ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ತಾಯಿ, ಪ್ರೇಮಿ

ಕೇರಳದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವನ್ನು ಮಲ ತಂದೆಯೇ ಕೊಲೆ ಮಾಡಿದ್ದಾನೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು ಬಂಧಿಸಿದ್ದಾರೆ.

ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 2, 2026 2:48 PM

ತಿರುವನಂತಪುರಂ: ಕೇರಳದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವನ್ನು ಮಲ ತಂದೆಯೇ ಕೊಲೆ ಮಾಡಿದ್ದಾನೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ (Kerala News) ಪೊಲೀಸರು ಬಂಧಿಸಿದ್ದಾರೆ. ಮೇ 29ರ ಶುಕ್ರವಾರದಂದು ಮಗು ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ ಆಂಬ್ಯುಲೆನ್ಸ್ ಮೂಲಕ ಪಣವೂರಿನ ಖಾಸಗಿ ಆಸ್ಪತ್ರೆಗೆ ಮತ್ತು ನಂತರ ಎಸ್‌ಎಟಿ (SAT) ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಮಗು ಈಗಾಗಲೇ ಮೃತಪಟ್ಟಿದೆ ಎಂದು ಘೋಷಿಸಿದರು.

ಈ ವೇಳೆ ಆರೋಪಿ ಅಶ್ಕರ್, ಮಗು ಹಾಲು, ನೀರು ಕುಡಿದು ಮಲಗಿದ ನಂತರ ಇದ್ದಕ್ಕಿದ್ದಂತೆ ಕೆಮ್ಮಲು ಮತ್ತು ವಾಂತಿ ಮಾಡಲು ಆರಂಭಿಸಿ ಉಸಿರುಗಟ್ಟಿದಂತಾಗಿ ಪ್ರಜ್ಞೆ ಕಳೆದುಕೊಂಡಿತು ಎಂದು ಕಥೆ ಕಟ್ಟಿದ್ದನು.ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಸತ್ಯ ಬಯಲಿಗೆ ಬಂದಿದೆ. ಮಗುವಿನ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ತೀವ್ರ ಆಂತರಿಕ ರಕ್ತಸ್ರಾವ ಉಂಟಾಗಿದ್ದೇ ಸಾವಿಗೆ ನಿಜವಾದ ಕಾರಣ ಎಂದು ವೈದ್ಯಕೀಯ ವರದಿ ಬಹಿರಂಗಪಡಿಸಿತು.

ತನಿಖಾಧಿಕಾರಿಗಳು ಅರ್ಷಿದ್‌ನ ಪುಟ್ಟ ದೇಹದ ಮೇಲೆ ಬೇರೆ ಬೇರೆ ಅವಧಿಯಲ್ಲಿ ಉಂಟಾಗಿದ್ದ ಸುಮಾರು 50ಕ್ಕೂ ಹೆಚ್ಚು ತಾಜಾ ಮತ್ತು ಹಳೆಯ ಗಾಯಗಳನ್ನು ಪತ್ತೆಹಚ್ಚಿದ್ದಾರೆ. ಇವುಗಳಲ್ಲಿ ದೀರ್ಘಕಾಲದ ಆಂತರಿಕ ಗಾಯಗಳು ಮತ್ತು ಇಡೀ ದೇಹದಾದ್ಯಂತ ಸಿಗರೇಟ್ ತುಂಡುಗಳಿಂದ ಸುಟ್ಟ ದುಂಡಗಿನ ಗುರುತುಗಳು ಪತ್ತೆಯಾಗಿವೆ. ಮಗುವಿನ ತಾಯಿಯ ಅಜ್ಜಿ ನೀಡಿರುವ ಹೇಳಿಕೆ ಪ್ರಕಾರ, ಈ ಹಿಂದೆ ಮಗುವಿನ ಎರಡೂ ತೋಳುಗಳು ಮುರಿದಿದ್ದವು. ಆ ಸಮಯದಲ್ಲಿ ಈ ಪಾಪಿ ದಂಪತಿಗಳು ಮಗು ಆಟ ಆಡುತ್ತಾ ಕೆಳಗೆ ಬಿದ್ದಿದ್ದರಿಂದ ಹೀಗಾಗಿದೆ ಎಂದು ಸುಳ್ಳು ಹೇಳಿದ್ದರು.

ಕುಟುಂಬ ಸದಸ್ಯರ ಸಾವಿನಿಂದ ಎದೆ ಬಡಿದುಕೊಂಡು ಗೋಳಾಡಿದ ಮಹಿಳೆ; ಕೊಲೆ ರಹಸ್ಯ ಬಯಲಾಗುತ್ತಿದ್ದಂತೆ ಆಗಿದ್ದೇ ಬೇರೆ!

ಅಖಿಲಾ ಮೊದಲ ಪತಿ ಮೃತಪಟ್ಟ ಬಳಿಕ ಅಖಿಲಾ ತನಗೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರಿಂದ ಮಗುವನ್ನು ಅಜ್ಜಿ ನೋಡಿಕೊಳ್ಳುತ್ತಿದ್ದರು. ಬಳಿಕ ಆಕೆ ತನ್ನ ಲಿವ್‌ ಇನ್‌ ಸಂಗಾತಿಯ ಬಳಿ ಮಗುವನ್ನು ಕರೆದುಕೊಂಡು ಹೋಗಿದ್ದಳು. ಮಗುವಿನ ಮುರಿದ ಕೈಗಳು ಹಾಗೂ ಗಾಯಗಳನ್ನು ಗಮನಿಸಿದ್ದ ಅಜ್ಜಿ ಈ ಹಿಂದೆಯೇ ಪೊಲೀಸರಿಗೆ ಔಪಚಾರಿಕ ದೂರು ನೀಡಿದ್ದರು. ಮಗುವಿನ ಮೇಲಿನ ನಿರಂತರ ಹಲ್ಲೆ ಗೊತ್ತಿದ್ದರೂ ಅಖಿಲಾ ತನ್ನ ಮಗನನ್ನು ರಕ್ಷಿಸಲು ಅಥವಾ ಪೊಲೀಸರಿಗೆ ದೂರು ನೀಡಲು ಮುಂದಾಗದ ಕಾರಣ ಆಕೆಯನ್ನೂ ಕೊಲೆ ಆರೋಪಿಯಾಗಿ ಕೇಸ್‌ನಲ್ಲಿ ಸೇರಿಸಲಾಗಿದೆ.