ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ವೈರ್‌ನಿಂದ ಕುತ್ತಿಗೆ ಬಿಗಿದು ಪ್ರಿಯತಮೆಯ ಕೊಲೆ ಮಾಡಿದ ಪ್ರಿಯಕರ

ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಎಂಬಾತ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ಪತ್ನಿಗೆ ವಿಚ್ಛೇದನ ನೀಡದೆ ಅಯ್ಯಪ್ಪ ರಂಜಿತಾ ಜೊತೆಗೆ ವಾಸವಿದ್ದ. ಇದೀಗ ಮದುವೆ ವಿಚಾರಕ್ಕೆ ರಂಜಿತ ಹಾಗೂ ಅಯ್ಯಪ್ಪನ ನಡುವೆ ಜಗಳ ನಡೆದಿತ್ತು.

ಕೊಲೆಯಾದ ರಂಜಿತಾ, ಆರೋಪಿ ಅಯ್ಯಪ್ಪ

ಬೆಂಗಳೂರು, ಮಾ.14: ಬೆಂಗಳೂರಿನಲ್ಲಿ (Bengaluru) ಮತ್ತೊಂದು ಭೀಕರವಾದ ಕೊಲೆ (murder case) ನಡೆದಿದೆ. ಪ್ರಿಯಕರನೊಬ್ಬ (lover) ತನ್ನ ಪ್ರಿಯತಮೆಯನ್ನು ವೈರ್‌ನಿಂದ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ, ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ.

ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಎಂಬಾತ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ರಂಜಿತ ಮತ್ತು ಅಯ್ಯಪ್ಪ ಕೊಡಗು ಜಿಲ್ಲೆಯ ನಿವಾಸಿಗಳಾಗಿದ್ದು, ಮದುವೆಯಾಗಿ ಹೆಂಡತಿಯನ್ನು ಅಯ್ಯಪ್ಪ ಬಿಟ್ಟಿದ್ದ. ಡ್ರೈ ಫ್ರೂಟ್ ಅಂಗಡಿಯಲ್ಲಿ ಆರೋಪಿ ಅಯ್ಯಪ್ಪ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ.

ಅಯ್ಯಪ್ಪನನ್ನೆ ಮದುವೆಯಾಗುವುದಾಗಿ ರಂಜಿತ ಮನೆ ಬಿಟ್ಟು ಬಂದಿದ್ದಾಳೆ. ಪತ್ನಿಗೆ ವಿಚ್ಛೇದನ ನೀಡದೆ ಅಯ್ಯಪ್ಪ ರಂಜಿತಾ ಜೊತೆಗೆ ವಾಸವಿದ್ದ. ಇದೀಗ ಮದುವೆ ವಿಚಾರಕ್ಕೆ ರಂಜಿತ ಹಾಗೂ ಅಯ್ಯಪ್ಪನ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅಯ್ಯಪ್ಪ ರಂಜಿತಾಳ ಕುತ್ತಿಗೆಗೆ ವೈರ್‌ ಬಿಗಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ವರ್ತೂರು ಠಾಣೆ ಪೋಲಿಸರು ಆರೆಸ್ಟ್ ಮಾಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Byrathi Basavaraj: ಬಿಕ್ಲು ಶಿವ ಕೊಲೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಿಡುಗಡೆ

ಹರೀಶ್‌ ಕೇರ

View all posts by this author