ಹೈದರಾಬಾದ್: ಪಾಪಿ ಪತಿಯೊಬ್ಬ ಮಕ್ಕಳ ಎದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಹೈದರಾಬಾದ್ನ ನಲ್ಲಕುಂಟಾದಲ್ಲಿ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ವಿಷಯಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳವಾಗುತ್ತಿತ್ತು. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿ, ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅವರ ಮಗಳು ತನ್ನ ತಾಯಿಯನ್ನು ಉಳಿಸಲು ಪ್ರಯತ್ನಿಸಿದಾಗ, ಆಕೆಯನ್ನೂ ಬೆಂಕಿಗೆ ತಳ್ಳಿ ಮನೆಯಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಅವರ ಕಿರುಚಾಟ ಕೇಳಿ ನೆರೆಹೊರೆಯವರು ಅವರ ಮನೆಗೆ ಧಾವಿಸಿದರು. ಆ ಹೊತ್ತಿಗೆ, ತೀವ್ರವಾದ ಸುಟ್ಟ ಗಾಯಗಳಿಂದ ತ್ರಿವೇಣಿ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ಕೂದಲೆಳೆಯ ಅಂತರದಲ್ಲಿ ಪಾರಾದ ಅವರ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ವೆಂಕಟೇಶ್ ತನ್ನ ಹೆಂಡತಿಯ ಬಗ್ಗೆ ಅನುಮಾನ ಬೆಳೆಸಿಕೊಂಡು ಆಗಾಗ್ಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿರಂತರ ಕಿರುಕುಳ ಸಹಿಸಲಾಗದೆ ತ್ರಿವೇಣಿ ಇತ್ತೀಚೆಗೆ ತನ್ನ ಹೆತ್ತವರ ಮನೆಗೆ ಹೋಗಿದ್ದಳು. ತ್ರಿವೇಣಿ ತನ್ನ ಬಳಿಗೆ ಹಿಂತಿರುಗಿದ ನಂತರ, ವೆಂಕಟೇಶ್ ತಾನು ಬದಲಾಗುತ್ತೇನೆ ಎಂದು ಅವಳನ್ನು ಮನವೊಲಿಸಿದ್ದ. ಆದರೆ ಆಕೆ ಮನೆಗೆ ಬಂದ ಕೂಡಲೇ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದ್ದ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ವೆಂಕಟೇಶ್ ನನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸದ್ಯ ಗಾಯಗೊಂಡಿರುವ ಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ
ನವವಿವಾಹಿತ ಮಹಿಳೆಯೊಬ್ಬರು ಹನಿಮೂನ್ ಮೊಟಕುಗೊಳಿಸಿ ಮನೆಗೆ ವಾಪಸ್ ಆಗಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹನಿಮೂನ್ ಗೆ ಹೋಗಿದ್ದ 26 ವರ್ಷದ ಮಹಿಳೆಯೊಬ್ಬರು ದಿಢೀರ್ ಮನೆಗೆ ವಾಪಸ್ ಆಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್ನಲ್ಲಿ ನಡೆದಿದೆ. ಕಳೆದ ಅಕ್ಟೋಬರ್ 29ರಂದು ಲಿಖಿತ್ ಎಂಬಾತನ ಜೊತೆ ಯುವತಿ ಮದುವೆ ಆಗಿತ್ತು, ಮದುವೆಯಾಗಿ ಬಹುತೇಕ ಒಂದು ತಿಂಗಳ ನಂತರ ಗಂಡನ ಮನೆಯವರ ಬೇಡಿಕೆಯಂತೆ ಸುಮಾರು 40 ಲಕ್ಷ ಖರ್ಚು ಮಾಡಿ ನವೆಂಬರ್ 23 ರಂದು ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ಮಾಡಿದ್ದರು.