ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಧಾರವಾಡ

Kodi Mutt Swamiji: ಮಲೆನಾಡು ಬಯಲುಸೀಮೆಯಾಗುತ್ತೆ, ಬಯಲುಸೀಮೆ ಮಲೆನಾಡಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ

ಮಲೆನಾಡು ಬಯಲುಸೀಮೆಯಾಗುತ್ತೆ, ಬಯಲುಸೀಮೆ ಮಲೆನಾಡಾಗುತ್ತೆ!

Kodi Mutt Swamiji: ಧಾರವಾಡದಲ್ಲಿ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ರಾಜ್ಯದ ಜಾತಿ ಸಮೀಕ್ಷೆ ಬಗ್ಗೆ ಮಾತನಾಡಿರುವ ಕೋಡಿಮಠ ಶ್ರೀಗಳು, ರಾಜ್ಯದ ಜನರು ದಡ್ಡರಲ್ಲ, ಬಹಳ ಬುದ್ಧಿವಂತರಿದ್ದಾರೆ, ಜ್ಞಾನಿಗಳಿದ್ದಾರೆ, ತಿಳಿವಳಿಕೆಯುಳ್ಳವರಿದ್ದಾರೆ. ಜನರಿಗೆ ಯಾವುದು ಬೇಕೋ ಅದನ್ನು ಅವರೇ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

Special train service: ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

ಸೆ.28ರಿಂದ ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ಸಂಚಾರ ಆರಂಭ

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಹುಬ್ಬಳ್ಳಿ ಮತ್ತು ಕೊಲ್ಲಂ ಮಧ್ಯೆ ಪ್ರತಿ ಭಾನುವಾರ ಮತ್ತು ಸೋಮವಾರ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲು ಒಟ್ಟು 14 ವಾರ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಯೂಟ್ಯೂಬರ್‌ ಮುಕಳೆಪ್ಪ ಮೇಲೆ ಲವ್‌ ಜಿಹಾದ್‌ ದೂರು, ಪತ್ನಿ ಪೊಲೀಸ್‌ ವಶಕ್ಕೆ

ಯೂಟ್ಯೂಬರ್‌ ಮುಕಳೆಪ್ಪ ಮೇಲೆ ಲವ್‌ ಜಿಹಾದ್‌ ದೂರು, ಪತ್ನಿ ಪೊಲೀಸ್‌ ವಶಕ್ಕೆ

Love Jihad: ಮುಕಳೆಪ್ಪ ತಪ್ಪು ಮಾಹಿತಿ ನೀಡಿದ್ದಾನೆ. ಮೊದಲಿಗೆ ತಾನು ಮುಸ್ಲಿಂ ಎನ್ನುವ ಸಂಗತಿ ಮುಚ್ಚಿಟ್ಟಿದ್ದ. ಇವರಿಬ್ಬರ ಮದುವೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಹೀಗಿದ್ದರೂ ಮಗಳ ತಲೆಕೆಡಿಸಿ ಮುಕಳೆಪ್ಪ ಬಲವಂತವಾಗಿ ಮದುವೆ ಆಗಿದ್ದಾನೆ ಎಂದು ಯುವತಿ ಪೋಷಕರು ಆರೋಪಿಸಿದ್ದರು.

Caste Census: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಸಚಿವ ಪ್ರಲ್ಹಾದ್‌ ಜೋಶಿ

ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯ ಕಾಂಗ್ರೆಸ್‌ ಸರ್ಕಾರ ಅದ್ಯಾವ ಆಧಾರದ ಮೇಲೆ ಜಾತಿ ಸಮೀಕ್ಷೆ ಮಾಡುತ್ತಿದೆ? ಕುರುಬ ಕ್ರಿಶ್ಚಿಯನ್‌, ಬ್ರಾಹ್ಮಣ ಕ್ರಿಶ್ಚಿಯನ್‌, ಲಿಂಗಾಯತ ಕ್ರಿಶ್ಚಿಯನ್‌ ಎಂದು ಯಾವ ಆಧಾರ ಮೇಲೆ ಮಾಡಲು ಹೊರಟಿದ್ದೀರಿ? ಎಂದು ರಾಜ್ಯ ಸರ್ಕಾರವನ್ನು ಪ್ರಲ್ಹಾದ್‌ ಜೋಶಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

YouTuber Mukaleppa: ಕನ್ನಡದ ಖ್ಯಾತ ಯೂಟ್ಯೂಬರ್ ಮೇಲೆ ಲವ್ ಜಿಹಾದ್ ಆರೋಪ; ದೂರು ದಾಖಲು

ಯೂಟ್ಯೂಬರ್ ಮೇಲೆ ಲವ್ ಜಿಹಾದ್ ಆರೋಪ

ಖ್ಯಾತ ಯೂಟ್ಯೂಬರ್ ಮುಕಳೆಪ್ಪ (YouTuber Mukaleppa) ಅಲಿಯಾಸ್ ಕ್ವಾಜಾ ಶಿರಹಟ್ಟಿ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿ ಪ್ರೀತಿಸಿ ವಿವಾಹವಾಗಿರೋ ಕ್ವಾಜಾ ಶಿರಹಟ್ಟಿ ವಿರುದ್ಧ ಆಕೆಯ ಹೆತ್ತವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Basangouda Patil Yatnal: ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತ: ಬಸನಗೌಡ ಯತ್ನಾಳ್‌

ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತ: ಬಸನಗೌಡ ಯತ್ನಾಳ್‌

BY Vijayendra: ಮೊನ್ನೆ ದೆಹಲಿಯಲ್ಲಿ ಯಡಿಯೂರಪ್ಪಗೆ ಮಂಗಳಾರತಿ ಮಾಡಿದ್ದಾರೆ. ಯಡಿಯೂರಪ್ಪ ಭಯದಿಂದ ಬಿಜೆಪಿ ಹೈಕಮಾಂಡ್ ಹೊರಬರುತ್ತಿದೆ. ನಾನು ಬಿಜೆಪಿ ಸೇರಲು ಬಹುತೇಕ ಶಾಸಕರು ಒಲವು ತೋರಿದ್ದಾರೆ. ಅಮಿತ್ ಶಾ ಒಬ್ಬೊಬ್ಬರನ್ನೇ ಕರೆದು ಕೇಳಿದರೆ ಎಲ್ಲರೂ ಹೇಳುತ್ತಾರೆ ಎಂದು ಯತ್ನಾಳ್‌ ಹೇಳಿದ್ದಾರೆ.

Nikhil Kumaraswamy: ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ? ರಾಜ್ಯದ ಸಚಿವರಾ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ ಅಥವಾ ರಾಜ್ಯದ ಸಚಿವರಾ? ಇಷ್ಟು ಮಳೆ ಆದರೂ ಯಾವುದೇ ಪ್ರದೇಶಕ್ಕೆ ಭೇಟಿ ನೀಡಿಲ್ಲ. ರೈತರ ಸಂಕಷ್ಟದ ದಿನಗಳಲ್ಲಿ ಸರ್ಕಾರ ಯಾವ ರೀತಿ ನೆರವು ನೀಡುತ್ತದೆ ಎಂದು ಉತ್ತರ ಕೋಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Youtube Channels: ಯೂಟ್ಯೂಬ್ ಚಾನೆಲ್‌ಗಳಿಗೆ ಲೈಸೆನ್ಸ್‌ ಕಡ್ಡಾಯ ಮಾಡಲು ಕ್ರಮ ಎಂದ ಸಿಎಂ

ಯೂಟ್ಯೂಬ್ ಚಾನೆಲ್‌ಗಳಿಗೆ ಲೈಸೆನ್ಸ್‌ ಕಡ್ಡಾಯ ಮಾಡಲು ಕ್ರಮ ಎಂದ ಸಿಎಂ

CM Siddaramaiah: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಆದರೆ ಬ್ಲ್ಯಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್‌ ಮಾಡುತ್ತಿರುವ ಯೂಟ್ಯೂಬ್ ಚಾನೆಲ್‌ಗಳು ಸಮಾಜಕ್ಕೆ ಶಾಪ ಆಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

CM Siddaramaiah: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ

CM Siddaramaiah: ಕೃಷಿ ವಿವಿಗಳು Lab to Land ಜತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ವಿವಿಗಳಿಗೆ ಕರೆ ನೀಡಿದ್ದಾರೆ.

Dharwad News: ಕೃಷಿ ಮೇಳದಲ್ಲಿ ಟ್ರ್ಯಾಕ್ಟರ್ ಮೈಮೇಲೆ ಬಿದ್ದು ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಕೃಷಿ ಮೇಳದಲ್ಲಿ ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (58) ಮೃತವ್ಯಕ್ತಿ. ಘಟನೆಯ ಸುದ್ದಿ ತಿಳಿದು ಸಮತಾ ಸೇನೆ ಧಾರವಾಡ ಜಿಲ್ಲಾ ಘಟಕದಿಂದ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.

Dharwad News: ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಸಾವು

ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಸಾವು

Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (32) ಮೃತರು. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Prathap Simha: ಬಾನು ಮೇಡಂ ಸೀರೆಯುಟ್ಟು, ಹಣೆಗೆ ಕುಂಕುಮ, ಮಲ್ಲಿಗೆ ಹೂವು ಮುಡಿದು ದಸರಾಗೆ ಬರೋದಾದ್ರೆ ಬನ್ನಿ: ಪ್ರತಾಪ್‌ ಸಿಂಹ

ಸೀರೆಯುಟ್ಟು, ಹಣೆಗೆ ಕುಂಕುಮ, ಮಲ್ಲಿಗೆ ಹೂವು ಮುಡಿದು ದಸರಾಗೆ ಬನ್ನಿ

Mysuru Dasara: ಹುಬ್ಬಳ್ಳಿಯಲ್ಲಿ ನಡೆದ ಗಣೇಶೋತ್ಸವದಲ್ಲಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರಿಗೆ ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ ಶ್ರೇಷ್ಠ ಭಾವನೆಯ ಮುಕುಟವಾಗಿರುವ ದಸರಾ ಉದ್ಘಾಟನೆಯನ್ನು ಅವರ ಕೈಯ್ಯಲ್ಲಿ ಮಾಡಿಸುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರೆ.

ʼಹುಬ್ಬಳ್ಳಿ-ಜೋಧಪುರ್‌' ನೇರ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು

ʼಹುಬ್ಬಳ್ಳಿ-ಜೋಧಪುರ್‌' ನೇರ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು

Pralhad Joshi: ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pralhad Joshi: ಸೆಪ್ಟೆಂಬರ್‌ 1ರಂದು ಬಿಜೆಪಿ ʼಧರ್ಮಸ್ಥಳ ಚಲೋʼ: ಪ್ರಲ್ಹಾದ್ ಜೋಶಿ

ಸೆಪ್ಟೆಂಬರ್‌ 1ಕ್ಕೆ ಬಿಜೆಪಿ ʼಧರ್ಮಸ್ಥಳ ಚಲೋʼ: ಪ್ರಲ್ಹಾದ್‌ ಜೋಶಿ

Pralhad Joshi: ಧರ್ಮಸ್ಥಳ ಪ್ರಹಸನದಲ್ಲಿ ಸತ್ಯವನ್ನು ಹೊರಗೆಡವಲು ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ಕೈಗೊಳ್ಳಬೇಕಿದೆ. ಇದಕ್ಕಾಗಿ ಸೆಪ್ಟೆಂಬರ್‌ 1ರ ಸೋಮವಾರ ರಾಜ್ಯ ಬಿಜೆಪಿ ʼಧರ್ಮಸ್ಥಳ ಚಲೋʼ ಹಮ್ಮಿಕೊಂಡಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Pralhad Joshi: ಮಳೆಹಾನಿಗೀಡಾದ 100 ಶಾಲಾ ಕಟ್ಟಡಗಳ ಮರುನಿರ್ಮಾಣಕ್ಕೆ ಕ್ರಮ: ಪ್ರಲ್ಹಾದ್‌ ಜೋಶಿ

ಮಳೆಹಾನಿಗೀಡಾದ 100 ಶಾಲಾ ಕಟ್ಟಡಗಳ ಮರುನಿರ್ಮಾಣಕ್ಕೆ ಕ್ರಮ: ಜೋಶಿ

Pralhad Joshi: ಸಿಎಸ್‌ಆರ್‌ ಯೋಜನೆಯಡಿ ಶಾಲಾ ಕಟ್ಟಡಗಳ ಮರು ನಿರ್ಮಾಣಕ್ಕೆ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವಿದ್ದು, 100 ಕಟ್ಟಡಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗುತ್ತದೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Heart Attack: ಎನ್‌ಸಿಸಿ ದೈಹಿಕ ಪರೀಕ್ಷೆ ವೇಳೆ ಹೃದಯಾಘಾತ; ಧಾರವಾಡದ ಐಐಟಿ ವಿದ್ಯಾರ್ಥಿ ಸಾವು

ಎನ್‌ಸಿಸಿ ದೈಹಿಕ ಪರೀಕ್ಷೆ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು

Dharwad News: ಎರಡು ದಿನಗಳ ಹಿಂದೆ ಧಾರವಾಡದ ಐಐಟಿ ಕ್ಯಾಂಪಸ್‌ನಲ್ಲಿ ಎನ್‌ಸಿಸಿ ಆಯ್ಕೆಗಾಗಿ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಿಹಾರ ಮೂಲದ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Dharmasthala case: ಧರ್ಮಸ್ಥಳಕ್ಕೆ ಮಸಿ ಬಳಿದವರಿಗೆ ತಕ್ಕ ಶಾಸ್ತಿ ಯಾವಾಗ?: ಪ್ರಲ್ಹಾದ್‌ ಜೋಶಿ ಪ್ರಶ್ನೆ

ಧರ್ಮಸ್ಥಳಕ್ಕೆ ಮಸಿ ಬಳಿದವರಿಗೆ ತಕ್ಕ ಶಾಸ್ತಿ ಯಾವಾಗ?: ಜೋಶಿ

Dharmasthala case: ಜನರ ಧಾರ್ಮಿಕ ನಂಬಿಕೆಯ, ಪವಿತ್ರ ಕ್ಷೇತ್ರದ ಹೆಸರು ಹಾಳು ಮಾಡಿದ ಮೇಲೆ ಸರ್ಕಾರ ಆರೋಪಿಗಳನ್ನು ಬಂಧಿಸುವ ನಾಟಕವಾಡುತ್ತಿದೆ. ಸರ್ಕಾರದ ನಡೆಯಿಂದ ಸರ್ವ ಸಮುದಾಯದವರಿಗೂ ನೋವಾಗಿದೆ. ಅಸಂಖ್ಯಾತ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Rahul Gandhi: ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿಗೆ  ಶುಭಕೋರಿದ ರಾಹುಲ್ ಗಾಂಧಿ: ಕಾರಣ ಏನು?

ಬಿಜೆಪಿ ಸಂಸದನಿಗೆ ರಾಹುಲ್‌ ಗಾಂಧಿ ಅಭಿನಂದನೆ

ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದ ಪ್ರಮುಖ ಸ್ಥಾನಕ್ಕೆ ಚುನಾಯಿತರಾಗಿದ್ದು, ಅವರನ್ನು ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಅಭಿನಂದಿಸಿ ಅಚ್ಚರಿ ಮೂಡಿಸಿದ್ದಾರೆ.

Pralhad Joshi: ಹಿಂದೂಗಳ ಗುಡಿ ಗುಂಡಾರ ಹೊಡೆಯುತ್ತಿದ್ದರೆ ಸಮ್ಮನಿರಬೇಕಾ?: ಪ್ರಲ್ಹಾದ್ ಜೋಶಿ ಕಿಡಿ

ಹಿಂದೂಗಳ ಗುಡಿ ಗುಂಡಾರ ಹೊಡೆಯುತ್ತಿದ್ದರೆ ಸಮ್ಮನಿರಬೇಕಾ?: ಪ್ರಲ್ಹಾದ್ ಜೋಶಿ

Dharmasthala Case: ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಒಂದೆಡೆ SIT ರಚನೆಯಲ್ಲಿ ಪ್ರಮುಖ ಭಾಗವಾಗಿದ್ದರೆ, ಈಗ 'ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ' ಎನ್ನುತ್ತಿದ್ದಾರೆ. ಹೀಗೆ ಎರೆಡು ದೋಣಿ ಮೇಲೆ ಕಾಲಿಟ್ಟು ಸಾಗುವ ಪ್ರಯತ್ನ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚಾಟಿ ಬೀಸಿದರು.

Dharawad News: ಥಿನ್ನರ್‌ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ, ಬಾಲಕ ಸಾವು, ತಂದೆಗೆ ತೀವ್ರ ಗಾಯ

ಥಿನ್ನರ್‌ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ, ಬಾಲಕ ಸಾವು, ತಂದೆಗೆ ತೀವ್ರ ಗಾಯ

Dharawad: ಬಾಲಕನ ಅಜ್ಜಿ ಒಲೆ ಹೊತ್ತಿಸಲು ಥಿನ್ನರ್ ಬಳಸಿದ್ದಾರೆ. ಈ ವೇಳೆ ದಿಡೀರನೆ ಬೆಂಕಿ ಹೊತ್ತಿಕೊಂಡು ಬೆಂಕಿ ಇಡೀ ಮನೆ ಆವರಿಸಿದೆ. ಬೆಂಕಿಯಲ್ಲಿ ಸಿಲುಕಿ ಬಾಲಕ ಅಗಸ್ತ್ಯ ಪರದಾಡುತ್ತಿದ್ದಾಗ ರಕ್ಷಣೆಗೆ ಬಂದ ತಂದೆ ಚಂದ್ರಕಾಂತ ಅವರಿಗೂ ಬೆಂಕಿ ಹೊತ್ತಿಕೊಂಡಿದೆ.

Independence Day: 68 ಲಕ್ಷ ಚಿಕ್ಕ ವ್ಯಾಪಾರಿಗಳಿಗೆ 14,316 ಕೋಟಿ ರೂ. ಸಾಲ ಸೌಲಭ್ಯ: ಪ್ರಲ್ಹಾದ್‌ ಜೋಶಿ

68 ಲಕ್ಷ ಚಿಕ್ಕ ವ್ಯಾಪಾರಿಗಳಿಗೆ 14,316 ಕೋಟಿ ರೂ. ಸಾಲ ಸೌಲಭ್ಯ: ಜೋಶಿ

ದೇಶದಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಈವರೆಗೆ 68 ಲಕ್ಷ ಚಿಕ್ಕ ವ್ಯಾಪಾರಿಗಳು ಸುಮಾರು 14,316 ಕೋಟಿ ರೂ. ಸಾಲ ಸೌಲಭ್ಯ ನೀಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Special Economic Zone: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ; 28 ಎಕರೆ ವಿಶೇಷ ಆರ್ಥಿಕ ವಲಯಕ್ಕೆ ಗೆಜೆಟ್‌

ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

Pralhad Joshi: ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.

Neha Hiremath murder case: ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ಗೆ ಜಾಮೀನು ಇಲ್ಲ

ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ಗೆ ಜಾಮೀನು ಇಲ್ಲ

Hubballi: ಕಳೆದ 1 ವರ್ಷ 4 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ಗೆ ಜಾಮೀನಿನ ಮೇಲೆ ಹೊರಬರುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನೆಲೆ ನೇಹಾ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಫಯಾಜ್‌ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

Pralhad Joshi: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು, ಪ್ಯಾಸೆಂಜರ್‌ ರೈಲು, ರೈಲ್ವೆ ಬ್ರಿಡ್ಜ್ ಒದಗಿಸಲು ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ

ದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.

Loading...