ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣ ಕನ್ನಡ

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ!

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಇನ್ನು ಜೂನ್‌ 9ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Ministry for U T Khader: ಕರಾವಳಿಗೆ ಖಾದರ್ ಸಾಹೇಬರ ಖದರ್ ಆಡಳಿತ ಭಾಗ್ಯ!

ಕರಾವಳಿಗೆ ಖಾದರ್ ಸಾಹೇಬರ ಖದರ್ ಆಡಳಿತ ಭಾಗ್ಯ!

ಕ್ಷೇತ್ರದ ಶಾಸಕರಾಗಿ ಸತತ ಐದು ಬಾರಿ ಆಯ್ಕೆಯಾಗಿ, ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿರುವ ಯು.ಟಿ.ಖಾದರ್ ಅವರು ಅತ್ಯಂತ ಪ್ರಭಾವಶಾಲಿ ಹಾಗೂ ಜನಪ್ರಿಯ ನಾಯಕರಲ್ಲಿ ಒಬ್ಬರು. ಕಾನೂನು ಪದವೀಧರರಾದ ಇವರು, ಸೇಂಟ್ ಅಲೋಶಿಯಸ್ ಮತ್ತು ಎಸ್‌ಡಿ ಎಂ ಕಾಲೇಜುಗಳಲ್ಲಿ ಶಿಕ್ಷಣ ಮುಗಿಸಿದರು. ವಿದ್ಯಾರ್ಥಿ ದಿಸೆಯಿಂದಲೇ ಎನ್‌ಎಸ್‌ಯುಐ ಸಂಘಟನೆ ಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಹಂತಹಂತವಾಗಿ ಬೆಳೆದರು.

Dharmasthala: ಸರಕಾರಗಳಿಗೇ ಮಾದರಿಯಾದ ಧರ್ಮಸ್ಥಳದ ವಿಕಾಸ ಪಥ

ಸರಕಾರಗಳಿಗೇ ಮಾದರಿಯಾದ ಧರ್ಮಸ್ಥಳದ ವಿಕಾಸ ಪಥ

ಧರ್ಮಸ್ಥಳದ ಧರ್ಮಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ದೂರದೃಷ್ಟಿಯ ಫಲವಾಗಿ ಮೂಡಿ ಬಂದ ಗ್ರಾಮೀಣಾಭಿ ವೃದ್ಧಿ ಯೋಜನೆ, ರುಡ್ಸೆಟ್ ಮತ್ತು ಸಿರಿ’ ಗ್ರಾಮೋದ್ಯೋಗ ಸಂಸ್ಥೆಗಳು ಇಂದು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶದ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದಿಕ್ಸೂಚಿಯಾಗಿವೆ.

ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಪ್ರಲ್ಹಾದ್‌ ಜೋಶಿ ವ್ಯಂಗ್ಯ

ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಜೋಶಿ

Pralhad Joshi: ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅವಮಾನಿಸಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ, ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದು ದೂರಿದ್ದಾರೆ.

ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ ಜಿಯೊ ಮೊಬೈಲ್‌ ಟವರ್‌ಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಾಲನೆ

ಬೆಳ್ತಂಗಡಿಯಲ್ಲಿ ಜಿಯೊ ಮೊಬೈಲ್‌ ಟವರ್‌ಗೆ ವೀರೇಂದ್ರ ಹೆಗ್ಗಡೆ ಚಾಲನೆ

ಧರ್ಮಸ್ಥಳದ ಪ್ರತಿಷ್ಠಿತ ಗ್ರಾಮೋದ್ಯೋಗ ಸಂಸ್ಥೆಯಾಗಿರುವ, ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ ಸಂಸ್ಥೆಯಲ್ಲಿ ರಿಲಯನ್ಸ್‌ ಜಿಯೊದ ಹೊಸ ಮೊಬೈಲ್‌ ಟವರ್‌ ಅನ್ನು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಾಲಯ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಮುಂದಿನ ತಿಂಗಳಲ್ಲೇ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ: ವಿ. ಸೋಮಣ್ಣ

ಜೂನ್‌ನಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ಸೇವೆ

Mangaluru to Bengaluru vande bharat express: ಮಂಗಳೂರು ಮತ್ತು ಬೆಂಗಳೂರು ಮಾರ್ಗದಲ್ಲಿ ಈಗಾಗಲೇ ವಿದ್ಯುದ್ದೀಕರಣ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೆಲವು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆ ಪಟ್ಟಿಯಲ್ಲಿ ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಕೂಡ ಸೇರಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವಾಸ್ ಕತಾರ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾರ್ಥಿಗಳಲ್ಲಿ ತಮ್ಮ ಸಾಮರ್ಥ್ಯದ ಮೇಲೆ ಭರವಸೆ, ಪ್ರೋತ್ಸಾಹ ಮತ್ತು ನಂಬಿಕೆಯನ್ನು ಹೆಚ್ಚಿಸುವ ಸಲುವಾಗಿ ಬಿಲ್ಲವಾಸ್ ಕತಾರ್ ವತಿಯಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಇತ್ತೀಚೆಗೆ ವಿತರಿಸಲಾಯಿತು. ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಕುದ್ರೋಳಿಯ ಶ್ರೀ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಸನ್ಮಾನ

ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಸನ್ಮಾನ

ಸ್ವಂತ ಭೂಮಿ ಬಿಟ್ಟುಕೊಟ್ಟು ಸಹಕರಿಸಿದ ತಾಲೂಕಿನ ವಿವಿಧ ಗ್ರಾಮಗಳ ಭೂ ಮಾಲೀಕರು ಹಾಗೂ ರೈತರನ್ನು ಯುಕೆಟಿಎಲ್ ಕಂಪೆನಿಯ ವ್ಯವಸ್ಥಾಪಕರಾದ ಆಗ್ನೆಸ್ ಗೋನ್ಸಾಲ್ವಿಸ್ ಅವರು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ, ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಹಸ್ತಾಂತರಿಸಿ ಅಭಿನಂದಿಸಿದ್ದಾರೆ.

Scholarship Distribution: ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಣೆ

ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಣೆ

Billawas Qatar: ಬಿಲ್ಲವಾಸ್ ಕತಾರ್ ವತಿಯಿಂದ ಮಂಗಳೂರಿನ ಕುದ್ರೋಳಿಯ ಶ್ರೀ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಹ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗಣ್ಯರು, ಸಮುದಾಯದ ಮುಖಂಡರು, ಪೋಷಕರು ಮತ್ತು ವಿದ್ಯಾರ್ಥಿಗಳ ಸ್ಫೂರ್ತಿದಾಯಕ ಸಹಭಾಗಿತ್ವದೊಂದಿಗೆ ಸಭೆಯು ಎಲ್ಲರ ಗಮನ ಸೆಳೆಯಿತು.

Mangaluru Rains: ಹವಾಮಾನ ವೈಪರೀತ್ಯ; ಮಂಗಳೂರಿನಲ್ಲಿ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು!

ಮಂಗಳೂರಿನಲ್ಲಿ ಭಾರಿ ಮಳೆ; ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು!

ಹವಾಮಾನ ವೈಪರೀತ್ಯದ ಹಿನ್ನೆಲೆ ಮಂಗಳೂರಿನ ವಿಟ್ಲದ ಬಳಿ ಗುರುವಾರ ಸಂಜೆ ವಿಮಾನಗಳು ಆಕಾಶದಲ್ಲೇ ಗಿರಕಿ ಹೊಡೆದಿವೆ. ತೀರ ಕೆಳಭಾಗದಲ್ಲೇ ವಿಮಾನಗಳು ಹಾರಾಟ ನಡೆಸಿದ್ದರಿಂದ ವಿಟ್ಲದ ಜನರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಸುಮಾರು ಅರ್ಧ ಗಂಟೆ ಬಳಿಕ ವಿಮಾನಗಳು ಸುರಕ್ಷಿತವಾಗಿ ಲ್ಯಾಂಡ್‌ ಆಗಿವೆ.

ಸ್ಪೀಕರ್ ಯು.ಟಿ. ಖಾದರ್ ಮೇಲೆ ಹಲ್ಲೆಗೆ ಯತ್ನ ಕೇಸ್‌; 11 ಜನರ ವಿರುದ್ಧ ಪ್ರಕರಣ ದಾಖಲು

ಸ್ಪೀಕರ್ ಯು.ಟಿ. ಖಾದರ್ ಮೇಲೆ ಹಲ್ಲೆಗೆ ಯತ್ನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ನಡೆದಿದ್ದ ಕಾರ್ಯಕ್ರಮದಲ್ಲಿ ಖಾದರ್‌ ಭಾಗವಹಿಸಿದ್ದರು.

ಗೃಹಲಕ್ಷ್ಮಿ ಯೋಜನೆ ದುರುಪಯೋಗ; ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ

ಮೃತರ ಹೆಸರಿಗೆ ಗೃಹಲಕ್ಷ್ಮಿ ಯೋಜನೆಯ 22 ಕೋಟಿ ರುಪಾಯಿ ಜಮೆ

Gruhalakshmi Scheme: ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 ಕೋಟಿ ರುಪಾಯಿ ವರ್ಗಾಯಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದ್ದು ಸಮಗ್ರ ತನಿಖೆ ನಡೆಯುತ್ತಿದೆ.

ಡ್ರಗ್ಸ್ ಮಾಫಿಯಾ ತಡೆಗೆ ಮಂಗಳೂರು ಪೊಲೀಸರ ಪಣ

ಡ್ರಗ್ಸ್ ಮಾಫಿಯಾ ತಡೆಗೆ ಮಂಗಳೂರು ಪೊಲೀಸರ ಪಣ

ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ನೇತೃತ್ವದಲ್ಲಿ ಕಳೆದ 11 ತಿಂಗಳಿಂದ ನಡೆದ ನಿರ್ದಾಕ್ಷಿಣ್ಯ ಕಾರ್ಯಾಚರಣೆ ಹಾಗೂ ಬೃಹತ್ ಜಾಗೃತಿ ಅಭಿಯಾನ ಗಳು ಡ್ರಗ್ ಮಾಫಿಯಾಕ್ಕೆ ಒಂದು ಲೆಕ್ಕದಲ್ಲಿ ಮರಣಶಾಸನ ಭೀತಿ ಮೂಡಿಸಿದೆ. ಕೇವಲ ಪೆಡ್ಲರ್‌ಗಳ ಬಂಧನಕ್ಕೆ ಸೀಮಿತವಾಗದ ಈ ಸಮರ, ಹೆತ್ತವರು ಮತ್ತು ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡ ಬೃಹತ್ ಸಾಮಾಜಿಕ ಚಳವಳಿಯಾಗಿ ರೂಪಾಂತರಗೊಂಡಿದೆ.

Sustainable Data Park: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

Sustainable Data Park: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಾಂಬರ್ಸ್‌ನ ʼಬ್ರದರ್ಸ್ʼ ಅನ್ನೋ ಪಕ್ಷವನ್ನು ಭಾರತ ಸ್ವೀಕರಿಸದು: ಜೋಶಿ

ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ: ಜೋಶಿ

Pralhad Joshi: ಭಯೋತ್ಪಾದನೆಯಲ್ಲಿ ತೊಡಗಿದವರನ್ನು ʼಬ್ರದರ್ಸ್ʼ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ' ಎಂದರೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ ಅದೆಷ್ಟು ಅಪಾಯಕಾರಿ ಮಾತು ಆತಂಕಕಾರಿ ಎಂಬುದು ಬಹಿರಂಗಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಮಂಗಳೂರು ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಿಂದ ಎಐ ಮತ್ತು ಇಂಡಸ್ಟ್ರಿ 5.0 ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ಎಐ ಮತ್ತು ಇಂಡಸ್ಟ್ರಿ 5.0: ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ತಾಂತ್ರಿಕವಾಗಿ ಮುಂದುವರಿದ ಮತ್ತು ಮಾನವ ಕೇಂದ್ರಿತ ಭವಿಷ್ಯವನ್ನು ನಿರ್ಮಿಸುವಲ್ಲಿ ಕೃತಕ ಬುದ್ಧಿಮತ್ತೆಯು ವಿಕಸನಗೊಳ್ಳುತ್ತಿರುವುದರ ಕುರಿತು ಚರ್ಚಿಸಲು ಶೈಕ್ಷಣಿಕ ತಜ್ಞರು, ಉದ್ಯಮ ಮುಖಂಡರು, ನೀತಿ ನಿರೂಪಕರು ಮತ್ತು ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತರುವುದು ಈ ವಿಚಾರಸಂಕಿರಣದ ಮುಖ್ಯ ಗುರಿಯಾಗಿದೆ.

Dakshina Kannada: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು. ಶೈಕ್ಷಣಿಕ ಸಾಧನೆ, ಶಿಸ್ತು ಮತ್ತು ಪರಿಶ್ರಮದ ಸಮನ್ವಯಕ್ಕೆ ಪ್ರತೀಕ ವಾಗಿರುವ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಈ ಸಾಲಿನ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ ದಾಖಲಿಸಿ ಮತ್ತೊಮ್ಮೆ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ.

Fraud Case: ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ ಮಹತ್ವದ ಆದೇಶ

ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಆರೋಪಿ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥ ಆಗಿಸುವುದು ಸರಿಯಲ್ಲ. ತಂದೆ ಆಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.ಇದೀಗ ಜೀವನಾಂಶ ಆದೇಶ ಕೂಡ ನೀಡಿದೆ.

Karantara Suliyalli Book Release: ʼಕಾರಂತರ ಸುಳಿಯಲ್ಲಿʼ ಕೃತಿ ಸಾಸ್ತಾನದಲ್ಲಿ ಏ.25ರಂದು ಅನಾವರಣ

ʼಕಾರಂತರ ಸುಳಿಯಲ್ಲಿʼ ಕೃತಿ ಸಾಸ್ತಾನದಲ್ಲಿ ಏ.25ರಂದು ಅನಾವರಣ

ಏಪ್ರಿಲ್‌ 25ರಂದು ಸಂಜೆ 4.30 ಗಂಟೆಗೆ ಸಾಸ್ತಾನದ ಕೋಸ್ಟಲ್‌ ಪ್ಯಾರಡೈಸ್‌ನಲ್ಲಿ ಶಿವರಾಮ ಕಾರಂತರ ಕುರಿತ 'ಕಾರಂತರ ಸುಳಿಯಲ್ಲಿ’ ಪುಸ್ತಕ ಅನಾವರಣಗೊಳ್ಳಲಿದೆ. ಕೃತಿಯನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆ ಮಾಡುವರು.

SSLC Result: ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ವಿದ್ಯಾರ್ಥಿನಿ ಜಿ ಮಾಧುರ್ಯ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲೇ ಅಲ್ಲದೆ ಸಾಂಸ್ಕೃ ತಿಕ ಕ್ಷೇತ್ರದಲ್ಲಿಯೂ ಪ್ರತಿಭಾವಂತಳಾಗಿದ್ದು, ಉತ್ತಮ *ನೃತ್ಯಗಾತಿಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಅಕ್ಷರ ಜೋಡಣೆ, ಪ್ರಬಂಧ ರಚನೆ, ಕಥೆ ಹಾಗೂ ಕವನ ರಚನೆಯಲ್ಲಿ ವಿಶಿಷ್ಟ ಸಾಮರ್ಥ್ಯ ತೋರಿದ್ದಾರೆ.

ಯಕ್ಷಗಾನದಲ್ಲಿ ʼರಾಮಾಯಣʼಕ್ಕೆ ಅವಮಾನ? ವಿವಾದದ ಬೆನ್ನಲ್ಲೇ ʼವಿಶ್ವವಾಣಿʼಗೆ ಕಲಾವಿದ ದಿನೇಶ್‌ ಕೋಡಪದವು ಫಸ್ಟ್‌ ರಿಯಾಕ್ಷನ್‌

ನಾನೂ ರಾಮನ ಭಕ್ತ: ವಿವಾದ ಬೆನ್ನಲ್ಲೇ ಯಕ್ಷಗಾನ ಕಲಾವಿದ ದಿನೇಶ್‌ ಸ್ಪಷ್ಟನೆ

Yakshagana Controversy: ದಕ್ಷಿಣ ಕನ್ನಡದ ಜನಪ್ರಿಯ ಬಪ್ಪನಾಡು ಮೇಳದ ತುಳು ಯಕ್ಷಗಾನ ಪ್ರದರ್ಶನದ ವೇಳೆ ಹಾಸ್ಯ ಕಲಾವಿದ ದಿನೇಶ್‌ ಕೋಡಪದವು ಹಿಂದೂಗಳ ಪವಿತ್ರ ಮಹಾಕಾವ್ಯ ʼರಾಮಾಯಣʼವನ್ನು ತಿರುಚಿದ್ದಲ್ಲದೆ ರಾಮನನ್ನು ಅವಮಾನಿಸಿದ್ದಾರೆ ಎನ್ನುವ ವಿಚಾರ ಸದ್ಯ ಸಂಚಲನ ಮೂಡಿಸಿದೆ. ಇದೀಗ ಅವರು ʼವಿಶ್ವವಾಣಿ ಟಿವಿʼ ಯೂಟ್ಯೂಬ್‌ ಚಾನೆಲ್‌ ಜತೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Loading...