ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ankita Bhandari Murder Case: ದೇಶವನ್ನೇ ಬೆಚ್ಚಿ ಬೀಳಿಸಿದ್ದ ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಕೇಸ್‌- ಹಂತಕರಿಗೆ ಜೀವಾವಧಿ ಶಿಕ್ಷೆ

Uttarakhand Resort horror:2022ರಲ್ಲಿ ಪೌರಿ ಜಿಲ್ಲೆಯಲ್ಲಿ ರೆಸಾರ್ಟ್‌ವೊಂದರ ರಿಸೆಫ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಉಚ್ಛಾಟಿತ ಬಿಜೆಪಿ ನಾಯಕನ ಪುತ್ರ ಪುಲ್ಕಿತ್‌ ಆರ್ಯ, ಇಬ್ಬರು ಉದ್ಯೋಗಿಗಳಾದ ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ಅವರನ್ನು ಅರೆಸ್ಟ್‌ ಮಾಡಲಾಗಿತ್ತು.

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಕೇಸ್‌- ಹಂತಕರಿಗೆ ಜೀವಾವಧಿ ಶಿಕ್ಷೆ

Profile Rakshita Karkera May 30, 2025 1:49 PM

ಡೆಹ್ರಾಡೂನ್: ಸುಮಾರು ಮೂರು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಯುವತಿಯ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ದೋಷಿ ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷಿ ವಿಧಿಸಿದೆ. 2022ರಲ್ಲಿ ಪೌರಿ ಜಿಲ್ಲೆಯಲ್ಲಿ ರೆಸಾರ್ಟ್‌ವೊಂದರ ರಿಸೆಫ್ಶನಿಸ್ಟ್‌ ಅಂಕಿತಾ ಭಂಡಾರಿ(Ankita Bhandari Murder Case) ಕೊಲೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಉಚ್ಛಾಟಿತ ಬಿಜೆಪಿ ನಾಯಕನ ಪುತ್ರ ಪುಲ್ಕಿತ್‌ ಆರ್ಯ, ಇಬ್ಬರು ಉದ್ಯೋಗಿಗಳಾದ ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ಅವರನ್ನು ಅರೆಸ್ಟ್‌ ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿ ಮತ್ತು ಪ್ರಾಸಿಕ್ಯೂಷನ್ ನಡುವಿನ ಅಂತಿಮ ವಾದಗಳನ್ನು ಆಲಿಸಿದ ಕೋಟ್‌ದ್ವಾರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ರೀನಾ ನೇಗಿ ಅವರು ತೀರ್ಪು ನೀಡಿದ್ದಾರೆ.

ಏನಿದು ಘಟನೆ?

ಉಚ್ಚಾಟಿತ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಲ್ಕಿತ್‌ ಆರ್ಯ ಒಡೆತನದ ರೆಸಾರ್ಟ್‌ನಲ್ಲಿ ಅಂಕಿತಾ ಭಂಡಾರಿ ರಿಸೆಪ್ಶನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದಳು. 2022ರಲ್ಲಿ ಅಂಕಿತಾ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಇದಾದ ಆರು ದಿನಗಳ ನಂತರ ಆಕೆ ಮೃತದೇಹ ಋಷಿಕೇಷ ಸಮೀಪ ಕಾಲುವೆಯಲ್ಲಿ ಸಿಕ್ಕಿತ್ತು. ಇದಾದ ನಂತರ ಅಂಕಿತಾ ಪೋಷಕರ ದೂರಿನ ಮೇರೆಗೆ ಪ್ರಕರಣದಲ್ಲಿ ಪುಲಿಕಿತ್‌, ಅಂಕಿತ್‌ ಗುಪ್ತಾ ಮತ್ತು ಸೌರಭ್‌ ಭಾಸ್ಕರ್‌ನನ್ನು ಅರೆಸ್ಟ್‌ ಮಾಡಲಾಗಿತ್ತು. ಅಂಕಿತಾ ಮತ್ತು ಪುಲ್ಕಿತ್ ಅವರು ಯಾವುದೋ ವಿಷಯಕ್ಕೆ ಜಗಳವಾಡಿದ್ದರು, ನಂತರ ನಂತರ ಪುಲ್ಕಿತ್ ತನ್ನ ಇಬ್ಬರು ಉದ್ಯೋಗಿಗಳೊಂದಿಗೆ ಆಕೆಯನ್ನು ಕಾಲುವೆಗೆ ತಳ್ಳಿದ್ದ ಎಂದು ಆರೋಪಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ: Murder Case: ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆಗೆ ಟ್ವಿಸ್ಟ್‌, ಅತ್ತೆಯೇ ಕೊಲೆಗಾತಿ!

ಪ್ರಕರಣದ ಮೊದಲ ವಿಚಾರಣೆ ಜನವರಿ 30, 2023 ರಂದು ಪ್ರಾರಂಭವಾಯಿತು. ವಿಶೇಷ ತನಿಖಾ ತಂಡ (SIT) ನಡೆಸಿದ ತನಿಖೆಯ ನಂತರ, ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ 500 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತು.