ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರವಾಡ

Dharwad Murder Case: ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡದ ಹಾಸ್ಮಿ ನಗರದ ನಿವಾಸದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಫೈರೋಜ್ ಮೇಲೆ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ.

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Yogesh Gowda murder: ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು.

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Dharwad News: ಬೇಕಂತಲೇ ಯುವತಿಯರ ಮೈ ಕೈ ಮುಟ್ಟಿ ಅನುಚಿತ ವರ್ತನೆ; ಧಾರವಾಡದಲ್ಲಿ‌ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

ಯುವತಿಯರಿಗೆ ಬ್ಯಾಡ್‌ ಟಚ್‌ ಮಾಡುತ್ತಿದ್ದ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

Dharwad gym trainer Arrest: ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಸಾಬಿರ್, ಜಿಮ್‌ನಲ್ಲಿ ಮಹಿಳೆಯರ ಶೌಚಾಲಯಕ್ಕೆ ಹೋಗಿ ಬರುವುದು, ಟ್ರೈನಿಂಗ್ ವೇಳೆ ಬೇಕಂತಲೇ ಮೈ ಕೈ ಮುಟ್ಟಿ ಅನುಚಿತ ವರ್ತನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Love Jihad: ಹುಬ್ಬಳ್ಳಿ ಜಿಮ್‌ ಲವ್‌ ಜಿಹಾದ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿ ಲವ್‌ ಜಿಹಾದ್‌ನಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಆರೋಪಿ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಿದ್ದಾರೆ.

ವಿಡಿಯೊ ಇರುವುದು ನಿಜ, ಆದ್ರೆ ಆಕೆಯೇ ರೆಕಾರ್ಡ್‌ ಮಾಡಿದ್ದು; ಯುವತಿ ಮೊಬೈಲ್‌ ಚೆಕ್‌ ಮಾಡಿ ಎಂದ ಸಮೀರ್‌

ವಿಡಿಯೊ ಇರುವುದು ನಿಜ, ಆದ್ರೆ ಆಕೆಯೇ ರೆಕಾರ್ಡ್‌ ಮಾಡಿದ್ದು: ಸಮೀರ್‌

ಸಂತ್ರಸ್ತೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಹೇಳಿರುವ ಸಮೀರ್, ವಿಡಿಯೊ ರೆಕಾರ್ಡ್ ಆಗಿರುವುದು ನಿಜ. ಆದರೆ ಅದು ಯಾರ ಮೊಬೈಲ್‌ನಲ್ಲಿ ತೆಗೆಯಲಾಗಿದೆ ಎಂಬುವುದು ನಿಮಗೆ ತಿಳಿಯಬೇಕು. ನನ್ನ ಫೋನ್‌ನಲ್ಲಿ ಯಾವುದೇ ವಿಡಿಯೊ, ಫೋಟೊಗಳು ಇಲ್ಲ ಎಂದು ಸಮೀರ್ ಸ್ಪಷ್ಟಪಡಿಸಿದ್ದಾನೆ.

Love Jihad: ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು

ಹುಬ್ಬಳ್ಳಿ ಲವ್ ಜಿಹಾದ್: ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು

ಯುವತಿಯ ದೂರಿನ ಆಧಾರದ ಮೇಲೆ ಜಿಮ್‌ ಟ್ರೈನರ್‌, ಪ್ರಮುಖ ಆರೋಪಿ ಸಮೀರ್ ವಿರುದ್ಧ ಬಿಎನ್‌ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಐವರನ್ನೂ ಹೆಸರಿಸಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಮೀರ್ ಮುಲ್ಲಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಚಿತ್ರಗಳು; ಗರ್ಭನಿರೋಧಕ ಮಾತ್ರೆ, ಸ್ಕ್ಯಾನಿಂಗ್‌ ರಿಪೋರ್ಟ್‌ ಫೋಟೊಸ್‌!

ಸಮೀರ್ ಮೊಬೈಲ್‌ನಲ್ಲಿ ಗರ್ಭನಿರೋಧಕ ಮಾತ್ರೆ, ಸ್ಕ್ಯಾನಿಂಗ್‌ ಫೋಟೊಸ್‌

Hubballi love jihad Case: ಹುಬ್ಬಳ್ಳಿಯ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ಸಮೀರ್‌ ಮುಲ್ಲಾ ಬಗ್ಗೆ ಹಲವು ಸ್ಫೋಟಕ ಸಂಗತಿಗಳ ಬಯಲಾಗುತ್ತಿವೆ. ಈತ ಹಲವು ಹಡುಗಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಫೋನ್‌ನಲ್ಲಿ ಹಲವು ಯುವತಿಯರ ಫೋಟೊಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ಮಾಡಿದ್ದಾನೆ: ಸಮೀರ್‌ ಮುಲ್ಲಾ ವಿರುದ್ಧ ಸಂತ್ರಸ್ತ ಯುವತಿ ಆರೋಪ!

ನನ್ನ ಮೇಲೆ ಸಮೀರ್‌ ಮುಲ್ಲಾ ಅತ್ಯಾಚಾರ ಮಾಡಿದ್ದಾನೆ: ಸಂತ್ರಸ್ತ ಯುವತಿ

Hubballi love jihad Case: ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿರುವ ಸಂತ್ರಸ್ತ ಯುವತಿ, ಸಮೀರ್‌ ತನಗೆ ಮತ್ತು ಬರಿಸುವ ಪಾನೀಯ ಕೊಟ್ಟು ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ವಿಡಿಯೊ ಕೂಡ ಮಾಡಿಕೊಂಡಿದ್ದಾನೆ. ಇನ್ನೂ ಹಲವು ಯುವತಿಯರನ್ನು ಆತ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾಳೆ.

Hubballi news: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಸಮೀರ್ ಪೊಲೀಸ್​ ವಶಕ್ಕೆ‌, ಯುವತಿ ಮನೆಗೆ ನುಗ್ಗಿ ಯುವಕನ ಕುಟುಂಬಸ್ಥರಿಂದ ಗಲಾಟೆ

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಎರಡೂ ಕಡೆಯವರಿಂದ ಗಲಾಟೆ

ಯುವತಿ ಮತ್ತು ಸಮೀರ್ ನಡುವೆ ಜಿಮ್‌ನಲ್ಲಿ ಪರಿಚಯವಾಗಿತ್ತು. ಹಿಂದೂ ಕಾರ್ಯಕರ್ತರು ಯುವಕನನ್ನು ಹಿಡಿದು ಪೊಲೀಸರ ವಶಕ್ಕೊಪ್ಪಿಸಿದ್ದು, ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ.

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ fly91 ವಿಮಾನಯಾನ ಶುರುವಾಗಲಿದೆ. ಇದೇ ಏಪ್ರಿಲ್ ಎರಡನೇ ವಾರದಿಂದಲೇ fly91 ವಿಮಾನ ಸೇವೆ ಆರಂಭವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಅಂತೆಯೇ fly91 ಸಂಸ್ಥೆ ಈಗಾಗಲೇ ವಿಮಾನಯಾನ ಸೇವೆಯ ಅಗತ್ಯ ಕಾರ್ಯ ಚಟುವಟಿಕೆ ಸಹ ಆರಂಭಿಸಿದೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು

Dharwad Murder Case: ಧಾರವಾಡ ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾಜಿ ಶಾಸಕನ ಪುತ್ರನನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Reels craze: ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

Hubballi news: ಸ್ಟಂಟ್ & ಕ್ರ್ಯಾಶ್‌ ರೀಲ್ಸ್‌ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಬಲಿ

ಸ್ಟಂಟ್ & ಕ್ರ್ಯಾಶ್‌ ರೀಲ್ಸ್‌ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಬಲಿ

ಆಡಿ (AUDI) ಕಾರು ಮತ್ತು ಬೈಕ್‌ನಲ್ಲಿ ಅತೀ ವೇಗವಾಗಿ ರೈಡ್‌ ಮಾಡಿ ‘ಸ್ಟಂಟ್ ಹಾಗೂ ಕ್ರ್ಯಾಶ್’ ರೀಲ್ಸ್ ಚಿತ್ರೀಕರಿಸಲು ಈ ಬಾಲಕರು ಪ್ಲ್ಯಾನ್‌ ಮಾಡಿದ್ದರು. ವೇಗವಾಗಿ ಬಂದ ಕಾರು, ಬೈಕ್‌ನಲ್ಲಿದ್ದ ನಮೀಷ್‌ಗೆ ಬಲವಾಗಿ ಗುದ್ದಿದೆ. ಕಾರು ಬೈಕ್‌ಗೆ ಗುದ್ದಿದ ರಭಸಕ್ಕೆ ನಮೀಷ್ ಸುಮಾರು 30 ಅಡಿ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Dharwad Rain: ಆಲಿಕಲ್ಲು ಮಳೆಯಿಂದ ಕಾಶ್ಮೀರದಂತೆ ಬದಲಾದ ಧಾರವಾಡದ ಕಲಘಟಗಿ; ವಿಡಿಯೊ ವೈರಲ್‌

ಆಲಿಕಲ್ಲು ಮಳೆಯಿಂದ ಕಾಶ್ಮೀರದಂತೆ ಬದಲಾದ ಕಲಘಟಗಿ; ವಿಡಿಯೊ ವೈರಲ್‌

ರಾಜ್ಯದಲ್ಲಿ ಬೆಂಗಳೂರು, ಧಾರವಾಡ, ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಆಲಿಕಲ್ಲು ಮಳೆ ಸುರಿದಿದೆ. ಇನ್ನು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಾಚಾಪುರದಲ್ಲಿ ಭಾರಿ ಆಲಿಕಲ್ಲು ಮಳೆಯಿಂದ ರಸ್ತೆಗಳು ಹಿಮಾವೃತ ಕಾಶ್ಮೀರದಂತೆ ಬದಲಾಗಿರುವುದು ಕಂಡುಬಂದಿತ್ತು.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಸಚಿವ ಎಂ.ಬಿ. ಪಾಟೀಲ್‌ ಆಗ್ರಹ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಎಂ.ಬಿ. ಪಾಟೀಲ್‌ ಗುಡುಗು

MB Patil: ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

Hubballi News: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ

ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ದಾರಿ ವಿಚಾರಕ್ಕೆ ಜಗಳ ನಡೆದ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು, ರೈತನ ಮೇಲೆ ಹಲ್ಲೆ ನಡೆಸಿದ್ದರು. ಆದರೆ, ತನ್ನ ಮೇಲೆಯೇ ಅಟ್ರಾಸಿಟಿ ಕೇಸ್‌ ದಾಖಲಾಗಿದ್ದರಿಂದ ವಿಚಾರಣೆಗ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Pralhad Joshi: ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ: ಜೋಶಿ

ಹು.ಧಾ. ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ: ಜೋಶಿ

Pralhad Joshi: ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ಗಹನ ಚರ್ಚೆ, ಆಲೋಚನೆ ಅಗತ್ಯ. ಈ ಸಂಬಂಧ ಸಾಧಕ - ಬಾಧಕಗಳ ಚಿಂತನೆ ಅತ್ಯಗತ್ಯವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಸಿ ದಾಖಲೆ ಬರೆದ ಕಾಂಗ್ರೆಸ್ ಸರ್ಕಾರ: ಜೋಶಿ ತರಾಟೆ

ಅಗತ್ಯ ವಸ್ತುಗಳ ಬೆಲೆ ಏರಿಸಿ ದಾಖಲೆ ಬರೆದ ಕಾಂಗ್ರೆಸ್ ಸರ್ಕಾರ: ಜೋಶಿ

Union Minister Pralhad Joshi: ರಾಜ್ಯದಲ್ಲಿ ಗೃಹೋಪಯೋಗಿ, ಕೈಗಾರಿಕೆ ಹಾಗೂ ವಾಣಿಜ್ಯೋಪಯೋಗಿ ವಿದ್ಯುತ್ ದರ ಹೆಚ್ಚಿಸಲು ತಯಾರಿ ನಡೆದಿದೆ. ಇದು ಸರ್ಕಾರದ ಕೈಗಾರಿಕಾ ವಿರೋಧಿ ನೀತಿಯನ್ನು ನಿರೂಪಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

ನೌಕರರನ್ನು ವಜಾಗೊಳಿಸುವ ಮುನ್ನ ವಿಚಾರಣೆ ಕಡ್ಡಾಯ: ಹೈಕೋರ್ಟ್‌ ಮಹತ್ವದ ತೀರ್ಪು

ನೌಕರರನ್ನು ವಜಾಗೊಳಿಸುವ ಮುನ್ನ ವಿಚಾರಣೆ ಕಡ್ಡಾಯ: ಹೈಕೋರ್ಟ್‌ ತೀರ್ಪು

Government Employees: ನೌಕರನ ಮೇಲೆ ಆರೋಪವಿದ್ದಾಗ, ಅದು ಆತನ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದಾಗಿರುತ್ತದೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸುವುದು ಮತ್ತು ನೌಕರನಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡುವುದು ಕಡ್ಡಾಯ ಎಂದು ಹೈಕೋರ್ಟ್‌ ಧಾರವಾಡ ಪೀಠ ತೀರ್ಪು ನೀಡಿದೆ.

Dharwad Protest: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಭುಗಿಲೆದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ. ಉದ್ಯೋಗಾಕಾಂಕ್ಷಿಗಳು ಡಿಸಿ ಕಚೇರಿಯತ್ತ ಧಾವಿಸಿದ ವೇಳೆ, ಪೊಲೀಸರು ಅವರನ್ನು ತಡೆಯಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Korean Game: ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಸಾವಿಗೆ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೇಮ್ಸ್ ಪತ್ತೆಯಾಗಿದೆ. ಕೊರಿಯನ್ ಗೇಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ.

Loading...