ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Murder: ರಾಮೋಹಳ್ಳಿಯ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದ ದುಷ್ಕರ್ಮಿಗಳು!

Dead body found in suitcase: ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು: ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ (Bengaluru Murder) ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ನಡೆದಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಬಿಸಾಡಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಎರಡ್ಮೂರು ದಿನಗಳ ಹಿಂದೆ ಶವ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈಗ ಕೆರೆಯಲ್ಲಿ ಶವವಾಗಿ ಸಿಕ್ಕಿರುವುದು ಜಯಮ್ಮ (61) ಎಂದು ಗುರುತಿಸಲಾಗಿದೆ. ಚಲ್ಲಘಟ್ಟ ನಿವಾಸಿಯಾಗಿದ್ದ ಜಯಮ್ಮ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ನಾಪತ್ತೆ ದೂರು ನೀಡಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್​ಕೇಸ್​ನಲ್ಲಿ ಶವದ ಒಂದು ಭಾಗ ಹೊರಬಂದಿರುವುದನ್ನು ಸ್ಥಳೀಯರು ನೋಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶವ ಪರಿಶೀಲಿಸಿದಾಗ ಹಂತಕರು ಹತ್ಯೆ ಮಾಡಿ ಶವ ಬಿಸಾಕಿರುವ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಭಯಾನಕ ಘಟನೆ: ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಮದ್ಯ ಕುಡಿಸಿದ ಪಾಪಿಗಳು

ಈ ಬಗ್ಗೆ ಪ್ರತಿಕ್ರಿಯಿಸಿರುವ ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್, ರಾಮೋಹಳ್ಳಿ ಕೆರೆಯಲ್ಲಿ ಸೂಟ್​ಕೇಸ್ ಸಮೇತ ಶವ ತೇಲಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು. ಜಲಚರಗಳು ಮಹಿಳೆಯ ದೇಹದ ಬಹುತೇಕ ಭಾಗಗಳು ಭಕ್ಷಿಸಿವೆ. ಮೂರು - ನಾಲ್ಕು ದಿನಗಳ ಹಿಂದೆ ಹಂತಕರು ಶವ ಬಿಸಾಡಿರುವ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.