Crime news: ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವತಿ, ಮರ್ಯಾದೆಗೇಡು ಹತ್ಯೆ ಶಂಕೆ
ಯುವತಿ ಹಾಗೂ ಆಕೆಯ ತಂದೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಕೆರೆಗೆ ಉರುಳಿದೆ. ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದಾರೆ. ಆದರೆ ಮಗಳು ಸಹನಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಅವರು ಹೆಬ್ಬಗೋಡಿ ಪೊಲೀಸ್ ಠಾಣೆಗೆ ಹಾಜರಾಗಿ ತಿಳಿಸಿದ್ದಾರೆ. ಆದರೆ, ಆಕೆಯ ಪ್ರಿಯಕರ ನಿತಿನ್ ಇದೊಂದು ಮರ್ಯಾದಾ ಹತ್ಯೆ ಎಂದು ಆರೋಪಿಸಿದ್ದಾರೆ.
![ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವತಿ, ಮರ್ಯಾದೆಗೇಡು ಹತ್ಯೆ ಶಂಕೆ](https://cdn-vishwavani-prod.hindverse.com/media/original_images/honor_killing_case_anekal.jpg)
ಮೃತ ಯುವತಿ ಸಹನಾ
![ಹರೀಶ್ ಕೇರ](https://cdn-vishwavani-prod.hindverse.com/media/images/Harish_Kerargylr_YyRvY8Q.2e16d0ba.fill-100x100.jpg)
ಆನೆಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal news) ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೊಬ್ಬಳು (Girl death) ಕೆರೆಯಲ್ಲಿ ಮುಳುಗಿ (Drowning) ಸಾವನ್ನಪ್ಪಿದ್ದಾಳೆ. ಆದರೆ ಇದು ಮರ್ಯಾದೆಗೇಡು ಹತ್ಯೆ (Honor killing) ಎಂದು ಆರೋಪ (Crime news) ಮಾಡಲಾಗಿದೆ.
ಯುವತಿ ಹಾಗೂ ಆಕೆಯ ತಂದೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಕೆರೆಗೆ ಉರುಳಿದೆ. ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದಾರೆ. ಆದರೆ ಮಗಳು ಸಹನಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಅವರು ಹೆಬ್ಬಗೋಡಿ ಪೊಲೀಸ್ ಠಾಣೆಗೆ ಹಾಜರಾಗಿ ತಿಳಿಸಿದ್ದಾರೆ. ಆದರೆ, ಆಕೆಯ ಪ್ರಿಯಕರ ನಿತಿನ್ ಇದೊಂದು ಮರ್ಯಾದಾ ಹತ್ಯೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಒಂದು ವರ್ಷದಿಂದ ನಿತಿನ್ ಮತ್ತು 21 ವರ್ಷದ ಸಹನಾ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ದಿನದ ಹಿಂದೆ ಪೋಷಕರಿಗೆ ಮಗಳ ಪ್ರೀತಿಯ ವಿಚಾರ ಗೊತ್ತಾಗಿದೆ. ಅಂದು ರಾತ್ರಿ ಪ್ರಿಯಕರ ನಿತಿನ್ಗೆ ಕರೆ ಮಾಡಿದ್ದ ಸಹನಾ ತಂದೆ, ಬೆಳಗ್ಗೆ ಮಾತುಕತೆಗೆ ಬರುವಂತೆ ತಿಳಿಸಿದ್ದಾರೆ. ಸಹನಾ ತಂದೆ ಸ್ನೇಹಿತನ ಮನೆಯಲ್ಲಿ ನ್ಯಾಯ ಪಂಚಾಯಿತಿ ನಡೆದಿದೆ. ಈ ವೇಳೆ ಪುತ್ರಿ ಮೇಲೆ ರಾಮಮೂರ್ತಿ ಹಲ್ಲೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಈ ಪ್ರೀತಿಗೆ ಒಪ್ಪುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ನಿತಿನ್ ತಾಯಿ ಮನವಿ ಮಾಡಿದರೂ ಯುವತಿಯ ತಂದೆ ಮದುವೆಗೆ ಒಪ್ಪಿಲ್ಲ. ಅಂತಿಮವಾಗಿ ಎರಡು ದಿನ ಸಮಯ ಕೇಳಿದ್ದಾರೆ. ನಿನ್ನೆ ಮಗಳನ್ನು ರಾಮಮೂರ್ತಿ ಬೈಕ್ ನಲ್ಲಿ ಕರೆದೊಯ್ದಿದ್ದು, ಮಾರ್ಗಮಧ್ಯೆ ಪುತ್ರಿ ಸಹನಾರನ್ನು ರಾಮಮೂರ್ತಿ ಕೆರೆಗೆ ತಳ್ಳಿದ್ದಾರೆ ಎಂಬ ಆರೋಪಿಸಲಾಗಿದೆ.
ದೂರಿನ ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸದ್ಯ ಯುವತಿ ಆಕಸ್ಮಿಕವಾಗಿ ಕೆರೆಗೆ ಬಿದ್ದರೇ ಅಥವಾ ಅಪ್ಪನೇ ಕೆರೆಗೆ ತಳ್ಳಿದರೇ ಎಂಬ ಅನುಮಾನ ಕಾಡುತ್ತಿದೆ. ನಿತಿನ್ನನ್ನೇ ಮದುವೆಯಾಗುವುದಾಗಿ ಯುವತಿ ಹಠ ಹಿಡಿದಿದ್ದಳು. ಆದರೆ, ಪೋಷಕರು ಅಕ್ಕನ ಮಗನ ಜೊತೆ ವಿವಾಹಕ್ಕೆ ಮುಂದಾಗಿದ್ದರು. ಇದೇ ವಿಚಾರಕ್ಕೆ ಅಪ್ಪ ಮಗಳ ನಡುವೆ ಜೋರು ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Bhagappa Harijan Murder: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ