Shocking News: ರಾಜ್ಯದಲ್ಲಿ ಮತ್ತೆ ಗೋವಿನ ಮೇಲೆ ಕಿಡಿಗೇಡಿತನ, ಕೆಚ್ಚಲು ಕೊಯ್ದು ವಿಕೃತಿ
shocking News: ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವ್ಯಾಪ್ತಿಯ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ (shocking News) ನಡೆದಿದ್ದು, ಮಲಗಿದ್ದ ಹಸುವಿನ ಕೆಚ್ಚಲು (Udder) ಕೊಯ್ದು ಕಿಡಿಗೇಡಿಗಳು ವಿಕೃತಿ (Crime news) ಮೆರೆದ ಘಟನೆ ನಡೆದಿದೆ. ಬಾಗಲಕೋಟೆಯ (Bagalakote news) ಕುಳಗೇರಿ ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದ್ದು, ಕುಳಗೇರಿ ಗ್ರಾಮದ ಭರಮಪ್ಪ ಕುರಿ ಎಂಬವರು ಸಾಕಿದ ಹಸುವಿನ (cow) ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಹಸುವಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವ್ಯಾಪ್ತಿಯ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಹಿಂದೆಯೂ ರಾಜ್ಯದಲ್ಲಿ ಹಲವು ಕಡೆ ಇದೇ ರೀತಿ ಹಸುವಿನ ಕೆಚ್ಚಲನ್ನು ಕೊಯ್ದ, ವಿನಾಕಾರಣ ಗಾಯಗೊಳಿಸಿದ ವಿಕೃತಿಗಳು ನಡೆದಿವೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇಂಥ ಘಟನೆ ನಡೆದು ರಾಜ್ಯಾದ್ಯಂತ ಸುದ್ದಿಯಾಗಿತ್ತು.
ಮಂಗಳೂರಿನಲ್ಲಿ 12ನೇ ಮಹಡಿಯಿಂದ ಬಿದ್ದು ಯುವತಿ ಸಾವು
ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ (Tragic death) ವಿದ್ಯಾರ್ಥಿನಿಯೊಬ್ಬರು (Student death) ಮೃತಪಟ್ಟಿದ್ದಾರೆ. ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು (Mangaluru news) ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದ್ದು, ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವೈದ್ಯರುಗಳಾದ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ನ 12ನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Road Accident: ಭೀಕರ ಸರಣಿ ಅಪಘಾತ: ಕಾಪಾಡಲು ಧಾವಿಸಿದವನೂ ಸೇರಿ ಮೂವರು ಸಾವು