ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder case: ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ಮೊದಲ ಹೆಂಡತಿ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ.

ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಆರೋಪಿ ಕುಮಾರ, ಕೊಲೆಯಾದ ರಾಧಾ -

ಹರೀಶ್‌ ಕೇರ
ಹರೀಶ್‌ ಕೇರ Jan 14, 2026 9:26 AM

ಹಾಸನ, ಜ.14: ಪತಿ (Husband) ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು (Wife) ಬರ್ಬರವಾಗಿ ಹತ್ಯೆ (Murder case) ಮಾಡಿರುವ ಘಟನೆ ಹಾಸನ (Hassan news) ಜಿಲ್ಲೆಯ ಆಲೂರು (Alur) ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಅದೂ ಆತ ಮಾಲೆ ಹಾಕಿ ಶಬರಿಮಲೆಗೆ ಹೋಗಿ ಬಂದ ಕೂಡಲೇ ಹತ್ಯೆ ಮಾಡಿದ್ದಾನೆ.

ಹತ್ಯೆಯಾದವಳನ್ನು ರಾಧಾ (40) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಕುಮಾರ ಕೊಲೆಗೈದ ಆರೋಪಿಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ರಾಧಾ ಪತಿಯಿಂದ ಬೇರೆ ವಾಸವಾಗಿದ್ದಳು. ಜನವರಿ ಮೊದಲ ವಾರ ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು.

ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ. ಸೋಮವಾರ (ಜ.12) ತಾನೇ ಪೊಲೀಸರಿಗೆ ಮಾಹಿತಿ ನೀಡಿದ್ದ. ಇಂದು (ಜ.13) ಯಗಚಿ ನದಿಯಿಂದ ಪೊಲೀಸರು ಮೃತದೇಹ ಹೊರ ತೆಗೆದಿದ್ದಾರೆ. ಪತಿ ಕುಮಾರ ಹಾಗೂ ಆತನ ಮನೆಯವರು ಸೇರಿ ಹತ್ಯೆ ಮಾಡಿದ್ದಾರೆ ಎಂದು ರಾಧಾ ಕುಟುಂಬಸ್ಥರು ಆರೋಪಿಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Bangladesh Violence: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ಹತ್ಯೆಗಳ ಸರಣಿ; ಗಾಯಕ, ಆಟೋ ಚಾಲಕನ ಕೊಲೆ