ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣ ಕನ್ನಡ

Vande Mataram Row: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು; ಎಫ್‌ಐಆರ್‌ ದಾಖಲಿಸದಿದ್ದರೆ ಹೈಕೋರ್ಟ್‌ ಮೊರೆ ಹೋಗುವುದಾಗಿ ಬಿಜೆಪಿ ಮುಖಂಡ ವಿಕಾಸ್ ಎಚ್ಚರಿಕೆ

ʼವಂದೇ ಮಾತರಂʼ ವಿವಾದ: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು

BJP Leader Vikas Puttur: ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ರಾಷ್ಟ್ರೀಯ ಗೀತೆ ʼವಂದೇ ಮಾತರಂʼಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಕಾಸ್‌ ಪುತ್ತೂರು ದೂರು ದಾಖಲಿಸಿದ್ದಾರೆ.

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

Shivam Associates Scam: ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಹೀಗಾಗಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

Dakshina Kannada Rain: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

ನಾಳೆ ದ.ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather: ಜುಲೈ 8ರಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ವಾಲಿವಾಲ್‌ ಆಡುತ್ತಿದ್ದಾಗಲೇ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು; ಸುರತ್ಕಲ್‌ನಲ್ಲಿ ಭೀಕರ ಘಟನೆ: ವಿಡಿಯೊ ವೈರಲ್‌

ವಾಲಿವಾಲ್‌ ಆಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

Heart Attack: ಇತ್ತೀಚೆಗೆ ಯುವ ಜನತೆ ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚಾಗುತ್ತಿದ್ದು, ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದಿದೆ. ವಾಲಿಬಾಲ್‌ ಆಡುತ್ತಿದ್ದ ಲಿಖಿತ್‌ ಆಮೀನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮ್ಮರ್ ಫಾರೂಕ್  ಬಂಧಿಸಿದ NIA

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ NIA

Praveen Nettaru Murder: BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಎನ್‌ಐಎ ಬಂಧಿಸಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಪ್ರಚೋದನಕಾರಿ ದ್ವೇಷ ಭಾಷಣ; ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ

ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ!

Riyaz Parangipete: 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.

ʼʼಕೌಶಲಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿʼʼ: ವಿದ್ಯಾರ್ಥಿಗಳಿಗೆ ಸಹ ಪ್ರಧ್ಯಾಪಕಿ ಕಾವ್ಯ ಕರೆ

ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಕಾವ್ಯ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ ಬುಧವಾರ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಜರುಗಿತು. ಎಸ್‌.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಸ್ತೆ ಅಪಘಾತದಂತೆ ಬಿಂಬಿಸಿ ಕೊಲೆ: 2014ರ ಮಂಗಳೂರು ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ

2014ರ ಮಂಗಳೂರು ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಸುಮಾರು ಹತ್ತು ವರ್ಷಕ್ಕಿಂತಲೂ ಹಿಂದೆ ಮಂಗಳೂರಿನಲ್ಲಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ. 2014ರ ಮೇ 15ರಂದು ರಸ್ತೆ ಅಪಘಾತದಲ್ಲಿ ಗಂಗಾಧರ ಪಾಂಗಳ ಎಂಬವರು ಸಾವನ್ನಪ್ಪಿದ್ದು, ತನಿಖೆ ವೇಳೆ ಇದು ವೈಯಕ್ತಿಕ ದ್ವೇಷದಿಂದ ಪ್ರೇರಿತವಾದ ಯೋಜಿತ ಕೊಲೆ ಎಂಬುದು ಬಹಿರಂಗಗೊಂಡಿತ್ತು.

ಮೋದಿ ಹೆಸರಿನಲ್ಲಿ 7 ಉಚಿತ ಮನೆ ನಿರ್ಮಿಸಿದ ಕ್ಯಾನ್ಸರ್‌ ಬಾಧಿತ ವ್ಯಕ್ತಿ

ಮೋದಿ ಹೆಸರಿನಲ್ಲಿ 7 ಉಚಿತ ಮನೆ ನಿರ್ಮಿಸಿದ ಕ್ಯಾನ್ಸರ್‌ ಬಾಧಿತ ವ್ಯಕ್ತಿ

ಮೋದಿ ಮೇಲಿನ ಪ್ರೀತಿಯಿಂದ ಇದುವರೆಗೆ 7 ಮನೆಗಳನ್ನು ಉಚಿತವಾಗಿ ಕಟ್ಟಿಕೊಟ್ಟಿರುವ ಅವರು, ಒಟ್ಟು 10 ಮನೆಗಳನ್ನು ಉಚಿತವಾಗಿ ಕಟ್ಟಿಸಲು ನಿರ್ಧಾರ ಮಾಡಿದ್ದಾರೆ. ತಾವು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಬಂದ ಸಂಪೂರ್ಣ ಗೌರವ ಧನವನ್ನು 162 ಕ್ಯಾನ್ಸರ್ ಪೀಡಿತ ರೋಗಿಗಳ ಚಿಕಿತ್ಸೆಗೆ ಮೀಸಲಿಟ್ಟಿದ್ದವರು ಸಂತೋಷ್.

MLA Umesh Kotian Interview: ಜನಸೇವೆ ನನ್ನ ಧರ್ಮ, ಕ್ಷೇತ್ರ ಅಭಿವೃದ್ದಿ ನನ್ನ ಗುರಿ

ಜನಸೇವೆ ನನ್ನ ಧರ್ಮ, ಕ್ಷೇತ್ರ ಅಭಿವೃದ್ದಿ ನನ್ನ ಗುರಿ

ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಯಶಸ್ವಿ ಎರಡನೇ ಅವಧಿ ಪೂರೈಸುತ್ತಿರುವ ಉಮಾನಾಥ್ ಎ.ಕೋಟ್ಯಾನ್ ಅವರು ಮೂಲತಃ ತಳಮಟ್ಟದಿಂದ ಬೆಳೆದು ಬಂದ ನಾಯಕ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಸಾಮಾನ್ಯ ಹಳ್ಳಿಯ ಹಿನ್ನೆಲೆಯಿಂದ ಬಂದು, ಕಷ್ಟ-ನಷ್ಟಗಳನ್ನು ಉಂಡು, ಇಂದು ಸತತ ಎರಡನೇ ಬಾರಿಗೆ ಶಾಸಕರಾಗಿ ಕ್ಷೇತ್ರವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದ್ದಾರೆ.

Bantwal News: ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು, ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್‌ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧಕ್ಕೆ ಸರ್ಕಾರ ಮುಂದು; ಆರೋಗ್ಯ ಸಚಿವರಿಂದ ಸೂಚನೆ

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧ?

ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಅರೆಸ್ಟ್‌; ಇಲಿಪಾಷಾಣ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್‌ ನಿನ್ನೆ ಕೊಲೆ ಮಾಡಿದ್ದ.

Bantwal Murder: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ! Video

ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ!

ಯುವತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇಂದು ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಹಿಂಬಾಲಿಸಿದ ಆರೋಪಿ, ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಆರೋಪ ಪ್ರಕರಣ: 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ಐಟಿ

ಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ಐಟಿ

Dharmasthala mass burial allegation case: ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ಗಮನಸೆಳೆದಿದ್ದ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಜು.14) ನ್ಯಾಯಾಲಯಕ್ಕೆ ತನ್ನ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದೆ.

ಮಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Mangaluru News: ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಕೆಳಗೆ ಜಿಗಿದು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Mangaluru News: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಮಂಗಳೂರಿನಲ್ಲಿ ಕಂಡಕ್ಟರ್‌ ಇರ್ಫಾನ್‌ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಕಂಡಕ್ಟರ್‌ ಅರೆಸ್ಟ್‌

ಬಸ್‌ನಲ್ಲಿ ವಿದ್ಯಾರ್ಥಿನಿಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು

Vedavyas Kamath: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ. ವೇದವ್ಯಾಸ್ ಕಾಮತ್ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

Weather Report: ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ

ಬ್ರಿಡ್ಜ್ ಮ್ಯಾನ್ ಖ್ಯಾತಿಯ ಡಾ.ಗಿರೀಶ್ ಭಾರದ್ವಾಜ್ ನಿಧನ

Girish Bharadwaj: ದೇಶದ ಬ್ರಿಡ್ಜ್ ಮ್ಯಾನ್’ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Karnataka Weather: ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Today's Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಳೆದ ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿದೆ. ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿಯಲ್ಲಿ ಭೀಕರ ಮಣ್ಣು ಕುಸಿತ ಸಂಭವಿಸಿದ್ದು, ಹಂಚಿನ ಮನೆಯೊಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Loading...