ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲೆ ಮಾಡಿಸಿದ ಪತ್ನಿ

Murder Case: ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. 10 ವರ್ಷಗಳ ಹಿಂದೆ ಕಮಲ ಎಂಬಾಕೆ ಸುದರ್ಶನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ನಂತರ ಈ ಕಮಲಾ, ಶಿವರಾಜ್ ಎಂಬಾತನ ಜೊತೆಗೆ ಅನೈತಿಕ ಸಂಬಂಧ ಶುರು ಮಾಡಿದ್ದಳು.

ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲ್ಲಿಸಿದ ಪತ್ನಿ

ಆರೋಪಿ ಕಮಲಾ

ಹರೀಶ್‌ ಕೇರ ಹರೀಶ್‌ ಕೇರ May 26, 2025 12:56 PM

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಸುಪಾರಿ ಕೊಟ್ಟು ಪತಿಯನ್ನೇ (husband) ಪತ್ನಿ (Wife) ಹತ್ಯೆ (Murder Case) ಮಾಡಿಸಿರುವ ಘಟನೆ ನಡೆದಿದೆ. ಅದರಲ್ಲೂ ಈಕೆ ತನ್ನ ಪತಿಯನ್ನು ಪ್ರೀತಿಸಿ ಮದುವೆಯಾದವಳೇ ಆಗಿದ್ದು, ಇದೀಗ ಪ್ರಿಯಕರನ (boyfriend) ಜೊತೆ ಚಕ್ಕಂದಕ್ಕಾಗಿ ಪತಿಯನ್ನೇ ಬಾಯ್‌ಫ್ರೆಂಡ್‌ ಮೂಲಕ ಹತ್ಯೆ ಮಾಡಿಸಿದ್ದಾಳೆ. ಹತ್ಯೆ ಮಾಡಲು ತಾನೂ ಸಾಥ್ ನೀಡಿದ್ದಾಳೆ.‌ ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. 10 ವರ್ಷಗಳ ಹಿಂದೆ ಕಮಲ ಎಂಬಾಕೆ ಸುದರ್ಶನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ನಂತರ ಈ ಕಮಲಾ, ಶಿವರಾಜ್ ಎಂಬಾತನ ಜೊತೆಗೆ ಅನೈತಿಕ ಸಂಬಂಧ ಶುರು ಮಾಡಿದಳು. ಈ ಅನೈತಿಕ ಸಂಬಂಧದ ಬಗ್ಗೆ ತಿಳಿದಿದ್ದರಿಂದ ಸುದರ್ಶನ್, ಈ ಕುರಿತು ಪತ್ನಿಗೆ ಎಚ್ಚರಿಕೆ ನೀಡಿದ್ದ. ತಮ್ಮ ಸಂಬಂಧಕ್ಕೆ ಅಡ್ಡಯಾದ ಈತನನ್ನು ಕೊಲ್ಲಲು ಕಮಲಾ, ಶಿವರಾಜ್‌ ಜೊತೆಗೆ ಸೇರಿ ಸಂಚು ರೂಪಿಸಿದ್ದಳು.

ಅದರಂತೆ ಕಮಲಾ, ಸುದರ್ಶನ್‌ಗೆ ನಿದ್ರೆ ಮಾತ್ರೆ ನೀಡಿದ್ದಾಳೆ. ಸುದರ್ಶನ್‌ ಗಾಢ ನಿದ್ರೆ ಹೋದಾಗ ಪ್ರಿಯಕರ ಶಿವರಾಜ್‌ ಜೊತೆ ಸೇರಿ ಸುದರ್ಶನ್‌ನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಅಸಹಜ ಸಾವಿನ ಬೆನ್ನು ಬಿದ್ದ ಪೊಲೀಸರಿಗೆ ಈ ಅನೈತಿಕ ಸಂಬಂಧದ ಸುಳಿವು ಸಿಕ್ಕಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಪತ್ನಿ ಕಮಲ, ಆಕೆಯ ಪ್ರಿಯಕರ ಎಸ್ ಶಿವರಾಜ್ ಹಾಗೂ ಕೊಲೆಗೆ ಸಹಕಾರ ನೀಡಿದ ಆತನ ಇನ್ನಿಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್‌ ಹಾಗೂ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ .ಇದೀಗ ವಿಜಯಪುರದ ಕೆನರಾ ಬ್ಯಾಂಕ್‌ನ ಮುಂಭಾಗದ ಕೀ ಮುರಿದು ಕಳ್ಳರು ಒಳನುಗ್ಗಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಈ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಕಳ್ಳರು ಬ್ಯಾಂಕ್‌ನ ಮುಂಭಾಗದ ಬಾಗಿಲಿನ ಕೀಯನ್ನು ಮುರಿದು ಒಳನುಗ್ಗಿರುವ ಘಟನೆ ಭಾನುವಾರ ಗೊತ್ತಾಗಿದೆ.

ಭಾನುವಾರ ರಜಾದಿನವಾದ ಕಾರಣ ಬ್ಯಾಂಕ್‌ಗೆ ಸಿಬ್ಬಂದಿ ಆಗಮಿಸಿರಲಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣವೇ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಶ್ವಾನದಳ ತಂಡವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಪೊಲೀಸರು ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಕಳ್ಳತನದ ವಿವರಗಳನ್ನು ತನಿಖೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಶ್ವಾನದಳದ ಸಹಾಯದಿಂದ ಘಟನಾ ಸ್ಥಳದಲ್ಲಿ ಸುಳಿವುಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶೀಘ್ರವೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸ ವ್ಯಕ್ತವಾಗಿದೆ.

ಇತ್ತೀಚೆಗೆ ಬ್ಯಾಂಕ್‌ ಕಳ್ಳತನ ಪ್ರಕರಣಗಳು ಹೆಚ್ಚಾಗಿಯೇ ಕೇಳಿಬರುತ್ತಿದೆ. ಜನವರಿ 16 ರಂದು ಬೀದರ್‌‌ನ​ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಆ ಘಟನೆಯ ಬೆನ್ನಲ್ಲೇ ಹುಬ್ಬಳ್ಳಿ ಬ್ಯಾಂಕ್‌‌ನಲ್ಲೂ ದರೋಡೆಗೆ ಯತ್ನಿಸಿದ್ದರು. ಆದರೆ ಅದು ವಿಫಲವಾಗಿತ್ತು.

ಇದನ್ನೂ ಓದಿ: Murder Case: ಹಳೆ ದ್ವೇಷ, ಚೂರಿಯಿಂದ ಇರಿದು ಯುವಕನ ಭೀಕರ ಹತ್ಯೆ