ಕೊಪ್ಪಳ: ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನವಾಗಿರುವ ಘಟನೆ ಕೊಪ್ಪಳದಲ್ಲಿ (Gold Robbery) ನಡೆದಿದೆ. ನಾಲ್ಕು ಜನ ಖದೀಮರ ಗ್ಯಾಂಗ್ ಪಕ್ಕಾ ಪ್ಲ್ಯಾನ್ ಮಾಡಿ 90 ಲಕ್ಷ ಮೌಲ್ಯದ ಚಿನ್ನವನ್ನು ಎಗರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪಳ ಜಿಲ್ಲೆಯ ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹಮ್ಮದ್, ಇರ್ಷಾದ್ ಚಿನ್ನ ಇರುವ ಬ್ಯಾಗ್ನೊಂದಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.
ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಮಹಮ್ಮದ್, ಇರ್ಷಾದ್ ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಬಸ್ಅನ್ನು ಊಟಕ್ಕೆಂದು ತವ ಪಂಜಾಬ್ ಹೊಟೇಲ್ ಮುಂಭಾಗದಲ್ಲಿ ನಿಲ್ಲಿಸಿದ್ದರು. ಈ ವೇಳೆ ಬಸ್ನಲ್ಲಿದ್ದ ಚಿನ್ನಾಭರಣವಿದ್ದ ಬ್ಯಾಗ್ ರಾಬರಿಯಾಗಿದೆ. ನಾಲ್ಕು ಜನರ ಖದೀಮರ ಗ್ಯಾಂಗ್ ಚಿನ್ನಾಭರಣವಿದ್ದ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾರೆ. ರಾಬರಿಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್ನಲ್ಲಿಯೇ ಆರೋಪಿ ಇದ್ದ. ಇನ್ನು ಮೂರು ಜನ ಬಸ್ಅನ್ನು ಫಾಲೋ ಮಾಡಿಕೊಂಡು ಬಂದಿದ್ದರು ಎಂದು ತಿಳಿದು ಬಂದಿದೆ.
ರಸ್ತೆ ಬದಿಯಲ್ಲಿರುವ ತವ ಪಂಜಾಬ್ ಹೋಟೆಲ್ನಿದ್ದ ಸಿಸಿಟಿವಿ ಕ್ಯಾಮರದಲ್ಲಿ ಗೋಲ್ಡ್ ರಾಬರಿಯ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಆರೋಪಿಗಳು ಬಸ್ಗೆ ಹತ್ತಿ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಕದ್ದು ಹೋಗಿದ್ದಾರೆ. ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ.
ಕಳೆದ ತಿಂಗಳು ಬೆಂಗಳೂರು– ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಮಾಡಲಾಗಿತ್ತು. ಇ-ಕಾಮರ್ಸ್ ಸಂಸ್ಥೆಗೆ ಸೇರಿದ ವಸ್ತುಗಳು ರಾಬರಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ರಾಣೇಬೆನ್ನೂರು (Ranebennuru) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮಾರ್ಗ ಮಧ್ಯದಲ್ಲಿ ಚಲಿಸುತ್ತಿದ್ದ ಟ್ರಕ್ನಿಂದಲೇ ಫ್ಲಿಪ್ಕಾರ್ಟ್ ಕಂಪನಿ ಸ್ವತ್ತುಗಳ ರಾಬರಿಯಾಗಿರುವ ಘಟನೆ ನಡೆದಿದೆ. ಸುಮಾರು 24 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆಕೋರರು ಕದ್ದು ಪರಾರಿಯಾಗಿದ್ದಾರೆ .
ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ; 400 ಕೋಟಿ ರಾಬರಿ!
ಮಲಿಕಜಾನ್ ಮುಲ್ಲಾ ಎಂಬುವವರಿಗೆ ಸೇರಿದ್ದ ಟ್ರಕ್ನಲ್ಲಿ ದರೋಡೆ ನಡೆದಿದೆ. ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆದ್ದಾರಿ ಸಿಸಿಟಿವಿ ಆಧಾರಿಸಿ ಪೊಲೀಸರು ತನಿಖೆ ಶುರುಮಾಡಿದ್ದಾರೆ.