ನೆಲಮಂಗಲ ಬಳಿ ಭೀಕರ ಅಪಘಾತ;  KSRTC ಬಸ್​​ಗೆ ಗುದ್ದಿದ ಕಾರು,  ಐವರು ಸ್ಥಳದಲ್ಲಿಯೇ ಸಾವು

KSRTC ಬಸ್​​ಗೆ ಗುದ್ದಿದ ಕಾರು, ಐವರು ಸ್ಥಳದಲ್ಲಿಯೇ ಸಾವು

ಮಹಾ ಶಿವರಾತ್ರಿಯಂದೇ ಘೋರ ಘಟನೆ ನಡೆದಿದ್ದು, ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ.

ಪಾಕಿಸ್ತಾನಿ ಮಿಲಿಟರಿ ಗೀತೆಗೆ ಮಹಾರಾಷ್ಟ್ರದ ಉರ್ದು ಶಾಲಾ ವಿದ್ಯಾರ್ಥಿಗಳಿಂದ ಡ್ಯಾನ್ಸ್‌!

ಪಾಕಿಸ್ತಾನಿ ಮಿಲಿಟರಿ ಗೀತೆಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು

Students Dance to Pakistani Military Song: ಉರ್ದು ಶಾಲೆಯೊಂದರಲ್ಲಿ ಪಾಕಿಸ್ತಾನಿ ಮಿಲಿಟರಿ ಗೀತೆಗೆ ವಿದ್ಯಾರ್ಥಿಗಳು ಡಾನ್ಸ್ ಮಾಡಿದ ಕಳವಳಕಾರಿ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ನಡೆದಿದೆ. ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಉಮರ್ಖೇಡ್ ಪಟ್ಟಣದ ಅಬ್ದುಲ್ ಗಫೂರ್ ಶಾ ಮುನ್ಸಿಪಲ್ ಉರ್ದು ಶಾಲೆ ಸಂಖ್ಯೆ 2ರ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪತ್ನಿಗೆ ಬೇರೆಯವರೊಂದಿಗೆ ಅಕ್ರಮ ಸಂಬಂಧದಿಂದ ಕುಪಿತಗೊಂಡ ಪತಿ; ಪ್ರಿಯಕರನನ್ನು ಕೊಲೆ ಮಾಡಿ ದೇಹ ಛಿದ್ರಗೊಳಿಸಿ ಕಾಲುವೆಗೆ ಎಸೆದ ಬಿಎಲ್ಒ

ಪತ್ನಿಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆಗೈದ ಪತಿ

Crime News: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಗಂಡ ಹತ್ಯೆ ಮಾಡಿದ್ದಾನೆ. ಅಲ್ಲದೆ, ಆತನ ದೇಹಗಳನ್ನು ಕತ್ತರಿಸಿ, ಛಿದ್ರ ಮಾಡಿ ಕಾಲುವೆಗೆ ಎಸೆದಿರುವ ಭಯಾನಕ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಕ್ತಸಿಕ್ತ ವ್ಯಾಲೆಂಟೈನ್ಸ್ ಡೇ; ನಿಲ್ಲಿಸಿದ್ದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆ: ನಿಗೂಢ ಸಾವಿಗೆ ಕಾರಣವೇನು?

ನಿಲ್ಲಿಸಿದ್ದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆ

Crime News: ಉತ್ತರ ಪ್ರದೇಶದ ನೋಯ್ಡಾದಲ್ಲಿ ಪಾರ್ಕ್‌ ಮಾಡಿದ್ದ ಕಾರೊಳಗೆ ಯುವ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ನಡೆದಿದೆ. ಮೃತರನ್ನು ಸುಮಿತ್‌ ಮತ್ತು ರೇಖಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್‌ 39 ಪ್ರದೇಶದಲ್ಲಿ ಪಾರ್ಕ್‌ ಮಾಡಲಾದ ಟಾಟಾ ಆಲ್ಟ್ರೋಝ್‌ ಕಾರೊಳಗೆ ಇವರ ಶವ ಕಂಡು ಬಂದಿದೆ.

ಮೈದುನನೊಂದಿಗೆ ಅಕ್ರಮ ಸಂಬಂಧ; ವಿಷಯ ತಿಳಿದ ಪತಿಯನ್ನೇ ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ

ಪತಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ

Crime news: ಕುಟುಂಬದೊಳಗಿನ ಅಕ್ರಮ ಸಂಬಂಧವು ದುರಂತ ಅಂತ್ಯ ಕಂಡ ಘಟನೆ ಬೆಳಕಿಗೆ ಬಂದಿದೆ. ಮೈದುನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ, ವಿಷಯ ತಿಳಿದುಕೊಂಡ ಪತಿಯನ್ನು ಕೊಲೆಗೈದು ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾಳೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.

ಕೇರಳದ 16 ವರ್ಷದ ಬಾಲಕಿಯ ಆತ್ಮಹತ್ಯೆಯ ಹಿಂದೆಯೂ ಕೊರಿಯನ್‌ ಕರಿ ನೆರಳು; ಇನ್ನೆಷ್ಟು ಅಪ್ರಾಪ್ತರು ಬಲಿಯಾಗಬೇಕು?

16 ವರ್ಷದ ಬಾಲಕಿಯ ಆತ್ಮಹತ್ಯೆಯ ಹಿಂದೆಯೂ ಕೊರಿಯನ್‌ ಕರಿ ನೆರಳು

Korean Link: ಕೇರಳದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಹಿಂದೆ ಕೊರಿಯಾದ ಕರಿ ನೆರಳು ವ್ಯಾಪಿಸಿದೆ. ಆದಿತ್ಯಾ ಸಾವಿನ ಹಿಂದೆ ಅಪ್ರಾಪ್ತರನ್ನು ಗುರಿಯಾಗಿಸುವ ಅನುಮಾನಾಸ್ಪದ ಕೊರಿಯಾ ಮೂಲದ ಇನ್‌ಸ್ಟಾಗ್ರಾಮ್‌ ಅಕೌಂಟ್‌ನ ಪಾತ್ರವಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

ಮದುವೆ ಸಂಭ್ರಮದ ಮಧ್ಯೆ ಆವರಿಸಿದ ಸೂತಕದ ಛಾಯೆ; ವಿವಾಹ ಮೆರವಣಿಗೆಯಲ್ಲಿ ಗುಂಡೇಟಿಗೆ ಬಲಿಯಾದ ಬ್ಯಾಂಡ್ ವಾದಕ

ವಿವಾಹ ಮೆರವಣಿಗೆಯಲ್ಲಿ ಗುಂಡೇಟಿಗೆ ಬಲಿಯಾದ ಬ್ಯಾಂಡ್ ವಾದಕ

Band musician shot dead: ಮದುವೆ ಮನೆಯಲ್ಲಿ ಬ್ಯಾಂಡ್ ಬಾರಿಸುತ್ತಿದ್ದ 15 ವರ್ಷದ ಬಾಲಕ ಗುಂಡೇಟಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಿವಾಹ ಮೆರವಣಿಗೆಯ ಸಂಭ್ರಮ, ಅಬ್ಬರದ ಸಂಗೀತ, ನೃತ್ಯದ ನಡುವೆ ಗುಂಡಿನ ಸದ್ದು ಮೊಳಗಿದ್ದು, ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಈ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಮದುವೆ ಮಂಟಪದಲ್ಲೇ ವಧುವಿನ ಬ್ಯಾಗ್ ಎಗರಿಸಿದ ಕಳ್ಳ! ಚಾಲಾಕಿಯ ಕೃತ್ಯ ಕ್ಯಾಮರಾದಲ್ಲಿ ಸೆರೆ

ಅತಿಥಿಯಂತೆ ಬಂದ ಕಳ್ಳ; ಸ್ಟೇಜ್ ಮೇಲೆಯೇ ವಧುವಿನ ಬ್ಯಾಗ್ ಕಿತ್ತು ಪರಾರಿ

ರಾಜಸ್ಥಾನದ ಜೈಪುರದಲ್ಲಿ ಮದುವೆ ಸಮಾರಂಭಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ. ಫೆಬ್ರವರಿ 7ರಂದು ಜಗತ್‌ಪುರದ ಚಂದನ್ ವನ್ ಕಲ್ಯಾಣ ಮಂಟಪದಲ್ಲಿ, ಅತಿಥಿಯಂತೆ ಬಂದ ಯುವಕನೊಬ್ಬ ರಿಸೆಪ್ಷನ್ ವೇಳೆ ವೇದಿಕೆಯ ಮೇಲಿದ್ದ ವಧುವಿನ ಬ್ಯಾಗ್ ಕಳವು ಮಾಡಿದ್ದಾನೆ. ಬ್ಯಾಗ್‌ನಲ್ಲಿ ಸುಮಾರು 4 ಲಕ್ಷ ರುಪಾಯಿ ನಗದು ಮತ್ತು ಬೆಲೆಬಾಳುವ ಆಭರಣಗಳಿದ್ದು, ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಹುಟ್ಟುಹಬ್ಬ ಪಾರ್ಟಿ, ಅಶ್ಲೀಲ ವಿಡಿಯೊ, ಕೊಲೆ, ಸ್ನೇಹಿತ ನಾಪತ್ತೆ; ಎಂಬಿಎ ವಿದ್ಯಾರ್ಥಿನಿ ಸಾವಿನ ಸುತ್ತ ಅನುಮಾನದ ಹುತ್ತ

ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಎಂಬಿಎ ವಿದ್ಯಾರ್ಥಿನಿ

MBA Student Found Dead: ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ತೆರಳಿದ ಯುವತಿ ಮರಳಿ ಬರಲಿಲ್ಲ. ಆಕೆಗಾಗಿ ಹುಡುಕಾಡಿ, ಎಲ್ಲೂ ಪತ್ತೆಯಾಗದಿದ್ದಾಗ ಪೋಷಕರು ನಾಪತ್ತೆ ದೂರು ದಾಖಲಿಸಿದರು. ಕೊನೆಗೆ ಆಕೆ ಸ್ನೇಹಿತನ ಮನೆಯಲ್ಲಿ ಬೆತ್ತಲೆಯಾಗಿ, ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ನೇಹಿತ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Woman Missing case: ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಕ್ಕಾಗಿ ಕೊಲೆ ಶಂಕೆ

ರಾಷ್ಟ್ರೀಯ ಹೆದ್ದಾರಿ 373ರ ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ರೂ. ಮೌಲ್ಯದ ಒಡವೆ ಆಕೆಯ ಮೈಮೇಲೆ ಮೇಲೆ ಇತ್ತು. ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

Korean Game: ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಸಾವಿಗೆ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೇಮ್ಸ್ ಪತ್ತೆಯಾಗಿದೆ. ಕೊರಿಯನ್ ಗೇಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ.

ಇನ್ಸ್ಟಾಗ್ರಾಂನಲ್ಲಿ ಶುರುವಾದ ಪ್ರೇಮ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

ಇನ್ಸ್ಟಾಗ್ರಾಂನಲ್ಲಿ ಶುರುವಾದ ಪ್ರೇಮ ಕೊಲೆಯಾಗಿ ಅಂತ್ಯ

man kills woman: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೇಮ ಸಂಬಂಧಕ್ಕೆ ತಿರುಗಿದ್ದ ಮಹಿಳೆಯೊಬ್ಬಳ ಜೀವನ ದುರ್ಘಟನೆಯಾಗಿ ಅಂತ್ಯಗೊಂಡಿದೆ. ವಿವಾಹಿತ ವ್ಯಕ್ತಿಯೊಬ್ಬನೊಂದಿಗಿನ ಸಂಬಂಧದ ವಿಚಾರದಲ್ಲಿ ಉಂಟಾದ ಮನಸ್ತಾಪದ ಹಿನ್ನೆಲೆ ಮಹಿಳೆಯನ್ನು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರಯೋಗ ನಡೆಸಲು ವಿಷ ಸೇವನೆ; ನಾಲ್ವರು ಬಾಲಕಿಯರು ದಾರುಣ ಸಾವು

ಬಿಹಾರದಲ್ಲಿ ನಾಲ್ವರು ಬಾಲಕಿಯರು ಆತ್ಮಹತ್ಯೆ

ಬಿಹಾರದ ಔರಂಗಾಬಾದ್ ಜಿಲ್ಲೆಯ ಮೋತಿ ಬಿಘಾ ಗ್ರಾಮದಲ್ಲಿ ಐವರು 12–15 ವರ್ಷದ ಬಾಲಕಿಯರು ವಿಷದ ಪರಿಣಾಮ ತಿಳಿಯಲು ಅಪಾಯಕಾರಿ ಪ್ರಯೋಗವಾಗಿ ಹಕ್ಕಿ ಕೊಲ್ಲಲು ಬಳಸುವ ವಿಷವನ್ನು ಸೇವಿಸಿದರು. ಈ ಘಟನೆ ಜನವರಿ 29ರಂದು ನಡೆದಿದೆ. ಇವರಲ್ಲಿ ನಾಲ್ವರು ಬಾಲಕಿಯರು ಮೃತಪಟ್ಟಿದ್ದು, 14 ವರ್ಷದ ಒಬ್ಬಳು ಮಾತ್ರ ಬದುಕುಳಿದು ಘಟನೆಯ ವಿವರ ನೀಡಿದ್ದಾಳೆ. ಈ ದುರ್ಘಟನೆ ರಾಜ್ಯದಾದ್ಯಂತ ಆತಂಕ ಉಂಟುಮಾಡಿದೆ.

bank robbery: ಆನ್‌ಲೈನ್ ಜೂಜಾಡಲು ಬ್ಯಾಂಕ್‌ನಿಂದಲೇ 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಅಸಿಸ್ಟೆಂಟ್ ಮ್ಯಾನೇಜರ್!

ಆನ್‌ಲೈನ್ ಜೂಜಾಡಲು ಬ್ಯಾಂಕ್‌ನಿಂದಲೇ ಚಿನ್ನಾಭರಣ ಕದ್ದ ಉದ್ಯೋಗಿ!

ಇಂಡಿಯನ್ ಬ್ಯಾಂಕ್‌ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ.

Murder Case: ಕುಡಿದ ಅಮಲಿನಲ್ಲಿ ಕಲ್ಲು ಎತ್ತಿಹಾಕಿ ಗೆಳೆಯನನ್ನೇ ಕೊಂದರು!

ಕುಡಿದ ಅಮಲಿನಲ್ಲಿ ಕಲ್ಲು ಎತ್ತಿಹಾಕಿ ಗೆಳೆಯನನ್ನೇ ಕೊಂದರು!

ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು.

11ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾರಿನಲ್ಲಿ ಅತ್ಯಾಚಾರ; ಬೆದರಿಸಿ ಮತಾಂತರಕ್ಕೆ ಯತ್ನ

ಭೋಪಾಲ್‌ನಲ್ಲಿ ಅಮಾನವೀಯ ಕೃತ್ಯ; ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಅತ್ಯಾಚಾರ

ಭೋಪಾಲ್‌ನಲ್ಲಿ 11ನೇ ತರಗತಿಯ ವಿದ್ಯಾರ್ಥಿನಿಯನ್ನು ನಾಲ್ವರು ಆರೋಪಿಗಳು ಅಪಹರಿಸಿ, ಅತ್ಯಾಚಾರ ನಡೆಸಿದರೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ಆಕೆಯನ್ನು ಮತಾಂತರಕ್ಕೆ ಒತ್ತಾಯಿಸಲು ಯತ್ನಿಸಿದ್ದಾರೆಯೆಂಬ ಆರೋಪವೂ ಹೊರಬಿದ್ದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

Bhairathi Basavaraj: ಬೈರತಿ ಬಸವರಾಜುಗೆ ಹೃದಯ ಸಮಸ್ಯೆ, ಬೌರಿಂಗ್‌ ಆಸ್ಪತ್ರೆಗೆ ದಾಖಲು

ಬೈರತಿ ಬಸವರಾಜುಗೆ ಹೃದಯ ಸಮಸ್ಯೆ, ಬೌರಿಂಗ್‌ ಆಸ್ಪತ್ರೆಗೆ ದಾಖಲು

ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾಗಿತ್ತು.

Hoskote Accident: ಕುಟುಂಬಕ್ಕೆ ಆಧಾರವಾಗಿದ್ದ ಗಗನ್‌ ಸಾವು; ಮಗನ ಕಳೆದುಕೊಂಡು ಕಣ್ಣಿಲ್ಲದ ತಾಯಿಯ ಆಕ್ರಂದನ

ಕುಟುಂಬಕ್ಕೆ ಆಧಾರವಾಗಿದ್ದ ಗಗನ್‌ ಸಾವು; ಕಣ್ಣಿಲ್ಲದ ತಾಯಿಯ ಆಕ್ರಂದನ

ಹೊಸಕೋಟೆ ಅಪಘಾತದಲ್ಲಿ ಬೈಕ್ ಸವಾರ ಗಗನ್ ತಾನು ಮಾಡದ ತಪ್ಪಿಗೆ ಪ್ರಾಣ ತೆತ್ತಿದ್ದಾನೆ. ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಯುವಕನ ತಾಯಿಗೆ ಎರಡೂ ಕಣ್ಣುಗಳಿಲ್ಲ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಕುಟುಂಬವನ್ನು ಗಗನ್ ನಿರ್ವಹಿಸುತ್ತಿದ್ದ. ಆದರೆ, ಇದೀಗ ಮಗನನ್ನು ಕಳೆದುಕೊಂಡ ಕುಟುಂಬ ಬೀದಿಗೆ ಬಿದ್ದಂತಾಗಿದೆ.

Hampi Utsav 2026: ಹಂಪಿ ಉತ್ಸವದಲ್ಲಿ ಅಗ್ನಿ ಅವಘಡ; ಸಿಎಂ ಇದ್ದ ವೇದಿಕೆ ಎದುರೇ ಹೊತ್ತಿಕೊಂಡ ಬೆಂಕಿ

ಹಂಪಿ ಉತ್ಸವದ ವೇದಿಕೆ ಬಳಿ ಬೆಂಕಿ ಅವಘಡ; ಸ್ಥಳದಲ್ಲಿ ಆತಂಕದ ಸ್ಥಿತಿ

Hampi utsav fire accident: ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಉತ್ಸವದಲ್ಲಿ ಭಾಗಿಯಾಗಲು ಸಿಎಂ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿದ್ದು, ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Tumkur Murder Case: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು!

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು!

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡೇಪಾಳ್ಯದಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದ ತಾಯಿಯನ್ನು ಮಗಳೇ ಕೊಂದು ಹೃದಯಘಾತದ ಕಥೆ ಕಟ್ಟಿದ್ದಳು. ಈ ಬಗ್ಗೆ ಅನುಮಾನ ಮೂಡಿತ್ತು. ತನಿಖೆ ವೇಳೆ ಪೊಲೀಸರು, ಮಗಳ ಬಣ್ಣ ಬಯಲು ಮಾಡಿದ್ದಾರೆ.

ಪತ್ನಿಯ ಗರ್ಭಪಾತದಿಂದ ನೊಂದ ವ್ಯಕ್ತಿ; ಮೂಢನಂಬಿಕೆ ಒಳಗಾಗಿ ನೆರೆಹೊರೆಯವರ ತಲೆಯನ್ನೇ ಕತ್ತರಿಸಿದ!

ಮೂಢನಂಬಿಕೆಗೆ ನೆರೆಹೊರೆಯವರನ್ನು ಹತ್ಯೆಗೈದ ವ್ಯಕ್ತಿ

ಪತ್ನಿಗೆ ಗರ್ಭಪಾತವಾದ ಹಿನ್ನೆಲೆ ದೇವರು ಕೋಪಗೊಂಡಿದ್ದಾರೆ ಎಂಬ ಅಂಧನಂಬಿಕೆಯಿಂದ ವ್ಯಕ್ತಿಯೊಬ್ಬರು ನೆರೆಹೊರೆಯ ಇಬ್ಬರನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಅಂಧನಂಬಿಕೆಯ ಅಪಾಯವನ್ನು ಮತ್ತೊಮ್ಮೆ ನೆನಪಿಸಿದೆ.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಯುವತಿಯ ಪ್ರಾಣ ತೆಗೆದ ಪೊಲೀಸಪ್ಪ; ಕುಟುಂಬಸ್ಥರಿಂದ ಭಾರೀ ಪ್ರತಿಭಟನೆ

ಕುಡಿದ ಮತ್ತಿನಲ್ಲಿ ಅಪಘಾತವೆಸಗಿದ ಪೊಲೀಸ್; ಯುವತಿ ದುರ್ಮರಣ

Accident: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದ ಪೊಲೀಸ್ ಅಧಿಕಾರಿ ಅಪಘಾತವೆಸಗಿ, ಪ್ರಯಾಣಿಕಳ ಮೇಲೆ ಕಾರು ಹರಿಸಿದ ಪರಿಣಾಮ ಯುವತಿ ಸ್ಥಳದಲ್ಲೇ ದುರ್ಮರಣ ಹೊಂದಿದ ದುರ್ಘಟನೆ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಾಕಿಸ್ತಾನದ ಮತ್ತೊಂದು ಕಳ್ಳಾಟ ಬಟಾಬಯಲು;  ಕೆಂಪು ಕೋಟೆ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ನಂಟು ಬಹಿರಂಗ: ಮಹಿಳಾ ಭಯೋತ್ಪಾದನೆಯ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ

ಕೆಂಪು ಕೋಟೆ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ನಂಟು ಬಹಿರಂಗ

JeM terrorism: ವಿಶ್ವಸಂಸ್ಥೆಯ ಇತ್ತೀಚಿನ ವರದಿಯಲ್ಲಿ ದೆಹಲಿಯ ಕೆಂಪುಕೋಟೆ ದಾಳಿಯ ಹಿಂದೆ ಜೈಶ್-ಎ-ಮೊಹಮ್ಮದ್ ಸಂಘಟನೆಯ ಕೈವಾಡ ಇರುವುದಾಗಿ ಉಲ್ಲೇಖಿಸಲಾಗಿದೆ. ಜತೆಗೆ ಮಹಿಳೆಯರಿಗೆ ಮೀಸಲಾದ ಹೊಸ ಘಟಕ ಸ್ಥಾಪನೆಯ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಪ್ರಾದೇಶಿಕ ಭದ್ರತಾ ಪರಿಸ್ಥಿತಿಗೆ ಇದು ಗಂಭೀರ ಸವಾಲು ಎಂದು ವರದಿ ಹೇಳಿದೆ.

ಮೂವರು ಸಹೋದರಿಯ ಆತ್ಮಹತ್ಯೆ ಪ್ರಕರಣ; ಮಾರಾಟ ಮಾಡಿದ್ದ ಫೋನ್ ವಶಪಡಿಸಿಕೊಂಡ ಪೊಲೀಸರು

ಸಹೋದರಿಯ ಆತ್ಮಹತ್ಯೆ ಪ್ರಕರಣ: ತಂದೆಯ ಮೊಬೈಲ್ ಫೋನ್ ವಶ

Three sisters self-harming case: ದೇಶವೇ ಬೆಚ್ಚಿಬಿದ್ದಿದ್ದ ಗಾಜಿಯಾಬಾದ್‌ನ ಮೂವರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸುವ ಭಾಗವಾಗಿ, ಮೃತರ ತಂದೆಯ ಮಾರಾಟ ಮಾಡಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

Loading...