ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Yadgir News: ಯಾದಗಿರಿ ಜಿಲ್ಲೆಯ ಸುರಪುರ ನಗರದ ಡೋಣಿಗೇರಾದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಪತಿ, ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ತವರು ಮನೆಯಿಂದ ಬರಲು ಒಪ್ಪದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಕೊಲೆಗೈದ ಪತಿ!

-

Prabhakara R Prabhakara R Oct 6, 2025 4:39 PM

ಯಾದಗಿರಿ: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಂದಿರುವ ಘಟನೆ ಜಿಲ್ಲೆಯ ಸುರಪುರ ನಗರದ ಡೋಣಿಗೇರಾದಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಪತಿ, ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಹತ್ಯೆಗೀಡಾದ ಮಹಿಳೆಯನ್ನು ಮರಿಯಮ್ಮ (35) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಸಂಗಪ್ಪ (40) ಸುರಪುರ ತಾಲೂಕಿನ ಕಕ್ಕೇರಿ ಗ್ರಾಮದ ನಿವಾಸಿಯಾಗಿದ್ದಾನೆ. ಈತ ಮತ್ತು ಪತ್ನಿ ಮರಿಯಮ್ಮ ಮಧ್ಯೆ ವೈಮನಸ್ಸು ಶುರುವಾಗಿತ್ತು.ಹೀಗಾಗಿ ಮರಿಯಮ್ಮ ತನ್ನ ಗಂಡನೊಂದಿಗೆ ಹೊಂದಾಣಿಕೆ ಆಗುತ್ತಿಲ್ಲ ಎಂದು ತವರು ಮನೆ ಸೇರಿದ್ದಳು.

ಶನಿವಾರ ತಡರಾತ್ರಿ ಸಂಗಪ್ಪ ತನ್ನ ಪತ್ನಿಯನ್ನು ಮನೆಗೆ ಕರೆಯಲು ಡೋಣಿಗೇರಾದ ಆಕೆಯ ಮನೆಗೆ ಹೋಗಿದ್ದ. ಆದರೆ, ಮರಿಯಮ್ಮ ಗಂಡನ ಮನೆಗೆ ಬರಲು ನಿರಾಕರಿಸಿ, ವಾದ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸಂಗಪ್ಪ, ಗಂಡನ ಮಾತಿಗೆ ಮರ್ಯಾದೆ ಕೊಡಲ್ವಾ. ಮನೆಗೆ ಬಂದಿಲ್ಲ ಎಂದರೆ ಬದುಕಿರಲೇ ಬೇಡ ಎಂದು ಮನೆಯಲ್ಲಿದ್ದ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ತಲೆಗೆ ಗಂಭೀರ ಗಾಯವಾಗಿ, ಮರಿಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆ ನಂತರ ಸಂಗಪ್ಪ, ಸುರಪುರ ಪೊಲೀಸ್ ಠಾಣೆಗೆ ಹೋಗಿ, ತನ್ನ ಪತ್ನಿಯನ್ನು ಕೊಂದಿದ್ದೇನೆ ಎಂದ ಹೇಳಿ ಶರಣಾಗಿದ್ದಾನೆ.

ಮದುವೆಯಾಗುವುದಾಗಿ ವಂಚನೆ, 2.3 ಕೋಟಿ ರೂಪಾಯಿ ಕಳೆದುಕೊಂಡ ಶಿಕ್ಷಕಿ

ಬೆಂಗಳೂರು : ಬೆಂಗಳೂರು (bengaluru) ಮೂಲದ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಮ್ಯಾಟ್ರಿಮೊನಿಯಲ್ಲಿ (Matrimony) ಸಿಕ್ಕ ವ್ಯಕ್ತಿಯ ಮಾತಿಗೆ ಮರುಳಾಗಿ 2.3 ಕೋಟಿ ರೂಪಾಯಿ ಹಣ ಕಳೆದುಕೊಂಡಿರುವ (fraud case) ಘಟನೆ ನಡೆದಿದೆ. ಗಂಡನ ಮರಣದ ನಂತರ ಮರುಮದುವೆಯಾಗಲು ನಿರ್ಧರಿಸಿದ್ದ ಶಿಕ್ಷಕಿ, ಮ್ಯಾಟ್ರಿಮೊನಿ ಸೈಟ್‌ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯ ಮಾತುಗಳಿಗೆ ಮರುಳಾಗಿ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಪೊಲೀಸರು ಪ್ರಕರಣ (Cyber crime) ದಾಖಲಿಸಿಕೊಂಡು ಕಳೆದುಕೊಂಡ ಹಣವನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ.

59 ವರ್ಷದ ಶಾಲಾ ಶಿಕ್ಷಕಿಯ ಪತಿ ನಿಧನರಾಗಿದ್ದು, ಅವರ ಮಗ ಪ್ರತ್ಯೇಕವಾಗಿ ವಾಸಿಸುತ್ತಿದ್ದ. ಹೀಗಾಗಿ ಆಕೆ ಮರುಮದುವೆಯಾಗಲು ನಿರ್ಧರಿಸಿದ್ದರು. 2019ರಲ್ಲಿ ವೈವಾಹಿಕ ವೆಬ್ಸೈಟ್‌ನಲ್ಲಿ ಖಾತೆ ಸೃಷ್ಟಿಸಿಕೊಂಡಿದ್ದರು. ಡಿಸೆಂಬರ್ 2019ರಲ್ಲಿ ಅಹಾನ್ ಕುಮಾರ್ ಎಂಬ ಪ್ರೊಫೈಲ್ ನೇಮ್‌ನ ವ್ಯಕ್ತಿಯೊಬ್ಬ ಅವರನ್ನು ಸಂಪರ್ಕಿಸಿದ್ದ. ಆಕೆ ಅವನೊಂದಿಗೆ ಚಾಟ್ ಮಾಡಲು ಪ್ರಾರಂಭಿಸಿದ್ದರು.

ಅಹಾನ್‌ ಕುಮಾರ್ ತಾನು ಭಾರತೀಯ ಮೂಲದ ವ್ಯಕ್ತಿ, ಅಮೆರಿಕದ ಅಟ್ಲಾಂಟಾದಲ್ಲಿ ವಾಸಿಸುತ್ತಿದ್ದೇನೆ. ಕಪ್ಪು ಸಮುದ್ರದಲ್ಲಿ ಕೆಲಸ ಮಾಡುತ್ತಿರುವ ಇಸ್ರೇಲಿ ತೈಲ ಕಂಪನಿಯ ಡ್ರಿಲ್ಲಿಂಗ್ ಎಂಜಿನಿಯರ್ ಎಂದು ಪರಿಚಯಿಸಿಕೊಂಡಿದ್ದ. ಶಿಕ್ಷಕಿಗೆ ತನ್ನ ಕಂಪನಿಯ ಐಡಿಯನ್ನು ಸಹ ಕಳುಹಿಸಿದ್ದ. ಆದರೆ ಅದರಲ್ಲಿ ಫೋಟೋ ಇರಲಿಲ್ಲ. ಕೆಲವೇ ದಿನಗಳಲ್ಲಿ ಇಬ್ಬರೂ ಸ್ನೇಹಿತರಾಗಿದ್ದರು. ಕುಮಾರ್ ಅವರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ.

ಇದನ್ನೂ ಓದಿ: Rajendra Singh Babu: ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.37 ಲಕ್ಷ ವಂಚನೆ; ಡಬ್ಬಿಂಗ್‌ ನೆಪದಲ್ಲಿ ಖಾತೆಯಿಂದ ಹಣ ದೋಚಿದ ಸೈಬರ್‌ ಕಳ್ಳರು

ಆಕೆಗೆ ಕರೆ ಮಾಡಿ, ಭಾರತಕ್ಕೆ ಬಂದು ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಜನವರಿ 2020ರಲ್ಲಿ ಕುಮಾರ್ ಮಹಿಳೆಯನ್ನು ಆರ್ಥಿಕ ಸಹಾಯಕ್ಕಾಗಿ ಕೇಳಿದ್ದ. ಆಹಾರ ಖರೀದಿಸಲು ತನ್ನ ಬಳಿ ಸಾಕಷ್ಟು ಹಣವಿಲ್ಲ ಎಂದಿದ್ದ. ಶಿಕ್ಷಕಿ ಆತನನ್ನು ನಂಬಿ ಆರ್ಥಿಕ ಸಹಾಯ ಮಾಡಲು ಒಪ್ಪಿಕೊಂಡಿದ್ದರು. ಹಣವನ್ನು ಮಾಧವಿ ಎಂಬ ಮಹಿಳೆಯ ಖಾತೆಗೆ ಜಮಾ ಮಾಡಿದ್ದರು.

ನಂತರ ಆತ ವಾಟ್ಸಾಪ್ ಕರೆಗಳ ಮೂಲಕ ಪದೇ ಪದೆ ಸಮಸ್ಯೆಗಳನ್ನು ಹೇಳಿಕೊಂಡು ಶಿಕ್ಷಕಿಯಿಂದ ಸಾಕಷ್ಟು ಹಣವನ್ನು ಸುಲಿಗೆ ಮಾಡಿದ್ದ. ಒಟ್ಟಾರೆಯಾಗಿ ಮಹಿಳೆ ಆತನಿಗೆ ತನ್ನ ಎರಡು ಬ್ಯಾಂಕ್ ಖಾತೆಗಳ ಮೂಲಕ ₹2.3 ಕೋಟಿ ನೀಡಿದ್ದರು. ನಂತರ ಅನುಮಾನ ಬಂದು, ಹಣವನ್ನು ಹಿಂದಿರುಗಿಸಲು ಅವನಲ್ಲಿ ಆಗ್ರಹಿಸಿದ್ದಳು. ಕಳೆದ ವರ್ಷದ ನವೆಂಬಋನಲ್ಲಿಯೂ ಆತ ಇನ್ನೂ 3.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಮಹಿಳೆ ನಿರಾಕರಿಸಿದ್ದಳು. ಇದಾದ ಬಳಿಕ ಅವನು ಅವಳಿಂದ ದೂರವಾಗಲು ಪ್ರಾರಂಭಿಸಿದ್ದ. ಕೊಟ್ಟ ಹಣ ವಾಪಾಸ್ ಬರದ ಕಾರಣ ಮಹಿಳೆ ಠಾಣೆಯ ಮೆಟ್ಟಿಲೇರಿದ್ದಾರೆ. ಪೊಲೀಸ್ ಅಧಿಕಾರಿಗಳು ಐಟಿ ಆ್ಯಕ್ಟ್ ಅಡಿಗೆ ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.