Murder Case: ಸಂಧಾನಕ್ಕೆ ಕರೆದು ಕಥೆನೇ ಮುಗ್ಸಿದ್ರು; ನಿನ್ನೆ ಜೈಲಿನಿಂದ ರಿಲೀಸ್.. ಇಂದು ಕೊಲೆ
Bengaluru Murder Case: ಬೆಂಗಳೂರಿನ ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಭೀಕರ ಕೊಲೆ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ವಿಜಯ್ (26) ಎಂದು ಗುರುತಿಸಲಾಗಿದೆ. ಇನ್ನು ಸಂಧಾನ ಮಾತುಕತೆಗೆಂದು ಕರೆಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸೋ ಕೊಲೆಯೊಂದು(Bengaluru Murder Case) ನಡೆದಿದೆ. ನಿನ್ನೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕನ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಈ ಭೀಕರ ಕೊಲೆ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ವಿಜಯ್ (26) ಎಂದು ಗುರುತಿಸಲಾಗಿದೆ. ಇನ್ನು ಸಂಧಾನ ಮಾತುಕತೆಗೆಂದು ಕರೆಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ವಿಜಯ್ ನಿನ್ನ ಅಷ್ಟೆ ಜೈಲಿನಿಂದ ಹೊರಗಡೆ ಬಂದಿದ್ದ. ಸದ್ಯ ಘಟನಾ ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ಸುದ್ದಿಯನ್ನೂ ಓದಿ: Murder Case: ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಗೆ ಟ್ವಿಸ್ಟ್, ಅತ್ತೆಯೇ ಕೊಲೆಗಾತಿ!
ಅಣ್ಣಂದಿರಿಂದಲೇ ತಮ್ಮನ ಬರ್ಬರ ಹತ್ಯೆ
ಕೇವಲ 4 ಗುಂಟೆ ಜಮೀನಿಗಾಗಿ ಅಣ್ಣಂದಿರು ಸೇರಿ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆದಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ, ಅಣ್ಣಂದಿರು ತಮ್ಮನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ, ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಎನ್.ಜಿ ಹುಲ್ಕೂರು ಎಂಬ ಗ್ರಾಮದಲ್ಲಿ ನಡೆದಿದೆ. ಎನ್.ಜಿ ಹುಲ್ಕುರು ಗ್ರಾಮದಲ್ಲಿ 60 ವರ್ಷದ ರಮೇಶ್ ಎಂಬಾತನನ್ನು ಸ್ವಂತ ಅಣ್ಣಂದಿರೆ ಕೊಲೆ ಮಾಡಿದ್ದಾನೆ. ಅಣ್ಣಂದಿರಾದ ಸಂಪಂಗಿ, ಸೀನಪ್ಪ ಮಟ್ಟು ರಘುಪತಿ ಯಿಂದ ರಮೇಶ್ ಅವರ ಹತ್ಯೆಯಾಗಿದೆ. ರಮೇಶ್ ತಲೆಗೆ ದೊಣ್ಣೆಯಿಂದ ಹೊಡೆದು ಅಣ್ಣಂದಿರು ಕೊಲೆ ಮಾಡಿದ್ದಾರೆ.
ಘಟನೆ ಸಂಬಂಧ ಬೇತಮಂಗಲ ಠಾಣೆ ಪೊಲೀಸರಿಂದ ಆರೋಪಿ ಸೀನಪ್ಪನನ್ನು ಅರೆಸ್ಟ್ ಮಾಡಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ ಸಂಪಂಗಿ ಮತ್ತು ರಘುಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.