ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ವಯಸ್ಸು ಮೀರಿದರೂ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗು; ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಂಜುನಾಥ್ (44) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗು; ವ್ಯಕ್ತಿ ಆತ್ಮಹತ್ಯೆ

Vishakha Bhat Vishakha Bhat Aug 17, 2025 8:24 AM

ಬೆಂಗಳೂರು: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರು (Self Harming) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಂಜುನಾಥ್ (44) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಜುನಾಥ್ ಹಲವು ವರ್ಷಗಳಿಂದ ಮದುವೆಯಾಗಲು ಪ್ರಯತ್ನಿಸಿದರೂ ಹೆಣ್ಣು ಸಿಕ್ಕಿರಲಿಲ್ಲ. ಹೆಣ್ಣು ಕೇಳಲು ಹೋದಾಗ ವಿದ್ಯಾರ್ಹತೆ, ಉದ್ಯೋಗ ಮತ್ತು ಸ್ವಂತ ಮನೆಯ ಬಗ್ಗೆ ಪ್ರಶ್ನಿಸುತ್ತಿದ್ದರು.

ವಯಸ್ಸು ಮೀರಿದಂತೆ ಆಪ್ತರಿಂದ ಮದುವೆ ಯಾವಾಗ ಎಂಬ ಪ್ರಶ್ನೆಗಳು ಮಾನಸಿಕ ಒತ್ತಡಕ್ಕೆ ಕಾರಣವಾಗಿದ್ದು, ಶನಿವಾರ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದಕ್ಕಾಗಿ ಪಿತ್ರಾರ್ಜಿತ ಕೃಷಿ ಭೂಮಿಯನ್ನು ವಶಪಡಿಸಿಕೊಂಡಿದ್ದಕ್ಕೆ ಮನನೊಂದ ರೈತ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಲತ್ತೂರಿನಲ್ಲಿ ನಡೆದಿದೆ. ರಾಜಮ್ಮ (50) ಆತ್ಮಹತ್ಯೆಗೆ ಶರಣಾದ ಮಹಿಳೆ. ಕೆಂಪಯ್ಯನ ಹಟ್ಟಿ ಗ್ರಾಮಸ್ಥರು ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳಕ್ಕಾಗಿ ವಿನಂತಿಸಿದಾಗ ಸಮಾಜ ಕಲ್ಯಾಣ ಇಲಾಖೆಯು ಸರ್ವೇ 80 ರಲ್ಲಿ 20 ಗುಂಟೆ ಭೂಮಿಯನ್ನು ಮೀಸಲಿಟ್ಟಿತ್ತು. ಇದರಂತೆ ಆಗಸ್ಟ್ 6 ರಂದು ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿತು. ಅಂಬೇಡ್ಕರ್ ಭವನಕ್ಕೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಹೇಳುವ ಫಲಕವನ್ನು ಕೂಡ ಹಾಕಲಾಗಿತ್ತು.

ಈ ಸುದ್ದಿಯನ್ನೂ ಓದಿ:Murder Case: ಬಾಯ್‌ಫ್ರೆಂಡ್‌ ಜೊತೆ ಲವ್ವಿ-ಡವ್ವಿ; ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ 2 ತಿಂಗಳ ಬಳಿಕ ಅರೆಸ್ಟ್

ಹಲವಾರು ವರ್ಷಗಳಿಂದ ಕುಟುಂಬ ಕೃಷಿ ಮಾಡಿಕೊಂಡಿದದ ಭೂಮಿಯನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ತೀವ್ರವಾಗಿ ನೊಂದಿದ್ದ ರಾಜಮ್ಮ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶವ ಇಟ್ಟು ಪ್ರತಿಭಟನೆ ನಡೆಸಿದರು. ಹನೂರು ಶಾಸಕ ಮಂಜುನಾಥ್ ಅವರು ಕುಟುಂಬವನ್ನು ಭೇಟಿ ಮಾಡಿ ನ್ಯಾಯಯುತ ಪರಿಹಾರ ಮತ್ತು ಸಂಪೂರ್ಣ ತನಿಖೆಯ ಭರವಸೆ ನೀಡಿದರು. ಈ ವಿಷಯವನ್ನು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.