Murder Case: ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ
ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್ ಬಂದಿರಲಿಲ್ಲ.

ಕೊಲೆಯಾದ ರೇವಣಸಿದ್ಧ

ಕಲಬುರಗಿ: ಜೊತೆಗಿದ್ದ ಸ್ನೇಹಿತರೇ ತಮ್ಮ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ (Murder Case) ಮಾಡಿದ ಘಟನೆ ಕಲಬುರಗಿ (kalaburagi news) ನಗರದಲ್ಲಿ ನಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 12 ಬಾರಿ ʼಗೆಳೆಯರುʼ ತಲೆ ಮೇಲೆ ಕಲ್ಲು (Stone) ಎತ್ತಿ ಹಾಕಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ನಗರದ ರಾಜಾಪುರ ಬಡಾವಣೆಯ ನಿವಾಸಿಯಾದ ರೇವಣಸಿದ್ದ ಎಂಬ ಯುವಕನೇ ಸ್ನೇಹಿತರಿಂದ ಹೀಗೆ ಕೊಲೆಯಾದ ಯುವಕ. ಸಿಸಿಟಿವಿ ಕ್ಯಾಮೆರದಲ್ಲಿ ಈ ಕೊಲೆ ದಾಖಲಾಗಿದ್ದು, ಕೊಲೆಯ ಬರ್ಬರತೆಗೆ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್ ಬಂದಿರಲಿಲ್ಲ. ಹಾಗಾಗಿ ರಾತ್ರಿ ರೇವಣಸಿದ್ದ ತಂದೆ ರಾಮಪ್ಪ ಮಗನಿಗೆ ಕರೆ ಮಾಡಿ ಎಲ್ಲಿದ್ದಿಯಾ, ಯಾವಾಗ ಬರ್ತಿಯಾ ಎಂದು ವಿಚಾರಿಸಿದ್ದಾರೆ. ಬರ್ತೇನೆ, ಇಲ್ಲೇ ಸ್ನೇಹಿತರ ಜೊತೆಗಿದ್ದೇನೆ ಎಂದು ರೇವಣಸಿದ್ಧ ಹೇಳಿದ್ದಾನೆ.
ಆದರೆ ತಡರಾತ್ರಿಯಾದರೂ ಮಗ ಮನೆಗೆ ವಾಪಸ್ ಬಂದಿರಲಿಲ್ಲ. ದಾರಿ ಕಾಯುತ್ತಿದ್ದ ಹೆತ್ತವರು ಬಳಿಕ ನಿದ್ದೆಗೆ ಜಾರಿದ್ದಾರೆ. ಬೆಳಗಾಗುವಷ್ಟರಲ್ಲಿ ಮನೆಯಿಂದ ಐವತ್ತು ಅಡಿ ದೂರದಲ್ಲೆ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಸುದ್ದಿ ಗೊತ್ತಾಗಿದೆ. ಆತನ ಬೈಕ್ ಅನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಬಳಿ ಬಿಟ್ಟಿದ್ದಾನೆ. ಉಳಿದ ಸ್ನೇಹಿತರು ಬೈಕ್ ಮೇಲೆ ಕರೆದುಕೊಂಡು ಬಂದಿದ್ದು, ಮನೆ ಹತ್ತಿರ ಕೊಲೆ ಮಾಡಿದ್ದಾರೆ. ಬೆಳಗ್ಗೆ ವಾಕಿಂಗ್ ಬಂದವರು ಕೊಲೆಯಾದ ದೃಶ್ಯವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೇವಣಸಿದ್ದ ಕುಟುಂಬಸ್ಥರಿಗೆ ಕೊಲೆಯಾದ ವಿಚಾರ ಮುಟ್ಟಿಸಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯ ಹಿಂದಿನ ಅಸಲಿ ಕಾರಣ ಹೊರಬರಬೇಕಾಗಿದೆ. ಬರ್ಬರ ಹತ್ಯೆಯ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: Murder Case: ಹಳೇ ವೈಷಮ್ಯ; ದಲಿತ ಮುಖಂಡ ಸೇರಿ ಇಬ್ಬರ ಬರ್ಬರ ಕೊಲೆ