Self Harming: ಸಾಲಗಾರರ ಕಿರುಕುಳ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬ ಬೊಲೆರೊ ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲದ ಸಾಯಿ ಮಂದಿರ ಬಳಿಯ ನಿವಾಸಿ ರಫೀಕ ಬಾಬುಸಾಬ ತಿಗಡಿ (38) ಮೃತ ವ್ಯಕ್ತಿ.

ಆತ್ಮಹತ್ಯೆ ಮಾಡಿಕೊಂಡ ರಫೀಕ ಬಾಬುಸಾಬ ತಿಗಡಿ.

ಬೆಳಗಾವಿ: ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ಬೊಲೆರೊ ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಬುಧವಾರ ರಾತ್ರಿ ಜರುಗಿದೆ. ಬೈಲಹೊಂಗಲ ಪಟ್ಟಣದ ಸಾಯಿ ಮಂದಿರ ಬಳಿಯ ನಿವಾಸಿ ರಫೀಕ ಬಾಬುಸಾಬ ತಿಗಡಿ (38) ಸಾವನ್ನಪ್ಪಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತರು ಕೆಲ ಖಾಸಗಿ ವ್ಯಕ್ತಿಗಳ ಕಡೆ 6 ಲಕ್ಷ ರೂ.ಗೂ ಹೆಚ್ಚು ಹಣ ಸಾಲ ಪಡೆಕೊಂಡಿದ್ದರು ಎನ್ನಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲಗಾರರು ಪದೇ ಪದೆ ಮನೆಗೆ ಬಂದು ಕಿರುಕುಳ ನೀಡಿದ್ದರಿಂದ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Shocking: ಮೊಬೈಲ್ ಗೀಳು; ತಂಗಿಯ ಎದುರೇ ಉಡದಾರದಿಂದ ನೇಣು ಬಿಗಿದುಕೊಂಡ ಬಾಲಕ!
ಬೆಂಗಳೂರು: ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ತನ್ನ ತಂಗಿ ಎದುರೇ ಉಡದಾರದಿಂದ ನೇಣು(Suicide) ಬಿಗಿದುಕೊಂಡು ಸಾವನ್ನಪ್ಪಿರುವ (Shocking) ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ(Bangalore) ನಡೆದಿದೆ. ಧ್ರುವ(Dhruva) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಎದುರು ನೇಣು(Self Harming) ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ.
ಮೊಬೈಲ್ ಗೀಳಿದ್ದ ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯ ಮೂಲಕ ಬೆಳಕಿಗೆ ಬಂದಿದೆ. ಮಂಗಳವಾರ(ಜ.28) ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸಂಜೆ 7 ಗಂಟೆ ಸರಿ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಂಗಿಗೆ ತನ್ನ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವಿಲ್ಲದೆ ಸುಮ್ಮನೆ ನೋಡುತ್ತಾ ನಿಂತಿದ್ದಳು ಎಂದು ತಿಳಿದು ಬಂದಿದೆ. ಉಡದಾರವನ್ನು ಕುತ್ತಿಗೆಗೆ ಬಿಗಿದು ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ಆಗಷ್ಟೇ ತಾಯಿ ಮನೆಗೆ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು,ತಾಯಿ ಗಾರ್ಮೆಂಟ್ಸ್ ಒಂದರಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಈ ಘಟನೆ ನಡೆದಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Maha Kumbh Mela: ಮಹಾ ಕುಂಭಮೇಳದಿಂದ ಮರಳುತ್ತಿದ್ದ ಬೆಳಗಾವಿಯ ವ್ಯಕ್ತಿ ಹೃದಯಾಘಾತದಿಂದ ಸಾವು