ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಧಾರವಾಡ

Viral video: ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ಸುಜಾತಾ ಹಂಡಿ ವ್ಯಕ್ತಿಯೊಬ್ಬರ ಮೇಲೆ ಮೃಗೀಯ ವರ್ತನೆ ತೋರಿದ್ದ 3 ವರ್ಷಗಳ ಹಳೆಯ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಈಕೆ ರಾಕ್ಷಸಿಯಂತೆ ವರ್ತಿಸುತ್ತಿರುವುದು ಕಂಡುಬಂದಿದೆ. ಯುವಕನೊಬ್ಬನನ್ನು ರೂಮಿನಲ್ಲಿ ಕೂಡಿ ಹಾಕಿ ಸುಜಾತ ಹಂಡಿ ಬೆಲ್ಟ್ ಹಿಡಿದು ಆತನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾಳೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ; ಕಮಿಷನರ್‌ ಸ್ಪಷ್ಟನೆ ಏನು?

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ

ಹುಬ್ಬಳ್ಳಿಯಲ್ಲಿ ಗಲಾಟೆ ಪ್ರಕರಣದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಬಂಧಿಸಲು ಪೊಲೀಸರು ತೆರಳಿದಾಗ ಹೈಡ್ರಾಮಾ ನಡೆದಿದೆ. ಪೊಲೀಸರು ಆಕೆಯನ್ನು ಬಂಧಿಸಿ ಕರೆದೊಯ್ಯುವ ವೇಳೆ, ತನ್ನ ಬಟ್ಟೆ ಬಿಚ್ಚಿ ಥಳಿಸಿದ್ದಾರೆಂದು ಕಾರ್ಯಕರ್ತೆ ಆರೋಪಿಸಿದ್ದಾರೆ. ಘಟನೆಯ ವಿಡಿಯೋ ವೈರಲ್‌ ಆಗಿದೆ.

ಹುಬ್ಬಳ್ಳಿ ಯುವತಿಯ ಮರ್ಯಾದಾ ಹತ್ಯೆ ಕೇಸ್‌ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ರಚನೆ: ಸಿಎಂ

ಹುಬ್ಬಳ್ಳಿ ಯುವತಿಯ ಮರ್ಯಾದಾ ಹತ್ಯೆ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ

Hubli honor killing case: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಮಾನ್ಯ ಎಂಬ ಲಿಂಗಾಯತ ಸಮುದಾಯದ ಯುವತಿ, ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ವಿವಾಹವಾಗಿದ್ದಳು. ಇದರಿಂದ ತಮ್ಮ ಕುಟುಂಬದ ಮರ್ಯಾದೆ ಹೋಗಿದೆ ಎಂಬ ಕೋಪಗೊಂಡು ಗರ್ಭಿಣಿ ಮಗಳನ್ನೇ ತಂದೆ ಪ್ರಕಾಶ್‌ ಪಾಟೀಲ್‌ ಗೌಡ ಹತ್ಯೆ ಮಾಡಿದ್ದ.

ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಜನರ ದಾರಿತಪ್ಪಿಸುತ್ತಿದೆ ರಾಜ್ಯ ಸರ್ಕಾರ: ಸಚಿವ ಜೋಶಿ ಟೀಕೆ

ವಿಬಿ ಜಿ ರಾಮ್ ಜಿ ಬಗ್ಗೆ ಜನರ ದಾರಿತಪ್ಪಿಸುತ್ತಿದೆ ರಾಜ್ಯ ಸರ್ಕಾರ: ಜೋಶಿ

VB-G RAM G scheme: ವಿಬಿ ಜಿ ರಾಮ್ ಜಿ ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ. ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Pravasi Prapancha: ಪೇಡಾ ನಗರಿಯ ಐಷಾರಾಮಿ ರೆಸಾರ್ಟ್‌ ರೈಸಿಂಗ್‌ ಬ್ಲಿಸ್‌ ರಿಟ್ರೀಟ್‌

ಪೇಡಾ ನಗರಿಯ ಐಷಾರಾಮಿ ರೆಸಾರ್ಟ್‌ ರೈಸಿಂಗ್‌ ಬ್ಲಿಸ್‌ ರಿಟ್ರೀಟ್‌

Rising Bliss Retreat Resort: ಸುತ್ತಲೂ ಹೊಲಗಳು, ಹಿತವಾದ ವಾತಾವರಣ, ಆಗೊಮ್ಮೆ ಈಗೊಮ್ಮೆ ದನ-ಕುರಿ ಕಾಯುವ ಜನರು. ಸುತ್ತಲೂ ಸಾಹಿತ್ಯಿಕ ಅಲೆಗಳು ಸುತ್ತುತ್ತಲೇ ಇರುತ್ತವೆ. ಇವುಗಳ ಮಧ್ಯೆ ನಿಮ್ಮನ್ನು ಮಂತ್ರಮುಗ್ಧ ಮಾಡಬಲ್ಲ ರೆಸಾರ್ಟ್‌ ಇದ್ದರೆ ನಿಮ್ಮ ಪ್ರವಾಸ ಅರ್ಥಪೂರ್ಣವಾಗುತ್ತದೆ. ನಿಮಗೂ ಇಂತಹದ್ದೇ ಅನುಭೂತಿ ಧಾರವಾಡದಲ್ಲಿರುವ ಹೆಸರೇ ರೈಸಿಂಗ್ ಬ್ಲಿಸ್‌ ರಿಟ್ರೀಟ್ ರೆಸಾರ್ಟ್‌ನಲ್ಲಿ ಸಿಗುತ್ತದೆ. ಇಲ್ಲಿದೆ ಈ ರೆಸಾರ್ಟ್‌ನ ವಿವರ.

Murder Case: ಧಾರವಾಡದಲ್ಲಿ ಮರ್ಯಾದೆಗೇಡು ಹತ್ಯೆ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಥಳಿಸಿ ಕೊಂದ ತಂದೆ

ದಲಿತ ಯುವಕನ ಪ್ರೀತಿಸಿ ಮದುವೆಯಾಗಿ ತಂದೆಯಿಂದಲೇ ಹತ್ಯೆಯಾದ ಮಗಳು

ಯುವತಿ ಲಿಂಗಾಯತ ಸಮಾಜದವಳಾಗಿದ್ದರೆ ಯುವಕ ವಿವೇಕಾನಂದ ದಲಿತ ಸಮುದಾಯಕ್ಕೆ ಸೇರಿದ್ದ. ಹೀಗಾಗಿ ಯುವತಿ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ವಿವೇಕಾನಂದ ಆಕೆ ಜೊತೆ ಕಳೆದ ಜೂನ್ 19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದ. ಯುವತಿ ಗರ್ಭಿಣಿಯಾಗಿದ್ದಳು. ಎರಡೂ ಕುಟುಂಬಗಳ ನಡುವೆ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದರು. ಇದೀಗ ತಂದೆಯೇ ಮಗಳ ಕೊಲೆ ಮಾಡಿದ್ದಾನೆ.

Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್‌, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ತೀವ್ರ ಶೀತ ಗಾಳಿ ಹಿನ್ನೆಲೆ ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Dharwad News: ಬೆತ್ತಲೆ ಮಸಾಜ್‌ ಮಾಡಿಸಿಕೊಂಡ ಸ್ವಾಮೀಜಿಯ ವಿಡಿಯೊ ಬಯಲು, ಬ್ಲ್ಯಾಕ್‌ಮೇಲ್‌

ಸ್ವಾಮೀಜಿಯ ಬೆತ್ತಲೆ ಮಸಾಜ್‌ ವಿಡಿಯೊ ಬಯಲು, ಬ್ಲ್ಯಾಕ್‌ಮೇಲ್‌ ಕೇಸ್

ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿತ್ತು. ಗ್ರಾಮದ ವ್ಯಕ್ತಿಯೊಬ್ಬರ ಸಮ್ಮುಖದಲ್ಲಿ 10 ಲಕ್ಷಕ್ಕೆ ಡೀಲ್ ಓಕೆ ಆಗಿತ್ತು. ಬಳಿಕ ಸ್ವಾಮೀಜಿ ವಿಡಿಯೋ ಡಿಲೀಟ್‌ ಮಾಡುವಂತೆ ಹೇಳಿ ಮಠಕ್ಕೆ ಕರೆಸಿಕೊಂಡು 7 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಬಾಕಿ 3 ಲಕ್ಷ ಹಣ ಬಂದಿಲ್ಲ ಅಂತ ಗುಂಪಿನವರು ವಿಡಿಯೋ ವೈರಲ್‌ ಮಾಡಿದ್ದಾರೆ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Dharwad News: ಆನ್‌ಲೈನ್‌ ಗೇಮ್‌ನಲ್ಲಿ 3 ಲಕ್ಷ ನಷ್ಟ; ಫೈನಾನ್ಸ್‌ ಕಂಪನಿಗೆ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಆನ್‌ಲೈನ್‌ ಗೇಮ್‌ ಚಟ; ಫೈನಾನ್ಸ್‌ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಧಾರವಾಡ ತಾಲೂಕಿನಲ್ಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡುವ ಯುವಕನೊಬ್ಬ, ಆನ್‌ಲೈನ್ ಗೇಮ್ ಚಟಕ್ಕೆ ಬಿದಿದ್ದ. ಫೈನಾನ್ಸ್ ಹಣವನ್ನು ಆನ್‌ಲೈನ್‌ಗೆ ಗೇಮ್‌ಗೆ ಬಳಸಿಕೊಂಡು ನಷ್ಟ ಅನುಭವಿಸಿದ್ದ. ಹೀಗಾಗಿ ಹಣವನ್ನು ವಾಪಸ್ ಕಟ್ಟಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಸಜೀವ ದಹನಗೊಂಡ ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಹುಬ್ಬಳ್ಳಿಯಿಂದ ಗದಗಿಗೆ ಹೋಗುವಾಗ ಡಿವೈಡರ್​ಗೆ ಮೊದಲು ಕಾರು ಡಿಕ್ಕಿಯಾಗಿ, ಪಕ್ಕದಲ್ಲಿದ್ದ ರಸ್ತೆಗೆ ಜಂಪ್ ಆಗಿದೆ. ತಾವು ಹೋಗುತ್ತಿದ್ದ ಮಾರ್ಗದ ಎದುರು ಬದಿಯ ರಸ್ತೆಯನ್ನು ಇಳಿದು ಮತ್ತೆ ಮೇಲಕ್ಕೆ ಬಂದು ನಂತರ ಮತ್ತೆ ರಸ್ತೆ ಪಕ್ಕದಲ್ಲಿ ಹೋಗಿ ನಿಂತಿದೆ. ಈ ಸಮಯದಲ್ಲಿ ಪೆಟ್ರೋಲ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

Car Accident: ಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್‌ ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ದುರ್ಗಘಟನೆಯಲ್ಲಿ ಮೃತಪಟ್ಟಿದ್ದಾರೆ.

Online Reception: ಇಂಡಿಗೋ ವಿಮಾನ ರದ್ದು; ಹುಬ್ಬಳ್ಳಿಯಲ್ಲಿ ವಧು-ವರನಿಲ್ಲದೇ ನಡೆಯಿತು ಆರತಕ್ಷತೆ, ಆನ್‌ಲೈನ್‌ನಲ್ಲೇ ಆಶೀರ್ವಾದ!

ಇಂಡಿಗೋ ವಿಮಾನ ರದ್ದು; ಆನ್‌ಲೈನ್‌ನಲ್ಲೇ ನಡೆಯಿತು ಆರತಕ್ಷತೆ!

Hubli News: ಬೆಂಗಳೂರಿನಲ್ಲಿ ಸಾಫ್ಟ್‌ವೇರ್​ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿರುವ ಯುವಕ-ಯುವತಿ ಮದುವೆ ಭುವನೇಶ್ವರದಲ್ಲಿ ನ.23ರಂದು ನಡೆದಿತ್ತು. ವಧುವಿನ ತವರು ಹುಬ್ಬಳ್ಳಿಯ ಡಿ.3ರಂದು ಆರತಕ್ಷತೆ ಆಯೋಜಿಸಲಾಗಿತ್ತು. ಆದರೆ, ಇಂಡಿಗೋ ವಿಮಾನ ರದ್ದಾಗಿದ್ದರಿಂದ ಹುಬ್ಬಳ್ಳಿಯ ಗುಜರಾತ್‌ ಭವನದಲ್ಲಿ ವಧು-ವರ ಇಲ್ಲದೆಯೇ ಆರತಕ್ಷತೆ ನಡೆದಿದೆ.

ವಲ್ಲಭ ಚೈತನ್ಯರ ಜಯಂತಿ ಹಿನ್ನೆಲೆ ಹುಬ್ಬಳ್ಳಿಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಹುಬ್ಬಳ್ಳಿಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

Sri Vallabha Chaitanya Maharaj Jayanti: ಶ್ರೀ ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಶ್ರೀ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

ಒಗ್ಗಟ್ಟು  ಒಗ್ಗಟ್ಟು ಎನ್ನುತ್ತಲೇ ಒಬ್ಬರಿಗೊಬ್ಬರು ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಜೋಶಿ ವ್ಯಂಗ್ಯ

ಒಗ್ಗಟ್ಟು ಎನ್ನುತ್ತಲೇ ಒಬ್ಬರಿಗೊಬ್ಬರು ಬಾವಿಗೆ ತಳ್ಳಲು ನೋಡುತ್ತಿದ್ದಾರೆ

Karnataka leadership change: ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಅಲ್ಲಿ ಖರ್ಗೆ ಅವರದ್ದು ಏನೂ ನಡೆಯುವುದಿಲ್ಲ. ಎಲ್ಲಾ ನಕಲಿ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರದ್ದೇ ಫೈನಲ್. ಹಾಗಾಗಿ ಖರ್ಗೆ ಹೈಕಮಾಂಡ್ ಮೇಲೆ ಎತ್ತಿ ಹಾಕುತ್ತಿದ್ದಾರೆ ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಬೆಂಗಳೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ!

ಇಂದು ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆ. ಮತ್ತು 16 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Pralhad Joshi: ಡಿಸ್ಟಿಲರಿಗಳಿಗೆ ಪತ್ರ; ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಅಂತೂ ಎಚ್ಚೆತ್ತ ಸಿಎಂ ಎಂದ ಪ್ರಲ್ಹಾದ್‌ ಜೋಶಿ

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಅಂತೂ ಎಚ್ಚೆತ್ತ ಸಿಎಂ: ಪ್ರಲ್ಹಾದ್‌ ಜೋಶಿ

ಎಥನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ NCCF ಮತ್ತು NAFED ಜತೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆಯುವ ಬುದ್ಧಿ ಈಗಲಾದರೂ ಬಂದಿತಲ್ಲ ಎಂದಿರುವ ಜೋಶಿ, ಇಷ್ಟು ದಿನ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pralhad Joshi: ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಸಿಎಂ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ

ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಸಿಎಂ ಸುಳ್ಳು ಹೇಳುತ್ತಿದ್ದಾರೆ: ಜೋಶಿ

Maize import: ಮೆಕ್ಕೆಜೋಳ ಖರೀದಿ, ಎಥೆನಾಲ್ ಉತ್ಪಾದನೆ ಮತ್ತು ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ತಾನು ತತ್ ಕ್ಷಣ ಕೈಗೊಳ್ಳಬೇಕಾದ ಕಾರ್ಯ ಮರೆತು ಕೇಂದ್ರದತ್ತ ಬೊಟ್ಟು ತೋರುತ್ತಿದೆ. ಅಲ್ಲದೇ, ಸಿಎಂ ಮೆಕ್ಕೆಜೋಳ ಆಮದು ಬಗ್ಗೆ ಹಸಿ ಹಸಿ ಸುಳ್ಳುಗಳ ರೈಲು ಬಿಡುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RBI Rules: ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಸೇಫಾಗಿ ಇರಿಸೋದು ಹೇಗೆ? ಆರ್‌ಬಿಐಯ ಹೊಸ ರೂಲ್ಸ್ ಬಗ್ಗೆ ಇಲ್ಲಿದೆ ಮಾಹಿತಿ

ಗಮನಿಸಿ; ಬ್ಯಾಂಕ್‌ಗಳ ಇಂಟರ್‌ನೆಟ್‌ ಡೊಮೈನ್ ಬದಲಾಗಿದೆ

RBI change bank website domain: ಭಾರತದ ಬ್ಯಾಂಕ್‌ಗಳ ವೆಬ್‌ಸೈಟ್‌ಗಳ ಡೊಮೈನ್ ಅನ್ನು ಡಾಟ್ ಕಾಮ್, ಡಾಟ್ ಕೋ ಡಾಟ್ ಇನ್‌ನಿಂದ ಡಾಟ್ ಬ್ಯಾಂಕ್ ಡಾಟ್ ಇನ್‌ಗೆ ಬದಲಾಯಿಸಲಾಗಿದೆ. ಗ್ರಾಹಕರ ಸುರಕ್ಷತೆ ಮತ್ತು ವೆಬ್‌ಸೈಟ್ ಭದ್ರತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.

Self Harming: ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Dharawada news: ಸಾಲದ ಬಾಧೆಯಿಂದ ನೊಂದಿದ್ದ ನಾರಾಯಣ ಶಿಂಧೆ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಕೆಲಸಕ್ಕೆ ತೆರಳಿದ ತಾಯಿ ಬದುಕಿಕೊಂಡಿದ್ದಾಳೆ. ಶಾಲೆಗೆ ಹೊರಟು ಸಮವಸ್ತ್ರದಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆಯೇ ಮೊದಲು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಹಾರಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Loading...