ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

40th State Journalists' Conference: ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

CM Siddaramaiah: ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರಿಯುತ್ತದೆ.‌ ಅದು ಮುಂದುವರಿಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

ತುಮಕೂರಿನಲ್ಲಿ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

Tumkur News: ತುಮಕೂರು ನಗರದ ಗುಬ್ಬಿವೀರಣ್ಣ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಮಾರಿಯಮ್ಮ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧಗಂಗಾ ಘಟಕಕ್ಕೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

Gram Net Bharat 2030 Scheme: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಜನರು ಹಾಗೂ ಮಹಿಳೆಯರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ದುಡಿಮೆಗೆ ಅವಕಾಶ ಕಲ್ಪಿಸಲು ಗ್ರಾಮ ನೆಟ್ ಭಾರತ 2030 ರೂಪುಗೊಂಡಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಯೋಜನೆಗೆ ಮೇ ತಿಂಗಳ ಮೊದಲ ವಾರದಲ್ಲಿ ತುರುವೇಕೆರೆ ತಾಲೂಕಿನ ಸಂಪಿಗೆ ಗ್ರಾಮದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಲೋಕಸೇವಾ ಫೌಂಡೇಷನ್ ಅಧ್ಯಕ್ಷ ಸಂಪಿಗೆ ಜಗದೀಶ್ ತಿಳಿಸಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ತುಮಕೂರಿನ ವಿದ್ಯಾನಿಧಿ ಕಾಲೇಜು ಅತ್ಯುತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ವಿದ್ಯಾನಿಧಿ ಕಾಲೇಜು ಉತ್ತಮ ಸಾಧನೆ

Tumkur News: ವಿದ್ಯಾನಿಧಿ ಕಾಲೇಜಿನ ರೋಹನ್‌ ಮತ್ತು ಪೂರ್ವಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಗಳಿಸುವುದರೊಂದಿಗೆ 2025-26ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಗಿರಿಜಾ 593 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ದ್ವಿತೀಯ ಪಿಯುಸಿ ಫಲಿತಾಂಶ; ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬೆಳಗಾವಿ ಕುವರಿ

Karnataka 2nd PUC Results 2026: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ರಾಜ್ಯಕ್ಕೆ ಪ್ರಥಮ

Kalaburagi News: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಬುರಗಿ ನಗರದ ಶ್ರೀಮತಿ ವೀರಮ್ಮ ಗಂಗಸಿರಿ (ವಿಜಿ) ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ ಒಟ್ಟು 600 ಅಂಕಗಳಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆಯುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದಾರೆ.

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಬಸನಗೌಡ ಪಾಟೀಲ ಯತ್ನಾಳ Video

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ: ಬಸನಗೌಡ ಪಾಟೀಲ ಯತ್ನಾಳ

Bagalkot Bypoll 2026: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್‌ ಅಪ್‌ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ, ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಎಲ್ಲ ರಾಜ್ಯಗಳಲ್ಲೂ ಶೇಕಡಾವಾರು ಜನಸಂಖ್ಯೆ ಆಧಾರಿತ: ಪ್ರಲ್ಹಾದ್‌ ಜೋಶಿ

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಜನಸಂಖ್ಯೆ ಆಧಾರಿತ: ಜೋಶಿ

Pralhad Joshi: ದೇಶದಲ್ಲಿ ಚುನಾವಣೆಗಳಿದ್ದಾಗ ರಾಹುಲ್ ಗಾಂಧಿ ವಿದೇಶಕ್ಕೆ ಓಡಿ ಹೋಗುತ್ತಾರೆ. ಕ್ಷೇತ್ರಗಳಲ್ಲಿ ಓಡಾಡಿ ಜನರ ವಿಶ್ವಾಸ ಗಳಿಸಬೇಕು ಎಂಬುದಿಲ್ಲ. ಪರಿಣಾಮ ದೇಶಾದ್ಯಂತ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಆರೋಪಿಸಿದ್ದಾರೆ.

Davanagere South by-election: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

BY Vijayendra: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಬೃಹತ್ ಶೋಭಾ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಕೇವಲ ಬಿಜೆಪಿ ಅಲೆಯಲ್ಲ, ಒಂದು ರೀತಿಯ ಸುನಾಮಿಯಂಥ ಅಲೆಯ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Census 2027: ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಚಾಲನೆ

ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಚಾಲನೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ತೀನಂಶ್ರೀ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶಾಸಕ ಸಿ.ಬಿ. ಸುರೇಶ್ ಬಾಬು, ಸ್ವತಃ ತಮ್ಮ ಮೊಬೈಲ್ ಮೂಲಕ ವೈಯಕ್ತಿಕ ವಿವರಗಳನ್ನು ಪೋರ್ಟಲ್‌ನಲ್ಲಿ ದಾಖಲಿಸುವ ಮೂಲಕ ‘ಸ್ವಯಂ ಗಣತಿʼ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

Haveri University Convocation: ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ

Haveri News: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದ್ದಾರೆ. ಕರ್ನಾಟಕದ ಭೂಮಿ ಯಾವಾಗಲೂ ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದಿಂದ ಸಮೃದ್ಧವಾಗಿದೆ. ಇದು ಅನೇಕ ಮಹಾನ್ ಸಂತರು, ವಿದ್ವಾಂಸರು ಮತ್ತು ಚಿಂತಕರು ಹುಟ್ಟಿ ಸಮಾಜವನ್ನು ರೂಪಿಸಿದ ಭೂಮಿ. ಹಾವೇರಿಯಂತಹ ಪ್ರದೇಶದಲ್ಲಿ ಈ ವಿಶ್ವವಿದ್ಯಾಲಯದ ಸ್ಥಾಪನೆಯು ಈ ಪ್ರದೇಶದಲ್ಲಿ ಶಿಕ್ಷಣವನ್ನು ವಿಸ್ತರಿಸುವುದಲ್ಲದೆ, ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಉಪ ಚುನಾವಣೆ; 2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

BY Vijayendra: ಎರಡೂ ಕಡೆಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಯಾವ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸೋಲುವ ಭೀತಿ ಎದುರಾಗಿದೆ: ಬಿ.ವೈ. ವಿಜಯೇಂದ್ರ

Kalaburagi News: ಕಮಲಾಪುರದಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

Kalaburagi News: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅಪರಿಚಿತ ಮಹಿಳೆಯೊಬ್ಬಳ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹಾಗೂ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಸರ್ಕಾರದ ಯೋಜನೆಗಳಿಗೆ ಮಹಾನ್ ಸ್ಫೂರ್ತಿ: ಪ್ರಲ್ಹಾದ್‌ ಜೋಶಿ

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಸರ್ಕಾರದ ಯೋಜನೆಗಳಿಗೆ ಸ್ಫೂರ್ತಿ: ಜೋಶಿ

Pralhad Joshi: ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಮಹಾನ್ ಸಂತರಷ್ಟೇ ಅಲ್ಲ ಅವರೊಂದು ದಿವ್ಯಶಕ್ತಿ. ಅವರು ಪ್ರಾರಂಭಿಸಿದ "ಅನ್ನದಾಸೋಹ'' ಕೇವಲ ಊಟವಲ್ಲ. ಸಮಾನತೆಯ ಸಂದೇಶ. ಜಾತಿ-ಧರ್ಮ-ಬಡತನವೆಂಬ ಬೇಧ ತೊಡೆದು ಹಾಕಿ ಜಗತ್ತಿಗೆ ಮಾನವೀಯ ಮಂತ್ರವನ್ನು ಸಾರಿದ ದೈವಪುರುಷರು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಸ್ಮರಿಸಿದ್ದಾರೆ.

ರಾಷ್ಟ್ರಪತಿ ಭಾಗಿಯಾದ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಸ್ವಾಮೀಜಿಗೆ ಕೊನೆಯ ಆಸನ; ಭಕ್ತರ ಆಕ್ರೋಶ

ವೇದಿಕೆಯಲ್ಲಿ ಸಿದ್ದಲಿಂಗ ಸ್ವಾಮೀಜಿಗೆ ಕೊನೆಯ ಆಸನ; ಭಕ್ತರ ಆಕ್ರೋಶ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮವರ್ಧಂತಿ ಮಹೋತ್ಸವ ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯ ಶಿಷ್ಟಾಚಾರ ಪಾಲನೆಗೆ ಸಂಬಂಧಿಸಿದಂತೆ ತೀವ್ರ ಗೊಂದಲ ಉಂಟಾಯಿತು. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿಗೆ ಕೇಂದ್ರ ಸಚಿವರ ಮನವಿ ಬಳಿಕವೂ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಆಸನದ ಕೊನೆಯಲ್ಲಿ ಕುಳಿತುಕೊಳ್ಳಬೇಕಾಯಿತು.

ಅಮೆರಿಕದ ನೆಲೆಗಳ ಮೇಲಿನ ಇರಾನ್ ದಾಳಿಗೆ  ರಷ್ಯಾ ನೆರವು: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೊಸ ಬಾಂಬ್‌

ಇರಾನ್‌ಗೆ ರಷ್ಯಾ ನೆರವು ಎಂದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ಗೆ ರಷ್ಯಾ ಉಪಗ್ರಹ ಗುಪ್ತಚರ ಮಾಹಿತಿ ಹಂಚಿಕೊಂಡಿದ್ದು, ದಾಳಿಗೆ ನೆರವಾಗಿದೆ ಎಂಬುದಾಗಿ ಅವರು ಹೇಳಿದ್ದಾರೆ.

Yadgir News: ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಅನುಸುಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದ ಮನಮಿಡಿಯುವ ಘಟನೆ ಮಂಗಳವಾರ ಗುರುಮಠಕಲ್ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅನುಸುಜಾ ತಂದೆಯ ಸಾವಿನ ದುಃಖದಲ್ಲೇ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ತುಮಕೂರು ಕೋರ್ಟ್

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನ ಭಾವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸಂಬಂಧ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಅಪರಾಧಿ ಧನಂಜಯನಿಗೆ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

Kolar News: ಅರಹಳ್ಳಿ ಸೊಸೈಟಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಗೆ ಭರ್ಜರಿ ಗೆಲುವು, ಕಾಂಗ್ರೆಸ್‌ ಶೂನ್ಯ ಸಾಧನೆ

ಅರಹಳ್ಳಿ ಸೊಸೈಟಿ ಚುನಾವಣೆ; ಎನ್‌ಡಿಎ ಮೈತ್ರಿಗೆ ಭರ್ಜರಿ ಗೆಲುವು

Kolar News: ಅರಹಳ್ಳಿ ಸೊಸೈಟಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಎಲ್ಲ 12 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಖಾತೆಯನ್ನೂ ತೆರೆಯದೆ ಹೀನಾಯ ಸೋಲನ್ನು ಕಂಡಿದೆ. ಈ ಕುರಿತ ವಿವರ ಇಲ್ಲಿದೆ.

ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ ಎಸ್‌ಡಿಎಂ ಖ್ಯಾತಿ: ಸತೀಶ್ ಕುಮಾರ್

SDM College: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಹೀಗಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿದ್ಯಾಸಂಸ್ಥೆಯ ಸಾಧನೆ ಪ್ರಶಂಸನೀಯ ಎಂದು ನಿಟ್ಟೆಯ ನಿವೃತ್ತ ಉಪಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿ ಡಿಸಿ ಕಚೇರಿ ಮುಂದೆ ಆಟೋ ಚಾಲಕರ ಪ್ರತಿಭಟನೆ

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಆಟೋ ರಿಕ್ಷಾಗಳಿಗೆ ಬಳಸುವ ಆಟೋ ಎಲ್‌ಪಿಜಿ (Auto LPG) ದರ ಏರಿಕೆಯನ್ನು ಖಂಡಿಸಿ ನೂರಾರು ಆಟೋ ಚಾಲಕರು, ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಆಟೋಗಳ ಸಮೇತ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.

Tumkur News: ರಂಗಭೂಮಿ ಎಂಬುದು ಗಂಧರ್ವ ಕಲೆ: ಶ್ರೀನಿವಾಸ್

ರಂಗಭೂಮಿ ಎಂಬುದು ಗಂಧರ್ವ ಕಲೆ: ಶ್ರೀನಿವಾಸ್

Tumkur News: ಪ್ರೇಕ್ಷಕರು ಇರುವ ಕಡೆ ನಾಟಕವನ್ನು ಒಯ್ದು ಆಡಿಸುವುದೇ ಬೀದಿ ನಾಟಕ ಎಂದ ಅವರು, ರಂಗಮಂದಿರವನ್ನಾಗಲಿ, ಬೆಳಕಿನ ವಿನ್ಯಾಸದ ಚಾತುರ್ಯ, ವೇಷಭೂಷಣ ಯಾವುದೇ ರಂಗಭೂಮಿಯ ನೆರವು ಇಲ್ಲದೆ ಆಯೋಜನೆಯಾಗುವ ಪ್ರಕಾರ ಬೀದಿ ನಾಟಕ ಎಂದು ಸಮಾಜ ಸೇವಕ ಎಸ್.ಟಿ. ಶ್ರೀನಿವಾಸ್ ತಿಳಿಸಿದ್ದಾರೆ.

Loading...