Murder Case: ಯುಗಾದಿಯ ಎಣ್ಣೆಪಾರ್ಟಿಯಲ್ಲಿ ಕುಖ್ಯಾತ ರೌಡಿಶೀಟರ್ ಕೊಚ್ಚಿ ಕೊಲೆ
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಅಬ್ಬರಿಸುತ್ತ ಓಡಾಡುತ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಿದ್ದರು. ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ.

ನೇಪಾಳಿ ಮಂಜ

ಆನೇಕಲ್: ಕುಖ್ಯಾತ ರೌಡಿ ಶೀಟರ್ (Rowdy Sheeter) ನೇಪಾಳಿ ಮಂಜನನ್ನು ಆನೇಕಲ್ (Anekal) ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುತ್ತಿದ್ದಾಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ (killed) ಮಾಡಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯ ಬಳಿಯ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ.
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಅಬ್ಬರಿಸುತ್ತ ಓಡಾಡುತ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಿದ್ದರು. ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಆಚರಣೆಗೆ ಸ್ನೇಹಿತರು ಕರೆದರೆಂದು ಕುಣಿಗಲ್ನಿಂದ ಬೆಂಗಳೂರಿಗೆ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ 2 ಬೈಕ್ನಲ್ಲಿ ಬಂದಿದ್ದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನು ಕೊಚ್ಚಿ ಕೊಂದಿದ್ದಾರೆ.
ಕೊಲೆ, ಕೊಲೆಯತ್ನ, ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ನೇಪಾಳಿ ಮಂಜ ಭಾಗಿ ಆಗಿದ್ದ. ಕಳೆದ 2 ತಿಂಗಳ ಹಿಂದಷ್ಟೇ ಪೊಲೀಸರು ಕರೆದು ವಾರ್ನಿಂಗ್ ಕೂಡ ಕೊಟ್ಟಿದ್ದರು. ಆದರೂ ಪಾಠ ಕಲಿಯದ ಮಂಜ ತನ್ನ ಹಳೇ ಚಾಳಿ ಮುಂದುವರಿಸಿದ್ದ. ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡೋದಕ್ಕೆ ಮಂಜ ಬಂದಿದ್ದಾನೆ ಎಂಬ ಮಾಹಿತಿ ಕಲೆ ಹಾಕಿ ಹಂತಕರು ಬಂದಿರಬಹುದು. ಅಥವಾ ಮಂಜನನ್ನು ಕರೆಸಿಕೊಂಡ ಆಪ್ತ ಸ್ನೇಹಿತರೇ ಮುಹೂರ್ತ ಇಟ್ಟಿರಲೂ ಸಾಧ್ಯತೆ ಇದೆ. ಮಾರಕಾಸ್ತ್ರದಿಂದ ದಾಳಿ ಮಾಡಿ ನೇಪಾಳಿ ಮಂಜನನ್ನು ಭೀಕರವಾಗಿ ಹತ್ಯೆಗೈದಿದ್ದು ನೋಡಿದರೆ ಹಳೇ ವೈಷಮ್ಯಕ್ಕೆ ಸೇಡು ತೀರಿಸಿಕೊಂಡ ಶಂಕೆ ಮೂಡಿದೆ. ಹೆಬ್ಬುಗೋಡಿ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: Murder Case: ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಗೆ ಟ್ವಿಸ್ಟ್, ಅತ್ತೆಯೇ ಕೊಲೆಗಾತಿ!