ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣ ಕನ್ನಡ

MLA Umesh Kotian Interview: ಜನಸೇವೆ ನನ್ನ ಧರ್ಮ, ಕ್ಷೇತ್ರ ಅಭಿವೃದ್ದಿ ನನ್ನ ಗುರಿ

ಜನಸೇವೆ ನನ್ನ ಧರ್ಮ, ಕ್ಷೇತ್ರ ಅಭಿವೃದ್ದಿ ನನ್ನ ಗುರಿ

ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಯಶಸ್ವಿ ಎರಡನೇ ಅವಧಿ ಪೂರೈಸುತ್ತಿರುವ ಉಮಾನಾಥ್ ಎ.ಕೋಟ್ಯಾನ್ ಅವರು ಮೂಲತಃ ತಳಮಟ್ಟದಿಂದ ಬೆಳೆದು ಬಂದ ನಾಯಕ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಸಾಮಾನ್ಯ ಹಳ್ಳಿಯ ಹಿನ್ನೆಲೆಯಿಂದ ಬಂದು, ಕಷ್ಟ-ನಷ್ಟಗಳನ್ನು ಉಂಡು, ಇಂದು ಸತತ ಎರಡನೇ ಬಾರಿಗೆ ಶಾಸಕರಾಗಿ ಕ್ಷೇತ್ರವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದ್ದಾರೆ.

Bantwal News: ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು, ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್‌ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧಕ್ಕೆ ಸರ್ಕಾರ ಮುಂದು; ಆರೋಗ್ಯ ಸಚಿವರಿಂದ ಸೂಚನೆ

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧ?

ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಅರೆಸ್ಟ್‌; ಇಲಿಪಾಷಾಣ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್‌ ನಿನ್ನೆ ಕೊಲೆ ಮಾಡಿದ್ದ.

Bantwal Murder: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ! Video

ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ!

ಯುವತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇಂದು ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಹಿಂಬಾಲಿಸಿದ ಆರೋಪಿ, ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಆರೋಪ ಪ್ರಕರಣ: 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ಐಟಿ

ಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ಐಟಿ

Dharmasthala mass burial allegation case: ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ಗಮನಸೆಳೆದಿದ್ದ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಜು.14) ನ್ಯಾಯಾಲಯಕ್ಕೆ ತನ್ನ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದೆ.

ಮಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Mangaluru News: ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಕೆಳಗೆ ಜಿಗಿದು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Mangaluru News: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಮಂಗಳೂರಿನಲ್ಲಿ ಕಂಡಕ್ಟರ್‌ ಇರ್ಫಾನ್‌ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಕಂಡಕ್ಟರ್‌ ಅರೆಸ್ಟ್‌

ಬಸ್‌ನಲ್ಲಿ ವಿದ್ಯಾರ್ಥಿನಿಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು

Vedavyas Kamath: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ. ವೇದವ್ಯಾಸ್ ಕಾಮತ್ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

Weather Report: ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ

ಬ್ರಿಡ್ಜ್ ಮ್ಯಾನ್ ಖ್ಯಾತಿಯ ಡಾ.ಗಿರೀಶ್ ಭಾರದ್ವಾಜ್ ನಿಧನ

Girish Bharadwaj: ದೇಶದ ಬ್ರಿಡ್ಜ್ ಮ್ಯಾನ್’ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Karnataka Weather: ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Today's Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಳೆದ ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿದೆ. ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿಯಲ್ಲಿ ಭೀಕರ ಮಣ್ಣು ಕುಸಿತ ಸಂಭವಿಸಿದ್ದು, ಹಂಚಿನ ಮನೆಯೊಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮಂದಿಯ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮಂದಿ ರಕ್ಷಣೆ

ಮಂಗಳೂರಿನ ಸಮುದ್ರದಲ್ಲಿ ಐಎಫ್‌ಬಿ ಮಂಜುಮಾತಾ ಮೀನುಗಾರಿಕಾ ಬೋಟ್ ಒಂದು ಮುಳುಗಿ ಅವಘಡ ಸಂಭವಿಸಿದೆ. ಸದ್ಯ ಭಾರತೀಯ ಕರಾವಳಿ ರಕ್ಷಣಾ ಪಡೆ ಆರು ಜನ ಮೀನುಗಾರರ ರಕ್ಷಣೆ ಮಾಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರದ ಮಧ್ಯೆ ಭೀಕರ ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್‌ ಮುಳುಗಡೆಯಾಗಿದೆ.

ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರಂಗಕ್ಕೆ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ; ಸಂಸದ ಕ್ಯಾ. ಬ್ರಿಜೇಶ್‌ ಚೌಟ ಪತ್ರಕ್ಕೆ ಮನ್ನಣೆ

ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರಂಗಕ್ಕೆ ಕೇಂದ್ರ ಸರ್ಕಾರ ಸೂಚನೆ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಂಗಾಂಗ ಕಸಿ ಪ್ರಕರಣಗಳಲ್ಲಿ ಪಾರದರ್ಶಕತೆ ತರಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ನಿರ್ದೇಶಕ ಡಾ. ಅನಿಲ್‌ ಕುಮಾರ್‌ ಅವರಿಗೆ ಪತ್ರ ಬರೆದ ಪರಿಣಾಮ, ಅಂಗಾಂಗ ಕಸಿ ಪ್ರಕ್ರಿಯೆಯ ಫಲಿತಾಂಶಗಳ ದತ್ತಾಂಶಗಳನ್ನು ಕಡ್ಡಾಯವಾಗಿ ದಾಖಲು ಮಾಡಲು ಆಸ್ಪತ್ರೆಗೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

Bidadi township: ಬಿಡದಿಯಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಜೆಪಿ ಬಿಡಲ್ಲ; ಶೀಘ್ರದಲ್ಲೇ ಹೋರಾಟ ಎಂದ ವಿಜಯೇಂದ್ರ

ಬಿಡದಿಯಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಜೆಪಿ ಬಿಡಲ್ಲ: ವಿಜಯೇಂದ್ರ

BY Vijayendra: ಜನವಿರೋಧಿ, ಬಡವರ ವಿರೋಧಿ, ರೈತರ ವಿರೋಧಿ, ಯುವಕರ ವಿರೋಧಿ ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಮುಂಬರುವ ದಿನಗಳಲ್ಲಿ ಬುಡಸಮೇತ ಕಿತ್ತು ಹಾಕುವ ಕೆಲಸವು ನಮ್ಮೆಲ್ಲ ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಆಗಲಿದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನನ್ನ, ಡಿಕೆಶಿ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ, ಆತ್ಮೀಯತೆಯೂ ಇಲ್ಲ: ಬಿ.ವೈ. ವಿಜಯೇಂದ್ರ

ನನ್ನ, ಡಿಕೆಶಿ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ: ವಿಜಯೇಂದ್ರ

BY Vijayendra: ನನ್ನ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Surathkal News: ಪ್ರೀತಿಸುವುದಾಗಿ ನಂಬಿಸಿ ಗರ್ಭಿಣಿಯಾಗಿಸಿದ ಯುವಕ; ಡೆತ್‌ನೋಟ್‌ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಗರ್ಭಿಣಿಯಾಗಿಸಿ ವಂಚಿಸಿದ ಯುವಕ; ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಡೆತ್‌ನೋಟ್‌ನಲ್ಲಿ, ನಾನು ತಪ್ಪು ಮಾಡಿದ್ದೇನೆ. ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ ಅಮ್ಮ. ಇನ್ನು ಬದುಕಲು ಸಾಧ್ಯವಿಲ್ಲ. ನನಗೆ ಮೋಸ ಮಾಡಿ ಅವನು ಆರಾಮಾಗಿದ್ದಾನೆ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು ಎಂದು ಬಾಲಕಿ ಬರೆದಿದ್ದಾಳೆ. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್‌ ದಾಖಲಾಗಿದೆ.

Puttur News: ನಾಪತ್ತೆಯಾಗಿದ್ದ ಸಾಕು ನಾಯಿ ‘ಚಿನ್ನು’ ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ರೂ. ಬಹುಮಾನ ನೀಡಿದ ಮಾಲೀಕ!

ಸಾಕು ನಾಯಿ 'ಚಿನ್ನು' ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ಬಹುಮಾನ!

ಮೂರು ವಾರಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಪುತ್ತೂರಿನ ಶ್ವಾನಪ್ರೇಮಿ ಗಣೇಶ್ ಕೇರ ಅವರು ಜಾಹೀರಾತು ನೀಡಿದ್ದರು. ಇದಾದ ಬಳಿಕ ಪೋಳ್ಯ ಪರಿಸರದವರೇ ಆದ ಪುರಂದರ ಎಂಬುವವರು ಈ ನಾಯಿಯನ್ನು ಯಶಸ್ವಿಯಾಗಿ ಹುಡುಕಿಕೊಟ್ಟಿದ್ದಾರೆ. ಅವರಿಗೆ ನಾಯಿಯ ಮಾಲೀಕ 50 ಸಾವಿರ ನಗದು ಬಹುಮಾನ ನೀಡಿದ್ದಾರೆ.

ಯೋಗ ಲೋಕಹಿತಾರ್ಥಾಯ

ಯೋಗ ಲೋಕಹಿತಾರ್ಥಾಯ

ನಾವು ಇಂದು ವಿಶ್ವ ಯೋಗ ದಿನಾಚರಣೆಯ ಸಂಭ್ರಮದಲ್ಲಿದ್ದೇವೆ. ಈ ಸಂದರ್ಭದಲ್ಲಿ ಯೋಗ ದಿನದ ಮಹತ್ವ ಮತ್ತು ಯೋಗ ನಮ್ಮ ಜೀವನದಲ್ಲಿ ನಿರ್ವಹಿಸುತ್ತಿರುವ ಮಹತ್ವದ ಪಾತ್ರವನ್ನು ಕುರಿತು ಚಿಂತಿಸುವುದಕ್ಕೆ ಸಕಾಲ. ಭಾರತ ದೇಶವು ಪ್ರಾಚೀನ ಕಾಲಗಳಿಂದಲೂ ಜ್ಞಾನ ವಿಜ್ಞಾನ ಗಳ ತವರೂರು. ಪ್ರಪಂಚದ ಬೇರೆ ಬೇರೆ ಭಾಗಗಳಿಂದ ಇಲ್ಲಿಗೆ ಬಂದು ಜ್ಞಾನ ಸಂಪಾದನೆಯನ್ನು ಮಾಡಿ ತೆರಳುತ್ತಿದ್ದ ಐತಿಹಾಸಿಕ ಘಟನೆಗಳನ್ನು ನಾವು ಕೇಳಿದ್ದೇವೆ.

ಮನೆ ಸಮೀಪದ ಕೆರೆಯಲ್ಲಿ ಬಿದ್ದು 5 ವರ್ಷದ ಅವಳಿ ಸಹೋದರರು ಸಾವು

ಮನೆ ಸಮೀಪದ ಕೆರೆಯಲ್ಲಿ ಬಿದ್ದು 5 ವರ್ಷದ ಅವಳಿ ಸಹೋದರರು ಸಾವು

ಮನೆ ಸಮೀಪದ ಕೆರೆಯಲ್ಲಿ ಬಿದ್ದು ಐದು ವರ್ಷದ ಇಬ್ಬರು ಅವಳಿ ಸಹೋದರರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಳ್ಯ ಗ್ರಾಮದ ಕಡೀರದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಮೃತ ಬಾಲಕರು ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ್ ಅವರ ಇಬ್ಬರು ಪುತ್ರರು ಎಂದು ತಿಳಿದುಬಂದಿದೆ.

Karnataka Weather: ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

Karnataka Weather Report: ಜೂನ್‌ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Loading...