ಚಾಮರಾಜನಗರ, ಜ.30: ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ, ಇರಿದ (Stabbing) ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ (Kollegala) ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ನಲ್ಲಿ ಆಯೋಜಿಸಿದ್ದ ಆರತಕ್ಷತೆ ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಚಾಕು, ಡ್ರ್ಯಾಗರ್ನಿಂದ ಹಲ್ಲೆ (Assault Case) ಮಾಡಿದ್ದಾರೆ.
ಕಲ್ಯಾಣ ಮಂಟಪಕ್ಕೆ ಹೋಗುತ್ತಿದ್ದಾಗ ಇರಿತ
6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ನಿನ್ನೆ (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ನಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರ ರವೀಶ್, ಕುಣಗಳ್ಳಿ ಗ್ರಾಮದಿಂದ ಕಾರಿನಲ್ಲಿ ಹೋಗುವ ವೇಳೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಧುವಿನ ಮಾಜಿ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ನಡೆಸಿದ್ದಾರೆ.
ವರದಕ್ಷಿಣೆಗಾಗಿ ಡಂಬಲ್ಸ್ನಿಂದ ಹಲ್ಲೆ ಮಾಡಿ ಪೊಲೀಸ್ ಅಧಿಕಾರಿಯ ಹತ್ಯೆ; ಪತಿ, ಅತ್ತೆ-ಮಾವನಿಂದಲೇ ಕ್ರೂರ ಕೃತ್ಯ
ಹಲ್ಲೆಗೊಳಗಾದ ಮದುಮಗ ಹೇಳಿದ್ದೇನು?
ಈ ಬಗ್ಗೆ ರವೀಶ್ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜತೆ ಎಂಗೇಜ್ಮೇಟ್ ಆಗಿತ್ತು. ಜನವರಿ 30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವರು ಯಾರು ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಈತನನ್ನು ಮದುವೆಯಾಗಬೇಕಿದ್ದ ಯುವತಿಯ ಹಳೆಯ ಲವರ್ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.