ಜನಸೇವೆ ನನ್ನ ಧರ್ಮ, ಕ್ಷೇತ್ರ ಅಭಿವೃದ್ದಿ ನನ್ನ ಗುರಿ
ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಯಶಸ್ವಿ ಎರಡನೇ ಅವಧಿ ಪೂರೈಸುತ್ತಿರುವ ಉಮಾನಾಥ್ ಎ.ಕೋಟ್ಯಾನ್ ಅವರು ಮೂಲತಃ ತಳಮಟ್ಟದಿಂದ ಬೆಳೆದು ಬಂದ ನಾಯಕ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಸಾಮಾನ್ಯ ಹಳ್ಳಿಯ ಹಿನ್ನೆಲೆಯಿಂದ ಬಂದು, ಕಷ್ಟ-ನಷ್ಟಗಳನ್ನು ಉಂಡು, ಇಂದು ಸತತ ಎರಡನೇ ಬಾರಿಗೆ ಶಾಸಕರಾಗಿ ಕ್ಷೇತ್ರವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದ್ದಾರೆ.