#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ಕ್ರೈಂ
Fraud Case: ಮನಿ ಡಬ್ಲಿಂಗ್, ಸಬ್ಸಿಡಿ ಲೋನ್ ಕೊಡಿಸುವುದಾಗಿ ನಂಬಿಸಿ ವಂಚನೆ: ಮೂವರ ಬಂಧನ

ಮನಿ ಡಬ್ಲಿಂಗ್, ಸಬ್ಸಿಡಿ ಲೋನ್ ಕೊಡಿಸುವುದಾಗಿ ವಂಚನೆ- ಮೂವರ ಅರೆಸ್ಟ್‌

Fraud Case: ಮನಿ ಡಬ್ಲಿಂಗ್ ಹಾಗೂ ಸಬ್ಸಿಡಿ ಲೋನ್ ಕೊಡಿಸುತ್ತೇನೆ ಎಂದು ನಂಬಿಸಿ ಬಹುಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ನಗರದ ಪ್ರಿಯಾಂಕ ಮಹಿಳಾ ಪತ್ತಿನ ಸಹಕಾರ ಸಂಘದ ಐದು ಜನರ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Bhagappa Harijan Murder case: ಬಾಗಪ್ಪ ಹರಿಜನ ಕೊಲೆ, ನಾಲ್ವರ ಬಂಧನ; ಗುಪ್ತಾಂಗವನ್ನೂ ಕತ್ತರಿಸಿದ್ದರಂತೆ ಹಂತಕರು!

ಬಾಗಪ್ಪ ಹರಿಜನ ಕೊಲೆ, ನಾಲ್ವರ ಸೆರೆ; ಗುಪ್ತಾಂಗವನ್ನೂ ಕತ್ತರಿಸಿದ್ದ ಹಂತಕರು!

ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಫೆಬ್ರವರಿ 19ರಂದು ವಿಜಯಪುರ ಕೋರ್ಟ್‌ಗೆ ಹಾಜರಾಗಿ, ತನ್ನ ಮೇಲಿನ ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಹೇಳುವವನಿದ್ದ. ಆದರೆ ಅದಕ್ಕೂ ಮೊದಲೇ ಕೊಲೆ ನಡೆದಿದೆ.

Covid Scam: ಕೋವಿಡ್‌ ಹಗರಣ ತನಿಖೆ ಸಿಐಡಿಗೆ: ರಾಜ್ಯ ಸರ್ಕಾರ ಆದೇಶ

ಕೋವಿಡ್‌ ಹಗರಣ ತನಿಖೆ ಸಿಐಡಿಗೆ: ರಾಜ್ಯ ಸರ್ಕಾರ ಆದೇಶ

ಈ ಮೊದಲು ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಿತ್ತು. ಆದರೆ ಎಸ್ ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಎಫ್‌ಐಆರ್‌ ದಾಖಲಾದ 2 ತಿಂಗಳ ತರುವಾಯ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ.

Crime News: ಪರಸ್ತ್ರೀಗಾಗಿ ಪತ್ನಿಯನ್ನೇ ಕೊಲೆ ಮಾಡಲು ಮುಂದಾದ ಬೆಂಗಳೂರು ಡಿವೈಎಸ್‌ಪಿ

ಪರಸ್ತ್ರೀಗಾಗಿ ಪತ್ನಿಯನ್ನೇ ಕೊಲೆ ಮಾಡಲು ಮುಂದಾದ ಡಿವೈಎಸ್‌ಪಿ

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಡಿವೈಎಸ್‌ಪಿ ಗೋವರ್ದನ್‌ ತನ್ನ ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಗೋವರ್ದನ್‌ ಮತ್ತು ಅವರ ತಂದೆ-ತಾಯಿಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Hubli News: 50 ವರ್ಷದ ಅಂಕಲ್ ಜತೆ 18ರ ಯುವತಿ ಪರಾರಿ; ಒಂದೂವರೆ ತಿಂಗಳು ಕಳೆದ್ರೂ ಪತ್ತೆಯಾಗದ ಜೋಡಿ!

ಹುಬ್ಬಳ್ಳಿಯಲ್ಲಿ 50 ವರ್ಷದ ಅಂಕಲ್ ಜತೆ 18ರ ಯುವತಿ ಪರಾರಿ!

Hubli News: ಹುಬ್ಬಳ್ಳಿಯಲ್ಲಿ ವಿಚಿತ್ರ ಲವ್‌ ಸ್ಟೋರಿ ಬೆಳಕಿಗೆ ಬಂದಿದೆ. ಯುವತಿ ನಾಪತ್ತೆಯಾಗಿ 40 ದಿನವಾದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದೆಡೆ ಅಂಕಲ್ ಪ್ರಕಾಶ್‌ ಕೂಡ ನಾಪತ್ತೆಯಾಗಿದ್ದಾನೆ. ಮಗಳ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಪೋಷಕರು ತೀವ್ರ ದುಃಖದಲ್ಲಿದ್ದಾರೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

Koppal Accident: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಭೀಕರ ಅಪಘಾತ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.

Crime news: ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವತಿ, ಮರ್ಯಾದೆಗೇಡು ಹತ್ಯೆ ಶಂಕೆ

ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವತಿ, ಮರ್ಯಾದೆಗೇಡು ಹತ್ಯೆ ಶಂಕೆ

ಯುವತಿ ಹಾಗೂ ಆಕೆಯ ತಂದೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಕೆರೆಗೆ ಉರುಳಿದೆ. ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದಾರೆ. ಆದರೆ ಮಗಳು ಸಹನಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಅವರು ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಹಾಜರಾಗಿ ತಿಳಿಸಿದ್ದಾರೆ. ಆದರೆ, ಆಕೆಯ ಪ್ರಿಯಕರ ನಿತಿನ್ ಇದೊಂದು ಮರ್ಯಾದಾ ಹತ್ಯೆ ಎಂದು ಆರೋಪಿಸಿದ್ದಾರೆ.

Bidar News: ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು

ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಪ್ರಯಾಗ್‌ ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನಂತರ, ಕಾಶಿ ದೇವಸ್ಥಾನಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.

Bangalore News: ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Bangalore News: ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್‌ ಬಿಟ್ಟು ಓದು ತಾಯಿ ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಬಾಲಕಿ, ಅಪಾರ್ಟ್‌ಮೆಂಟ್‌ನ ತನ್ನ ಕೊಠಡಿಯ ಕಿಟಕಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Viral Video: ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ನಡುರಸ್ತೆಯಲ್ಲಿ ಪೆಟ್ರೋಲ್‌ ಸುರಿದ ಯುವಕ; ಭಯಾನಕ ವಿಡಿಯೊ ವೈರಲ್‌

ಯುವತಿಯ ಮೇಲೆ ನಡುರಸ್ತೆಯಲ್ಲಿ ಪೆಟ್ರೋಲ್‌ ಸುರಿದ ಯುವಕ

ತೆಲಂಗಾಣದ ಹುಜೂರ್‌ನಗರ ಪ್ರದೇಶದ ಬೀದಿಯಲ್ಲಿ ಯುವಕನೊಬ್ಬ ತನ್ನ ಪ್ರೀತಿಯನ್ನು ತಿರಸ್ಕರಿಸಿದ ಬುರ್ಖಾ ಧರಿಸಿದ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

Rapper Abhinav Singh: ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ? ರ‍್ಯಾಪರ್ ಅಭಿನವ್‌ ಸಿಂಗ್‌ ಆತ್ಮಹತ್ಯೆಗೆ ಕಾರಣವೇನು?

ಪತ್ನಿಯ ಕಿರುಕುಳದಿಂದ ರ‍್ಯಾಪರ್ ಅಭಿನವ್‌ ಸಿಂಗ್‌ ಆತ್ಮಹತ್ಯೆ?

ಒಡಿಶಾ ಮೂಲದ ರ‍್ಯಾಪರ್‌ ಅಭಿನವ್‌ ಸಿಂಗ್‌ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿಯ ಮಾನಸಿಕ ಕಿರುಕುಳದಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

Sira News: ಫುಡ್​ ಪಾಯಿಸನ್; ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ

Sira News: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿಯಲ್ಲಿ ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಬುಧವಾರ ಘಟನೆ ನಡೆದಿದೆ. ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಕೊಡಿಸಲಾಗುತ್ತಿದೆ.

Mahakumbh 2025: ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ಹೃದಯಾಘಾತವಾಗಿ ಶಿರಾ ಮೂಲದ ವ್ಯಕ್ತಿ ಸಾವು

ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಹೃದಯಾಘಾತವಾಗಿ ವ್ಯಕ್ತಿ ಸಾವು

Mahakumbh 2025: ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾಗ ಶಿರಾ ತಾಲೂಕಿನ ಬರಗೂರು ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಿಂದ ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ಸಹಸ್ರಾರು ಭಕ್ತರು ತೆರಳಿದ್ದಾರೆ. ಈ ರೀತಿ ಅವಘಡ ಸಂಭವಿಸಿರುವುದು ಇದೇ ಮೊದಲು.

Murder Case: ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ

ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ

ನರಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದ ಅಡ್ಡಕಸುಬಿ ಜ್ಯೋತಿಷಿಯ ಮಾತು ನಂಬಿದ ದುರುಳನೊಬ್ಬ ತನಗೆ ಯಾವ ರೀತಿಯಲ್ಲೂ ಸಂಬಂಧವಿಲ್ಲದ ಅಮಾಯಕನೊಬ್ಬನನ್ನು ಪುಸಲಾಯಿಸಿ ಕರೆದೊಯ್ದು ಕೊಚ್ಚಿ ಕೊಲೆ ಮಾಡಿದ್ದಾನೆ. ಪೊಲೀಸರು ಹಂತಕ ಹಾಗೂ ಜ್ಯೋತಿಷಿ ಇಬ್ಬರನ್ನೂ ಬಂಧಿಸಿದ್ದಾರೆ.

Kerala Ragging: ಕೇರಳದಲ್ಲಿ ಮತ್ತೊಂದು ರ‍್ಯಾಗಿಂಗ್-  ಖಾಸಗಿ ಅಂಗಕ್ಕೆ ಡಂಬಲ್ಸ್‌ ನೇತುಹಾಕಿ ಹಿಂಸಿಸಿದ ರಾಕ್ಷಸರು!

ಕೇರಳ ರ‍್ಯಾಗಿಂಗ್- ಖಾಸಗಿ ಅಂಗಕ್ಕೆ ಡಂಬಲ್ಸ್‌ ನೇತುಹಾಕಿ ಕ್ರೌರ್ಯ!

ಕೇರಳದ ಸರ್ಕಾರಿ ಕಾಲೇಜಿನಲ್ಲಿ ಮತ್ತೊಂದು ಭಯಾನಕ ರ‍್ಯಾಗಿಂಗ್ ಘಟನೆ ನಡೆದಿದ್ದು, ಹಿರಿಯ ವಿದ್ಯಾರ್ಥಿಗಳು ತಮ್ಮ ಜೂನಿಯರ್ಸ್‌ಗಳನ್ನು ಸತತವಾಗಿ ಮೂರು ತಿಂಗಳುಗಳ ಕಾಲ ಕ್ರೂರವಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಪಡಿಸಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ. ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Communal tension: ಮೈಸೂರು ಉದಯಗಿರಿ ಗಲಾಟೆಗೆ ಪ್ರಚೋದನಾಕಾರಿ ಭಾಷಣವೇ ಕಾರಣ!

ಮೈಸೂರು ಉದಯಗಿರಿ ಗಲಾಟೆಗೆ ಪ್ರಚೋದನಾಕಾರಿ ಭಾಷಣವೇ ಕಾರಣ!

ಮೈಸೂರಿನ ಉದಯಗಿರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಮುಫ್ತಿ ಮುಷ್ತಾಕ್​​ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ಕಾರಣ ಎನ್ನಲಾಗಿದೆ. ಈತ ಮಾಡಿರುವ ಭಾಷಣದ ವಿಡಿಯೋ ವೈರಲ್​​ ಆಗಿದೆ. ಪ್ರಚೋದನೆ ನೀಡಿದ ಮುಷ್ತಾಕ್ ಮಕ್ಬೋಲಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

Bomb Hoax: ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

ಅಪರಿಚಿತ ವ್ಯಕ್ತಿಗಳಿಂದ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್​ಪೋರ್ಟ್​ ಪೊಲೀಸ್​ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ಗೆ ಭದ್ರತೆ ಹೆಚ್ಚಿಸಲಾಗಿದೆ.

Bhagappa Harijan Murder: ಕೋರ್ಟ್‌ ಆವರಣದಲ್ಲೇ ಮೂರು ಗುಂಡು ಬಿದ್ದರೂ ಬದುಕುಳಿದಿದ್ದ ಭೀಮಾ ತೀರದ ಬಾಗಪ್ಪ ಹರಿಜನ!

ಕೋರ್ಟ್‌ ಆವರಣದಲ್ಲೇ ಮೂರು ಗುಂಡು ಬಿದ್ದರೂ ಬದುಕುಳಿದಿದ್ದ ಬಾಗಪ್ಪ ಹರಿಜನ!

ಮೂಲತಃ ಬಾಗಪ್ಪ ಹರಿಜನ (Bhagappa Harijan) ಆಲಮೇಲ ತಾಲೂಕಿನ ಬ್ಯಾಡಗಿಹಾಳ ಗ್ರಾಮದವನಾಗಿದ್ದಾನೆ. ಮೊದಲಿನಿಂದಲೂ ಭೀಮಾತೀರದ ಹಂತಕರ ನಂಟಿನಲ್ಲೇ ಬೆಳೆದ ಬಾಗಪ್ಪ ಸಹ ಅದೇ ಹಾದಿ ಹಿಡಿದು ಹಂತಕ ಚಂದಪ್ಪನ ಸಹಚರನಾಗಿದ್ದ. ಚಂದಪ್ಪನ ಜೊತೆಗೆ ಸೇರಿ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಈತನ ಮೇಲಿತ್ತು.

Bhagappa Harijan Murder: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ

ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ಹರಿಜನ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಕೊಚ್ಚಿ ಕೊಂದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

India's got latent row: ರಣವೀರ್‌ ಅಲಹಾಬಾದಿಯಾ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು!

ರಣವೀರ್‌ ಅಲಹಾಬಾದಿಯಾ ವಿರುದ್ಧ ಪ್ರಕರಣ ದಾಖಲು!

India's got latent row: ಜನಪ್ರಿಯ ಹಾಸ್ಯ ಕಾರ್ಯಕ್ರಮ ʻಇಂಡಿಯಾ ಗಾಟ್ ಲ್ಯಾಟೆಂಟ್ʼ ಕುರಿತು ಯೂಟ್ಯೂಬರ್‌ಗಳಾದ ಸಮಯ್ ರೈನಾ, ರಣವೀರ್ ಅಲಹಾಬಾದಿಯಾ, ಆಶಿಶ್ ಚಂಚ್ಲಾನಿ, ಅಪೂರ್ವ ಮುಖಿಜಾ ಮತ್ತು ಇತರರ ವಿರುದ್ಧ ಮಹಾರಾಷ್ಟ್ರ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

Murder Case: ಪ್ರೇಯಸಿ ಕೊಂದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪ್ರೇಯಸಿ ಕೊಂದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Tumkur News: ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಗೆ ತುಮಕೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು-ಅಮೃತೂರು ರಸ್ತೆಯಲ್ಲಿ 2019 ರ ಫೆಬ್ರವರಿ 2ರಂದು ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.‌

Fire Accident: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ; ಹಸು ಸಜೀವ ದಹನ, ರೈತನಿಗೆ ಗಾಯ

ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ; ಹಸು ಸಜೀವ ದಹನ, ರೈತನಿಗೆ ಗಾಯ

Fire Accident: ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹಸುವೊಂದು ಸಜೀವ ದಹನವಾಗಿರುವ ಘಟನೆ ಪಾವಗಡ ತಾಲೂಕಿನ ಕಾರನಾಗನಹಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಜೆ ಜರುಗಿದೆ. ಹಸುಗಳನ್ನು ರಕ್ಷಿಸಲು ಮುಂದಾದ ರೈತ ಬಡನಾಗಪ್ಪಗೆ ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Digital Arrest: 5 ದಿನ ಡಿಜಿಟಲ್‌ ಅರೆಸ್ಟ್:‌ 1 ಕೋಟಿ ರುಪಾಯಿ ವಂಚಿಸಿದ ಸೈಬರ್‌ ಕಳ್ಳರು!

ಡಿಜಿಟಲ್‌ ಅರೆಸ್ಟ್:‌ 1 ಕೋಟಿ ರುಪಾಯಿ ವಂಚಿಸಿದ ಸೈಬರ್‌ ಖದೀಮರು

ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಒಂದೇ ಕುಟುಂಬದ ಮೂವರನ್ನು ಐದು ದಿನಗಳ ಕಾಲ 'ಡಿಜಿಟಲ್‌ ಬಂಧನ'ದಲ್ಲಿ ಇರಿಸಿದ ಅಪರಿಚಿತರು, ಬರೋಬ್ಬರಿ 1 ಕೋಟಿ ರುಪಾಯಿ ವಂಚಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Viral News: ವಿದ್ಯಾರ್ಥಿಗಳನ್ನು ಕೋಣೆಗೆ ಕರೆದ ಪ್ರಾಂಶುಪಾಲನಿಂದ ಹೀನ ಕೃತ್ಯ

ಬೈಯುವ ನೆಪದಲ್ಲಿ ಹುಡುಗರ ಪ್ಯಾಂಟ್‌ ಬಿಚ್ಚಿಸಿದ ಪ್ರಾಂಶುಪಾಲ!

ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಮೆಡಿಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಡುಪ್ಪಲ್‍ನ ಶ್ರೀ ಬ್ರಿಲಿಯಂಟ್ ಟೆಕ್ನೋ ಹೈಸ್ಕೂಲ್‍ನ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿಗಳನ್ನು ಬೈಯುವ ನೆಪದಲ್ಲಿ ಅವರ ಖಾಸಗಿ ಭಾಗಗಳನ್ನು ಸ್ಪರ್ಶಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಪಟ್ಟ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು. ವೈರಲ್ ಆಗಿದೆ.