ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ದಾವಣಗೆರೆ
Self Harming: ಪತ್ನಿಯ ಅಕಾಲಿಕ ಸಾವಿನ ನೋವು; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಪತ್ನಿಯ ಅಕಾಲಿಕ ಸಾವು; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

Davanagere News: ಪತ್ನಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಉದಯ್‌ (35) ಈ ಕೃತ್ಯ ಎಸಗಿದಾತ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್‌ (3) ಮೃತರು.

Physical Assault: ಕಳ್ಳತನದ ಆರೋಪ; ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ವಿಕೃತಿ

ಕಳ್ಳತನದ ಆರೋಪ; ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ವಿಕೃತಿ

ಹಕ್ಕಿಪಿಕ್ಕಿ ಜನಾಂಗದ ಅಪ್ರಾಪ್ತ ಬಾಲಕನನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಬಾಲಕನನ್ನು ಬೆತ್ತಲೆಗೊಳಿಸಿ ಆತನ ಕಾಲು ಕೈ ಕಟ್ಟಿದ್ದಾರೆ. ನಂತರ ಆತನ ಮೇಲೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಈ ಘಟನೆ ದಾವಣೆಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯಲ್ಲಿ ನಡೆದಿದೆ.

ವೆಬ್ ಸೀರಿಸ್ ನೋಡಿ ಬ್ಯಾಂಕ್‌ ದರೋಡೆ; 6 ಮಂದಿ ಬಂಧನ, 13 ಕೋಟಿ ಮೌಲ್ಯದ ಚಿನ್ನಾಭರಣ ವಶ

ವೆಬ್ ಸೀರಿಸ್ ನೋಡಿ ಬ್ಯಾಂಕ್‌ ದರೋಡೆ; 6 ಮಂದಿ ಬಂಧನ

Nyamati SBI bank robbery: ಅಕ್ಟೋಬರ್ 24 ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ನಡೆದಿತ್ತು. ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚನೆ ಮಾಡಲಾಗಿತ್ತು. ಇದೀಗ ಆರು ತಿಂಗಳ ಬಳಿಕ ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಭೇದಿಸಿ, ಆರೋಪಿಗಳನ್ನು ಬಂಧಿಸಿದೆ.

Road Accident: ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಟಿಟಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವು (death) ಕಂಡಿದ್ದು, ಐವರಿಗೆ ಗಂಭೀರವಾದ ಗಾಯಗಳಾಗಿವೆ. ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಎಂದು ಗುರುತಿಸಲಾಗಿದೆ.

Road Accident: ಎರಡು ಅಪಘಾತ, ಯುಗಾದಿ ಹಬ್ಬಕ್ಕೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ಎರಡು ಅಪಘಾತ, ಯುಗಾದಿಗೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ಉಡುಪಿ ಹಾಗೂ ದಾವಣಗೆರೆಯಲ್ಲಿ ಎರಡು ಪ್ರತ್ಯೇಕ ಅಪಘಾತಗಳು ನಡೆದಿವೆ. ಯುಗಾದಿ ಹಬ್ಬಕ್ಕೆ ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಚನ್ನಗಿರಿ ಬಳಿ ಹಿಟ್‌ ಆಂಡ್‌ ರನ್‌ ಮಾಡಿರುವ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

Self Harming: ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಗಂಡ ಹೆಂಡತಿ ನಡುವೆ ಸದಾ ಒಂದಿಲ್ಲೊಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಬುಧವಾರ ತಡರಾತ್ರಿ ಇಬ್ಬರ ನಡುವೆ ಗಲಾಟೆ ಉಲ್ಬಣಿಸಿದೆ. ಹೆಂಡತಿಯನ್ನು ನೇಣಿಗೆ ಹಾಕಿದ ಗಂಡ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Davanagere News: ಬಟ್ಟೆ ತೊಳೆಯುವ ವೇಳೆ ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು

ಬಟ್ಟೆ ತೊಳೆಯುವ ವೇಳೆ ಕೆರೆಗೆ ಬಿದ್ದು ಮೂವರು ಮಹಿಳೆಯರ ಸಾವು

Davanagere News: ದಾವಣಗೆರೆ ಜಿಲ್ಲೆಯ ಜಿಲ್ಲೆಯ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ- ದುಗ್ಗೇನಹಳ್ಳಿ ಗ್ರಾಮದ ಮಧ್ಯೆ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಅಕ್ಕ-ತಂಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

Rudrappa Lamani: ರೇಡಿಂಗ್‌ ಮೂಲಕ ಕಬಡ್ಡಿ ಟೂರ್ನಿಗೆ ಚಾಲನೆ ನೀಡಲು ಹೋಗಿ ಬಿದ್ದ ಉಪ ಸಭಾಪತಿ; ಕಾಲಿಗೆ ಪೆಟ್ಟು

ಕಬಡ್ಡಿ ಆಡುವ ವೇಳೆ ಬಿದ್ದು ಉಪ ಸಭಾಪತಿ ಕಾಲಿಗೆ ಪೆಟ್ಟು

Rudrappa Lamani: ಸೇವಾಲಾಲ್‌ ಜಯಂತೋತ್ಸವದ ಕಬಡ್ಡಿ ಪಂದ್ಯಾವಳಿ ಚಾಲನೆಗೆ ತೆರಳಿದ್ದಂತ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು ಸ್ವತಃ ರೇಡಿಂಗ್ ಮಾಡಿ ಚಾಲನೆ ನೀಡಲು ಹೋಗಿದ್ದಾರೆ. ಈ ವೇಳೆ ಆಯತಪ್ಪಿ ಬಿದ್ದಾಗ ಅವರ ಕಾಲಿಗೆ ಗಾಯವಾಗಿದೆ.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್‌ ಶೀಘ್ರದಲ್ಲೇ ರಿಲೀಸ್‌

Chaser Movie: ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

ಬೆಂಗಳೂರಿನಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

Rahul Dravid: ಬೆಂಗಳೂರಲ್ಲಿ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ವಾಗ್ವಾದ ನಡೆದಿದೆ.

Pralhad Joshi: ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

ರಾಜ್ಯಕ್ಕೆ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ: ಪ್ರಲ್ಹಾದ್‌ ಜೋಶಿ

Pralhad Joshi: 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ₹51,876 ಕೋಟಿ ತೆರಿಗೆ ಹಂಚಿಕೆ ಮಾಡಿದೆ. 2014-15 ರಲ್ಲಿ 24,789.78 ಕೋಟಿ ತೆರಿಗೆ ಹಂಚಿಕೆ ಆಗಿದ್ದರೆ, 2025-26 ರ ಆರ್ಥಿಕ ವರ್ಷ ಇದಕ್ಕಿಂತ ಶೇ.108 ರಷ್ಟು (51876 ಕೋಟಿ ರೂ.) ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Tumul Election: ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

Madhugiri News: ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತರನ್ನು ಅಧ್ಯಕ್ಷರಾಗಿ ಮಾಡಿದರೆ ನಿಮಗೆ ಇಷ್ಟೊಂದು ಕೋಪವೇಕೆ? ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್‌ ವಿರುದ್ಧ ಎಂಎಲ್‌ಸಿ ರಾಜೇಂದ್ರ ಆಕ್ರೋಶ ಕಿಡಿಕಾರಿದ್ದಾರೆ.

Conversion case: ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

ಹೆಚ್ಚುತ್ತಿರುವ ಡಿಜಿಟಲ್ ಮತಾಂತರ; ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ!

Conversion case: ಕ್ರೈಸ್ತ ಮಿಷನರಿಗಳು ಹೊಸ ಪದ್ಧತಿಯಲ್ಲಿ ಮತಾಂತರವನ್ನು ಮಾಡುತ್ತಿವೆ. ಇದು ಹೊಸ ಪದ್ಧತಿಯಲ್ಲಿ ಅಮಾಯಕರನ್ನು ಮತಾಂತರ ಮಾಡುವ ಕುತಂತ್ರವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆರೋಪಿಸಿದ್ದಾರೆ.