ಅಡೂರು, ಫೆ.10: ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ (ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social media influencer) ರೇಶ್ಮಾ ಆತ್ಮಹತ್ಯೆ (self harming) ಮಾಡಿಕೊಡಿದ್ದಾರೆ. ಅಡೂರು ಮೂಲದ ಅವರನ್ನು ʼಚಿನ್ನು ಪಪ್ಪುʼ (Chinnu Pappu) ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು.
ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ ನಿಜವಾದ ಹೆಸರು ಕೆ.ರೇಶ್ಮಾ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಚಿನ್ನು ಪಾಪು ಎನ್ನುವ ಹೆಸರಿನಿಂದಲೇ ಅವರು ಫೇಮಸ್ ಆಗಿದ್ದರು. ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಉಳಿಯತ್ತಡ್ಕದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಅವರ ಶವ ಕ್ವಾರ್ಟರ್ಸ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಚಿನ್ನು ಪಾಪು ಒಂದು ತಿಂಗಳ ಹಿಂದೆ ವಿಚ್ಛೇದನ ಪಡೆದಿದ್ದರು ಎನ್ನುವುದು ಗೊತ್ತಾಗಿದೆ. ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಆತ್ಮಹತ್ಯೆಗೆ ವಿಚ್ಛೇದನಕ್ಕೆ ಸಂಬಂಧಿಸಿದ ಯಾವುದೇ ಕಾರಣವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
‘ಇರಾನ್ನೊಂದಿಗೆ ಯಾವುದೇ ಒಪ್ಪಂದಕ್ಕೆ ಬರಬೇಡಿ’; ಆತ್ಮಹತ್ಯೆಗೂ ಮುನ್ನ ‘ದೊಡ್ಡಣ್ಣ’ನಿಗೆ ಮನವಿ ಮಾಡಿದ ವ್ಯಕ್ತಿ
ಗಂಗಾಧರನ್ ಮತ್ತು ಶೈಲಜಾ ಅವರ ಪುತ್ರಿಯಾದ 24 ವರ್ಷದ ರೇಶ್ಮಾ ಇನ್ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ಸೈಟ್ಗಳಲ್ಲಿ ಸಾಕಷ್ಟು ಸಕ್ರಿಯರಾಗಿದ್ದರು. ಅವರು 2 ಲಕ್ಷಕ್ಕೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋಯರ್ಸ್ ಹೊಂದಿದ್ದಾರೆ. ತಮ್ಮ ಹಲವಾರು ವೀಡಿಯೊಗಳಿಂದ ಜನಪ್ರಿಯರಾಗಿದ್ದಾರೆ. ಅವರ ಸ್ಥಳೀಯ ಪಾಕಪದ್ಧತಿ ವೀಡಿಯೊಗಳನ್ನು ಲಕ್ಷಾಂತರ ಜನರು ವೀಕ್ಷಿಸುತ್ತಾರೆ. ಕೇವಲ ಒಂದು ತಿಂಗಳ ಹಿಂದೆ ಪಡೆದಿದ್ದ ರೇಶ್ಮಾ ಅವರ ನಾಲ್ಕು ವರ್ಷದ ಮಗು ಈಗ ರೇಷ್ಮಾ ಅವರ ಪೋಷಕರೊಂದಿಗೆ ವಾಸಿಸುತ್ತಿದೆ. ನೆರೆಹೊರೆಯವರು ಅವರನ್ನು ಉಳಿಸಲು ಪ್ರಯತ್ನಿಸಿದರು ಮತ್ತು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು.