ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಆನ್‌ಲೈನ್‌ ಗೇಮ್‌ ಚಟ; 9 ನೇ ಮಹಡಿಯಿಂದ ಜಿಗಿದು ಮೂವರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್‌ ಆಡಬೇಡಿ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮೂವರು ಸಹೋದರಿಯರು ತಮ್ಮ ಅಪಾರ್ಟ್‌ಮೆಂಟ್ ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಅವರು ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು.

9 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮೂವರು ಸಹೋದರಿಯರು

ಸಂಗ್ರಹ ಚಿತ್ರ -

Vishakha Bhat
Vishakha Bhat Feb 4, 2026 10:30 AM

ಲಖನೌ: ಆನ್‌ಲೈನ್ ಗೇಮಿಂಗ್‌ ಆಡಬೇಡಿ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮೂವರು ಸಹೋದರಿಯರು ತಮ್ಮ ಅಪಾರ್ಟ್‌ಮೆಂಟ್ (Self Harming) ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಅವರು ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು ಮತ್ತು ಆನ್‌ಲೈನ್ ಟಾಸ್ಕ್ ಆಧಾರಿತ 'ಕೊರಿಯನ್ ಲವ್ ಗೇಮ್' ಆಡುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಹುಡುಗಿಯರು ನಿಯಮಿತವಾಗಿ ಶಾಲೆಗೆ ಹೋಗುತ್ತಿರಲಿಲ್ಲ. ಅವರ ಮೃತದೇಹಗಳು ಬಿ 1 ಟವರ್‌ನ ಫ್ಲಾಟ್ 907 ರ ಕೆಳಗೆ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸಹೋದರಿಯರೂ ಒಟ್ಟಿಗೆ ಇರುತ್ತಿದ್ದರು ಎಂದು ಹೇಳಲಾಗಿದೆ. ಸದ್ಯ ಮೂವರ ಬಳಿ ಇರುವ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

"ಫೆಬ್ರವರಿ 4 ರಂದು ಬೆಳಗಿನ ಜಾವ 2:15 ರ ಸುಮಾರಿಗೆ, ತಿಲಾ ಮಾಡ್ ಪೊಲೀಸ್ ಠಾಣೆ ಪ್ರದೇಶದ ಭಾರತ್ ಸಿಟಿಯ ಟವರ್ ಬಿ -1 ರ ಫ್ಲಾಟ್ ಸಂಖ್ಯೆ 907 ರ 9 ನೇ ಮಹಡಿಯ ಬಾಲ್ಕನಿಯಿಂದ ಮೂವರು ಹುಡುಗಿಯರು ಹಾರಿದ ಬಗ್ಗೆ ಪಿಆರ್‌ವಿ ಮಾಹಿತಿ ಪಡೆದುಕೊಂಡಿತು. ಘಟನೆಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದಾಗ, ಬಲಿಪಶುಗಳು ನಿಶಿಕಾ (ಸುಮಾರು 16 ವರ್ಷ), ಪ್ರಾಚಿ (ಸುಮಾರು 14 ವರ್ಷ) ಮತ್ತು ಪಾಖಿ (ಸುಮಾರು 12 ವರ್ಷ) ಎಂದು ತಿಳಿದುಬಂದಿದೆ. ಚೇತನ್ ಕುಮಾರ್ ಅವರ ಪುತ್ರಿಯರು ನೆಲ ಮಹಡಿಗೆ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದಾರೆ. ಅವರನ್ನು ಆಂಬ್ಯುಲೆನ್ಸ್ ಮೂಲಕ ಲೋನಿಯ 50-ಬೆಡ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಮೂವರೂ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ" ಎಂದು ಶಾಲಿಮಾರ್ ಗಾರ್ಡನ್‌ನ ಸಹಾಯಕ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಕ್ಕಳೊಂದಿಗೆ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಮನಬಿಚ್ಚಿ ಮಾತನಾಡಿ. ಅವರ ಆಸಕ್ತಿಗಳು, ಆನ್ಸೆನ್ ಸ್ನೇಹಿತರು ಮತ್ತು ಅವರ ಮನಸ್ಸಿನಲ್ಲಿರುವ ಆತಂಕಗಳ ಬಗ್ಗೆ ತಿಳಿದುಕೊಳ್ಳಿ.

ಹೊರಾಂಗಣ ಕ್ರೀಡೆಗಳಿಗೆ ಪ್ರೋತ್ಸಾಹ ಮಕ್ಕಳನ್ನು ಕೇವಲ ಮನೆಯೊಳಗೆ ಇರಿಸುವ ಬದಲು, ಹೊರಗೆ ಹೋಗಿ ಆಟವಾಡಲು ಅಥವಾ ಯಾವುದಾದರೂ ಹವ್ಯಾಸಗಳಲ್ಲಿ (ಸಂಗೀತ, ನೃತ್ಯ, ಚಿತ್ರಕಲೆ) ತೊಡಗಿಸಿಕೊಳ್ಳಲು ಪ್ರೇರೇಪಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.