Drowned: ಚಿಕ್ಕಮಗಳೂರು ರೆಸಾರ್ಟ್ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು
ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ನಲ್ಲಿ ಸ್ವಿಮ್ಮಿಂಗ್ ಪೂಲ್ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ.

ಮೃತ ನಿಶಾಂತ್

ಚಿಕ್ಕಮಗಳೂರು: ಮಂಗಳೂರಿನ ರೆಸಾರ್ಟ್ನಲ್ಲಿ (Resort) ಕೆಲ ತಿಂಗಳ ಹಿಂದೆ ನಡೆದ ಈಜುಕೊಳ (Swimming pool) ದುರಂತವನ್ನು ನೆನಪಿಸುವ ಮತ್ತೊಂದು ಘೋರ ಘಟನೆ ನಡೆದಿದೆ. ರೆಸಾರ್ಟ್ನ ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದು ಪ್ರವಾಸಿಗರೊಬ್ಬರು (drowned death) ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದು ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಮೃತಪಟ್ಟಿದ್ದಾರೆ.
ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ನಲ್ಲಿ ಸ್ವಿಮ್ಮಿಂಗ್ ಪೂಲ್ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದು ಗೊತ್ತಾಗಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಹಲ್ಲುಗಳನ್ನು ಕಳೆದುಕೊಂಡು ನೊಂದ ಯವಕ ಆತ್ಮಹತ್ಯೆ
ಚಿಕ್ಕಮಗಳೂರು: ಅಪಘಾತದಲ್ಲಿ ಹಲ್ಲುಗಳನ್ನು (teeth) ಕಳೆದುಕೊಂಡಿದ್ದ ಯುವಕ ಈ ಬಗ್ಗೆ ಚಿಂತಿಸಿ ನೊಂದು ಆತ್ಮಹತ್ಯೆ (Self harming) ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ (chikkamagaluru news) ಕೊಪ್ಪದಿಂದ ವರದಿಯಾಗಿದೆ. ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ತರಗತಿಯಲ್ಲಿ ವ್ಯಾಸಂಗ (Student) ಮಾಡುತ್ತಿದ್ದ ವಿಘ್ನೇಶ್ ಮೃತಪಟ್ಟ ಯುವಕ. ಈತ ಕಳೆದ ನಾಲ್ಕು ವರ್ಷಗಳ ಹಿಂದೆ ಒಂದು ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನು ಕಳೆದುಕೊಂಡಿದ್ದ. ಅಂದಿನಿಂದ ಈ ಬಗ್ಗೆ ಕೊರಗುತ್ತಿದ್ದ ಎನ್ನಲಾಗಿದೆ.
ಅಪಘಾತದ ನಂತರ ಆಗಾಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದ ವಿಘ್ನೇಶ್, ಸತತ ಆರೋಗ್ಯ ಸಮಸ್ಯೆಗಳಿಂದ ಬೇಸತ್ತು ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದಾ ಆಸ್ಪತ್ರೆಗೆ ಹೋಗಿ ಬರುವುದರಿಂದ ಮನನೊಂದಿದ್ದ ಈ ಯುವಕ, ಜೀವನದಲ್ಲಿ ಉಂಟಾದ ಶಾರೀರಿಕ ಮತ್ತು ಮಾನಸಿಕ ಸಂಕಷ್ಟವನ್ನು ಎದುರಿಸಲಾಗದೆ ಆತ್ಮಹತ್ಯೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಘ್ನೇಶ್ ಈ ಕೃತ್ಯ ಎಸಗಿದ್ದಾನೆ. ಮನೆಗೆ ಮರಳಿದ ಕುಟುಂಬಸ್ಥರು ಈ ದುರಂತವನ್ನು ಕಂಡು ಆಕ್ರಂದಿಸಿದ್ದಾರೆ. ಸ್ಥಳೀಯ ಜಯಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ಆತ್ಮಹತ್ಯೆಗೆ ನಿಖರ ಕಾರಣವನ್ನು ತಿಳಿಯಲು ತನಿಖೆ ಆರಂಭಿಸಿದ್ದಾರೆ. ವಿಘ್ನೇಶ್ನ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆಯಿಂದ ಭುವನಕೋಟೆ ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. 17 ವರ್ಷದ ಬಾಲಕನ ಈ ಅಕಾಲಿಕ ಮರಣ ಕುಟುಂಬದವರಿಗೆ ತಾಳಲಾರದ ನೋವನ್ನು ಉಂಟುಮಾಡಿದೆ.
ಇದನ್ನೂ ಓದಿ: Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ, ಕೊಲೆ ಹಿಂದೆ ಲವ್ ಸ್ಟೋರಿ