ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

murder Case: ಬಾಗಪ್ಪ ಹರಿಜನ ಆಪ್ತನ ಕೊಲೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

ಬಾಗಪ್ಪ ಹರಿಜನ, ಸುಶೀಲ್‌ ಕಾಳೆ

ಹರೀಶ್‌ ಕೇರ ಹರೀಶ್‌ ಕೇರ Jul 16, 2025 7:52 AM

ವಿಜಯಪುರ: ವಿಜಯಪುರದಲ್ಲಿ (Vijayapura news) ಮತ್ತೆ ನೆತ್ತರು ಹರಿದಿದೆ. ಗ್ಯಾಂಗ್‌ಸ್ಟರ್‌ ಬಾಗಪ್ಪ ಹರಿಜನನ (Bagappa Harijana) ಹಳೆಯ ಶಿಷ್ಯ ಸುಶೀಲ್ ಕಾಳೆ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ನಿನ್ನೆ ಎಸ್​ಎಸ್ ರಸ್ತೆ ಬಳಿ ಇರುವ ಅಮರವರ್ಷಿಣಿ ಸಹಕಾರಿ ಬ್ಯಾಂಕ್​ಗೆ ಸುಶೀಲ್ ಕಾಳೆ ಬಂದಿದ್ದ. ಈ ವೇಳೆ ಆರೋಪಿಗಳು ಗುಂಡು ಹಾರಿಸಿ ಬಳಿಕ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ (police firing) ಪೊಲೀಸರು ಬಂಧಿಸಿದ್ದಾರೆ.

ಗಾಂಧಿಚೌಕ್ ಪೊಲೀಸ್​ ಠಾಣೆಯಲ್ಲಿ ನಿನ್ನೆಯೇ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದಿದ್ದ ಪೊಲೀಸರು ತಡರಾತ್ರಿಯಿಂದ ಕಾರ್ಯಾಚರಣೆಗೆ ಇಳಿದಿದ್ದರು. ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

ಘಟನಾ ಸ್ಥಳದಲ್ಲಿ ಆರೋಪಿಗಳ ಕಂಟ್ರಿ ಪಿಸ್ತೂಲ್ ಬಿದ್ದಿದೆ. ಅಲ್ಲದೇ ಆರೋಪಿಗಳು ಬಳಸುತ್ತಿದ್ದ ನಂಬರ್ ಪ್ಲೇಟ್ ಇಲ್ಲದ ಸ್ಪ್ಲೆಂಡರ್ ಬೈಕ್ ಕೂಡ ಅಲ್ಲಿಯೇ ಬಿದ್ದಿದೆ. ಬೈಕ್ ಮೇಲೆ ಪರಾರಿಯಾಗುತ್ತಿದ್ದ ಆರೋಪಿಗಳನ್ನ ಹಿಡಿಯಲು ಯತ್ನಿಸಿದಾಗ ಪೊಲೀಸರ ಮೇಲೆಯೇ ಫೈರಿಂಗ್​ಗೆ ಯತ್ನಿಸಿದ್ದರು. ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಆರೋಪಿ ಆಕಾಶ ಕಲ್ಲವ್ವಗೋಳ, ಸುದೀಪ್ ಅಲಿಯಾಸ್ ಸುಭಾಷ್ ಕಾಲಿಗೆ ಗುಂಡೇಟು ನೀಡಿದ್ದಾರೆ. ಬಂಧಿತ ಆರೋಪಿ ಆಕಾಶ ಮೇಲೆ ಈಗಾಗಲೇ 7 ಪ್ರಕರಣಗಳಿದ್ದವು. ಫೈರಿಂಗ್ ನಡೆದ ಘಟನಾ ಸ್ಥಳ ಇಟ್ಟಂಗಿಹಾಳಕ್ಕೆ ಎಸ್​ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ