Kerala Horror: ವರದಕ್ಷಿಣೆ ಕಿರುಕುಳ-ವೈವಾಹಿಕ ದೌರ್ಜನ್ಯ; ಯುವತಿ ಆತ್ಮಹತ್ಯೆ!

ವರದಕ್ಷಿಣೆ ಕಿರುಕುಳ ಮತ್ತು ವೈವಾಹಿಕ ದೌರ್ಜನಕ್ಕೆ ಒಳಗಾಗಿದ್ದ ಕೇರಳ ಮೂಲದ ಯುವತಿಯೊಬ್ಬರು ಮಾನಸಿಕವಾಗಿ ನೊಂದು ಗುರುವಾರ(ಜ.30) ಆತ್ಮಹತ್ಯೆಗೆ(Self Harming) ಶರಣಾಗಿದ್ದಾರೆ. ಮಲಪ್ಪುರಂನ ಎಲಂಕೂರಿನಲ್ಲಿ ಈ ದಾರುಣ ಘಟನೆ ನಡೆದಿದೆ. ವಿಷ್ಣುಜಾ 2023ರ ಮೇ ತಿಂಗಳಿನಲ್ಲಿ ಏಲಂಕೂರಿನ ನಿವಾಸಿ ಪ್ರಭಿನ್ ಅವರನ್ನು ವಿವಾಹವಾಗಿದ್ದರು. ಆತ್ಮಹತ್ಯೆಯ ಪ್ರಕರಣವು ಮಂಜೇರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Kerala Horror (1)
Profile Deekshith Nair Feb 3, 2025 5:47 PM

ತಿರುವನಂತಪುರಂ: ವರದಕ್ಷಿಣೆ ಕಿರುಕುಳ ಮತ್ತು ವೈವಾಹಿಕ ದೌರ್ಜನಕ್ಕೆ(Dowry and Marital Abuse) ಒಳಗಾಗಿದ್ದ ಕೇರಳ ಮೂಲದ ಯುವತಿಯೊಬ್ಬರು(Kerala Horror) ಮಾನಸಿಕವಾಗಿ ನೊಂದು ಗುರುವಾರ(ಜ.30) ಆತ್ಮಹತ್ಯೆಗೆ(Self Harming) ಶರಣಾಗಿದ್ದಾರೆ. ಮಲಪ್ಪುರಂನ(Mallapuram) ಎಲಂಕೂರಿನಲ್ಲಿ ಈ ದಾರುಣ ಘಟನೆ ನಡೆದಿದೆ. ವಿಷ್ಣುಜಾ 2023ರ ಮೇ ತಿಂಗಳಿನಲ್ಲಿ ಏಲಂಕೂರಿನ ನಿವಾಸಿ ಪ್ರಭಿನ್ ಅವರನ್ನು ವಿವಾಹವಾಗಿದ್ದರು.

ಆತ್ಮಹತ್ಯೆಯ ಪ್ರಕರಣವು ಮಂಜೇರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವತಿಯ ಗಂಡ ಆಕೆಯ ಸೌಂದರ್ಯವನ್ನು ಹಂಗಿಸಿದ್ದು, ವರದಕ್ಷಿಣೆಗಾಗಿ ಕಿರುಕುಳ ಕೊಟ್ಟಿದ್ದಾನೆ. ವೈವಾಹಿಕ ದೌರ್ಜನ್ಯವನ್ನು ಎಸಗಿದ್ದಾನೆ ಎಂದು ತಿಳಿದು ಬಂದಿದೆ. ದೌರ್ಜನ್ಯದಲ್ಲಿ ಗಂಡನ ಕುಟುಂಬದವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಪತಿ ಹಾಗೂ ಕುಟುಂಬದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವತಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.



ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ಯುವತಿಯ ಮೈಮೇಲೆ ಗಾಯಗಳಿದ್ದವು ಎಂದು ಮನೆಯವರು ಹೇಳಿದ್ದಾರೆ. ಯುವತಿಯ ತಂದೆ ಮಗಳ ಸಾವಿನ ಕುರಿತು ಮಾತನಾಡಿದ್ದು,

"ನಮ್ಮ ಮೂವರು ಹೆಣ್ಣು ಮಕ್ಕಳಲ್ಲಿ ಇವಳು ಕಿರಿಯವಳು. ಮನೆಯಲ್ಲಿ ಏನಾದರೂ ಸಮಸ್ಯೆ ಎದುರಾದಾಗ ಅವಳು ನಿಭಾಯಿಸುತ್ತಿದ್ದಳು. ಧೈರ್ಯಶಾಲಿಯಾಗಿದ್ದಳು. ಕೆಲವು ದಿನಗಳ ಹಿಂದೆ ಅವಳು ಅನುಭವಿಸುತ್ತಿರುವ ಹಿಂಸೆಯ ಬಗ್ಗೆ ತಿಳಿಯಿತು. ಮಧ್ಯಸ್ಥಿಕೆ ವಹಿಸಿ ನ್ಯಾಯ ಕೊಡಿಸುತ್ತೇನೆ ಎಂದೆ. ಬೇಡ ನಾನೇ ಬಗೆಹರಿಸಿಕೊಳ್ಳುತ್ತೇನೆ ಎಂದಳು. ಎಷ್ಟೋ ಬಾರಿ ಫೋನ್‌ ಮಾಡಿ ಆಕೆಯ ಗಂಡನಿಗೆ ಬುದ್ಧಿ ಕಲಿಸುವುದಾಗಿ ಹೇಳಿದೆ ಅವಳು ಒಪ್ಪಲಿಲ್ಲ. ಅವನು ತುಂಬಾ ಹಿಂಸೆ ನೀಡಿದ್ದಾನೆ. ನನ್ನ ಮಗಳನ್ನು ಬೈಕ್‌ ಮೇಲೂ ಕೂರಿಸುತ್ತಿರಲಿಲ್ಲ. ಹೊಡೆಯುವುದು,ಸುಡುವುದು ಹೀಗೆ ಸಾಕಷ್ಟು ಚಿತ್ರ ಹಿಂಸೆ ಕೊಟ್ಟಿದ್ದಾನೆ. ಅವನು ಮತ್ತು ಅವನ ಕುಟುಂಬದವರನ್ನು ಪೊಲೀಸರು ಈ ಕೂಡಲೇ ಬಂಧಿಸಬೇಕು" ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ:Sharon Raj Murder Case: ಕೇರಳದ ಶರೋನ್‌ ರಾಜ್‌ ಕೊಲೆ ಪ್ರಕರಣ; ಪ್ರೇಯಸಿ ಗ್ರೀಷ್ಮಾಗೆ ಗಲ್ಲುಶಿಕ್ಷೆ!

ಪೊಲೀಸರು ಪ್ರಬಿನ್‌ನನ್ನು ವಶಕ್ಕೆ ಪಡೆದಿದ್ದಾರೆ. ದಂಪತಿ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು ಎಂದು ಪ್ರಬಿನ್ ಕುಟುಂಬ ಹೇಳಿದೆ. ಅವರು ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ ಎಂದಿದ್ದು, ವರದಕ್ಷಿಣೆ ಕಿರುಕುಳ ಮತ್ತು ವೈವಾಹಿಕ ದೌರ್ಜನ್ಯದ ಆರೋಪವನ್ನು ತಳ್ಳಿ ಹಾಕಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?