ಚಂಡೀಗಢ: ಅಕ್ಟೋಬರ್ 7ರಂದು ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ತಮ್ಮ ಚಂಡೀಗಢದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ( IPS Officer) ಆತ್ಮಹತ್ಯೆ ಮಾಡಿಕೊಂಡಿದ್ದರು. 9 ಪುಟಗಳ (Self Harming) ಸೂಸೈಡ್ ನೋಟ್ನಲ್ಲಿ 12 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು ಇದೀಗ ಪ್ರಕರಣದಲ್ಲಿ ಭಾರೀ ತಿರುವೊಂದು ಪಡೆದುಕೊಂಡಿದ್ದು, ರೋಹ್ಟಕ್ ಸುಲಿಗೆ ಪ್ರಕರಣವನ್ನು ನಿರ್ವಹಿಸುತ್ತಿದ್ದ ತನಿಖಾಧಿಕಾರಿ ಸಂದೀಪ್ ಲಾಥರ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಪತ್ರದಲ್ಲಿ "ಸತ್ಯಕ್ಕಾಗಿ" ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿರುವುದಾಗಿ ಬರೆದಿದ್ದಾರೆ. ಸಂದೀಪ್ ಸಾವಿಗೂ ಮುನ್ನ ವಿಡಿಯೋ ಒಂದನ್ನು ಮಾಡಿದ್ದರು. ಇದೀಗ ಅದು ವೈರಲ್ ಆಗಿದೆ.
ವಿಡಿಯೋದಲ್ಲಿ , ಎಡಿಜಿಪಿಯ ಸಿಬ್ಬಂದಿ ಅಧಿಕಾರಿ "ಸಂಪೂರ್ಣವಾಗಿ ಭ್ರಷ್ಟ" ಎಂದು ಲಾಥರ್ ಹೇಳುತ್ತಾರೆ. ಆ ಅಧಿಕಾರಿ ಭ್ರಷ್ಟ ಅಧಿಕಾರಿಗಳನ್ನು ನಿಯೋಜಿಸಿ ಜಾತಿಯ ಆಧಾರದ ಮೇಲೆ ವರ್ಗಾವಣೆ ಮಾಡುತ್ತಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ. "ಎಲ್ಲರೂ ಭಾಗಿಯಾಗಿದ್ದರು" ಎಂದು ಲಾಥರ್ ಆರೋಪಿಸಿದ್ದಾರೆ, ಇದು ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ಉಲ್ಲೇಖದಂತೆ ಕಾಣುತ್ತದೆ. ಘಟನೆಯ ಕುರಿತು ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
ಆತ್ಮಹತ್ಯೆ ಪತ್ರದಲ್ಲಿ, ಕುಮಾರ್ ಒಬ್ಬ "ಭ್ರಷ್ಟ ಪೊಲೀಸ್" ಮತ್ತು ತನ್ನ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಲಾಥರ್ ಆರೋಪಿಸಿದ್ದಾರೆ. "ನಾನು ಈ ಸತ್ಯಕ್ಕಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡುತ್ತಿದ್ದೇನೆ. ನಾನು ಪ್ರಾಮಾಣಿಕತೆಯೊಂದಿಗೆ ನಿಲ್ಲುತ್ತೇನೆ ಎಂದು ನನಗೆ ಹೆಮ್ಮೆ ಇದೆ. ದೇಶವನ್ನು ಜಾಗೃತಗೊಳಿಸಲು ಇದು ಮುಖ್ಯವಾಗಿದೆ" ಎಂದು ಅವರು ಹೇಳಿದರು, ಅವರ ಕುಟುಂಬ ಸದಸ್ಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ: Self Harming: ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪೂರಣ್ ಕುಮಾರ್ ಅವರ ಪತ್ನಿ ಮತ್ತು ಪುತ್ರಿಯರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ. ಇದನ್ನು ದುರಂತ ಮತ್ತು ಸೂಕ್ಷ್ಮ ವಿಷಯ ಎಂದು ಬಣ್ಣಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅಕ್ಟೋಬರ್ 7 ರಂದು ಚಂಡೀಗಢದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹರಿಯಾಣ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಜಾತಿ ಆಧಾರಿತ ತಾರತಮ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಕುಟುಂಬಕ್ಕೆ ನೀಡಿದ ಬದ್ಧತೆಯನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಮಂಗಳವಾರ ಕೇಳಿದ್ದರು.