ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತಲಾ 5 ಲಕ್ಷ ರೂ. ಇನಾಮು ಹೊಂದಿದ್ದ ಮೂವರು ನಕ್ಸಲರ ಎನ್‌ಕೌಂಟರ್‌

ತಲಾ ಐದು ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಮೂವರು ನಕ್ಸಲರನ್ನು ಛತ್ತೀಸ್‌ಗಢದ ಸುಕ್ಮಾದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ತುಮಲ್‌ಪಾಡ್ ಗ್ರಾಮದ ಬಳಿ ಈ ಎನ್‌ಕೌಂಟರ್ ನಡೆದಿದೆ. ಮೃತ ನಕ್ಸಲರಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳಾದ ಪೊಡ್ಯಂ ಗಂಗಿ ಮತ್ತು ಸೋಡಿ ಗಂಗಿ ಸೇರಿದ್ದಾರೆ.

ಛತ್ತೀಸ್‌ಗಢದಲ್ಲಿ ಮೂವರು ನಕ್ಸಲರ ಎನ್‌ಕೌಂಟರ್‌

ಸಾಂದರ್ಭಿಕ ಚಿತ್ರ -

ಛತ್ತೀಸ್‌ಗಢ: ಇಬ್ಬರು ಮಹಿಳಾ ಮಾವೋವಾದಿಗಳು (Naxals) ಸೇರಿ ಮೂವರನ್ನು ಛತ್ತೀಸ್‌ಗಢದ (Chhattisgarh) ಸುಕ್ಮಾದ (Sukma) ತುಮಲ್‌ಪಾಡ್ ಗ್ರಾಮದ ಬಳಿ ಭದ್ರತಾ ಪಡೆಗಳು (security forces) ಹೊಡೆದು ಉರುಳಿಸಿವೆ. ಈ ಮೂವರಿಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಭಾನುವಾರ ಐಜಿ ಬಸ್ತಾರ್ ಪಿ. ಸುಂದರರಾಜ್ ತಿಳಿಸಿದ್ದಾರೆ. ಸುಕ್ಮಾ ಪೊಲೀಸರು ಕೂಡ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.ಮೃತರಲ್ಲಿ ಮಿಲಿಟಿಯಾ ಕಮಾಂಡರ್ ಮತ್ತು ಸ್ನೈಪರ್ ತಜ್ಞ ಮದ್ವಿ ದೇವಾ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುಮಲ್‌ಪಾಡ್ ಗ್ರಾಮದ ಬಳಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳಾದ ಪೊಡ್ಯಂ ಗಂಗಿ ಮತ್ತು ಸೋಡಿ ಗಂಗಿ ಕೂಡ ಸೇರಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ರೇಸಿಂಗ್ ಚಾಂಪಿಯನ್‌ಶಿಪ್‌ ಅಂತ್ಯ; 2ನೇ ದಿನವೂ ಬೆಂಗಳೂರಿನ ಅನಿಶ್ ಶೆಟ್ಟಿಗೆ ಭರ್ಜರಿ ಜಯ!

ಮಾವೋವಾದಿಗಳ ಎನ್ ಕೌಂಟರ್ ಬಳಿಕ ಜಿಲ್ಲಾ ಮೀಸಲು ಗಾರ್ಡ್‌ನ ತಂಡಗಳು 303 ರೈಫಲ್, ಬಿಜಿಎಲ್ ಲಾಂಚರ್‌ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದಿವೆ. ಘಟನೆ ಬಳಿಕ ಈ ಭಾಗದಲ್ಲಿ ತೀವ್ರ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ನವೆಂಬರ್ 11ರಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದರು. ಇವರಲ್ಲಿ ಮಾವೋವಾದಿ ನಾಯಕಿ ಉರ್ಮಿಳಾ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಬುಚಣ್ಣ ಕುಡಿಯಮ್ ಸೇರಿದ್ದರು.

ಈ ಆರು ಮಂದಿಯನ್ನು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ದೂರದ ಪ್ರದೇಶಗಳಲ್ಲಿರುವ ಕಂದುಲ್ನಾರ್ ಮತ್ತು ಕಚ್ಲಾರಾಮ್ ಗ್ರಾಮಗಳ ಕಾಡುಗಳಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಇವರಿಗೆ ಒಟ್ಟು 27 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ಭದ್ರತಾ ಪಡೆಗಳು, ನಾಗರಿಕರು ಮತ್ತು ಅಭಿವೃದ್ಧಿ ಯೋಜನೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ನಡೆಸುತ್ತಿದ್ದ ಹಲವಾರು ದಾಳಿಗಳಿಗೆ ಇವರು ಕಾರಣರಾಗಿದ್ದಾರೆ. ಬುಚಣ್ಣ ಅಲಿಯಾಸ್ ಕಣ್ಣ ಈ ತಂಡದ ಮಾಸ್ಟರ್ ಮೈಂಡ್ ಆಗಿದ್ದರೆ, ಊರ್ಮಿಳಾ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ ಮಾವೋವಾದಿಗಳ ಬೆಟಾಲಿಯನ್‌ಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ಮುಖ್ಯ ನಿರ್ವಾಹಕಿಯಾಗಿದ್ದಳು.

ಇದನ್ನೂ ಓದಿ: Sanjana Galrani: `ʼನಾನು ಸಾಯುತ್ತೇನೆ, ನನ್ನಿಂದ ಇಲ್ಲಿರಲು ಸಾಧ್ಯವಿಲ್ಲʼ' ಎಂದು ಕಣ್ಣೀರಿಟ್ಟ ಸಂಜನಾ ಗಲ್ರಾನಿ

ಈ ಕಾರ್ಯಾಚರಣೆಯನ್ನು ಬಿಜಾಪುರ ಮತ್ತು ದಂತೇವಾಡದ ಜಿಲ್ಲಾ ಮೀಸಲು ಪಡೆ (DRG), ರಾಜ್ಯ ಪೊಲೀಸರ ಎರಡೂ ಘಟಕಗಳಾದ ವಿಶೇಷ ಕಾರ್ಯಪಡೆ (STF) ಸಿಬ್ಬಂದಿಯೊಂದಿಗೆ ನಡೆಸಲಾಗಿತ್ತು.

2008ರಲ್ಲಿ ಕೊಂಗುಪಲ್ಲಿ ಪೊಲೀಸ್ ಪೋಸ್ಟ್ ಮತ್ತು 2016ರಲ್ಲಿ ನುಕ್ನರ್ಪಾಲ್ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಬುಚಣ್ಣ ಪ್ರಮುಖ ಪಾತ್ರ ವಹಿಸಿದ್ದನು. ಆದರೆ ಪೊಲೀಸರು ತಕ್ಷಣ ಕ್ರಮಕೈಗೊಂಡು ಹೆಚ್ಚಿನ ಅಪಾಯವಾಗುವುದನ್ನು ತಪ್ಪಿಸಿದ್ದರು.