ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌; ಮುಖ್ಯೋಪಾಧ್ಯಾಯ ಸೇರಿ ಮೂವರು ಶಿಕ್ಷಕರು ಅಮಾನತು

Delhi News: ದೆಹಲಿಯ ಸೇಂಟ್ ಕೊಲಂಬಾ ಶಾಲೆಯ 16 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಶಾಲೆಯ ಮುಖ್ಯೋಪಾಧ್ಯ ಮತ್ತು ಮೂವರು ಶಿಕ್ಷಕರನ್ನು ಅಮಾನತುಗೊಳಸಲಾಗಿದೆ.

ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌; ಮೂವರು ಶಿಕ್ಷಕರ ಅಮಾನತು

ಸಂಗ್ರಹ ಚಿತ್ರ -

Vishakha Bhat
Vishakha Bhat Nov 21, 2025 9:06 AM

ದೆಹಲಿಯ ಸೇಂಟ್ ಕೊಲಂಬಾ ಶಾಲೆಯ 16 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ಮೆಟ್ರೋ ನಿಲ್ದಾಣದ (Delhi Metro) ಪ್ಲಾಟ್‌ಫಾರ್ಮ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಶಾಲೆಯ ಮುಖ್ಯೋಪಾಧ್ಯ ಮತ್ತು ಮೂವರು ಶಿಕ್ಷಕರನ್ನು (Suspended) ಅಮಾನತುಗೊಳಸಲಾಗಿದೆ. 16 ವರ್ಷದ ಶೌರ್ಯ ಪಾಟೀಲ್ ಮಂಗಳವಾರ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ಶಾಲೆಯಲ್ಲಿ ಶಿಕ್ಷಕರಿಂದ ಕಿರುಕುಳ ಉಂಟಾಗುತ್ತಿದೆ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದ. ಈ ಬಳಿಕ ಶಾಲಾ ಆಡಳಿತ ಮಂಡಳಿ ಶಿಕ್ಷಕರನ್ನು ಅಮಾನತುಗೊಳಿಸಿದೆ.

ಮೃತ ಬಾಲಕ ತಂದೆ-ತಾಯಿಯನ್ನುದ್ದೇಶಿಸಿ ಬರೆದ ಪತ್ರದಲ್ಲಿ, " ಅಮ್ಮ, ಕ್ಷಮಿಸಿ , ನಾನು ನಿಮ್ಮ ಹೃದಯವನ್ನು ಹಲವು ಬಾರಿ ಮುರಿದಿದ್ದೇನೆ ಮತ್ತು ನಾನು ಕೊನೆಯ ಬಾರಿಗೆ ಅದನ್ನು ಮಾಡುತ್ತಿದ್ದೇನೆ. ಶಾಲೆಯಲ್ಲಿ ಶಿಕ್ಷಕರು ಹೀಗೇ ಇದ್ದಾರೆ, ನಾನು ಏನು ಹೇಳಲಿ?). ಎಂದು ತನಗಾಗುತ್ತಿರುವ ಕಿರುಕುಳದ ಬಗ್ಗೆ ಹೇಳಿದ್ದಾನೆ. ಘಟನೆ ನಡೆದ ಎರಡು ದಿನಗಳ ನಂತರ, ಶಾಲಾ ಅಧಿಕಾರಿಗಳು ಮುಖ್ಯೋಪಾಧ್ಯಾಯರು ಮತ್ತು ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದಾರೆ, ಅವರನ್ನು ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಆಧಾರದಲ್ಲಿ ಪ್ರಥಮ ಮಾಹಿತಿ ವರದಿಯಲ್ಲಿ ಹೆಸರಿಸಲಾಗಿದೆ.

Self Harming: ಯುವ ವೈದ್ಯೆ ಆತ್ಮಹತ್ಯೆ, ಅಂಗೈಯ ಡೆತ್‌ನೋಟ್‌ನಲ್ಲಿತ್ತು ಆತ್ಮಹತ್ಯೆಯ ರಹಸ್ಯ

ಬಾಲಕನ ತಂದೆ ಪ್ರದೀಪ್ ಪಾಟೀಲ್, ಶಾಲೆಯ 5 ರಿಂದ 10 ನೇ ತರಗತಿಯ ಮುಖ್ಯೋಪಾಧ್ಯಾಯರಾದ ಅಪರಾಜಿತಾ ಪಾಲ್ ಮತ್ತು ಶಿಕ್ಷಕಿಯರಾದ ಜೂಲಿ ವರ್ಗೀಸ್, ಮನು ಕಲ್ರಾ ಮತ್ತು ಯುಕ್ತಿ ಅಗರ್ವಾಲ್ ಮಹಾಜನ್ ಅವರ ವಿರುದ್ಧ ದೂರನ್ನು ಸಲ್ಲಿಸಿ, ತಮ್ಮ ಮಗನಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮುಂದಿನ ಸೂಚನೆ ಬರುವವರೆಗೂ ಅಮಾನತು ಜಾರಿಯಲ್ಲಿರುತ್ತದೆ ಎಂದು ಶಾಲೆಯ ಪ್ರಾಂಶುಪಾಲ ರಾಬರ್ಟ್ ಫೆರ್ನಾಂಡಿಸ್ ಬರೆದಿರುವ ಪತ್ರಗಳಲ್ಲಿ ತಿಳಿಸಲಾಗಿದೆ. ಯಾವುದೇ ತನಿಖೆಗೆ ಲಭ್ಯವಿರುವಂತೆ ಮತ್ತು ಅನುಮತಿಯಿಲ್ಲದೆ ಶಾಲೆಗೆ ಭೇಟಿ ನೀಡುವಂತಿಲ್ಲ ಅಥವಾ ವಿದ್ಯಾರ್ಥಿಗಳು, ಸಿಬ್ಬಂದಿ ಅಥವಾ ಪೋಷಕರೊಂದಿಗೆ ಮಾತನಾಡುವಂತಿಲ್ಲ ಎಂದು ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರನ್ನು ಕೇಳಿಕೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ ಶೌರ್ಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪ್ರದೀಪ್ ಮುಖ್ಯೋಪಾಧ್ಯಾಯರು ಮತ್ತು ಮೂವರು ಶಿಕ್ಷಕರು ಸಣ್ಣಪುಟ್ಟ ವಿಷಯಗಳಿಗೂ ತನ್ನನ್ನು ಗದರಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆತ ಉಲ್ಲೇಖಿಸಿದ್ದ.