ಆದಿತ್ಯ ಠಾಕ್ರೆಗೂ ಮೃತ ದಿಶಾ ಸಾಲಿಯಾನ್ಗೂ ಏನು ಸಂಬಂಧ?
Disha Salian: ದಿಶಾ ಸಾಲಿಯಾನ್ ಅವರ ತಂದೆ ತನ್ನ ಮಗಳ ಸಾವಿನ ಬಗ್ಗೆ ಮತ್ತೆ ಮರು ತನಿಖೆ ಮಾಡುವಂತೆ ಆಗ್ರಹಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ಹೆಸರು ಕೇಳಿ ಬಂದಿದೆ.
ಅನೈತಿಕ ಸಂಬಂಧದ ಬಗ್ಗೆ ಪತಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು (Murder Case) ಗೋಣಿಚೀಲದಲ್ಲಿ ಶವವನ್ನು ಕಟ್ಟಿಕೊಂಡು ಬೈಕಿನಲ್ಲಿ ಸಾಗಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಪರಾರಿಯಾದ ಪ್ರಿಯಕರನಿಗಾಗಿ ಹುಡುಕಾಟ ಶುರುಮಾಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ. ಬಿಇಎಲ್ನ ಪ್ರಾಡಕ್ಟ್ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ದೇಶದ ಗುಪ್ತ ರಕ್ಷಣಾ ಮಾಹಿತಿಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎನ್ನಲಾಗಿದೆ.
ಗುಜರಾತ್ನ ಫ್ಲ್ಯಾಟ್ನಲ್ಲಿ ಮಾ. 17ರಂದು ಶೋಧ ನಡೆಸಿದ ಅಧಿಕಾರಿಗಳ ತಂಡವು ಸುಮಾರು 88 ಕಿಲೋ ಚಿನ್ನದ ಗಟ್ಟಿ ಹಾಗೂ 19.66 ಕಿಲೋ ಚಿನ್ನಾಭರಣಗಳು ಪತ್ತೆ ಹಚ್ಚಿದೆ. ಇದರ ಜತೆಗೆ 11 ಐಷಾರಾಮಿ ವಾಚುಗಳು ಕಂಡುಬಂದಿವೆ. ಇದರಲ್ಲಿ ಜೇಕಬ್ & ಕಂಪನಿ ಟೈಮ್ಪೀಸ್ನ ವಜ್ರ ಖಚಿತ ಪಟೇಕ್ ಫಿಲಿಪ್ ವಾಚ್, ಫ್ರಾಂಕ್ ಮುಲ್ಲರ್ ವಾಚ್ಗಳೂ ಇವೆ.
Physical Abuse: ಬಂಧನವಾಗಿರುವ ಬಿಜೆಪಿ ಮುಖಂಡ ದೇವು ನಾಯಕ್ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾಗಿದೆ. ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಿಜೆಪಿ ಯುವ ಮುಖಂಡನನ್ನು ಬಂಧಿಸಲಾಗಿದೆ.
ಖಾಸಗಿ ಹಡಗಿನ ಕಂಪೆನಿಯೊಂದರಲ್ಲಿ ನೇವಿ ಅಧಿಕಾರಿ ಆಗಿದ್ದ ಮೃತ ಸೌರಭ್ ಮಾ. 4ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಅನುಮಾನದಿಂದ ಪತ್ನಿ ಮುಸ್ಕಾನ್ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಪತ್ನಿಯೇ ಪ್ರೇಮಿಯ ಜೊತೆಗೂಡಿ ಅಮಾನುಷವಾಗಿ ಕೊಂದಿದ್ದು ಪ್ರಕರಣದ ದಾರಿ ತಪ್ಪಿಸಲು ಅನೇಕ ರೀತಿಯ ಷಡ್ಯಂತ್ರ ಹೂಡಿದ್ದಳು ಎಂಬುದು ಪೊಲೀಸ್ ತನಿಖೆ ವೇಳೆಯಲ್ಲಿ ಬಯಲಾಗಿದೆ.
Electric shock: ಕೊಳ್ಳೇಗಾಲ ಪಟ್ಟಣದ ಲಿಂಗಾಣಪುರ ಹೊರ ವಲಯದಲ್ಲಿ ಘಟನೆ ನಡೆದಿದೆ. ಹೈ ಟೆನ್ಷನ್ ವಿದ್ಯುತ್ ಟವರ್ ಏರಿದ ಯುವಕನನ್ನು ಕೆಳಗಿಳಿಸಲು ಸ್ಥಳೀಯರು ಯತ್ನಿಸಿದ್ದಾರೆ. ಆದರೆ, ತನ್ನ ತಾಯಿಯನ್ನು ಸ್ಥಳಕ್ಕೆ ಕರೆಸಬೇಕು ಎಂದು ಯುವಕ ಪಟ್ಟು ಹಿಡಿದಿದ್ದಾನೆ. ನಂತರ ಇಳಿಯುವಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮತಿ (35) ಮತ್ತು ಸೋನಿ (36) ಎಂಬುವವರು ಮೃತಪಟ್ಟಿದ್ದಾರೆ.
ಮ್ಯಾಚ್ ಗೆದ್ದ ಬಳಿಕ ಟೀಮ್ನ ಸದಸ್ಯರು ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿಸಿ ದಿವ್ಯ ಕುಮಾರ್ ಬೈಕ್ನಲ್ಲಿ ತೆರಳಿದ್ದ. ಇದಾದ ಬಳಿಕ ಅಪಘಾತಗೊಂಡ ಸ್ಥಿತಿಯಲ್ಲಿ ಪೊದೆಯೊಂದರಲ್ಲಿ ದಿವ್ಯ ಕುಮಾರ್ ಕೋಮಾ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿತ್ತು.
ಕಾಡ್ಗಿಚ್ಚಿಗೆ ಒಳಗಾಗಿ ಅಪಾರ ಪ್ರಮಾಣದ ಮರಗಳು ಸುಟ್ಟಿದ್ದು ಭಾರೀ ಪ್ರಮಾಣದ ನಷ್ಟಕ್ಕೆ ಒಳಗಾಗಿ ದ್ದೇನೆ. ದಯವಿಟ್ಟು ಜಿಲ್ಲಾ ಧಿಕಾರಿಗಳು ನನಗೆ ಆಗಿರುವ ನಷ್ಟದ ಅಂದಾಜನ್ನು ಅಧಿಕಾರಿಗಳ ಮೂಲಕ ಸಮೀಕ್ಷೆ ಮಾಡಿಸಿ ಪ್ರಾಕೃತಿಕ ವಿಕೋಪದ ನಿಧಿಯಲ್ಲಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಲ್ಲದೆ, ಈಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಕೂಡ ಸಲ್ಲಿಸಿದ್ದಾರೆ