ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರವಾಡ
Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

ಹು-ಧಾ ನಡುವೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ ಆರಂಭಿಸಲು ಒಪ್ಪಂದ

Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಕುರಿತ ವಿವರ ಇಲ್ಲಿದೆ.

Gramin Banks merger: ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಧಾರವಾಡದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ಪ್ರಸ್ತುತ 629 ಶಾಖೆಗಳ ಜಾಲವನ್ನು ಹೊಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಭಾರತದ ಎರಡನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿದೆ. ವಿಲೀನವು ಮೇ 1ರಿಂದ ಜಾರಿಗೆ ಬರಲಿದೆ.

Police Firing: ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಸೆರೆಹಿಡಿದ ಪೊಲೀಸರು

ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಸೆರೆಹಿಡಿದ ಪೊಲೀಸರು

ನಿನ್ನೆ ಹಣಕಾಸಿನ ವಿಚಾರವಾಗಿ ಕೆಲವರ ನಡುವೆ ಗಲಾಟೆ ಆಗಿತ್ತು. ಇದರ ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್, ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

Hubli Accident: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

Hubli Accident: ಹುಬ್ಬಳ್ಳಿ ನಗರದ ಹೊರವಲಯದ ನೂಲ್ವಿ ಕ್ರಾಸ್‌ನಲ್ಲಿ ದುರ್ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.

Basanagouda Patil Yatnal: ಬಿಎಸ್‌ವೈ ಕುಟುಂಬದಿಂದ ಬಿಜೆಪಿ ಮುಕ್ತವಾದರೆ ಮತ್ತೆ ಪಕ್ಷ ಸೇರುವೆ: ಶಾಸಕ ಯತ್ನಾಳ್

ಬಿಎಸ್‌ವೈ ಕುಟುಂಬದಿಂದ ಬಿಜೆಪಿ ಮುಕ್ತವಾದ್ರೆ ಮತ್ತೆ ಪಕ್ಷ ಸೇರುವೆ: ಯತ್ನಾಳ್

Basanagouda Patil Yatnal: ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರಗೆ ದಮ್ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆರಿಸಿ ಬರಲಿ. ನಾನೂ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲು ಸಿದ್ಧ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು ಹಾಕಿದ್ದಾರೆ.

Sara Ali Khan: ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಸಾರಾ ಅಲಿಖಾನ್‌ ಭೇಟಿ

ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಸಾರಾ ಅಲಿಖಾನ್‌ ಭೇಟಿ

ನಟಿ ಸಾರಾ‌ ಅಲಿ ಖಾನ್‌ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನದ ಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವ ಹಾಗೂ ಮುಖ್ಯದ್ವಾರದ ಬಳಿಯ ಕಟ್ಟೆ – ಶಿಲ್ಪಕಲೆಯ ಎದುರು ನಿಂತಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

Pramod Mutalik: 1000 ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ: ಪ್ರಮೋದ್‌ ಮುತಾಲಿಕ್

1000 ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ: ಪ್ರಮೋದ್‌ ಮುತಾಲಿಕ್

ಅತ್ಯಾಚಾರಿಗಳು ಮತ್ತು ಮಹಿಳೆಯರಿಗೆ ಹಾನಿ ಮಾಡಲು ಅಥವಾ ಶೋಷಿಸಲು ಪ್ರಯತ್ನಿಸುವವರ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು, ಮಹಿಳೆಯರು ಧೈರ್ಯವನ್ನು ಬೆಳೆಸಿಕೊಳ್ಳಬೇಕು. ತ್ರಿಶೂಲ ದೀಕ್ಷೆಯು ಧೈರ್ಯ, ಶೌರ್ಯ ಮತ್ತು ಜೀವನದಲ್ಲಿ ಪ್ರತಿಕೂಲಗಳ ವಿರುದ್ಧ ಹೋರಾಡುವ ಮನೋಭಾವವನ್ನು ತುಂಬುತ್ತದೆ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿ ನಗರದಲ್ಲಿ 1,000 ಮಹಿಳೆಯರಿಗಾಗಿ ನಡೆಸಲಾಗುವುದು ಎಂದು ಮುತಾಲಿಕ್‌ ಘೋಷಿಸಿದರು.

Ugadi Bombe Bhavishya: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯುಗಾದಿಯಂದು ಬೊಂಬೆಗಳಿಂದ ಸ್ಫೋಟಕ ಭವಿಷ್ಯ!

ಸಿಎಂ ಬದಲಾಗ್ತಾರಾ? ಯುಗಾದಿಯಂದು ಬೊಂಬೆಗಳಿಂದ ಸ್ಫೋಟಕ ಭವಿಷ್ಯ!

Ugadi Bombe Bhavishya: ಧಾರವಾಡ ತಾಲೂಕಿನ ಹನುಮನಕೊಪ್ಪದ ಯುಗಾದಿ ಬೊಂಬೆ ಭವಿಷ್ಯ ಭಾನುವಾರ ಹೊರಬಿದ್ದಿದೆ. ರಾಜ್ಯ ರಾಜಕಾರಣ, ಪ್ರಾಕೃತಿಕ ವಿಕೋಪಗಳು ಸೇರಿ ಒಂದು ವರ್ಷದಲ್ಲಿ ನಡೆಯಲಿರುವ ಮಹತ್ವದ ಘಟನೆಗಳ ಬಗ್ಗೆ ಬೊಂಬೆಗಳು ಭವಿಷ್ಯ ನುಡಿದಿವೆ.

ಯತ್ನಾಳ್ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ; ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಯತ್ನಾಳ್ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಚ್ಚರಿಕೆ

ಯತ್ನಾಳ್‌ ಉಚ್ಚಾಟನೆ ಹಿಂದೆ ದುಷ್ಟ ಶಕ್ತಿಗಳ ಕೈವಾಡ ಇದೆ. ವೀರೇಂದ್ರ ಪಾಟೀಲ, ಜೆ.ಎಚ್‌.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದ್ದು, ಇದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Vishwamitra Hegde: ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

Vishwamitra Hegde: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭತ್ತಗುತ್ತಿಗೆಯವರಾದ ಹಿರಿಯ ವಿಶ್ವಾಮಿತ್ರ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ದೂರದರ್ಶನ, ವಿಶ್ವವಾಣಿ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

Building Collapse: ಧಾರವಾಡದಲ್ಲಿ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು

ಧಾರವಾಡದಲ್ಲಿ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ದಾವೂದ್ ಸವಣೂರು (32) ಹಾಗೂ ಹಳೇಹುಬ್ಬಳ್ಳಿ ನೂರಾನಿ ಫ್ಲಾಟ್ ನಿವಾಸಿ ರಫಿಕ್ ಸಾಬ್ ಚನ್ನಾಪುರ (50) ಎಂದು ಗುರುತಿಸಲಾಗಿದೆ.

Pralhad Joshi: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Panchakshari Hiremath: ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಡಾ. ಪಂಚಾಕ್ಷರಿ ಹಿರೇಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

Nitin Gadkari: ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ಗಡ್ಕರಿ ಸೂಚನೆ; ಹೆಚ್ಚುವರಿ ಆರ್ಥಿಕ ನೆರವಿಗೆ ಒಪ್ಪಿಗೆ

ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ಗಡ್ಕರಿ ಸೂಚನೆ

ಹುಬ್ಬಳ್ಳಿ ಹೃದಯ ಭಾಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ಸಾಗಿರುವ ಫ್ಲೈ ಓವರ್ ಕಾಮಗಾರಿಗೆ ತ್ವರಿತ ವೇಗ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kodi Mutt Swamiji: ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ!

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ!

Kodi Mutt Swamiji: ಹಳೇ ಹುಬ್ಬಳ್ಳಿಯಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆಗೆ ಕೋಡಿ ಸ್ವಾಮೀಜಿ ಮಾತನಾಡಿದ್ದಾರೆ. ಈ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಶ್ರೀಗಳು ಭವಿಷ್ಯ ನುಡಿದಿದ್ದು, ಇನ್ನುಳಿದ ವಿಷಯಗಳ ಬಗ್ಗೆ ಯುಗಾದಿಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

IVF Center: ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್‌ ಕೇಂದ್ರ

ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್‌ ಕೇಂದ್ರ

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ( ಕೆಎಂಸಿ-ಆರ್ ಐ)ನಲ್ಲಿ ಕೃತಕ ಗರ್ಭಧಾರಣಾ ಕೇಂದ್ರ ಶೀಘ್ರವೇ ಆರಂಭವಾಗಲಿದೆ. ಇದು ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಆಗಿದೆ. ಹುಬ್ಬಳ್ಳಿಯ ಕೆ ಎಂ ಸಿ ಆರ್ ಐನ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ಐವಿಎಫ್ ಕೇಂದ್ರದ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ.

Pralhad Joshi: ಹುಬ್ಬಳ್ಳಿ ಜನಕ್ಕೆ ಮುದ ನೀಡಿದ ಧಾರವಾಡ ಸಂಸದರ ಸಾಂಸ್ಕೃತಿಕ, ಕ್ರೀಡಾ ಮಹೋತ್ಸವ

ಗಮನಸೆಳೆದ ಧಾರವಾಡ ಸಂಸದರ ಸಾಂಸ್ಕೃತಿಕ, ಕ್ರೀಡಾ ಮಹೋತ್ಸವ

Pralhad Joshi: ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ʼಧಾರವಾಡ ಸಂಸದರ ಸಾಂಸ್ಕೃತಿಕ ಮತ್ತು ಕ್ರೀಡಾ ಮಹೋತ್ಸವʼ ಅತ್ಯಾಕರ್ಷಿಣೀಯವಾಗಿತ್ತು. 2 ದಿನಗಳ ಈ ಗಾಳಿಪಟ ಉತ್ಸವಕ್ಕೆ ಗುರುವಾರ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ.

Pralhad Joshi: ಕಾಂಗ್ರೆಸ್‌ನವರು ಕಡಲ ಅಲೆ ಎಣಿಸುವಲ್ಲೂ ದುಡ್ಡು ಹೊಡೆಯುವಲ್ಲಿ ನಿಪುಣರು: ಜೋಶಿ ಆರೋಪ

ಪೌಷ್ಟಿಕ ಆಹಾರಕ್ಕೂ ಕಾಂಗ್ರೆಸ್ ಪಕ್ಷ ಕನ್ನಾ ಹಾಕಿದೆ: ಜೋಶಿ ಆರೋಪ

Pralhad Joshi: ಅಂಗನವಾಡಿ, ಶಾಲಾ ಮಕ್ಕಳ ಪೌಷ್ಠಿಕ ಆಹಾರಕ್ಕೂ ಕಾಂಗ್ರೆಸ್ ಪಕ್ಷ ಕನ್ನಾ ಹಾಕಿದೆ. ಸರ್ಕಾರವೇ ಭ್ರಷ್ಟರ ಬೆನ್ನಿಗೆ ನಿಲ್ಲುತ್ತಿದೆ. ಪ್ರಭಾವಿಗಳ ಕೃಪೆ, ಆಶೀರ್ವಾದ ಇರುವುದರಿಂದಲೇ ಭ್ರಷ್ಟರಿಗೆ ಈ ಮಟ್ಟದ ಧೈರ್ಯ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Dharwad News: ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು ಪ್ರಕರಣ: ಧಾರವಾಡ ಜಿಲ್ಲಾ ಡಿಡಿ, ಸಿಡಿಪಿಒ ಅಮಾನತು

ಪೌಷ್ಠಿಕ ಸಾಮಗ್ರಿ ಅಕ್ರಮ ದಾಸ್ತಾನು ಕೇಸ್‌: ಉಪನಿರ್ದೇಶಕಿ, ಸಿಡಿಪಿಒ ಅಮಾನತು

ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಹುಲಿಗೆವ್ವ ಎಚ್. ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ. ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Couple Death: ಸಾವಿನಲ್ಲೂ ಒಂದಾದ ರೈತ ದಂಪತಿ

Couple Death: ಸಾವಿನಲ್ಲೂ ಒಂದಾದ ರೈತ ದಂಪತಿ

ಧಾರವಾಡ ತಾಲ್ಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲಿಈ ಘಟನೆ ನಡೆದಿದೆ. ಈಶ್ವರ್ ಅರೇರ್(82) ಹಾಗೂ ಪಾರ್ವತಿ ಅರೇರ್ (73) ಎಂಬವರೇ ಸಾವಿನಲ್ಲೂ ಒಂದಾದ ರೈತ ದಂಪತಿಗಳು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪತ್ನಿ ಪಾರ್ವತಿಯನ್ನು ಪತಿ ಈಶ್ವರ್ ಅರೇರ್ ಅವರೇ ಆರೈಕೆ ಮಾಡುತ್ತಿದ್ದರು.

Hubli News: 50 ವರ್ಷದ ಅಂಕಲ್ ಜತೆ 18ರ ಯುವತಿ ಪರಾರಿ; ಒಂದೂವರೆ ತಿಂಗಳು ಕಳೆದ್ರೂ ಪತ್ತೆಯಾಗದ ಜೋಡಿ!

ಹುಬ್ಬಳ್ಳಿಯಲ್ಲಿ 50 ವರ್ಷದ ಅಂಕಲ್ ಜತೆ 18ರ ಯುವತಿ ಪರಾರಿ!

Hubli News: ಹುಬ್ಬಳ್ಳಿಯಲ್ಲಿ ವಿಚಿತ್ರ ಲವ್‌ ಸ್ಟೋರಿ ಬೆಳಕಿಗೆ ಬಂದಿದೆ. ಯುವತಿ ನಾಪತ್ತೆಯಾಗಿ 40 ದಿನವಾದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದೆಡೆ ಅಂಕಲ್ ಪ್ರಕಾಶ್‌ ಕೂಡ ನಾಪತ್ತೆಯಾಗಿದ್ದಾನೆ. ಮಗಳ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಪೋಷಕರು ತೀವ್ರ ದುಃಖದಲ್ಲಿದ್ದಾರೆ.

Dharwad News: ಆತ್ಮಹತ್ಯೆ ಬೆದರಿಕೆ; ಉಪನ್ಯಾಸಕನನ್ನು ಜಡ್ಜ್‌ ಎಂದು ತೋರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಉಪನ್ಯಾಸಕನನ್ನು ಜಡ್ಜ್‌ ಎಂದು ತೋರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

Dharwad News: ಜೈಲಿಗೆ ಕರೆದೊಯ್ಯುತ್ತಿದ್ದಾಗ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡವೇರಿದ ಆರೋಪಿ, ನ್ಯಾಯಾಧೀಶರನ್ನು ಸ್ಥಳಕ್ಕೇ ಕರೆಸಬೇಕು, ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾನೆ. ಹೀಗಾಗಿ ಸ್ಥಳದಲ್ಲಿದ್ದ ಉಪನ್ಯಾಸಕನನ್ನೇ ಜಡ್ಜ್‌ ಎಂದು ಬಿಂಬಿಸಿ, ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

CM Siddaramaiah: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌, ತನಿಖೆ ಸಿಬಿಐಗೆ ಇಲ್ಲ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌, ತನಿಖೆ ಸಿಬಿಐಗೆ ಇಲ್ಲ

ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿ‌ ಇಂದು ಬೆಳಗ್ಗೆ ತೀರ್ಪು ನೀಡಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

BS Yediyurappa: ಪೋಕ್ಸೋ ಕೇಸ್‌ನಲ್ಲಿ ಬಿಎಸ್‌ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು, ಬಂಧನ ಭೀತಿಯಿಂದ ಪಾರು

ಪೋಕ್ಸೋ ಕೇಸ್‌ನಲ್ಲಿ ಬಿಎಸ್‌ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ (Poso Case) ಸಂಬಂಧಪಟ್ಟಂತೆ ಇಂದು ಹೈಕೋರ್ಟ್ (Karnataka High Court) ತೀರ್ಪು ಪ್ರಕಟಿಸಿದೆ. ತಮ್ಮ ವಿರುದ್ಧ ಸಲ್ಲಿಸಲಾಗಿರುವ ಪೋಕ್ಸೋ ಕೇಸ್ ರದ್ದುಗೊಳಿಸಲು ಕೋರಿ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾ ಎಂ. ನಾಗಪ್ರಸನ್ನ ಅವರ ಪೀಠ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10:30ಕ್ಕೆ ತೀರ್ಪನ್ನು ನೀಡಿತು.