ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ದಕ್ಷಿಣ ಕನ್ನಡ
Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಮರಕ್ಕೆ ಬೈಕ್‌ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

Road Accident: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

KMC Hospital: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಗೆ ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ!

KMC Hospital: ನೆಸಿಡಿಯೋಬ್ಲಾಸ್ಟೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸದ್ಯ ಯುವತಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈ ಅಪರೂಪದ ನೆಸಿಡಿಯೋಬ್ಲಾಸ್ಟೋಸಿಸ್ ಸಮಸ್ಯೆಯನ್ನು ನುರಿತ ತಜ್ಞರಾದ ಕನ್ಸಲ್ಟೆಂಟ್ ಸರ್ಜಿಕಲ್ ಆನ್ಕೋಲಾಜಿಸ್ಟ್ ಕಾರ್ತಿಕ್ ಕೆ ಎಸ್ ಅವರ ತಂಡ ನಿರ್ವಹಿಸುವಲ್ಲಿ ಯಶಸ್ವಿ ಯಾಗಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆ ಮಹತ್ವದ ಮೈಲಿಗಲ್ಲು ಸಾಧಿಸಿದೆ.

V Somanna: ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ಹೊಸ ರೈಲು: ಸಚಿವ ವಿ.ಸೋಮಣ್ಣ

ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ಹೊಸ ರೈಲು

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ. ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

2nd PUC Results 2025: ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

2nd PUC Results 2025: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಹಾಗೂ ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

2nd PUC Result 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ರಾಜ್ಯದ ಫಲಿತಾಂಶದ ಪ್ರಮಾಣ ಶೇಕಡಾ 73.45ರಷ್ಟಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಮೊದಲ ಸ್ಥಾನವನ್ನು ದಕ್ಷಿಣ ಕನ್ನಡದ ಹಾಗೂ ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ವಿದ್ಯಾರ್ಥಿನಿಯರು ಪಡೆದಿದ್ದಾರೆ.

Physical Abuse: ಮಾಟ, ಮಂತ್ರ ತೆಗೆಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಧರ್ಮಗುರು ಆರೆಸ್ಟ್

ಮಾಟ- ಮಂತ್ರ ತೆಗೆಸುವೆ ಎಂದು ಲೈಂಗಿಕ ಕಿರುಕುಳ, ಮುಸ್ಲಿಂ ಧರ್ಮಗುರು ಆರೆಸ್ಟ್

ಈ ವ್ಯಕ್ತಿ ಇದೇ ರೀತಿ ಮಾಟ ಮಂತ್ರ ನಿವಾರಿಸುವ ಉಸ್ತಾದ್ ಎಂಬ ಸೋಗಿನಲ್ಲಿ ಇನ್ನೂ ಹಲವರಿಗೆ ವಂಚಿಸಿರುವ ಹಾಗೂ ಕಿರುಕುಳ ನೀಡಿರುವ ಬಗ್ಗೆ ದೂರುಗಳಿವೆ ಎಂದು ತಿಳಿದು ಬಂದಿದೆ. ಹಣ ಪಡೆದು ವಂಚಿಸುತ್ತಿದ್ದುದಲ್ಲದೆ ಅವರಿಗೆ ದೈಹಿಕವಾಗಿಯೂ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.

Crime News: ನಗ್ನ ವಿಡಿಯೋ ಕಾಲ್‌ ಮಾಡುವಂತೆ ಒತ್ತಾಯಿಸಿದ ಅನ್ಯಕೋಮಿನ ಯುವಕನಿಗೆ ಧರ್ಮದೇಟು

ನಗ್ನ ವಿಡಿಯೋ ಕಾಲ್‌ ಮಾಡುವಂತೆ ಒತ್ತಾಯಿಸಿದ ಅನ್ಯಕೋಮಿನ ಯುವಕನಿಗೆ ಧರ್ಮದೇಟು

ಯುವತಿ ತನ್ನ ಕಚೇರಿಯ ಸಹೋದ್ಯೋಗಿಯ ನಂಬರ್ ನೀಡಿ ಆತನನ್ನು ಸಾಗ ಹಾಕಿದ್ದರು. ಆದರೆ, ಅದು ಆ ಯುವತಿಯದ್ದೇ ಫೋನ್ ನಂಬರ್ ಎಂದು ಭಾವಿಸಿದ್ದ ಸವಾದ್ ನಿರಂತರ ‌ಅಶ್ಲೀಲ ಮೆಸೇಜ್ ಮಾಡಲು ಆರಂಭಿಸಿದ್ದ. ಆತನ ಎಲ್ಲ ಮೆಸೇಜ್​​ಗಳಿಗೂ ಆ ಯುವತಿಯ ಸಹೋದ್ಯೋಗಿ ಯುವಕ ಉತ್ತರಿಸಿ ಆಟವಾಡಿಸಿದ್ದ.

ಸಿಎಂ ಚಿನ್ನದ ಪದಕ ಗೆದ್ದ ಇನ್ಸ್‌ಪೆಕ್ಟರ್‌ ವಿರುದ್ಧ 50 ಗ್ರಾಮ್‌ ಚಿನ್ನ ಕದ್ದ ಆರೋಪ

ಸಿಎಂ ಪದಕ ಗೆದ್ದ ಇನ್ಸ್‌ಪೆಕ್ಟರ್‌ ವಿರುದ್ಧ ಚಿನ್ನ ಕದ್ದ ಆರೋಪ

CM Gold Medal: ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಬಂದಿದೆ. ಬಾಲಕೃಷ್ಣ ನಾಯಕ್‌ ವಿರುದ್ದ ಗಂಭೀರ ಆರೋಪ ಕೇಳಿ ಬಂದಿದೆ.

Manipal Foundation: ದಕ್ಷಿಣ ಕನ್ನಡ ಆರೋಗ್ಯ ಇಲಾಖೆಗೆ ಲಸಿಕೆ ಸಂಗ್ರಹಿಸುವ ರೆಫ್ರಿಜರೇಟರ್ ದಾನ ನೀಡಿದ ಮಣಿಪಾಲ್ ಫೌಂಡೇಶನ್

ದಕ್ಷಿಣ ಕನ್ನಡ ಆರೋಗ್ಯ ಇಲಾಖೆಗೆ ಲಸಿಕೆ ಸಂಗ್ರಹಿಸುವ ರೆಫ್ರಿಜರೇಟರ್ ದಾನ

ಜಿಲ್ಲಾ ಆರೋಗ್ಯ ಇಲಾಖೆಗೆ 11 ಎಂವೊಲಿಯೊ ಪೋರ್ಟೆಬಲ್ ಬ್ಯಾಟರಿ ಚಾಲಿತ ಲಸಿಕೆ ಸಂಗ್ರಹಿಸುವ ರೆಫ್ರಿಜರೇಟರ್ನ್ನು ಕೊಡುಗೆಯಾಗಿ ನೀಡಿದೆ. ಮಾ.26 ರಂದು ಡಾ.ಬಿ ಆರ್.ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯಲ್ಲಿ ಅಧಿಕೃತ ಹಸ್ತಾಂತರ ಸಮಾರಂಭ ನಡೆಯಿತು.

Dharmasthala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಖಂಡಿಸಿ ನಾಳೆ ಪ್ರತಿಭಟನಾ ಸಮಾವೇಶ

ವೀರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಖಂಡಿಸಿ ಪ್ರತಿಭಟನಾ ಸಮಾವೇಶ

Dharmasthala: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅವಹೇಳನ ವಿರೋಧಿಸಿ ಕ್ಷೇತ್ರದ ಭಕ್ತರಿಂದ ಬೃಹತ್ ಸಭೆ ಆಯೋಜಿಸಲಾಗಿದೆ. ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಗ್ರಾಮಸ್ಥರು, ಭಕ್ತರು ಹಾಗೂ ಅಭಿಮಾನಿಗಳು ಸೇರಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡುವುದನ್ನು ಖಂಡಿಸಿದ್ದಾರೆ.

Canara Bank: ಕೆನರಾ ಬ್ಯಾಂಕ್; ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆ.ಎಸ್.ಮಜುಂದಾರ್ ನೇಮಕ

ಕೆನರಾ ಬ್ಯಾಂಕ್ ಗೆ ಕಾರ್ಯನಿರ್ವಾಹಕ ನಿರ್ದೇಶಕರ ನೇಮಕ

ಎಸ್. ಕೆ. ಮಜುಂದಾರ್  ಅವರನ್ನು ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಾ.24 ರಂದು ಎಸ್. ಕೆ. ಮಜುಂದಾರ್ ಅವರು ಅಧಿಕಾರ ವಹಿಸಿಕೊಂಡಿದ್ದು, ಈ ಹಿಂದೆ ಅವರು ಕೆನರಾ ಬ್ಯಾಂಕಿನ ಮುಖ್ಯ ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಈಗಿನ ಮಕ್ಕಳಿಗೆ ರಾಜ್ಯದ ಮುಖ್ಯಮಂತ್ರಿ ಯಾರು, ದೇಶದ ಪ್ರಧಾನಮಂತ್ರಿ ಯಾರು ಅಂತ ಕೇಳಿದರೆ ಗೊತ್ತಿರುವುದಿಲ್ಲ. ಇವೆಲ್ಲಾ ಮಣ್ಣಿನ ಮಕ್ಕಳಿಗೂ, ಮೊಬೈಲ್ ಮಕ್ಕಳಿಗೂ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

John Doe order: ಧರ್ಮಸ್ಥಳದ ವಿರುದ್ಧ ಮಾನಹಾನಿ ಮಾಡದಂತೆ ಆದೇಶ; ಏನಿದು ಜಾನ್‌ ಡೋ ಆ‌ರ್ಡರ್  ಅಂದ್ರೆ?

ಧರ್ಮಸ್ಥಳದ ವಿರುದ್ಧ ಮಾನಹಾನಿ ಮಾಡದಂತೆ ಆದೇಶ; ಏನಿದು ಜಾನ್‌ ಡೋ ಆರ್ಡರ್?

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಕೋರ್ಟ್‌ ಜಾನ್‌ ಡೋ ಆದೇಶದ ಮೂಲಕ ಸೂಚಿಸಿದೆ. ಏನಿದು ಜಾನ್‌ ಡೋ ಆದೇಶ? ವಿವರ ಇಲ್ಲಿದೆ.

Dharmastala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

ಧರ್ಮಸ್ಥಳ ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಕೋರ್ಟ್ ಸೂಚನೆ

Dharmastala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಜಾನ್ ಡೋ (ಅಶೋಕಕುಮಾರ್) ಆದೇಶ ಹೊರಡಿಸಿದೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಸೂಚಿಸಿದೆ.

Chakravarthy Sulibele: ಅನ್ಯ ಧರ್ಮೀಯರನ್ನು ಮದುವೆಯಾಗಲು ಕರೆ ಕೊಟ್ಟಿದ್ದ ಸೂಲಿಬೆಲೆ ವಿರುದ್ಧ ಎಫ್‌ಐಆರ್‌

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

Chakravarthy Sulibele: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ನೀಡಿದ ದೂರಿನ‌ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Drug mafia: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ; 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಬೆಂಗಳೂರಲ್ಲಿ 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

Drug mafia: ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹತ್ತಿರದ ನೀಲಾದ್ರಿ ನಗರ ಎಂಬಲ್ಲಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಪಡೆದು, ಅವರ ಬಳಿಯ ಎರಡು ಟ್ರಾಲಿ ಟ್ರಾವೆಲ್ ಬ್ಯಾಗ್​ನಲ್ಲಿ ತಂದಿದ್ದ 75 ಕೋಟಿ ಮೌಲ್ಯದ 37.878 ಕೆ.ಜಿ ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Vamana Nandavara: ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Crime news: ಮಂಗಳೂರಿನಲ್ಲಿ ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

ಮಂಗಳೂರಿನಲ್ಲಿ ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

ಕಳೆದ ಜನವರಿಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ಮುಸ್ಲಿಂ ಧರ್ಮಗುರು ಸಫ್ವಾನ್ ಎಂಬವರ ಮೇಲೆ ಗುಂಡು ಹಾರಿಸಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆಗೆ ಇಳಿದ ಪೊಲೀಸರು ಸತತ ಎರಡು ತಿಂಗಳ ಕಾರ್ಯಾಚರಣೆ ಬಳಿಕ ಕೇರಳ ಮೂಲಕ ನಟೋರಿಯಸ್ ಅಂತಾರಾಜ್ಯ ಕ್ರಿಮಿನಲ್​​ಗಳನ್ನು ಬಂಧಿಸಿದ್ದಾರೆ.

Crime News: ಮಂಗಳೂರಿನಲ್ಲೊಂದು ವಿಚಿತ್ರ ಘಟನೆ; ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಕಂಪೌಂಡ್‌ನಲ್ಲಿ ನೇತಾಡಿದ ಮಹಿಳೆ!

ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಕಂಪೌಂಡ್‌ನಲ್ಲಿ ನೇತಾಡಿದ ಮಹಿಳೆ!

ಅಕ್ಕಪಕ್ಕದ ಮನೆಯವರ ನಡುವೆ ತಕರಾರು ಇದ್ದು, ಇದೇ ವಿಚಾರಕ್ಕೆ ಮುರಳಿ ಪ್ರಸಾದ್​ನನ್ನು ಕೊಲ್ಲಲು ಸತೀಶ್ ಕುಮಾರ್​​ ಎಂಬಾತ ಸ್ಕೆಚ್ ಹಾಕಿದ್ದ. ಅದರಂತೆ ನಿನ್ನೆ ಮುರಳಿ ಪ್ರಸಾದ್​ ಬೈಕ್​ನಲ್ಲಿ ಹೋಗುತ್ತಿರುವುದನ್ನು ನೋಡಿ ಸತೀಶ್ ಕುಮಾರ್ ಕಾರಿನಿಂದ ಗುದ್ದಲು ಪ್ರಯತ್ನಿಸಿದ್ದಾನೆ.

Educational Fair: ಏ. 12, 13ರಂದು ಪುತ್ತೂರಿನಲ್ಲಿ ಶೈಕ್ಷಣಿಕ ಮೇಳ 2025

ಏ.12, 13ರಂದು ಪುತ್ತೂರಿನಲ್ಲಿ ಶೈಕ್ಷಣಿಕ ಮೇಳ 2025

Educational Fair: ಪುತ್ತೂರಿನ ಸುದಾನ ರೆಸಿಡೆನ್ಶಿಯಲ್‌ ಸ್ಕೂಲ್‌ನ ಎಡ್ವರ್ಡ್‌ ಕನ್ವೆನ್ಷನ್‌ ಹಾಲ್‌ನಲ್ಲಿ ಏಪ್ರಿಲ್‌ 12 ಮತ್ತು 13 ರಂದು ಎರಡು ದಿನಗಳ ಕಾಲ ʼಶೈಕ್ಷಣಿಕ ಮೇಳ 2025ʼ ಆಯೋಜಿಸಲಾಗಿದೆ. ಈ ಶೈಕ್ಷಣಿಕ ಮೇಳ 2025 ಕ್ಕೆ ಉಚಿತ ಪ್ರವೇಶವಿದ್ದು, ನೋಂದಣಿಗೆ ಏ.10 ಕೊನೆಯ ದಿನಾಂಕವಾಗಿದೆ. ಈ ಕುರಿತ ವಿವರ ಇಲ್ಲಿದೆ.

Katrina Kaif: ಸರ್ಪ ಸಂಸ್ಕಾರ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಟಿ ಕತ್ರಿನಾ ಕೈಫ್ ನಿರ್ಗಮನ

ಕುಕ್ಕೆ ಸುಬ್ರಹ್ಮಣ್ಯದಿಂದ ನಟಿ ಕತ್ರಿನಾ ಕೈಫ್ ನಿರ್ಗಮನ

Katrina Kaif: ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಸರ್ಪ ಸಂಸ್ಕಾರ ಸೇವೆ ಸಹಿತ ವಿವಿಧ ಪೂಜೆಗಳನ್ನು ನೆರವೇರಿಸಿ ಮುಂಬೈಗೆ ವಾಪಸ್‌ ತೆರಳಿದ್ದಾರೆ. ಸಂತಾನ ಪ್ರಾಪ್ತಿಗಾಗಿ ಅವರು ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ್ದಾರೆ ಎನ್ನಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟಿ ಕತ್ರಿನಾ ಕೈಫ್‌, ನಾಳೆ ಸರ್ಪ ಸಂಸ್ಕಾರ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟಿ ಕತ್ರಿನಾ ಕೈಫ್‌, ನಾಳೆ ಸರ್ಪ ಸಂಸ್ಕಾರ

ಕತ್ರೀನಾ ಕೈಫ್‌ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದು, ನಾಳೆಯ ಸರ್ಪ ಸಂಸ್ಕಾರ ಕಾರ್ಯಕ್ರಮಕ್ಕೆ ನೋಂದಾಯಿಸಿದ್ದಾರೆ. ಈ ಸರ್ಪ ಸಂಸ್ಕಾರವನ್ನು ಸಾಂಪ್ರದಾಯಿಕವಾಗಿ ಕ್ಷೇತ್ರದ ವಿಧಿವಿಧಾನಗಳಂತೆ ನೆರವೇರಿಸಲಾಗುತ್ತದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

Shiradi Ghat: ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ: ಎಷ್ಟು ದಿನ, ವಿವರ ಇಲ್ಲಿದೆ

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ: ಎಷ್ಟು ದಿನ, ವಿವರ ಇಲ್ಲಿದೆ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಉದ್ದೇಶಿಸಿತ್ತು ಇದೀಗ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.

Chakravarthy Sulibele: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ ಕರೆ

ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ ಕರೆ

ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ ಅವರು ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಡಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.