ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Love Jihad: ಉಡುಪಿಯಲ್ಲಿ ಯುವಕನಿಂದ ಯುವತಿಯ ಅಪಹರಣ, ಲವ್‌ ಜಿಹಾದ್‌ ದೂರು

ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ.

ಉಡುಪಿಯಲ್ಲಿ ಯುವಕನಿಂದ ಯುವತಿಯ ಅಪಹರಣ, ಲವ್‌ ಜಿಹಾದ್‌ ದೂರು

ವಿದ್ಯಾರ್ಥಿನಿ, ಆರೋಪಿ ಮೊಹಮ್ಮದ್‌ ಅಕ್ರಂ

ಹರೀಶ್‌ ಕೇರ ಹರೀಶ್‌ ಕೇರ Mar 29, 2025 7:07 AM

ಉಡುಪಿ: ಜಿಲ್ಲೆಯಲ್ಲಿ (Udupi news) ಲವ್‌ ಜಿಹಾದ್‌ (Love jihad) ಆರೋಪವೊಂದು ದಾಖಲಾಗಿದೆ. ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕ ಕರೆದೊಯ್ದಿದ್ದು, ಮದುವೆಯಾಗಲು (marriage) ನೋಂದಣಿ ಮಾಡಿಸಿದ್ದಾನೆ. ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಯುವತಿಯನ್ನು ಅಪಹರಿಸಿ (kidnap) ಬಲವಂತವಾಗಿ ಮದುವೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ, ಇದು ಲವ್‌ ಜಿಹಾದ್‌ ಆಗಿದೆ ಎಂದು ದೂರಿದ್ದಾರೆ. ಆರೋಪಿ ಮೊಹಮ್ಮದ್ ಅಕ್ರಮ್ ಈ ಹಿಂದೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಇದೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ. ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ ಮೊಹಮ್ಮದ್ ಅಕ್ರಮ್ ಉಡುಪಿ ಉಪ ನೋಂದಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದು, ಕಾಲೇಜಿನಿಂದ ವಾಪಸು ಮನೆಗೆ ತೆರಳುವಾಗ ಅಪಹರಿಸಲಾಗಿದೆ ಎನ್ನಲಾಗಿದೆ. ಗಾಡ್ವಿನ್ ದೇವದಾಸ್ ಈ ಹಿಂದೆ ಅಕ್ರಮ್ ಮೊಹಮ್ಮದ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ಸೇಡು ತೀರಿಸಿಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದಾಖಲಿಸಿದ್ದಾರೆ.

“ನಮ್ಮ ಮಗಳು ಜೀನಾಳನ್ನು ಅಕ್ರಮ್ ಅಪಹರಿಸಿದ್ದಾನೆ. ಅಪ್ರಾಪ್ತೆಯಾಗಿದ್ದಾಗಲೇ ನಮ್ಮ ಮಗಳಿಗೆ ಅಕ್ರಂ ಕಿರುಕುಳ ನೀಡಿದ್ದ. ಐದು ವರ್ಷದ ಹಿಂದೆ ಪೋಕ್ಸೋ ಕೇಸು ದಾಖಲು ಮಾಡಿದ್ದೆವು. ಲೈಂಗಿಕ ಕಿರುಕುಳ ನೀಡಿಲ್ಲ ಎಂಬ ಕಾರಣಕ್ಕೆ ಕೇಸು ವಜಾಗೊಂಡಿತ್ತು. ಇದೀಗ, ಸೇಡು ತೀರಿಸಲು ಅಪಹರಿಸಿದ್ದಾನೆ” ಎಂದು ಪೋಷಕರಾದ ಮೇರುಸ್ ಪುಷ್ಪಲತಾ ಮತ್ತು ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.

“ನಮ್ಮ ಮಗಳಿಗೆ ಅಕ್ರಮ್ ಮೊಹಮ್ಮದ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ನಿರಂತರ ಸಂಪರ್ಕದಲ್ಲಿದ್ದಾರೆ. ನಮ್ಮ ಮಗಳನ್ನು ಪುಸಲಾಯಿಸಿ ಅಶ್ಲೀಲ ಫೋಟೋ ವಿಡಿಯೋ ತೆಗೆದಿದ್ದಾನೆ. ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ನಮಗೆ ಧಮ್ಕಿ ಹಾಕಿದ್ದಾನೆ. ಒಮ್ಮೆ ನಮ್ಮ ಮಗಳನ್ನು ತಂದು ನಮ್ಮ ಮುಂದೆ ನಿಲ್ಲಿಸಿ. ಆರೋಪಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಮೊಹಮ್ಮದ್ ಅಕ್ರಂ ಗರುಡ ಗ್ಯಾಂಗ್​ನ ಸದಸ್ಯ ಎಂಬ ಮಾಹಿತಿ ಇದೆ. ಪೊಲೀಸರ ಬಳಿ ಹೋದರೆ, ಇಬ್ಬರೂ ವಯಸ್ಕರು, ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎನ್ನುತ್ತಾರೆ. ಇಬ್ಬರು ಜೊತೆಗೆ ಸುರಕ್ಷಿತವಾಗಿದ್ದಾರೆ ಎಂದು ವಿಡಿಯೋ ತೋರಿಸಿ ಪೊಲೀಸರು ನಮ್ಮನ್ನು ವಾಪಸ್ ಕಳುಹಿಸಿದ್ದಾರೆ. ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ದೂರಿದ್ದಾರೆ.

“ಅಕ್ರಂ ಡ್ರಗ್ಸ್ ವ್ಯಸನಿ, ಆತನಿಗೆ ಯಾವುದೇ ಉದ್ಯೋಗವಿಲ್ಲ. ನಾವು ಮಗಳನ್ನು ಕಳುಹಿಸುವುದಿಲ್ಲ. ಮುಸ್ಲಿಮರು ಎಲ್ಲರೂ ಕೆಟ್ಟವರೆಂದು ಹೇಳುವುದಿಲ್ಲ. ಯುಗಾದಿ ಹಬ್ಬದ ಸಂದರ್ಭದಲ್ಲಿ ಹೀಗೆ ಮಾಡಬಹುದಾ? ಸಭ್ಯ ಹುಡುಗನಾಗಿದ್ದರೆ ನಮ್ಮದು ಯಾವುದೇ ತಕರಾರು ಇರಲಿಲ್ಲ. ಕಳೆದ ಐದು ವರ್ಷಗಳಿಂದ ಮಗಳಿಗೆ ನಿರಂತರವಾಗಿ ಕಿರುಕುಳ ನೀಡಿದ್ದಾನೆ. ಗೆಳೆಯರ ಜೊತೆ ಬೆರೆಯದಂತೆ ಮೊಹಮ್ಮದ್​ ಅಕ್ರಂ ಒತ್ತಡ ಹೇರುತ್ತಿದ್ದ” ಎಂದಿದ್ದಾರೆ.

ಇದನ್ನೂ ಓದಿ: Pramod Muthalik: ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಹೋರಾಟ: ಪ್ರಮೋದ್ ಮುತಾಲಿಕ್