ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bank Robbery: ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

Bank Robbery: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಈ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಕಳ್ಳರು ಬ್ಯಾಂಕ್‌ನ ಮುಂಭಾಗದ ಬಾಗಿಲಿನ ಕೀಯನ್ನು ಮುರಿದು ಒಳನುಗ್ಗಿರುವ ಘಟನೆ ಭಾನುವಾರ ಗೊತ್ತಾಗಿದೆ.

ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

ಹರೀಶ್‌ ಕೇರ ಹರೀಶ್‌ ಕೇರ May 26, 2025 7:52 AM

ವಿಜಯಪುರ: ರಾಜ್ಯದಲ್ಲಿ (Karnataka) ಬ್ಯಾಂಕ್‌ ಹಾಗೂ ಎಟಿಎಂ ದರೋಡೆ (Bank Robbery, ATM robbery) ಪ್ರಕರಣಗಳು ಹೆಚ್ಚುತ್ತಿವೆ .ಇದೀಗ ವಿಜಯಪುರದ (Vijayapura news) ಕೆನರಾ ಬ್ಯಾಂಕ್‌ನ (Canara Bank) ಮುಂಭಾಗದ ಕೀ ಮುರಿದು ಕಳ್ಳರು ಒಳನುಗ್ಗಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಈ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಕಳ್ಳರು ಬ್ಯಾಂಕ್‌ನ ಮುಂಭಾಗದ ಬಾಗಿಲಿನ ಕೀಯನ್ನು ಮುರಿದು ಒಳನುಗ್ಗಿರುವ ಘಟನೆ ಭಾನುವಾರ ಗೊತ್ತಾಗಿದೆ.

ಭಾನುವಾರ ರಜಾದಿನವಾದ ಕಾರಣ ಬ್ಯಾಂಕ್‌ಗೆ ಸಿಬ್ಬಂದಿ ಆಗಮಿಸಿರಲಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣವೇ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಶ್ವಾನದಳ ತಂಡವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಪೊಲೀಸರು ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಕಳ್ಳತನದ ವಿವರಗಳನ್ನು ತನಿಖೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಶ್ವಾನದಳದ ಸಹಾಯದಿಂದ ಘಟನಾ ಸ್ಥಳದಲ್ಲಿ ಸುಳಿವುಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶೀಘ್ರವೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸ ವ್ಯಕ್ತವಾಗಿದೆ.

ಇತ್ತೀಚೆಗೆ ಬ್ಯಾಂಕ್‌ ಕಳ್ಳತನ ಪ್ರಕರಣಗಳು ಹೆಚ್ಚಾಗಿಯೇ ಕೇಳಿಬರುತ್ತಿದೆ. ಜನವರಿ 16 ರಂದು ಬೀದರ್‌‌ನ​ನಲ್ಲಿ ಎಟಿಎಂಗೆ (ATM) ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ (Money) ದರೋಡೆ (Robbery) ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಆ ಘಟನೆಯ ಬೆನ್ನಲ್ಲೇ ಹುಬ್ಬಳ್ಳಿ ಬ್ಯಾಂಕ್‌‌ನಲ್ಲೂ ದರೋಡೆಗೆ ಯತ್ನಿಸಿದ್ದರು. ಆದರೆ ಅದು ವಿಫಲವಾಗಿತ್ತು.

ಇದನ್ನೂ ಓದಿ: KVB Recruitment 2025: ಕರೂರ್‌ ವೈಶ್ಯ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಹೀಗೆ ಅಪ್ಲೈ ಮಾಡಿ