ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gulfam Singh Yadav: ಮುಲಾಯಂ ಸಿಂಗ್ ಯಾದವ್ ವಿರುದ್ಧ ಸ್ಪರ್ಧಿಸಿದ್ದ BJP ನಾಯಕನ ಹತ್ಯೆ; ವಿಷಪೂರಿತ ಇಂಜೆಕ್ಷನ್‌ ಚುಚ್ಚಿ ಕೊಂದ ಹಂತಕರು

ಉತ್ತರ ಪ್ರದೇಶದ (Uttar Pradesh) ಸಂಭಾಲ್‌ನಲ್ಲಿ ಸೋಮವಾರ ಬಿಜೆಪಿ ನಾಯಕ ಗುಲ್ಫಮ್ ಸಿಂಗ್ ಯಾದವ್ ಅವರನ್ನು ಮೂವರುದುಷ್ಕರ್ಮಿಗಳು ವಿಷಕಾರಿ ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿದ್ದಾರೆ. ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳು ಇಂಜೆಕ್ಷನ್ ನೀಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಷಪೂರಿತ ಇಂಜೆಕ್ಷನ್‌ ಚುಚ್ಚಿ  BJP ನಾಯಕನ ಹತ್ಯೆ ಮಾಡಿದ ದುಷ್ಕರ್ಮಿಗಳು

ಸಾಂದರ್ಭಿಕ ಚಿತ್ರ

Profile Vishakha Bhat Mar 11, 2025 9:52 AM

ಲಖನೌ: ಉತ್ತರ ಪ್ರದೇಶದ (Uttar Pradesh) ಸಂಭಾಲ್‌ನಲ್ಲಿ ಸೋಮವಾರ ಬಿಜೆಪಿ ನಾಯಕ ಗುಲ್ಫಮ್ ಸಿಂಗ್ ಯಾದವ್ ( Gulfam Singh Yadav) ಅವರನ್ನು ಮೂವರುದುಷ್ಕರ್ಮಿಗಳು ವಿಷಕಾರಿ ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿದ್ದಾರೆ. 60 ವರ್ಷದ ಗುಲ್ಫಮ್ ಸಿಂಗ್ ಜುನವೈ ಪೊಲೀಸ್ ಠಾಣೆ ವ್ಯಾಪ್ತಿಯ ದಫ್ತಾರಾ ಗ್ರಾಮದಲ್ಲಿದ್ದ ತಮ್ಮ ಜಮೀನಿನಲ್ಲಿ ಇದ್ದರು. ಆಗ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳು ಇಂಜೆಕ್ಷನ್ ನೀಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಈ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ನಾಯಕನನ್ನು ಭೇಟಿಯಾಗಿ ಮೂವರು ಅಪರಿಚಿತರು ಜಮೀನಿಗೆ ಪ್ರವೇಶ ಮಾಡಿದ್ದರು. ಅವರ ಜೊತೆ ಕುಳಿತು, ಅವರ ಯೋಗಕ್ಷೇಮ ವಿಚಾರಿಸಿ, ನೀರು ಕೇಳಿ ಕುಡಿದರು. ನಂತರ ಅಲ್ಲಿಂದ ಹೊರಡುವಾಗ ಯಾದವ್‌ ಅವರ ಹೊಟ್ಟೆಗೆ ವಿಷಯುಕ್ತ ಇಂಜೆಕ್ಷನ್ ಚುಚ್ಚಿದ್ದಾರೆ. ವಿಷವು ಅವರ ದೇಹದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತಿದ್ದಂತೆ, ಸಿಂಗ್‌ ಅವರ ಆರೋಗ್ಯ ಹದಗೆಡಲು ಪ್ರಾರಂಭಿಸಿತು, ಅವರು ನೋವಿನಿಂದ ಕಿರುಚಿದರು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಕರೆದೊಯ್ಯಲಾಗುತಿತ್ತು ಆದರೆ ಅವರು ದಾರಿಯಲ್ಲಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಂದ ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ದೀಪಕ್ ತಿವಾರಿ ತಿಳಿಸಿದ್ದಾರೆ.

ಎಸ್ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಮತ್ತು ಎಎಸ್ಪಿ ಅನುಕೃತಿ ಶರ್ಮಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸುತ್ತಿದೆ. ಸ್ಥಳದಲ್ಲಿ ಖಾಲಿ ಇಂಜೆಕ್ಷನ್ ಮತ್ತು ಹೆಲ್ಮೆಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಹಲ್ಲೆಕೋರರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Murder Case: ಬೆಂಗಳೂರಲ್ಲಿ ಕಾಂಗ್ರೆಸ್​ ಮುಖಂಡನ ಬರ್ಬರ ಹತ್ಯೆ; ಶಾಸಕ ಹ್ಯಾರಿಸ್ ಜತೆ ಗುರುತಿಸಿಕೊಂಡಿದ್ದ ಹೈದರ್

2004 ರ ಉಪಚುನಾವಣೆಯಲ್ಲಿ ಗುನ್ನೌರ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧ ಭಾರತೀಯ ಜನತಾ ಪಕ್ಷದಿಂದ ಗುಲ್ಫಮ್ ಸಿಂಗ್ ಯಾದವ್ ಸ್ಪರ್ಧಿಸಿದ್ದರು. ಯಾದವ್ ಅವರ ನಿಧನದ ನಂತರ, ಸೋಮವಾರ ತಡರಾತ್ರಿ ಹಲವಾರು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಲಿಗಢ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ್ದಾರೆ.